newskadaba

ಮಗುವಿನ ಪೋಷಕರ ಪತ್ತೆಗಾಗಿ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.6.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಅಪಾರ್ಟ್‍ಮೆಂಟ್ ನಲ್ಲಿ ತಾಯಿಯಾದ ಮುಸ್ಕಾನ್ ಸುಮಾರು 6 ತಿಂಗಳು ಪ್ರಾಯದ ಮಗುವನ್ನು ತೊರೆದು ಹೋಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಂಗಳೂರು ಇವರ ಆದೇಶದನ್ವಯ ಪಾಲನೆ ಹಾಗೂ ಪೋಷಣೆಗಾಗಿ ವಾತ್ಸಲ್ಯಧಾಮ ದತ್ತು ಕೆಂದ್ರ, ಶ್ರೀ ರಾಮಕೃಷ್ಣ ಸೇವಾ ಸಮಾಜ ಪುತ್ತೂರು ಇಲ್ಲಿ ದಾಖಲಿಸಲಾಗಿದೆ. ಈ ಮಗುವಿನ ವಾರಸುದಾರರು ಯಾರಾದರೂ ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ,1ನೇ ಮಹಡಿ, […]

ಮಗುವಿನ ಪೋಷಕರ ಪತ್ತೆಗಾಗಿ ಮನವಿ Read More »

ಕರಾವಳಿ

ಮಾರುಕಟ್ಟೆ ಮೌಲ್ಯ ನಿಗಧಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.6.ಜುಲೈ 2 ರಂದು ಮಂಗಳೂರು ತಾಲೂಕು ಮಾರುಕಟ್ಟೆ ಮೌಲ್ಯ ಮಾಪನ ಉಪಮಿತಿಯು 2018-19ನೇ ಸಾಲಿನಲ್ಲಿ ಹೊಸ/ಹಳೆಯ ಬಿಟ್ಟುಹೋದ ಹಾಗೂ ಗುರುತಿಸಲಾದ ಬಡಾವಣೆ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗಧಿ ಪಡಿಸಲಾಗಿತ್ತು. ಅದನ್ನು  ಸಂಬಂಧಪಟ್ಟ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಾಗಿ ಈಗಾಗಲೇ ಪ್ರಕಟಣೆಗೊಳ್ಳಿಸಲಾಗಿದ್ದು, ಸಾರ್ವಜನಿಕರು ತಮ್ಮ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಜುಲೈ 17 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕಾರ್ಯದರ್ಶಿಗಳು ಮಂಗಳೂರು ತಾಲ್ಲೂಕು ಮಾರುಕಟ್ಟೆ ಮೌಲ್ಯಮಾಪನ ಉಪಸಮಿತಿಯ ಪ್ರಕಟಣೆ ತಿಳಿಸಿದೆ.

ಮಾರುಕಟ್ಟೆ ಮೌಲ್ಯ ನಿಗಧಿ Read More »

ಕರಾವಳಿ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ➤ ಒಟ್ಟು 9 ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.6.ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ), ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಅಧ್ಯಕ್ಷ/ ಖಜಾಂಚಿ/ ರಾಜ್ಯ ಪರಿಷತ್ ಸದಸ್ಯ ಚುನಾವಣೆಗೆ ನಾಮ ಪತ್ರ ಸಲ್ಲಿಕೆಯ ಅಂತಿಮ ದಿನ ಜುಲೈ 4 ರವರೆಗೆ ಒಟ್ಟು 9 ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಹಾಲಿ ಖಜಾಂಚಿ ಯುವಜನ ಸೇವೆ ಮತ್ತು ಗ್ರಂಥಾಲಯ ಇಲಾಖೆ ಪಿ.ಕೆ. ಕೃಷ್ಣ , ಹಾಲಿ ಅಧ್ಯಕ್ಷ ನ್ಯಾಯಾಂಗ ಇಲಾಖೆ ಪ್ರಕಾಶ್ ನಾಯಕ್ , ಆರ್ಥಿಕ ಮತ್ತು

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ➤ ಒಟ್ಟು 9 ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಕೆ Read More »

ಕರಾವಳಿ

ಬೋಳಿಯಾರು ➤ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.6.ಮಂಗಳೂರು ತಾಲೂಕು ಬೋಳಿಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ 2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯನ್ನು ಆಯೋಜಿಸಲಾಗಿದೆ. ಜುಲೈ 11 ರಂದು ಬೆಳಿಗ್ಗೆ 10.30 ಗಂಟೆಗೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.ಎಂದು ಸೂಚಿಸಲಾಗಿದೆ.

ಬೋಳಿಯಾರು ➤ ಗ್ರಾಮ ಸಭೆ Read More »

ಕರಾವಳಿ

ಮತ್ಸ್ಯ ವರ್ಣ ಕಲಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.6.ಕರಾವಳಿಯ ಸಾಂಸ್ಕøತಿಕ, ಸಂಪ್ರದಾಯಿಕ ಚಟುವಟಿಕೆಯನ್ನು ಮುಖ್ಯವಾಗಿ ಇಟ್ಟುಕೊಂಡು ನಡೆಯುತ್ತಿರುವ ಈ ಚಿತ್ರಕಲಾ ಶಿಬಿರವು ತುಂಬಾ ಆದರ್ಶಪ್ರಾಯವಾದದ್ದು ಎಂದು ಆಳ್ವಾಸ್ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಡಾ. ಮೋಹನ ಆಳ್ವಾ ಹೇಳಿದರು. ಇಂದು ನಡೆದ ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಹಾಗೂ ಮೀನುಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯ, ಬೀದರ, ಮೀನುಗಾರಿಕಾ ಕಾಲೇಜು ಮಂಗಳೂರು ಇದರ ಸುವರ್ಣ ಮಹೋತ್ಸವ ಸಂಭ್ರಮ ಆಚರಣೆ ಹಾಗೂ ಕರಾವಳಿ ಚಿತ್ರಕಲಾ ಚಾವಡಿ(ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಮೀನುಗಾರಿಕಾ ವಿಶ್ವವಿದ್ಯಾಲಯ, ಮಂಗಳೂರಿನಲ್ಲಿ ಎರಡು ದಿನಗಳ

ಮತ್ಸ್ಯ ವರ್ಣ ಕಲಾ ಶಿಬಿರ Read More »

ಕರಾವಳಿ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ನೂತನ ಸಾರಥಿ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.5.ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ನೂತನ ಸಾರಥಿ ನೇಮಕಗೊಂಡಿದ್ದಾರೆ. ‘ರಾಜೀನಾಮೆ ಸ್ವೀಕರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ’ ಎಂಬ ವಿಶ್ವನಾಥ್ ಎಚ್ಚರಿಕೆ ನಂತರ ಪರಿಸ್ಥಿತಿ ವಿಕೋಪಕ್ಕೆ ಹೋಗಬಹುದೆಂಬುದನ್ನು ಅರಿತು ರಾಷ್ಟ್ರೀಯ ಆಧ್ಯಕ್ಷ ಎಚ್.ಡಿ. ದೇವೇಗೌಡ ಗುರುವಾರ ರಾಜ್ಯಾಧ್ಯಕ್ಷರ ಹೆಸರನ್ನು ಘೋಷಿಸಿದರು. ನೂತನ ಅಧ್ಯಕ್ಷರಾಗಿ ಸಕಲೇಶಪುರ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿರುವ ಎಚ್.ಕೆ. ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ನೇಮಕವನ್ನೂ ದೇವೇಗೌಡರು ಪ್ರಕಟಿಸಿದರು. ಹಠಾತ್ ರಾಜಕೀಯ ಬೆಳವಣಿಗೆಯಲ್ಲಿ ಮಂಡ್ಯದಿಂದ ಲೋಕಸಭೆಗೆ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೊನೆಗೂ ನೂತನ ಸಾರಥಿ ನೇಮಕ Read More »

ಕರಾವಳಿ

ಪೋಲೆಂಡ್ನಲ್ಲಿ ನಡೆಯುತ್ತಿರುವ ಪೊಜಾ°ನ್ ಆ್ಯತ್ಲೆಟಿಕ್ಸ್ ಗ್ರ್ಯಾನ್ಪ್ರಿ ಕ್ರೀಡಾಕೂಟದಲ್ಲಿ➤ಭಾರತದ ಸ್ಟಾರ್ ಸ್ಪ್ರಿಂಟರ್ ಹಿಮಾ ದಾಸ್ ಗೆ ಬಂಗಾರದ ಪದಕ

(ನ್ಯೂಸ್ ಕಡಬ) newskadaba.com ನವದೆಹಲಿ, ಜುಲೈ.5.ಭಾರತದ ಸ್ಟಾರ್‌ ಸ್ಪ್ರಿಂಟರ್‌ ಹಿಮಾ ದಾಸ್‌ ಕಳೆದ ಕೆಲವು ತಿಂಗಳಿಂದ ಬೆನ್ನುನೋವಿನಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದ, 23.65 ಸೆಕೆಂಡ್‌ಗಳಲ್ಲಿ ಈ ದೂರವನ್ನು ಕ್ರಮಿಸಿ ಮೊದಲಿಗರಾದರು. ಇದು ಈ ವರ್ಷ ಹಿಮಾ ಪ್ರತಿನಿಧಿಸಿದ ವಿಶ್ವ ಮಟ್ಟದ ಮೊದಲ ಕ್ರೀಡಾಕೂಟ.ಈಕೆ ಪೋಲೆಂಡ್‌ನ‌ಲ್ಲಿ ನಡೆಯುತ್ತಿರುವ ಪೊಜಾ°ನ್‌ ಆ್ಯತ್ಲೆಟಿಕ್ಸ್‌ ಗ್ರ್ಯಾನ್‌ಪ್ರಿ ಕ್ರೀಡಾಕೂಟದಲ್ಲಿ ಬಂಗಾರದ ಪದಕ ಗೆದ್ದಿದ್ದಾರೆ. ವನಿತೆಯರ 200 ಮೀ. ಓಟದಲ್ಲಿ ಅವರು ಈ ಸಾಧನೆ ಮಾಡಿದರು. ಪುರುಷರ ಶಾಟ್‌ಪುಟ್‌ ವಿಭಾಗದಲ್ಲಿ ತೇಜಿಂದರ್‌ ಪಾಲ್‌ ಸಿಂಗ್‌ ತೂರ್‌ 19.62 ಮೀ.

ಪೋಲೆಂಡ್ನಲ್ಲಿ ನಡೆಯುತ್ತಿರುವ ಪೊಜಾ°ನ್ ಆ್ಯತ್ಲೆಟಿಕ್ಸ್ ಗ್ರ್ಯಾನ್ಪ್ರಿ ಕ್ರೀಡಾಕೂಟದಲ್ಲಿ➤ಭಾರತದ ಸ್ಟಾರ್ ಸ್ಪ್ರಿಂಟರ್ ಹಿಮಾ ದಾಸ್ ಗೆ ಬಂಗಾರದ ಪದಕ Read More »

ಕರಾವಳಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ➤ ಇಬ್ಬರು ಸಂಪರ್ಕ ಕಾರ್ಯಕರ್ತರನ್ನು ನಿಯೋಜನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜುಲೈ.5.ಕಳೆದ ಒಂದು ತಿಂಗಳಲ್ಲಿ ಬಿಬಿಎಂಪಿ ವ್ಯಾಪ್ತಿ ಯಲ್ಲಿ ಡೆಂಗ್ಯೂ ಪ್ರಕರಣಗಳು ಮೂರುಪಟ್ಟು ಹೆಚ್ಚಳವಾಗಿದ್ದು, 1,830 ಪ್ರಕರಣಗಳು ದೃಢಪಟ್ಟಿವೆ. ಹೀಗಾಗಿ ಡೆಂಗ್ಯೂ ನಿಯಂತ್ರಣ ಅನಿವಾರ್ಯ ವಾಗಿದ್ದು, ಜನರದಲ್ಲಿ ಜಾಗೃತಿ ಮೂಡಿಸಲು, ಸೊಳ್ಳೆಗಳು ಹೆಚ್ಚಳವಾಗದಂತೆ ವಾರ್ಡ್‌ ಮಟ್ಟದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ವಾರ್ಡ್‌ಗೆ ಇಬ್ಬರು ಸಂಪರ್ಕ ಕಾರ್ಯಕರ್ತರ ನಿಯೋಜಿಸಲು ತೀರ್ಮಾನಿಸಲಾಗಿದೆ.ಸಂಪರ್ಕ ಕಾರ್ಯಕರ್ತರು ಮನೆಗಳಿಗೆ ತೆರಳಿ ಜನರಲ್ಲಿ ತೆರೆದ ತೊಟ್ಟಿಯಲ್ಲಿ ನೀರು ಸಂಗ್ರಹಿಸದಂತೆ, ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು ಹಾಗೂ ಸೊಳ್ಳೆಗಳ ಹೆಚ್ಚಳಕ್ಕೆ ಕಾರಣಗಳನ್ನು

ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ನಿಯಂತ್ರಣ ಕಾರ್ಯಕ್ರಮ ➤ ಇಬ್ಬರು ಸಂಪರ್ಕ ಕಾರ್ಯಕರ್ತರನ್ನು ನಿಯೋಜನೆ Read More »

ಕರಾವಳಿ

ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಶ್ರೀ.ವಿ.ಮುರಳೀಧರನ್ ಇವರ ಭೇಟಿಯಾದ ➤ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.5.ದಕ್ಷಿಣ ಕನ್ನಡ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ ಗುರುವಾರದಂದು  ಮಾನ್ಯ ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಶ್ರೀ.ವಿ.ಮುರಳೀಧರನ್ವರನ್ನು ಭೇಟಿಯಾದರು. ಕೆಲ ದಿನಗಳ ಹಿಂದೆ ಮಸ್ಕತ್ ಪೊಲೀಸರಿಂದ ಬಂಧಿತವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ನಿವಾಸಿ ಶ್ರೀ.ಪ್ರಕಾಶ್ ಪೂಜಾರಿ ಇವರನ್ನು ಭಾರತಕ್ಕೆ ಕರೆತರುವ ವಿಚಾರವಾಗಿ ಮಧ್ಯಪ್ರವೇಶಿಸಲು ಮಸ್ಕತ್ ನ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಸಂಸದರು ಸಚಿವರನ್ನು ವಿನಂತಿಸಿದರು. ಈ ವಿಚಾರವಾಗಿ ವಿದೇಶಾಂಗ ಇಲಾಖೆಯ ಅಧಿಕಾರಿಗಳಿಂದ

ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವ ಶ್ರೀ.ವಿ.ಮುರಳೀಧರನ್ ಇವರ ಭೇಟಿಯಾದ ➤ ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ Read More »

ಕರಾವಳಿ

ಪರಿಶಿಷ್ಟ ಜಾತಿ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.5.2019-20ನೇ ಸಾಲಿಗೆ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಮೈಕ್ರೋಕ್ರೆಡಿಟ್ (ಪ್ರೇರಣಾ)(ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಯೋಜನೆ, ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿಯಲ್ಲಿ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು ಹಾಗೂ ಕರ್ನಾಟಕ ರಾಜ್ಯದ ವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ ರೂ.1,50,000/- ಮತ್ತು ನಗರ ಪ್ರದೇಶದಲ್ಲಿ ರೂ.2,00,000/- ಗಳ ಮಿತಿಯಲ್ಲಿರಬೇಕು. ಅರ್ಜಿದಾರರು 18 ವರ್ಷಕ್ಕೆ ಮೇಲ್ಪಟ್ಟಿರಬೇಕು.(ಆಧಾರ್ ಕಾರ್ಡ್ ಕಡ್ಡಾಯವಾಗಿ ಲಗತ್ತಿಸಿರಬೇಕು),

ಪರಿಶಿಷ್ಟ ಜಾತಿ ಸೌಲಭ್ಯಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top