newskadaba

ನೀಟ್ ಸಾಧಕರಿಗೆ ಡಿಸಿ ಕಛೇರಿಯಲ್ಲಿ ಸನ್ಮಾನ

(ನ್ಯೂಸ್ ಕಡಬ) newskadaba.com ಜೂ. 18. ಪ್ರಸಕ್ತ ವರ್ಷದ ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ ಮಾಡಿದ  ಜಿಲ್ಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನ ಮಾಡಿದರು. ಎಕ್ಸ್‍ ಪರ್ಟ್  ಕಾಲೇಜಿನ  ವಿದ್ಯಾರ್ಥಿಗಳಾದ ನಿಖಿಲ್ ಸೊನ್ನದ್ (ಅಖಿಲ ಭಾರತ ಮಟ್ಟದ 17ನೇ ರ್ಯಾಂಕ್, ರಾಜ್ಯಮಟ್ಟದ ಪ್ರಥಮ ರ್ಯಾಂಕ್) ಹಾಗೂ ಕೆ.ಜಿ. ನಿಧಿ (ಅಖಿಲ ಭಾರತ 84ನೇ ರ್ಯಾಂಕ್, ರಾಜ್ಯಮಟ್ಟದ 7ನೇ ರ್ಯಾಂಕ್ ಅವರಿಗೆ ಜಿಲ್ಲಾಧಿಕಾರಿಗಳು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಎಕ್ಸ್‍ ಪರ್ಟ್  ವಿದ್ಯಾಸಂಸ್ಥೆಗಳ ಮುಖ್ಯಸ್ಥ […]

ನೀಟ್ ಸಾಧಕರಿಗೆ ಡಿಸಿ ಕಛೇರಿಯಲ್ಲಿ ಸನ್ಮಾನ Read More »

ಕರಾವಳಿ
crime, arrest, suspected

ನಕಲಿ ನೋಟ್ ಮುದ್ರಣ- ಉದ್ಯಮಿ ಪುತ್ರನ ಬಂಧನ

(ನ್ಯೂಸ್ ಕಡಬ) newskadaba.com ಜೂ. 14. ಶೋಕಿ ಜೀವನಕ್ಕಾಗಿ ಹಣ ಹೊಂದಿಸಲು ಖೋಟಾ ನೋಟು ತಯಾರಿಸಿದ ಟೆಕ್ಸ್‌ ಟೈಲ್ ಉದ್ಯಮಿಯೊಬ್ಬರ ಪುತ್ರನನ್ನು ಕಮರ್ಷಿಯಲ್‌ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಕ್ರಿಷ್‌ಮಾಲಿ (23) ಎಂದು ಗುರುತಿಸಲಾಗಿದೆ. ಈತ ವಿನಾಕಾರಣ ಸುತ್ತಾಡುತ್ತಾ ದುಂದುವೆಚ್ಚ ಮಾಡುತ್ತಿದ್ದರಿಂದ ಮನೆಯಲ್ಲಿ ಖರ್ಚಿಗೆ ಹಣ ಕೊಡುತ್ತಿರಲಿಲ್ಲ. ಹೀಗಾಗಿ ಹೇಗಾದರೂ ಮಾಡಿ ಹಣ ಹೊಂದಿಸಬೇಕೆಂದು ಯೋಚಿಸುತ್ತಿದ್ದಾಗ ಆತನಿಗೆ ನಕಲಿ ನೋಟು ತಯಾರಿಸುವ ದುರಾಲೋಚನೆ ಹೊಳೆದಿದ್ದು, ಅದಕ್ಕಾಗಿ ಆತ ಪ್ರಿಂಟರ್ ಸ್ಕ್ಯಾನ‌ರ್

ನಕಲಿ ನೋಟ್ ಮುದ್ರಣ- ಉದ್ಯಮಿ ಪುತ್ರನ ಬಂಧನ Read More »

ಕರ್ನಾಟಕ

ವಿಮಾನ ದುರಂತ- ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಿದ ಕೇಂದ್ರ

(ನ್ಯೂಸ್ ಕಡಬ) newskadaba.com ಜೂ. 14. ಅಹಮ್ಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪ್ರಕರಣದ ತನಿಖೆಗಾಗಿ ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ದುರಂತಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪ್ರಮಾಣಿತ ನಿರ್ವಹಣಾ ಮಾರ್ಗಸೂಚಿಗಳನ್ನು ರೂಪಿಸಲು ಆದೇಶಿಸಿದೆ. ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಈ ಸಮಿತಿಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ, ಕೇಂದ್ರ ಗೃಹ ಇಲಾಖೆಯ ಹೆಚ್ಚುವರಿ ಅಥವಾ ಜಂಟಿ ಕಾರ್ಯದರ್ಶಿ, ಗುಜರಾತ್ ಸರ್ಕಾರದ ಗೃಹ ಕಾರ್ಯದರ್ಶಿ, ಗೃಹ ಇಲಾಖೆಯ

ವಿಮಾನ ದುರಂತ- ಉನ್ನತ ಮಟ್ಟದ ತನಿಖೆಗೆ ಸಮಿತಿ ರಚಿಸಿದ ಕೇಂದ್ರ Read More »

ರಾಷ್ಟ್ರೀಯ ನ್ಯೂಸ್

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- ಮಂಗಳೂರಿಗೆ ಆಗಮಿಸಿದ NIA ತಂಡ

(ನ್ಯೂಸ್ ಕಡಬ) newskadaba.com ಜೂ. 14. ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಕೈಗೆತ್ತಿಕೊಂಡಿದ್ದು, ಇದೀಗ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ಎನ್ಐಎ ತಂಡ ನಡೆಸುತ್ತಿದ್ದು, ಅದರಂತೆ ಇಂದು ಬೆಂಗಳೂರಿನಿಂದ ಗಮಿಸಿದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿವೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ- ಮಂಗಳೂರಿಗೆ ಆಗಮಿಸಿದ NIA ತಂಡ Read More »

ಕರ್ನಾಟಕ
Theft, crime, Robbery

ನರ್ಸ್ ಸೋಗಿನಲ್ಲಿ ಬಂದು ಒಂದು ದಿನದ ಮಗುವನ್ನು ಕದ್ದೊಯ್ದ ಕಳ್ಳಿ..!

(ನ್ಯೂಸ್ ಕಡಬ) newskadaba.com ಜೂ. 14. ಒಂದು ದಿನದ ನವಜಾತ ಹಸುಗೂಸೊಂದು ಆಸ್ಪತ್ರೆಯಲ್ಲೇ ಕಳ್ಳತನವಾಗಿರುವ ಘಟನೆ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮಾಬೂಬು ಎಂಬವರ ಒಂದು ದಿನದ ಮಗುವನ್ನು ನರ್ಸ್ ಸೋಗಿನಲ್ಲಿ ಬಂದ ಕಳ್ಳಿಯೊಬ್ಬಳು ಮಗುವಿಗೆ ಕಫ ಇದೆ ನಾನು ಅದನ್ನು ತೆಗೆದುಕೊಂಡು ಬರುತ್ತೇನೆಂದು ಹೇಳಿ ಹೋದವರು ಮತ್ತೆ ಬಾರದೇ ಮಗುವನ್ನು ಕದ್ದೊಯ್ದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನರ್ಸ್ ಸೋಗಿನಲ್ಲಿ ಬಂದು ಒಂದು ದಿನದ ಮಗುವನ್ನು ಕದ್ದೊಯ್ದ ಕಳ್ಳಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾಲ್ ಬಾಗ್ ನಲ್ಲಿ ಇನ್ನುಮುಂದೆ ಫೊಟೋ ಶೂಟ್, ವಿಡಿಯೋ ಚಿತ್ರೀಕರಣಕ್ಕೆ ನಿಷೇಧ

(ನ್ಯೂಸ್ ಕಡಬ) newskadaba.com ಜೂ. 14. ಇನ್ನುಮುಂದೆ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ವೆಡ್ಡಿಂಗ್‌ ಫೋಟೋಶೂಟ್‌, ಮಾಡೆಲಿಂಗ್‌, ರೀಲ್ಸ್‌ ವಿಡಿಯೋ ಹಾಗೂ ಸಿನಿಮಾ ಚಿತ್ರೀಕರಣಕ್ಕೆ ನಿಷೇಧ ಹೇರಲಾಗಿದೆ. ಈ ಕುರಿತು ತೋಟಗಾರಿಕಾ ಇಲಾಖೆ ಸಿದ್ಧತೆ ನಡೆಸಿದೆ. ಕಬ್ಬನ್‌ ಪಾರ್ಕ್‌ನಲ್ಲಿ ಈಗಾಗಲೇ ರೀಲ್ಸ್‌, ಸಿನಿಮಾ, ಕಿರುತೆರೆ ಚಿತ್ರೀಕರಣ, ಪ್ರೀ ವೆಡ್ಡಿಂಗ್‌ ಫೋಟೋ ಶೂಟ್‌, ಪೋಸ್ಟ್‌ ವೆಡ್ಡಿಂಗ್‌ ಫೋಟೋ ಶೂಟ್‌ ಸೇರಿ, ಚಿತ್ರೀಕರಣಕ್ಕೂ ನಿಷೇಧಿಸಿ ರಾಜ್ಯ ಸರಕಾರ ಆದೇಶ ಮಾಡಿತ್ತು. ಈ ಬೆನ್ನಲ್ಲೇ ಇದೀಗ ಲಾಲ್‌ಬಾಗ್‌ನಲ್ಲಿ ಚಿತ್ರೀಕರಣಕ್ಕೆ ನಿಷೇಧ ಹೇರಲು ತೋಟಗಾರಿಕಾ ಇಲಾಖೆ

ಲಾಲ್ ಬಾಗ್ ನಲ್ಲಿ ಇನ್ನುಮುಂದೆ ಫೊಟೋ ಶೂಟ್, ವಿಡಿಯೋ ಚಿತ್ರೀಕರಣಕ್ಕೆ ನಿಷೇಧ Read More »

ಕರ್ನಾಟಕ

ಆಗುಂಬೆ ಘಾಟಿಯಲ್ಲಿ ಘನ ವಾಹನ ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಜೂ. 14. ಭಾರೀ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂ ಕುಸಿತ ಆಗುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜೂನ್ 15 ರಿಂದ 30ರವರೆಗೆ ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ- ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದು, ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿದ್ದಾರೆ. ಉಡುಪಿ-ತೀರ್ಥಹಳ್ಳಿಗೆ ಸಂಚರಿಸುವ ಭಾರೀ ವಾಹನಗಳು ಉಡುಪಿ-ಕುಂದಾಪುರ

ಆಗುಂಬೆ ಘಾಟಿಯಲ್ಲಿ ಘನ ವಾಹನ ಸಂಚಾರ ನಿಷೇಧ Read More »

ಕರ್ನಾಟಕ
crime, arrest, suspected

ಜೀವಂತ ತಾಯಿಯ ನಕಲಿ ಡೆತ್ ಸರ್ಟಿಫಿಕೇಟ್ ಪಡೆದ ಭೂಪ- ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜೂ. 14. ತಾಯಿ ಜೀವಂತವಿರುವಾಗಲೇ ಪಾಪಿ ಪುತ್ರನೋರ್ವ ಆಸ್ತಿಗಾಗಿ ಸುಳ್ಳು ಅರ್ಜಿ ನೀಡಿ ತಾಯಿಯ ಡೆತ್ ಸರ್ಟಿಫಿಕೇಟ್ ಪಡೆದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸಲಾಗಿದೆ. ಜೊತೆಗೆ ಮರಣ ಪ್ರಮಾಣಪತ್ರ ನೀಡಿದ ಪುರಸಭೆ ಅಧಿಕಾರಿಗೂ ನೋಟಿಸ್‌ ನೀಡಲಾಗಿದೆ. ಬಂಧಿತ ಆರೋಪಿಯನ್ನು ಶೌಕತ್ ಅಲಿ ಎಂದು ಗುರುತಿಸಲಾಗಿದೆ. ಶೌಕತ್ ಅಲಿ ತಂದೆ ಅವರು 2001 ರಲ್ಲಿ ಮೃತಪಟ್ಟಿದ್ದು, ಪುತ್ರ ಹಾಗೂ ಆತನ ತಾಯಿ ಹೂರಾಂಬಿ ಜಂಗ್ಲಿ ಸಾಬ್ ಎಂಬವರ ಹೆಸರಿನಲ್ಲಿ 2

ಜೀವಂತ ತಾಯಿಯ ನಕಲಿ ಡೆತ್ ಸರ್ಟಿಫಿಕೇಟ್ ಪಡೆದ ಭೂಪ- ಅರೆಸ್ಟ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಂಟೇನರ್ ಲಾರಿಗೆ ಬೆಂಕಿ ತಗುಲಿ 10ಕ್ಕೂ ಅಧಿಕ ಫ್ರಿಡ್ಜ್ ಗಳಿಗೆ ಹಾನಿ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ರೆಫ್ರಿಜರೇಟರ್ ಸಾಗಿಸುತ್ತಿದ್ದ ಕಂಟೈನರ್ ಲಾರಿಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ ಘಟನೆ ಕಾಸರಗೋಡು – ಕಾಞಾಂಗಾಡ್ ರಾಜ್ಯ ಹೆದ್ದಾರಿಯ ಕೂವತ್ತೊಟ್ಟಿ ಎಂಬಲ್ಲಿ ನಡೆದಿದೆ. ಲಾರಿಯ ಮೇಲ್ಭಾಗಕ್ಕೆ ವಿದ್ಯುತ್ ತಂತಿ ತಗಲಿದ ಪರಿಣಾಮ ಬೆಂಕಿ ತಗಲಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಕಂಟೈನರ್ ನೊಳಗಿದ್ದ ಹತ್ತಕ್ಕೂ ಅಧಿಕ ರೆಫ್ರಿಜರೇಟರ್ ಭಾಗಶಃ ಹಾನಿಗೊಳಗಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾದರು.

ಕಂಟೇನರ್ ಲಾರಿಗೆ ಬೆಂಕಿ ತಗುಲಿ 10ಕ್ಕೂ ಅಧಿಕ ಫ್ರಿಡ್ಜ್ ಗಳಿಗೆ ಹಾನಿ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಸ್ಟೆಲ್ ಸಹಿತ ಪರೀಕ್ಷಾ ಪೂರ್ವ ತರಬೇತಿ ಅಥವಾ ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 3 ತಿಂಗಳ ಯು.ಪಿ.ಎಸ್.ಸಿ (UPSಅ) ಮುಖ್ಯ ಪರೀಕ್ಷಾ ತರಬೇತಿ ನೀಡಲಾಗುತ್ತಿದ್ದು, ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್  21 ಕೊನೆಯ ದಿನ. ತರಬೇತಿ ಬೆಂಗಳೂರಿನಲ್ಲಿ ನಡೆಯಲಿದೆ. ಅರ್ಜಿದಾರರು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‍ಸೈಟ್ https://dom.karnataka.gov.in

ಐಎಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ: ಅರ್ಜಿ ಆಹ್ವಾನ Read More »

ಕರಾವಳಿ
Scroll to Top