newskadaba

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಪ್ರಧಾನಿ ಮೋದಿ ವಿರುದ್ಧ ಮಾಡಿರುವ ವೈಯಕ್ತಿಕ ಟೀಕೆಗೆ ಅರುಣ್ ಜೇತ್ಲಿ ಖಂಡನೆ

(ನ್ಯೂಸ್ ಕಡಬ) newskadaba.com, ನವದೆಹಲಿ ,ಮೇ.13.  ಕೇಂದ್ರ ಹಣಕಾಸು ಸಚಿವ ಅರುಣ್‌ ಜೇತ್ಲಿಯವರು ರಾಜಸ್ಥಾನದ ಅಳವಾರ್‌ ಕೇಸಿಗೆ ಸಂಬಂಧಿಸಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡಿರುವ ವೈಯಕ್ತಿಕ ಟೀಕೆಗಳನ್ನು ಖಂಡಿಸಿದ್ದಾರೆ.ಮಾಯಾವತಿ ಅವರ ವೈಯಕ್ತಿಕ ಟೀಕೆಗಳು ರಾಜಕೀಯ ಚರ್ಚೆಯನ್ನು ಹೊಸ ಕೆಳಮಟ್ಟಕ್ಕೆ ಒಯ್ದಿದೆ ಎಂದು ಅವರು ಹೇಳಿದ್ದಾರೆ.‘ಅಳವಾರ್‌ ರೇಪ ಕೇಸಿಗೆ ಆಕ್ರೋಶ ವ್ಯಕ್ತಪಡಿಸುವ ಮೂಲಕ ಮಾಯಾವತಿ ಮೊಸಳೆ ಕಣ್ಣೀರು ಸುರಿಸಿದ್ದಾರೆ. ಆಕೆಗೆ ನಿಜವಾಗಿಯೂ ಕಳಕಳಿ ಇದ್ದರೆ ರಾಜಸ್ಥಾನದಲ್ಲಿನ ಕಾಂಗ್ರೆಸ್‌ ಸರಕಾರಕ್ಕೆ ಆಕೆ ನೀಡಿರುವ […]

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಪ್ರಧಾನಿ ಮೋದಿ ವಿರುದ್ಧ ಮಾಡಿರುವ ವೈಯಕ್ತಿಕ ಟೀಕೆಗೆ ಅರುಣ್ ಜೇತ್ಲಿ ಖಂಡನೆ Read More »

ರಾಷ್ಟ್ರೀಯ ನ್ಯೂಸ್

ಬಿಸಿಲಿನ ತಾಪವನ್ನು ತಣ್ಣಗಾಗಿಸುವ ತಂಪುಪಾನೀಯಾಗಳು

(ನ್ಯೂಸ್ ಕಡಬ) newskadaba.com, ಅಡುಗೆ ಮಾಹಿತಿ: ಬಿಸಿಲಿನ ಝಳಕ್ಕೆ ದೇಹವು ದಾಹದಿಂದ ತಣ್ಣಗಿನ ಪಾನೀಯವನ್ನು ಅರಸುತ್ತಿದೆ. ಇಂತಹ ಸಂದರ್ಭದಲ್ಲಿ ದಣಿವಾರಿಸಲು ಸಹಾಯಕವಾಗುವ ಸಿಹಿ, ಹುಳಿ, ಖಾರ ಮಿಶ್ರಿತ ರುಚಿ ಹೊಂದಿರುವ ಶರೀರವನ್ನು ತಂಪಾಗಿಸುವ ಆರೋಗ್ಯಕರ ಪಾನೀಯಗಳು ನಿಮಗಾಗಿ… ಮಜ್ಜಿಗೆಜ್ಯೂಸ್‌ ಬೇಕಾಗುವ ಸಾಮಗ್ರಿ: ದಪ್ಪಮಜ್ಜಿಗೆ- ಒಂದು ಕಪ್‌, ನೀರು- ಮೂರು ಕಪ್‌, ಹಸಿಮೆಣಸಿನ ಕಾಯಿ- ಮೂರು, ಲಿಂಬೆರಸ- ಮೂರು ಚಮಚ, ಶುಂಠಿ-ಸಣ್ಣ ತುಂಡು, ಕೊತ್ತಂಬರಿ ಸೊಪ್ಪು-ಮೂರು ಗರಿ, ಒಗ್ಗರಣೆಗೆ- ಸಾಸಿವೆ, ತುಪ್ಪ-ಅರ್ಧ ಚಮಚ, ರುಚಿಗೆ ತಕ್ಕಷ್ಟು ಉಪ್ಪು. ತಯಾರಿಸುವ ವಿಧಾನ:

ಬಿಸಿಲಿನ ತಾಪವನ್ನು ತಣ್ಣಗಾಗಿಸುವ ತಂಪುಪಾನೀಯಾಗಳು Read More »

ಆರೋಗ್ಯ ಮಾಹಿತಿ

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಮುಖಂಡರ ಒಳಜಗಳದಿಂದ ಸರ್ಕಾರ ಪತನ: ಶೋಭಾ ಹೇಳಿಕೆ

(ನ್ಯೂಸ್ ಕಡಬ) newskadaba.com,ಕಲಬುರುಗಿ,ಮೇ.13. ಸೋಮವಾರ ಕಲಬುರಗಿಯಲ್ಲಿ ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಂಸದೆ ಶೋಭಾ ಕರಂದ್ಲಾಜೆ ಅವರು, ಜೆಡಿಎಸ್ ನವರು ಕೇವಲ 7 ಕ್ಷೇತ್ರಗಳಲ್ಲಿ ಮಾತ್ರ ಪ್ರಚಾರಕ್ಕೆ ಸೀಮಿತವಾಗಿದ್ದಾರೆ. ರೆಸಾರ್ಟ್ ನಲ್ಲಿ ವಿಶ್ರಾಂತಿ ತೆಗೆದುಕೊಳ್ಳುವ ಸಿಎಂ ಮತ್ತೆ ಆ ಸ್ಥಾನದಲ್ಲಿ ಮುಂದುವರಿಯಬಾರದು ಎಂದರು.ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ನಡುವೆ ಎಲ್ಲವೂ ಸರಿ ಇಲ್ಲ ಅನ್ನೋದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಹೇಳಿಕೆ ಸಾಕ್ಷಿ. ಈ ಒಳಜಗಳ ಸರ್ಕಾರವನ್ನು ಬಲಿ ತೆಗೆದುಕೊಳ್ಳುತ್ತದೆ. ಮೈತ್ರಿ

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಮುಖಂಡರ ಒಳಜಗಳದಿಂದ ಸರ್ಕಾರ ಪತನ: ಶೋಭಾ ಹೇಳಿಕೆ Read More »

ರಾಷ್ಟ್ರೀಯ ನ್ಯೂಸ್

ಸೌಜನ್ಯ ಮಹಿಳಾ ಮಂಡಲದ ಮಹಾಸಭೆ:

(ನ್ಯೂಸ್ ಕಡಬ) newskadaba.com,ಉರ್ವ, ಹೊೈಗೆಬೈಲು ,ಮೇ.13. ಇಲ್ಲಿನ ಸೌಜನ್ಯ ಮಹಿಳಾ ಮಂಡಲದ ಮಹಾಸಭೆಯುಇತ್ತೀಚೆಗೆ ಮಂಡಲದಅಧ್ಯಕ್ಷ ಶಾಂತಾಎಲ್.ಭಟ್‍ಇವರಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದಗೌರವಾಧ್ಯಕ್ಷೆ ಕೆ.ಎ ರೋಹಿಣಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತ ಬಯಸಿದರು.ಕಾರ್ಯದರ್ಶಿ ರಾಜೇಶ್ವರಿಎಸ್.ರಾವ್ ವಾರ್ಷಿಕ ವರದಿಯನ್ನೊಪ್ಪಿಸಿ ,ಕೋಶಾಧಿಕಾರಿ ನಳಿನಿ ವಿ.ರೈಆಯವ್ಯಯವನ್ನು ಮಂಡಿಸಿದರು. ಮುಂದಿನ ವರ್ಷದಕಾರ್ಯಯೋಜನೆಯನ್ನು ಸಾಂಸ್ಕೃತಿಕ ಕಾರ್ಯದರ್ಶಿ ರಮಾಎನ್. ಹಾಗೂ ಪ್ರತಿಭಾ ಡಿ.ವಿಅಂದಾಜುಆಯವ್ಯಯ ಪಟ್ಟಿಯನ್ನು ಮಹಾಸಭೆಯ ಮುಂದಿಟ್ಟರು. 2019-20ರ ಸಾಲಿಗೆ 19 ಮಂದಿ ಸದಸ್ಯರನ್ನುಕಾರ್ಯಕಾರಿ ಸಮಿತಿಗೆಆಯ್ಕೆ ಮಾಡಲಾಯಿತು. ಕೆ.ಎ.ರೋಹಿಣಿ, ಗೌರವಾಧ್ಯಕ್ಷೆ, ಹೇಮಲತಾರಮೇಶ, ಅಧ್ಯಕ್ಷೆಯಾಗಿ, ರಮಾಎನ್. ಉಪಾಧ್ಯಕ್ಷೆ, ರಾಜೇಶ್ವರಿಎಸ್.ರಾವ್ ಕಾರ್ಯದರ್ಶಿ, ಶೈಲಜ ಎ.

ಸೌಜನ್ಯ ಮಹಿಳಾ ಮಂಡಲದ ಮಹಾಸಭೆ: Read More »

ಕರಾವಳಿ

ಮೇ 15 ರಂದು ದೈಹಿಕ ಅರ್ಹತೆ ಮತ್ತು ಸಾಮಥ್ರ್ಯತೆ ಪರೀಕ್ಷೆ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.13.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ನಾಗರೀಕ ಪೊಲೀಸ್ ಕಾನ್ಸ್‍ಟೇಬಲ್ (ಸಿಪಿಸಿ/ಮಪಿಸಿ) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ದೈಹಿಕ ಅರ್ಹತೆ ಮತ್ತು ಸಾಮಥ್ರ್ಯತೆ ಪರೀಕ್ಷೆಯನ್ನು ಮೇ 15 ರಂದು ಮಂಗಳಾ ಕ್ರೀಡಾಂಗಣ ಮಂಗಳೂರು ಇಲ್ಲಿ ನಡೆಸಲಾಗುತ್ತದೆ. ಅಭ್ಯರ್ಥಿಗಳಿಗೆ ಈಗಾಗಲೇ ಸಂದೇಶವನ್ನು ರವಾನಿಸಲಾಗಿರುತ್ತದೆ. ಅಭ್ಯರ್ಥಿಗಳು ನಿಗದಿಪಡಿಸಿದ ದಿನದಂದು ಪೂವಾಹ್ನ 6.30 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.in ನ್ನು

ಮೇ 15 ರಂದು ದೈಹಿಕ ಅರ್ಹತೆ ಮತ್ತು ಸಾಮಥ್ರ್ಯತೆ ಪರೀಕ್ಷೆ Read More »

ಕರಾವಳಿ

ಕೋಳಿ ಸಾಕಣೆ ತರಬೇತಿ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.13.ನಾಟಿಕೋಳಿಗೆ ಹೋಲುವ ವಿಶೇಷ ತಳಿಯಾದ ಸ್ವರ್ಣಧಾರ ಕೋಳಿಯು ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಬೇಡಿಕೆಯಾಗಿದೆ. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಬಿವೃದ್ಧಿ ಪಡಿಸಿದ ಸ್ವದೇಶಿ ತಳಿಗಳೊಂದಾದ ಸ್ವರ್ಣಧಾರ ಕೋಳಿ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಲಭ್ಯವಿದ್ದು ಆಸಕ್ತರಿಗೆ ನಿನ್ನೆ 10ನೇ ಶುಕ್ರವಾರ ತರಬೇತಿಯ ಮೂಲಕ ವೈಜ್ಞಾನಿಕ ಕೋಳಿ ಸಾಕಣೆ ವಿಧಾನವನ್ನು ತಿಳಿಸಲಾಯಿತು.ಕೇಂದ್ರದ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ. ಎ.ಟಿ. ರಾಮಚಂದ್ರ ನಾಯ್ಕ ರವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡುತ್ತಾ ಘಟ್ಟದ

ಕೋಳಿ ಸಾಕಣೆ ತರಬೇತಿ Read More »

ಕರಾವಳಿ

ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.13.2019-20ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪರಿಶಿಷ್ಟ ವರ್ಗದ ಕಾನೂನು ಪದವಿಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಯು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು ಹಾಗೂ ಜಾತಿ ಪ್ರಮಾಣ ಪತ್ರ ಹೊಂದಿರಬೇಕು. ಅಭ್ಯರ್ಥಿಯು ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವ ವಿದ್ಯಾನಿಲಯ/ಶಿಕ್ಷಣ ಸಂಸ್ಥೆಗಳಿಂದ 3 ವರ್ಷ ಅಥವಾ 5 ವರ್ಷಗಳ ಕಾನೂನು ಪದವಿ ಶಿಕ್ಷಣವನ್ನು ಪೂರೈಸಿರಬೇಕು. ಈ ಬಗ್ಗೆ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರಗಳನ್ನು ಹೊಂದಿರಬೇಕು.

ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ – ಅರ್ಜಿ ಆಹ್ವಾನ Read More »

ಕರಾವಳಿ

ಬಂಟ್ವಾಳ ತಾಲೂಕು ಪ್ರಗತಿ ಪರಿಶೀಲನಾ ಸಭೆ

(ನ್ಯೂಸ್ ಕಡಬ) newskadaba.com,ಮಂಗಳೂರು, ಮೇ 13 ಬಂಟ್ವಾಳ ತಾಲೂಕು ಪಂಚಾಯತ್‍ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಮೇ 15 ರಂದು ಅಪರಾಹ್ನ 2.30 ಗಂಟೆಗೆ ಗ್ರಾಮ ಪಂಚಾಯತ್‍ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಇಲಾಖಾಧಿಕಾರಿಗಳ ಸಭೆಯು ಉಪಕಾರ್ಯದರ್ಶಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಬಂಟ್ವಾಳ ತಾಲೂಕು ಪಂಚಾಯತ್ ಇವರ ಪ್ರಕಟಣೆ ತಿಳಿಸಿದೆ.

ಬಂಟ್ವಾಳ ತಾಲೂಕು ಪ್ರಗತಿ ಪರಿಶೀಲನಾ ಸಭೆ Read More »

ಕರಾವಳಿ

ಅರಿವು ಶೈಕ್ಷಣಿಕ ಸಾಲ ಯೋಜನೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com,ಮಂಗಳೂರು, ಮೇ 13 ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿ.ಇ.ಟಿ. ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ. 2ರ ಬಡ್ಡಿ ದರದಲ್ಲಿ ವಾರ್ಷಿಕವಾಗಿ ಗರಿಷ್ಠ ರೂ. 1 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ.2019-20ನೇ ಸಾಲಿನಲ್ಲಿ ಸಿ.ಇ.ಟಿ. ಮೂಲಕ ಆಯ್ಕೆಯಾಗಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿ.ಇ.ಟಿ.ಗೆ ಪಾವತಿಸಬೇಕಾದ ಶುಲ್ಕವನ್ನು ಸಿ.ಇ.ಟಿ. ಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ

ಅರಿವು ಶೈಕ್ಷಣಿಕ ಸಾಲ ಯೋಜನೆ – ಅರ್ಜಿ ಆಹ್ವಾನ Read More »

ಕರಾವಳಿ

ಕೊಯಿಲ ತ್ರಿವೇಣಿ ಸರ್ಕಲ್ ಬಳಿ ಪಂಚಾಯಿತಿಯಿಂದ ಕುಡಿಯುವ ನೀರಿನ ತೊಟ್ಟಿ ➤ ದಾಹ ನೀಗಿಸಿಕೊಳ್ಳುತ್ತಿರುವ ಪ್ರಾಣಿ – ಪಕ್ಷಿಗಳು

(ನ್ಯೂಸ್ ಕಡಬ) newskadaba­­.com ಕಡಬ, ಮೇ.12. ಈ ಬಾರಿ ಬೇಸಿಗೆಯ ಕಾವು  ಏರುತ್ತಿದ್ದಂತೆ  ನೀರಿನ ಹಾಹಾಕಾರ  ಹೆಚ್ಚಾಗುತ್ತಿದ್ದು ಮನುಷ್ಯನು ವಿವಿಧ ರೀತಿಯಲ್ಲಿ ತನ್ನ ದಾಹ ನೀಗಿಸಿಕೊಳ್ಳುತ್ತಿದ್ದರೆ ಪ್ರಾಣಿ ಪಕ್ಷಿಗಳ ಪಾಡು ಯಾರಿಗೂ ಕೇಳದಂತಿದೆ. ಇಂತಹ ಪರಿಸ್ಥಿತಿಯಲ್ಲಿ  ಕೊಯಿಲ ಗ್ರಾಮ ಪಂಚಾಯಿತಿ ತನ್ನ ವ್ಯಾಪ್ತಿಯ ತ್ರಿವೇಣಿ ಸರ್ಕಲ್ ಬಳಿ  ರಸ್ತೆ ಪಕ್ಕದಲ್ಲಿ ಕುಡಿಯುವ ನೀರಿನ ತೊಟ್ಟಿಯೊಂದನ್ನು ನಿರ್ಮಿಸಿದ ಪರಿಣಾಮ ಪ್ರಾಣಿ ಪಕ್ಷಿಗಳ ದಾಹ ನೀಗುತ್ತಿರುವುದು ಮೆಚ್ಚುಗೆಗೆ ಪಾತ್ರವಾಗಿದೆ. ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಿಂದ ಟಿಸಿಲೊಡೆದ

ಕೊಯಿಲ ತ್ರಿವೇಣಿ ಸರ್ಕಲ್ ಬಳಿ ಪಂಚಾಯಿತಿಯಿಂದ ಕುಡಿಯುವ ನೀರಿನ ತೊಟ್ಟಿ ➤ ದಾಹ ನೀಗಿಸಿಕೊಳ್ಳುತ್ತಿರುವ ಪ್ರಾಣಿ – ಪಕ್ಷಿಗಳು Read More »

ವಿಶೇಷ ಲೇಖನಗಳು
Scroll to Top