newskadaba

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಸೇವಾಸಿಂಧು ಪೋರ್ಟಲ್  https://sevasindhuservices.karnataka.gov.in/ ಮೂಲಕ ಅರ್ಜಿಯನ್ನು ಸಲ್ಲಿಸಿ, ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಂ-16ಸಿ, ಮೌಲಾನಾ ಅಬ್ದುಲ್ ಕಲಾಂ ಅಜಾದ್ ಭವನ, ಮಿಲ್ಲರ್ ಟ್ಯಾಂಕ್‍ಬೆಡ್ ರಸ್ತೆ, ವಸಂತನಗರ, […]

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ Read More »

ಕರಾವಳಿ

ಕೆ.ಪಿ.ಟಿ: ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿಗೆ ಕೆಲಸ ಮಾಡುತ್ತಿರುವ ವೃತ್ತಿಪರ ಅಭ್ಯರ್ಥಿಗಳಿಗೆ (Working Professionals) ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷ/ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳ ಮೆರಿಟ್ ಹಾಗೂ ಮೀಸಲಾತಿಗನುಗುಣವಾಗಿ ಆಫ್‍ಲೈನ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಈ ಸಂಸ್ಥೆಯಲ್ಲಿ ಸೂಕ್ತ ಮೂಲ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಪ್ರವೇಶಾತಿ ಪ್ರಕ್ರಿಯೆಯ ವಿವಿಧ ಹಂತಗಳ ವೇಳಾಪಟ್ಟಿ: ಇಲಾಖೆಯ ಅಧಿಕೃತ ವೆಬ್‍ಸೈಟ್‍ಗಳಿಂದ

ಕೆ.ಪಿ.ಟಿ: ಡಿಪ್ಲೋಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಗುಂಡೂರಾವ್ ಚಾಲನೆ

(ನ್ಯೂಸ್ ಕಡಬ) newsksdaba.com ಸುಳ್ಯ, ಜೂ. 19. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಚೇರಿ, ಸುಳ್ಯ ತಾಲೂಕು ಆಸ್ಪತ್ರೆಯ ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ ಮತ್ತು ನೂತನ ಶವಗಾರ, ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ಕಚೇರಿ ಕಟ್ಟಡ,  ಸುಳ್ಯ ನಗರ ಯೋಜನಾ ಪ್ರಾಧಿಕಾರ ಕಚೇರಿ ಮತ್ತಿತರ ಕಾಮಗಾರಿಗಳನ್ನು ಉದ್ಘಾಟಿಸಿದರು. ಸಂಧ್ಯಾ ಸುರಕ್ಷಾ ಮತ್ತು ವೃದ್ಧಾಪ್ಯ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಗುಂಡೂರಾವ್ ಚಾಲನೆ Read More »

ಕರಾವಳಿ

ಕಟ್ಟಡ ನಿರ್ಮಾಣ ನಿಯಮಗಳ ಸರಳೀಕರಣಕ್ಕೆ ಚಿಂತನೆ – ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newsksdaba.com ಸುಳ್ಯ, ಜೂ. 19. ಮನೆ ನಿರ್ಮಾಣ ಸೇರಿದಂತೆ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಲ್ಲಿ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ನಿಯಮಗಳನ್ನು ಸರಳೀಕರಿಸುವ ಬಗೆ ನಗರಾಭಿವೃದ್ಧಿ ಸಚಿವರೊಂದಿಗೆ ಚರ್ಚಿಸುವುದಾಗಿ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಹೇಳಿದರು. ಅವರು ಬುಧವಾರದಂದು ಸುಳ್ಯದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಸುಳ್ಯ ನಗರ ಯೋಜನಾ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ನಿವೇಶನಗಳ ನೋಂದಣಿ, ನಕ್ಷೆ ಮಂಜೂರಾತಿ,  ಖಾತೆ, 9/11,

ಕಟ್ಟಡ ನಿರ್ಮಾಣ ನಿಯಮಗಳ ಸರಳೀಕರಣಕ್ಕೆ ಚಿಂತನೆ – ಸಚಿವ ದಿನೇಶ್ ಗುಂಡೂರಾವ್ Read More »

ಕರಾವಳಿ

ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕರ್ನಾಟಕ ರಾಯಭಾರಿಯಾಗಿ ಪುತ್ತೂರಿನ ಶ್ರೀಕಾಂತ್ ಪೂಜಾರಿ ಬಿರಾವು ನೇಮಕ

(ನ್ಯೂಸ್ ಕಡಬ) newsksdaba.com ಜೂ. 19. ಈ ಬಾರಿ ದೆಹಲಿಯಲ್ಲಿ ನಡೆಯಿರುವ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಮೈ ಭಾರತ್ ನ ಯುವ ರಾಯಭಾರಿಯಾಗಿ ಪಾಲ್ಗೊಳ್ಳಲು ಕರ್ನಾಟಕದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಓರ್ವರಾಗಿ ಪುತ್ತೂರು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕ ಶ್ರೀಕಾಂತ್ ಪೂಜಾರಿ ಬಿರಾವು ಅವರು ಆಯ್ಕೆಯಾಗಿದ್ದಾರೆ. ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಮೈ ಭಾರತ್ (ನೆಹರು ಯುವ ಕೇಂದ್ರ) ನವದೆಹಲಿ ಇದರ ವತಿಯಿಂದ ದೇಶದ ಪ್ರತೀ ರಾಜ್ಯದಿಂದ 15 ವರ್ಷದಿಂದ 28

ದೆಹಲಿ ಸ್ವಾತಂತ್ರ್ಯ ದಿನಾಚರಣೆ ಕರ್ನಾಟಕ ರಾಯಭಾರಿಯಾಗಿ ಪುತ್ತೂರಿನ ಶ್ರೀಕಾಂತ್ ಪೂಜಾರಿ ಬಿರಾವು ನೇಮಕ Read More »

ರಾಷ್ಟ್ರೀಯ ನ್ಯೂಸ್

ಕಡಬ: ಟ್ಯಾಂಕ್ ಕುಸಿತದ ಭೀತಿ ಮನೆ ಖಾಲಿ ಮಾಡುವಂತೆ ಗ್ರಾಮ ಪಂಚಾಯತ್ ನೋಟೀಸ್

(ನ್ಯೂಸ್ ಕಡಬ) newskadaba.com ಜೂ. 19. ಕೊಯಿಲ ಜನತಾ ಕಾಲೊನಿಯ ಕೊಯಿಲ ಗ್ರಾ.ಪಂ. ಅಧೀನದಲ್ಲಿರುವ ಕುಡಿಯುವ ನೀರು ಸರಬರಾಜು ಯೋಜನೆಯ ಬೃಹತ್ ಟ್ಯಾಂಕೊಂದು ಕುಸಿತದ ಸಂಭವದ ಹಿನ್ನೆಲೆಯಲ್ಲಿ ಟ್ಯಾಂಕ್ ಸಮೀಪದಲ್ಲಿರುವ 6 ಮನೆಯವರಿಗೆ ಮನೆ ಖಾಲಿ ಮಾಡುವಂತೆ ಕೊಯಿಲ ಗ್ರಾಮ ಪಂಚಾಯತ್ ನೋಟಿಸ್ ನೀಡಿದೆ. 1996ರಲ್ಲಿ ವಿಶ್ವ ಬ್ಯಾಂಕ್ ಕುಡಿಯುವ ನೀರು ಯೋಜನೆಯಡಿ ನಿರ್ಮಾಣವಾಗಿರುವ ಈ ಟ್ಯಾಂಕ್, 50 ಸಾವಿರ ಲೀಟರ್ ಸಾಮರ್ಥ್ಯವನ್ನು ಹೊಂದಿದೆ. ಟ್ಯಾಂಕ್‌ನ ಬುಡದಿಂದಲೇ 15 ಅಡಿ ಎತ್ತರದಲ್ಲಿ ಗುಡ್ಡ ಇದ್ದು, ಭಾರೀ ಮಳೆಗೆ

ಕಡಬ: ಟ್ಯಾಂಕ್ ಕುಸಿತದ ಭೀತಿ ಮನೆ ಖಾಲಿ ಮಾಡುವಂತೆ ಗ್ರಾಮ ಪಂಚಾಯತ್ ನೋಟೀಸ್ Read More »

ಕರಾವಳಿ

ಕೆಂಪುಕಲ್ಲು ಮತ್ತು ಮರಳು ಕೊರತೆ- ಕಟ್ಟಡ ಕಾರ್ಮಿಕರ ಸಂಕಷ್ಟಕ್ಕೆ ಪರಿಹಾರ ಒದಗಿಸುವಂತೆ ಸರಕಾರಕ್ಕೆ ಮನವಿ

(ನ್ಯೂಸ್ ಕಡಬ) newskadaba.com ಜೂ. 19. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೆಂಪು ಕಲ್ಲು, ಮರಳು ಹಾಗೂ ಜಲ್ಲಿಯ ಕೊರತೆಯಿಂದಾಗಿ ಕೂಲಿ ಕಾರ್ಮಿಕರು ತೊಂದರೆ ಅನುಭವಿಸುಂತಾಗಿದ್ದು, ಮನೆ ನಿರ್ಮಾಣದಲ್ಲಿ ತೊಡಗಿಸಿಕೊಂಡವರು ಸಾಮಗ್ರಿಗಳ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿ ದಾರಿ ಕಾಣದಂತಾಗಿದ್ದಾರೆ. ಇದರಿಂದ ಕಟ್ಟಡ ಕಾರ್ಮಿಕರು ಸೇರಿದಂತೆ ಕಟ್ಟಡ ಸಾಮಗ್ರಿಗಳ ಮಳಿಗೆಯ ಮಾಲೀಕ ಹಾಗೂ ಕಾರ್ಮಿಕರಿಗೂ ಕೆಲಸವಿಲ್ಲದಂತಾಗಿದ್ದು, ಜೀವನದ ದಾರಿ ದುಸ್ತರವಾಗಿದೆ. ನಿಗದಿತ ಅವಧಿಯಲ್ಲಿ ನಡೆಯಬೇಕಾಗಿದ್ದ ಸರಕಾರಿ ವಲಯದ ಕಾಮಗಾರಿಗಳು ಸಾಮಾಗ್ರಿಗಳ ಕೊರತೆಯಿಂದಾಗಿ ಅರ್ಧಕ್ಕೆ ನಿಂತಿದ್ದು, ಇದನ್ನು ನಂಬಿಕೊಂಡಿರುವ ಕೂಲಿ ಕಾರ್ಮಿಕ

ಕೆಂಪುಕಲ್ಲು ಮತ್ತು ಮರಳು ಕೊರತೆ- ಕಟ್ಟಡ ಕಾರ್ಮಿಕರ ಸಂಕಷ್ಟಕ್ಕೆ ಪರಿಹಾರ ಒದಗಿಸುವಂತೆ ಸರಕಾರಕ್ಕೆ ಮನವಿ Read More »

ಕರಾವಳಿ

ಬೈಕ್ ಸ್ಕಿಡ್ ಆಗಿ ಯುವಕರಿಬ್ಬರಿಗೆ ಗಾಯ..!

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 19. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಯುವಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಮೀಪ ಕಲ್ಲಕಟ್ಟ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಹರ್ಷ ಮತ್ತು ನಾಗೇಶ್ ಎಂದು ಗುರುತಿಸಲಾಗಿದ್ದು, ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

ಬೈಕ್ ಸ್ಕಿಡ್ ಆಗಿ ಯುವಕರಿಬ್ಬರಿಗೆ ಗಾಯ..! Read More »

ಕರಾವಳಿ, ಕ್ರೈಮ್ ನ್ಯೂಸ್

ನೇತ್ರಾವದಿ ನದಿ ದಡದಲ್ಲಿ ಮೊಸಳೆ ಪತ್ತೆ- ಆತಂಕದಲ್ಲಿ ಸ್ಥಳೀಯರು

(ನ್ಯೂಸ್ ಕಡಬ) newskadaba.com ಜೂ. 19. ಕುಮಾರಧಾರ ನದಿ ದಡದಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಹಾಗೆಂದು ಮೊಸಳೆ ನೋಡಲು ಹೋದ ಜನರನ್ನು ಕಂಡ ಮೊಸಳೆಯು ಬಾಯಗಳಿಸಿ ಆಕ್ರಮಣಕಾರಿ ರೀತಿಯಲ್ಲಿ ಜನರ ಕಡೆ ನೋಡಿ ನದಿ ನೀರಿಗೆ ಇಳಿದು ಹೋದ ಘಟನೆ ಬುಧವಾರ ಸಂಜೆ ಉಪ್ಪಿನಂಗಡಿಯಲ್ಲಿ ನಡೆದಿದೆ.   ಇಲ್ಲಿನ ಶೇಖಬ್ಬ ಹಾಜಿ ಎಂಬವರ ಮನೆಯ ಬಳಿ ಕುಮಾರಧಾರ ನದಿಗೆ ಇಳಿಯುವ ದಾರಿಯ ಬಳಿ ನದಿ ದಡದಲ್ಲಿ ಮೊಸಳೆಯು ವಿಶ್ರಾಂತಿ ಪಡೆಯುವುದನ್ನು ದೂರದಿಂದ ಗಮನಿಸಿದ ಮಕ್ಕಳು ಇದನ್ನು ಸ್ಥಳೀಯ ನಿವಾಸಿಗಳಾದ

ನೇತ್ರಾವದಿ ನದಿ ದಡದಲ್ಲಿ ಮೊಸಳೆ ಪತ್ತೆ- ಆತಂಕದಲ್ಲಿ ಸ್ಥಳೀಯರು Read More »

ಕರಾವಳಿ
crime, arrest, suspected

ಅಪಾಯಕಾರಿ ಬಸ್ ಚಾಲನೆ- ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಜೂ. 19. ಬಸ್ ಚಾಲಕನೊಬ್ಬ ಅಪಾಯಕಾರಿ ಹಾಗೂ ಅಜಾಗರೂಕತೆಯ ಚಾಲನೆಯಿಂದ ವಾಹನ ಚಲಾಯಿಸಿ ಪ್ರಯಾಣಿಕರು ಮತ್ತು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿರುವ ವಿಡಿಯೋ ಜೂನ್ 17ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಉಡುಪಿ ಸಂಚಾರ ಪೊಲೀಸರು ತನಿಖೆ ನಡೆಸಿ ಆರೋಪಿ ಚಾಲಕ ದೇವರಾಜ್ ಎಂಬಾತನನ್ನು ಬಂಧಿಸಿದ್ದಾರೆ. ಇವರು ಶ್ರೀ ದುರ್ಗಾಂಬಾ ಬಸ್ ಅನ್ನು ಎನ್‌ಎಚ್ 169ಎ ಸಾರ್ವಜನಿಕ ರಸ್ತೆಯ

ಅಪಾಯಕಾರಿ ಬಸ್ ಚಾಲನೆ- ಚಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top