newskadaba

ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ನಿಂದ  ನಾಪತ್ತೆ

(ನ್ಯೂಸ್ ಕಡಬ) newskadaba.comವೇಣೂರು, ಫೆ.11. ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಿಂದ  ನಾಪತ್ತೆಯಾದ ಘಟನೆ ವೇಣೂರು ಪೊಲೀಸ್ ಠಾಣೆಯಿಂದ ವರದಿಯಾಗಿದೆ.ನಾಪತ್ತೆಯಾದ ವಿದ್ಯಾರ್ಥಿಯನ್ನು ಉಡುಪಿ ತಾಲೂಕು  ಶೀರೂರು ಗ್ರಾಮದ ನಿವಾಸಿಯಾಗಿರುವ ಪ್ರಥ್ವಿಕ್ ಹೆಗ್ಡೆ ಎಂದು ಗುರುತಿಸಲಾಗಿದೆ.   ಪ್ರಥ್ವಿಕ್ ಹೆಗ್ಡೆ ಹಾಸ್ಟೆಲ್ ನಿಂದ ಹೊರಟು ಹೋದವನು  ಸಂಜೆಯಾದರೂ ಮರಳಿ ಬಂದಿರುವುದಿಲ್ಲ ಈ ಬಗ್ಗೆ ಹಾಸ್ಟೆಲ್ ವಾರ್ಡನ್ ಪೋಷಕರಿಗೆ  ತಿಳಿಸಿದರು. ತಕ್ಷಣ ಮನೆಯವರು ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ. ಪೃಥ್ವಿಕ್ ಹೆಗ್ಡೆ ಸುಮಾರು 5.7 ಅಡಿ ಎತ್ತರವಿದ್ದು, ಗೋದಿ ಮೈಬಣ್ಣ ಹೊಂದಿರುತ್ತಾನೆ. ಹಾಸ್ಟೆಲ್ […]

ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ನಿಂದ  ನಾಪತ್ತೆ Read More »

ಕರಾವಳಿ

ಕುಕ್ಕೆ: ಪುಣ್ಯನದಿ ದರ್ಪಣ ತೀರ್ಥದಲ್ಲಿ ಅಸಂಖ್ಯ ಮೀನುಗಳು ಸಾವು ➤ ಕ್ರಿಮಿ ನಾಶಕ ಮಿಶ್ರಣ ಶಂಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಫೆ.11.ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಪಕ್ಕದಲ್ಲೆ ಹರಿಯುವ ಪುಣ್ಯನದಿ ದರ್ಪಣ ತೀರ್ಥದ ಕೆಳಭಾಗದ ನೀರಿನಲ್ಲಿ ನೂರಾರು ಮೀನುಗಳುಮೃತಪಟ್ಟಿವೆ.ದುಷ್ಕರ್ಮಿಗಳು ನದಿ ನೀರಿಗೆ ಕ್ರಿಮಿ ನಾಶಕ ಮಿಶ್ರಣ ಮಾಡಿರುವ ಶಂಕೆ ವ್ಯಕ್ತವಾ ಗಿದ್ದರೆ, ಇನ್ನೊಂದೆಡೆ ನದಿ ನೀರು ಬತ್ತಿ ಕಲುಷಿತಗೊಂಡು ಜಲಚರಗಳು ಸತ್ತಿರುವ ಸಂಶಯವೂ ಇದೆ. ಶನಿವಾರ ಸಂಜೆ ವೇಳೆಗೆ ನೂರಾರು ಮೀನುಗಳು ನದಿಯಲ್ಲಿ ಸತ್ತಿರು ವುದು ಮತ್ತು ಅಸಂಖ್ಯ ಮೀನುಗಳು ಸಾವು ಬದುಕಿನ ನಡುವೆ ನೀರಿನಲ್ಲಿ ವಿಲವಿಲನೆ ಒದ್ದಾಡುತ್ತಿರುವ ದೃಶ್ಯಗಳು ಕಂಡುಬಂದಿವೆ.   ಸುಬ್ರಹ್ಮಣ್ಯ ದೇವಸ್ಥಾನದ

ಕುಕ್ಕೆ: ಪುಣ್ಯನದಿ ದರ್ಪಣ ತೀರ್ಥದಲ್ಲಿ ಅಸಂಖ್ಯ ಮೀನುಗಳು ಸಾವು ➤ ಕ್ರಿಮಿ ನಾಶಕ ಮಿಶ್ರಣ ಶಂಕೆ Read More »

ಕರಾವಳಿ

ನಿಂತಿಕಲ್ಲು: ಏಕಾಗ್ರತೆ ಓದಿನಿಂದ ಯಶಸ್ಸು ಖಂಡಿತ ➤ ಇಕ್ಬಾಲ್ ಬಾಳಿಲ

(ನ್ಯೂಸ್ ಕಡಬ) newskadaba.com ಕಡಬ, ಫೆ.09. ನಿಂತಿಕಲ್ಲು ಕೆ ಎಸ್ ಗೌಡ ವಿದ್ಯಾ ಸಂಸ್ಥೆಯಲ್ಲಿ ಟ್ರೆಂಡ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಪರೀಕ್ಷೆಯನ್ನು ಎದುರಿಸುವುದು ಹೇಗೆ ಎನ್ನುವುದರ ಕುರಿತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತು ಕಾರ್ಯಕ್ರಮವು ಫೆಬ್ರವರಿ 9 ರಂದು ನಡೆಯಿತು .   ಪರೀಕ್ಷೆ ಎಂಬ ಭಯಮುಕ್ತ ವಾತಾವರಣದಿಂದ ನಾವೆಲ್ಲರೂ ಹಿಂಜರಿಯಬೇಕು ,ಓದಿಗೆ ಸಮಯ ಮೀಸಲಿಡಬೇಕು ,ನಿದ್ದೆ ಹಾಳು ಮಾಡಿ ಓದುವುಧರಿಂದ ಏನೂ ಪ್ರಯೋಜನವಿಲ್ಲ ,ನಾವು ಒಂದು ವಿಷಯದ ಬಗ್ಗೆ ಇಷ್ಟ ಪಟ್ಟು

ನಿಂತಿಕಲ್ಲು: ಏಕಾಗ್ರತೆ ಓದಿನಿಂದ ಯಶಸ್ಸು ಖಂಡಿತ ➤ ಇಕ್ಬಾಲ್ ಬಾಳಿಲ Read More »

ಕರಾವಳಿ

ಬಲ್ಯ: ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ➤ಹೊರೆಕಾಣಿಕೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಬಲ್ಯ ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಫೆ.9ರಂದು ಪ್ರಾರಂಭಗೊಂಡಿದ್ದು, ಗ್ರಾಮಸ್ಥರಿಂದ ಹೊರೆ ಕಾಣಿಕೆ ಸಮರ್ಪಣೆ ನಡೆಯಿತು.ಸಂಜೆ ಗ್ರಾಮಸ್ಥರಿಂದ ಕಾಣಿಕೆ ಹುಂಡಿ ಸಮರ್ಪಣೆ, ಬಳಿಕ ಶ್ರೀ ಉಮಾಮಹೇಶ್ವರೀ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ನಡೆಯಿತು. ರಾತ್ರಿ ಪ್ರಾರ್ಥನೆ, ಪುಣ್ಯಾಹ, ಪ್ರಾಸಾದ ಶುದ್ಧಿ, ವಾಸ್ತು ರಕ್ಷೋಘ್ನ ಹೋಮ, ವಾಸ್ತು ಬಲಿ, ವಾಸ್ತು ಪೂಜೆ ನಡೆದು ಮಹಾಪೂಜೆ ನಡೆಯಿತು. ಫೆ.9ರಂದು ಬೆಳಿಗ್ಗೆ ಉಮಾಮಹೇಶ್ವರಿ ಸೇವಾ ಟ್ರಸ್ಟ್‍ನ ಅಧ್ಯಕ್ಷ ಕೆ. ಚಿತ್ತರಂಜನ್ ರೈ ಮಾಣಿಗ,

ಬಲ್ಯ: ಶ್ರೀ ಉಮಾಮಹೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ➤ಹೊರೆಕಾಣಿಕೆ ಸಮರ್ಪಣೆ Read More »

ಕರಾವಳಿ

 ಮಸ್ತಕಾಭಿಷೇಕಕ್ಕೆ ಲೋಕೋಪಯೋಗಿ ಇಲಾಖೆಯಿಂದ ಮೂಲಭೂತ ಸೌಕರ್ಯ ➤ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿಯವರಿಂದ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.comಧರ್ಮಸ್ಥಳ,ಫೆ.09.ದಕ್ಷಿಣ ಭಾರತದ ಅತ್ಯಂತ ಪವಿತ್ರ ಕ್ಷೇತ್ರವಾದ ಧರ್ಮಸ್ಥಳದಲ್ಲಿ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಯುವ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿಗೆ ರಸ್ತೆ ಸಂಪರ್ಕ ಹಾಗೂ ಮೂಲಭೂತ ಸೌಕರ್ಯಕ್ಕೆ ಒಟ್ಟು 27.50 ಕೋಟಿ ರೂ. ಗಳ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕು ಸುಬ್ರಮಣ್ಯ ಉಡುಪಿ ರಾಜ್ಯ ಹೆದ್ದಾರಿ -37 ರ ಕಿ.ಮೀ 52.00 ರಿಂದ 55.00 ಕಿ.ಮೀ ವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ 1500.00 ಲಕ್ಷಗಳನ್ನು ವ್ಯಹಿಸಲಾಗಿದೆ. ರತ್ನಗಿರಿ ಬಾಹುಬಲಿ ಬೆಟ್ಟದ ರಸ್ತೆ

 ಮಸ್ತಕಾಭಿಷೇಕಕ್ಕೆ ಲೋಕೋಪಯೋಗಿ ಇಲಾಖೆಯಿಂದ ಮೂಲಭೂತ ಸೌಕರ್ಯ ➤ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿಯವರಿಂದ ಲೋಕಾರ್ಪಣೆ Read More »

ಕರಾವಳಿ

ಕೊೈಲ ಗ್ರಾಮಸಭೆ

(ನ್ಯೂಸ್ ಕಡಬ) newskadaba.comಕಡಬ,ಫೆ.09. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ  ಅಳವಡಿಸಲಾಗಿರುವ ದಾರಿದೀಪಗಳ ಟೆಂಡರ್ ಪ್ರಕ್ರಿಯೆಗಳಲ್ಲಿ ಲೋಪ ಎಸೆಗಲಾಗಿದೆ ಎಂದು ಆರೋಪ ವ್ಯಕ್ತವಾದ ಘಟನೆ ಕೊೈಲ ಗ್ರಾಮ ಸಭೆಯಲ್ಲಿ ನಡೆದಿದೆ.   ಸಭೆ ಗ್ರಾ.ಪಂ.ಅಧ್ಯಕ್ಷೆ ಹೇಮಾ ಎಂ.ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ತಾ.ಪಂ.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುರೇಶ್‍ಕುಮಾರ್ ಮಾರ್ಗದರ್ಶಿ ಅಧಿಕಾರಿಯಾಗಿದ್ದರು.   ಗ್ರಾ.ಪಂ.ವತಿಯಿಂದ ಸೋಲಾರ್ ದಾರಿದೀಪ ನಿಯಮಾನುಸಾರ ಅಳವಡಿಕೆಯಾಗಿಲ್ಲ. ಅಳವಡಿಸಿರುವ ಸೋಲಾರ್ ದಾರಿದೀಪಗಳು ಗುಣಮಟ್ಟದಿಂದ ಇಲ್ಲ ಅಲ್ಲದೆ ಟೆಂಡರ್ ಪ್ರಕ್ರಿಯೆಯ ನಿಗದಿತ ದಿನದೊಳಗೆ ಪೂರ್ಣಗೊಳಿಸಿ ಕಂಪೆನಿಯೊಂದಕ್ಕೆ ಟೆಂಡರ್  ನೀಡಲಾಗಿದೆ

ಕೊೈಲ ಗ್ರಾಮಸಭೆ Read More »

ಕರಾವಳಿ

ರಾಷ್ಟ್ರೀಯ ಕೃಷಿ ವಿಜ್ಞಾನಿಗಳಿಂದ ತರಬೇತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.08.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆಂಗಿನ ಮರಗಳಿಗೆ ಬಿಳಿನೊಣದ ಬಾಧೆ ಕಂಡುಬಂದಿದ್ದು ಕೆಲವು ಮರಗಳಲ್ಲಿ ಈ ಬಾಧೆ ತೀವ್ರವಾಗಿರುತ್ತದೆ. ಆದುದರಿಂದ ಈ ಕೀಟ ಬಾಧೆಯ ಲಕ್ಷಣ, ಬಾಧೆಯ ಪರಿಣಾಮಗಳು ಹಾಗೂ ಸದರಿ ಕೀಟ ನಿಯಂತ್ರಣ ಕುರಿತು ರಾಷ್ಟ್ರೀಯ ಕೃಷಿ ವಿಜ್ಞಾನಿಗಳಿಂದ ತರಬೇತಿ ಹಾಗೂ ಪ್ರಾತ್ಯಕ್ಷತೆ ಕಾರ್ಯಕ್ರಮವನ್ನು ಫೆಬ್ರವರಿ 16 ರಂದು ಪೂರ್ವಾಹ್ನ 10.30 ಗಂಟೆಗೆ ಕೃಷಿ ವಿಜ್ಞಾನ ಕೇಂದ್ರ, ಕಂಕನಾಡಿ, ಮಂಗಳೂರು ಇಲ್ಲಿ ಏರ್ಪಡಿಸಲಾಗಿದೆ.ಆಸಕ್ತ ತೆಂಗು ಬೆಳೆಗಾರರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಉಪನಿರ್ದೇಶಕರು ತೋಟಗಾರಿಕೆ ಇಲಾಖೆ

ರಾಷ್ಟ್ರೀಯ ಕೃಷಿ ವಿಜ್ಞಾನಿಗಳಿಂದ ತರಬೇತಿ ಕಾರ್ಯಕ್ರಮ Read More »

ಕರಾವಳಿ

ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಅನುಮಾನಗಳಿವೆಯೇ? ►ಪರಿಹಾರಕ್ಕಾಗಿ 1950 ಸಂಖ್ಯೆಯನ್ನು ಸಂಪರ್ಕಿಸಿ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.07.ಮತದಾರರ ನೋಂದಣಿ, ಬದಲಾವಣೆಯನ್ನೊಳಗೊಂಡಂತೆ ಮತದಾರರ ಪಟ್ಟಿಗೆ ಸಂಬಂಧಸಿದಂತೆ ನೆರವಿಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲ ಜಿಲ್ಲಾ ಸಂಪರ್ಕ ಕೇಂದ್ರ ಆರಂಭಿಸಲಾಗಿದೆ. ಮತದಾರರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಿಲ್ಲೆಯ ಮತದಾರರು ದೂರವಾಣಿಯ ಮೂಲಕ ಅಥವಾ ಮೊಬೈಲ್ ಮೂಲಕ 1950 ಗೆ ಸಂಪರ್ಕಿಸಬಹುದಾಗಿದೆ. ಹಾಗೂ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಚುನಾವಣಾ ಕಂಟ್ರೋಲ್ ರೂಂ ನ ನೋಡಲ್ ಅಧಿಕಾರಿ ಹಾಗೂ ಸಹಾಯಕ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಪ್ರಮೀಳ ಇವರು ತಿಳಿಸಿದ್ದಾರೆ. ಜಿಲ್ಲೆಯೊಳಗಿನ ಮತದಾರರು ನೇರವಾಗಿ 1950 ಸಂಪರ್ಕಿಸಬಹುದು ಜಿಲ್ಲೆಯ ಹೊರಗಿನಿಂದ

ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಅನುಮಾನಗಳಿವೆಯೇ? ►ಪರಿಹಾರಕ್ಕಾಗಿ 1950 ಸಂಖ್ಯೆಯನ್ನು ಸಂಪರ್ಕಿಸಿ Read More »

ಕರಾವಳಿ

ಸದನದಲ್ಲಿ ಮುಂದುವರಿದ ಬಿ.ಜೆ.ಪಿ. ಪ್ರತಿಭಟನೆ

(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.07. ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ರಾಜಕೀಯ ಬೆಳವಣಿಗೆಗಳು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಗುರುವಾರದ ಕಲಾಪದ ವೇಳೆ 175 ಶಾಸಕರ ಹಾಜರಿದ್ದರು. ಜೆಡಿಎಸ್ 25, ಕಾಂಗ್ರೆಸ್ 60, ಬಿಜೆಪಿ 90 ಶಾಸಕರು ಉಪಸ್ಥಿತರಿದ್ದರು. ಬುಧವಾರ ಗೈರಾಗಿದ್ದ ಸೌಮ್ಯಾರೆಡ್ಡಿ, ಕೃಷ್ಣಪ್ಪ ಹಾಜರಾಗಿದ್ದರೆ, ಕಾಂಗ್ರೆಸ್ ನಿಂದ ಇವತ್ತು ಪ್ರತಾಪ್ ಗೌಡ ಪಾಟೀಲ್ ಗೈರಾಗಿದ್ದಾರೆ. ಬಿಜೆಪಿ ಬಾಲಚಂದ್ರ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಅಶ್ವಥ್ ನಾರಾಯಣ್ ಗೈರು ಹಾಜರಿ ಹಾಕಿದ್ದಾರೆ.ಸದನ ಆರಂಭಗೊಳ್ಳುತ್ತಲೇ ಬಿಜೆಪಿ ಶಾಸಕರು ಸರ್ಕಾರಕ್ಕೆ ಶಾಸಕರ ಬೆಂಬಲ ಇಲ್ಲ. ಸಿಎಂ ಕುಮಾರಸ್ವಾಮಿ

ಸದನದಲ್ಲಿ ಮುಂದುವರಿದ ಬಿ.ಜೆ.ಪಿ. ಪ್ರತಿಭಟನೆ Read More »

ಕರಾವಳಿ

ಕರಾವಳಿಯಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.comಕಡಬ,ಫೆ.07.ಕರಾವಳಿ ಜಿಲ್ಲೆಯಲ್ಲಿ ಬುಧವಾರ (ಫೆ.6) ರಂದು ಮೋಡ ಕವಿದ ಬಿಸಿಲಿನ ವಾತಾವರಣ ಕಾಣಿಸಿಕೊಂಡಿತ್ತು. ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಪರಿಣಾಮ ಇದಾಗಿದ್ದು, ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಮಧ್ಯಾಹ್ನದ ಬಳಿಕ ತುಂತುರು, ದಕ್ಷಿಣ ಕನ್ನಡ -ಉಡುಪಿ ಜಿಲ್ಲೆಯಲ್ಲಿ ಮಳೆಯಾಗಿಲ್ಲ. ಇಂದು ಕೂಡಾ ಇದೇ ವಾತಾವರಣ ಮುಂದುವರಿದರೆ, ಮಳೆಯ ಸಾಧ್ಯತೆ ಹೆಚ್ಚಾಗಿದೆ. ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿಯಿಂದ

ಕರಾವಳಿಯಲ್ಲಿ ಮುಂದಿನ ಎರಡು ದಿನಗಳಲ್ಲಿ ಮಳೆ ಸಾಧ್ಯತೆ Read More »

ಕರಾವಳಿ
Scroll to Top