newskadaba

ಬೆಳ್ಳಾರೆ: ಮದರಸ ವಿದ್ಯಾರ್ಥಿಗಳಿಗೆ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ವತಿಯಿಂದ ಪುಸ್ತಕ ವಿತರಣೆ

(ನ್ಯೂಸ್ ಕಡಬ) newskadaba.com,ಬೆಳ್ಳಾರೆ.ಜೂ.30. ಹಿದಾಯತುಲ್ ಇಸ್ಲಾಮ್ ಮದರಸ ಬೆಳ್ಳಾರೆಯ ವಿದ್ಯಾರ್ಥಿಗಳಿಗೆ ಜೂನ್ ೨೯ ರಂದು ಬೆಳ್ಳಾರೆ ಎಸ್ ಕೆ ಎಸ್ ಎಸ್ ಎಫ್ ಯುನಿಟ್ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು . ಬೆಳ್ಳಾರೆ ಝಕರಿಯ ಜುಮಾ ಮಸೀದಿಯ ಮುದರಿಸ್ಸರಾದ ತಾಜುದ್ದೀನ್ ರಹ್ಮಾನಿ ಕಾರ್ಯಕ್ರಮವನ್ನು ಉದ್ಘಾಟಿಸಿ ,ದು ಅ ಕ್ಕೆ ನೇತೃತ್ವವನ್ನು ನೀಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು . ಝಕರಿಯ ಜುಮಾ ಮಸೀದಿ ಆಡಳಿತ ಮಂಡಳಿಯ ಸದಸ್ಯರಾದ ಅಬ್ದುಲ್ ಖಾದರ್ ಬಾಯಂಬಾಡಿ ಪುಸ್ತಕ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ […]

ಬೆಳ್ಳಾರೆ: ಮದರಸ ವಿದ್ಯಾರ್ಥಿಗಳಿಗೆ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಯುನಿಟ್ ವತಿಯಿಂದ ಪುಸ್ತಕ ವಿತರಣೆ Read More »

ಕರಾವಳಿ

ಕೊಣಾಜೆ: ಹಲಸಿನ ಹಣ್ಣಿನ ಖಾದ್ಯಗಳ ಪ್ರಾತ್ಯಕ್ಷಿಕೆ, ಪ್ರದರ್ಶನ

(ನ್ಯೂಸ್ ಕಡಬ) newskadaba.com,ಕಡಬ.ಜೂ.30. ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಪುತ್ತೂರು ತಾಲೂಕು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಜ್ಞಾನವಿಕಾಸ ಮಹಿಳಾ ಕೇಂದ್ರ ಬಿಳಿನೆಲೆ ವಲಯ, ವಿಜಯ ಗ್ರಾಮೀಣ ಪ್ರತಿಷ್ಠಾನ ಮರ್ದಾಳ ವಲಯ ಇದರ ಆಶ್ರಯದಲ್ಲಿ ಹಲಸಿನ ಹಣ್ಣಿನ ಖಾದ್ಯಗಳ ಪ್ರಾತ್ಯಕ್ಷಿಕೆ ಮತ್ತು ಪ್ರದರ್ಶನ ಕಾರ್ಯಕ್ರಮ ಜೂ.27ರಂದು ಕಡ್ಯ ಕೊಣಾಜೆ ಶ್ರೀ ದುರ್ಗಾಂಬಿಕ ಭಜನಾ ಮಂದಿರದಲ್ಲಿ ನಡೆಯಿತು. ಭಜನಾ ಮಂಡಳಿ ಪ್ರಧಾನ ಸಂಚಾಲಕ ವಾಸುದೇವ ಭಟ್ ಕಡ್ಯ ಉದ್ಘಾಟಿಸಿದರು. ಕೊಣಾಜೆ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಬೇಬಿ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ

ಕೊಣಾಜೆ: ಹಲಸಿನ ಹಣ್ಣಿನ ಖಾದ್ಯಗಳ ಪ್ರಾತ್ಯಕ್ಷಿಕೆ, ಪ್ರದರ್ಶನ Read More »

ಕರಾವಳಿ

ಬೆಳ್ಳಾರೆ: ಮದ್ಯವೆಸನಿ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com.ಬೆಳ್ಳಾರೆ.ಜೂ.30. ವ್ಯಕ್ತಿರ್ವೋವರು ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳಾರೆಯ, ಮರಕ್ಕಡ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೆಳ್ಳಾರೆಯ ಪುತ್ತೂರು ತಾಲೂಕಿನ ಕ್ಯಾಮಣ ಗ್ರಾಮದ ಮರಕ್ಕಡ ಮನೆಯ, ನಿವಾಸಿ ಐತಪ್ಪ(60) ಎಂದು ತಿಳಿದು ಬಂದಿದೆ. ಇವರು ವಿಪರೀತ ಮದ್ಯ ಸೇವನೆಯ ಚಟದವರಾಗಿದ್ದು ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತಿದ್ದರು. ಇದರಿಂದಾಗಿ ಶುಕ್ರವಾರ ದಂದು ಮಧ್ಯಾಹ್ನ ಮನೆಯ ಮಾಡಿನ ಬಿದಿರಿನ ಪಕ್ಕಾಸಿಗೆ ಬೈರಾಸೊಂದನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ

ಬೆಳ್ಳಾರೆ: ಮದ್ಯವೆಸನಿ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ Read More »

ಕರಾವಳಿ

ಕಡಬ: ಜೆಸಿಐಯಿಂದ ಕೊಲ ಎಂಡೋಪಾಲನಾ ಕೇಂದ್ರಕ್ಕೆ ಅಕ್ಕಿ ವಿತರಣೆ

(ನ್ಯೂಸ್ ಕಡಬ) newskadaba.com,ಕಡಬ.ಜೂ.30. ಕದಂಬ ಜೆಸಿಐ ವತಿಯಿಂದ ಕೊಲ ಎಂಡೋಪಾಲಾನ ಕೇಂದ್ರದಲ್ಲಿರುವ ಎಂಡೋ ಸಂತ್ರಸ್ತರಿಗೆ ಅಕ್ಕಿ ವಿತರಿಸುವ ಕಾರ್ಯಕ್ರಮ ಶುಕ್ರವಾರ ನಡೆಯಿತು. ಮಂಗಳೂರು ಸೇವಾ ಭಾರತಿ ಆಶ್ರದಲ್ಲಿ ಮೇಲ್ವಿಚಾರಣೆಯಲ್ಲಿ ನಡೆಯುತ್ತಿರುವ ಕೊಲ ಎಂಡೋಪಾಲನಾ ಕೇಂದ್ರದಲ್ಲಿ ಕಡಬ ಕದಂಬ ಜೆಸಿಐ ನ ನಿಕಟ ಪೂರ್ವಧ್ಯಕ್ಷ ಜಯರಾಮ ಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರು ಕೊಡಮಾಡಿದ ಒಂದು ಕಿಂಟ್ವಾಲ್ ಅಕ್ಕಿಯನ್ನು ಎಂಡೋಪಾಲನಾ ಕೇಂದ್ರದ ಪ್ರಮುಖರಿಗೆ ಹಸ್ತಾಂತರಿಸಲಾಯಿತು. ಎಂಡೋ ಸಂತ್ರಸ್ತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಜಯರಾಮ ಗೌಡ ಸಂತ್ರಸ್ತರಿಗೆ ಸಿಹಿತಿಂಡಿ ತಿನ್ನಿಸುವ ಮೂಲಕ

ಕಡಬ: ಜೆಸಿಐಯಿಂದ ಕೊಲ ಎಂಡೋಪಾಲನಾ ಕೇಂದ್ರಕ್ಕೆ ಅಕ್ಕಿ ವಿತರಣೆ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯ ದೀಕ್ಷಾ ಸಮಾರಂಭ

(ನ್ಯೂಸ್ ಕಡಬ) newskadaba.com, ಕಡಬ.ಜೂ.29. ಆಸಕ್ತಿದಾಯಕ ಶಿಕ್ಷಣದಿಂದ ರಾಷ್ಟ್ರನಿರ್ಮಾಣ ಸಾಧ್ಯ ಕ್ಯಾ.ಗಣೇಶ್ ಕಾರ್ಣಿಕ್ ಸರಸ್ವತೀ ವಿದ್ಯಾಲಯ ವಿದ್ಯಾನಗರ ಕಡಬ ಇಲ್ಲಿ 2018ನೇ ಸಾಲಿನಲ್ಲಿ ಸಂಸ್ಥೆಗೆ ಸೇರಿದ ನೂತನ ಮಕ್ಕಳ ಪ್ರವೇಶೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾ.ಗಣೇಶ್ ಕಾರ್ಣಿಕ್ , ಮಾಜಿ ವಿಧಾನ ಪರಿಷತ್ ಸದಸ್ಯರು ವಹಿಸಿ ಆಸಕ್ತಿದಾಯಕ ಶಿಕ್ಷಣದಿಂದ ರಾಷ್ಟ್ರನಿರ್ಮಾಣ ಸಾಧ್ಯ ಎಂದು ತಿಳಿಸಿದರು. ಕಾರ್ಯಕ್ರಮ ಉದ್ಘಾಟನೆಯನ್ನು ಮಾಡಿ ಕೆ.ಎಸ್.ಎಸ್.ಕಾಲೇಜಿನ ಉಪಪ್ರಾಂಶುಪಾಲ ಮಂಜುನಾಥ.ಎಸ್.ಭಟ್ ಮಾತಾನಾಡಿ ಮೌಲ್ಯಾಧಾರಿತ ಶಿಕ್ಷಣ ಸಿಗಬೇಕಾದರೆ ಸನಾತನ ಸಂಸ್ಕೃತಿಯನ್ನು ಉಳಿಸುವಂತಹ ಶಿಕ್ಷಣ ಸಂಸ್ಥೆಗಳು ಈಗ ಅಗತ್ಯ

ಕಡಬ: ಸರಸ್ವತೀ ವಿದ್ಯಾಲಯ ದೀಕ್ಷಾ ಸಮಾರಂಭ Read More »

ಕರಾವಳಿ

ಗೋಳಿಯಡ್ಕ: ಅಸೌಖ್ಯದಿಂದ ನಿಧನ

(ನ್ಯೂಸ್ ಕಡಬ) newskadaba.com ಕಡಬ,ಜೂ.29. ವ್ಯಕ್ತಿರ್ವೊವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದರು. ಪುತ್ತೂರು ತಾಲೂಕಿನ ರೆಂಜಿಲಾಡಿ ಗ್ರಾಮದ ಗೋಳಿಯಡ್ಕ ದಿ. ಹೊನ್ನಪ್ಪ ಆಚಾರ್ಯ ಅವರ ಪುತ್ರ ಉದಯ ಆಚಾರ್ಯ(45) ಇವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದು, ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಾಯಿ, ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರನನ್ನು ಅಗಲಿದ್ದಾರೆ.  

ಗೋಳಿಯಡ್ಕ: ಅಸೌಖ್ಯದಿಂದ ನಿಧನ Read More »

ಕರಾವಳಿ

ಕಡಬ: ಮಳೆಗೆ ಗುಡ್ಡ ಕುಸಿದು ಧರೆಗುರುಳಿದ ವಿದ್ಯುತ್ ಕಂಬ ► ಮೂರು ದಿನಗಳು‌ ಕಳೆದರೂ ಇನ್ನೂ ತೆರವುಗೊಳಿಸದ ಸ್ಥಳೀಯಾಡಳಿತ

(ನ್ಯೂಸ್ ಕಡಬ) newskadaba.com, ಕಡಬ, ಜೂ.29. ಧಾರಕಾರ ಮಳೆಗೆ ಕಡಬ ಮುಖ್ಯ ಪೇಟೆಯ ರೈತ ಸಂಪರ್ಕ ಕೇಂದ್ರದ ಹತ್ತಿರವಿರುವ ರಾಜ್ಯ ಹೆದ್ದಾರಿಯ ಬದಿಯ ಧರೆ ಕುಸಿದು ವಿದ್ಯುತ್ ಕಂಬ, ಸಣ್ಣ ಮರವೊಂದು ನೆಲಕ್ಕುರುಳಿದ ಘಟನೆ ಮಂಗಳವಾರ ನಡೆದರೂ ಸಂಬಂಧಪಟ್ಟವರಿಂದ ತೆರವು ಕಾರ್ಯ ಇನ್ನೂ ನಡೆದಿಲ್ಲ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮಂಗಳವಾರದಂದು ದಿನ ಪೂರ್ತಿ ಸುರಿದ ಮಳೆಯಿಂದಾಗಿ ಸಾಯಂಕಾಲ ವೇಳೆಗೆ ಮಣ್ಣು ಸಡಿಲಗೊಂಡು ಧರೆಯ ಮೇಲಿದ್ದ ವಿದ್ಯುತ್ ಕಂಬ ಹಾಗೂ ಸಣ್ಣ ಮರ ಜೊತೆಯಾಗಿ ಕುಸಿದು

ಕಡಬ: ಮಳೆಗೆ ಗುಡ್ಡ ಕುಸಿದು ಧರೆಗುರುಳಿದ ವಿದ್ಯುತ್ ಕಂಬ ► ಮೂರು ದಿನಗಳು‌ ಕಳೆದರೂ ಇನ್ನೂ ತೆರವುಗೊಳಿಸದ ಸ್ಥಳೀಯಾಡಳಿತ Read More »

ಕರಾವಳಿ

ಬೆಳ್ಳಾರೆ: ಬುದ್ದಿಮಾಂದ್ಯ ನೇಣು ಬಿಗಿದು ಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com,ಬೆಳ್ಳಾರೆ.ಜೂ.29. ವ್ಯಕ್ತಿಯೋರ್ವರು ಮಾನಸಿಕ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆಯ, ಅಜ್ಜಿಗುಡ್ಡೆ ಎಂಬಲ್ಲಿ ಗುರುವಾರ ದಂದು ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೆಳ್ಳಾರೆಯ ಸುಳ್ಯ ತಾಲೂಕಿನ ಕಲ್ಮ ಡ್ಕ ಗ್ರಾಮದ, ಅಜ್ಜಿಗುಡ್ಡೆ ಮನೆ ಬಾಬು(31) ಎಂದು ಗುರುತಿಸಲಾಗಿದೆ. ಬಾಲ್ಯದಿಂದಲೂ ಮಾನಸಿಕ ಖಾಯಿಲೆ ಹಾಗೂ ಬುದ್ದಿಮಾಂದ್ಯನಿದ್ದು,ಆತನಿಗೆ ಹಲವು ಬಾರಿ ಚಿಕಿತ್ಸೆ ಕೊಡಿಸಿದರೂ ಯಾವುದೇ ಫಲಕಾರಿಯಾಗಿರಲ್ಲಿಲ. ಇಂತಹ ಮಾನಸಿಕ ಹಿನ್ನಲೆಯಲ್ಲಿ ನೆರೆಮನೆಯವರ ಜಾಗದ ಗುಡ್ಡದಲ್ಲಿ ಗೇರು ಮರದ ಕೊಂಬೆಗೆ ನೇಲಾನ್ ಹಗ್ಗವನ್ನು ಕಟ್ಟಿ

ಬೆಳ್ಳಾರೆ: ಬುದ್ದಿಮಾಂದ್ಯ ನೇಣು ಬಿಗಿದು ಕೊಂಡು ಆತ್ಮಹತ್ಯೆ Read More »

ಕರಾವಳಿ

ಬೆಳ್ತಂಗಡಿ: ಅಂಗಡಿ ವ್ಯಾಪಾರಸ್ಥನ ಮೇಲೆ ಕಬ್ಬಿಣದ ರಾಡಿನಿಂದ ಹಲ್ಲೆ

(ನ್ಯೂಸ್ ಕಡಬ)newskadaba.com, ಬೆಳ್ತಂಗಡಿ.ಜೂ.29. ಅಂಗಡಿ ವ್ಯಾಪಾರ ಮಾಡಿಕೊಂಡಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಘಟನೆಯೊಂದು ಗುರುವಾರ ದಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಅಲಾದಿಕೊಟ್ಟಿಗೆ ಎಂಬಲ್ಲಿ ಮಹಮ್ಮದ್ ಆಸೀಫ್(32) ಎಂಬುವವರು ಎಂದಿನಂತೆ  ಬೆಳಿಗ್ಗೆ ಬಾಬ್ತು ಅಂಗಡಿ ವ್ಯಾಪಾರ ಮಾಡಿಕೊಂಡಿರುವ ಸಮಯದಲ್ಲಿ,ಏಕಾಏಕಿ ಅಂಗಡಿಯೊಳಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅಂಗಡಿಯ ಒಳಗಿನಿಂದ ಅಂಗಳಕ್ಕೆ ಎಳೆದುಕೊಂಡು ಬಂದು ಕಬ್ಬಿಣದ ರಾಡಿನಿಂದ ಮುಖಕ್ಕೆ ಹೊಡೆದುದ್ದಲ್ಲದೇ ಅಂಗಡಿಯೊಳಗೆ ಇರಿಸಿದ್ದ ಸೋಡಾ ಬಾಟ್ಲಿಗಳಿಂದ ಯದ್ವಾತದ್ವಾ

ಬೆಳ್ತಂಗಡಿ: ಅಂಗಡಿ ವ್ಯಾಪಾರಸ್ಥನ ಮೇಲೆ ಕಬ್ಬಿಣದ ರಾಡಿನಿಂದ ಹಲ್ಲೆ Read More »

ಕರಾವಳಿ

ವೈದ್ಯ ಮತ್ತು ರೋಗಿಯ ಸಂಬಂಧ ಉದಾರರಾಗಿರಲಿ – ವೈದ್ಯರ ದಿನ, ಜುಲೈ 1

(ನ್ಯೂಸ್ ಕಡಬ) newskadaba.com, ಜೂ.29.  ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಈ ದಿನಗಳಲ್ಲಿ ಮಾನವೀಯ ಸಂಬಂಧಗಳು ನಶಿಸಿ ಹೋಗುತ್ತಿರುವ ಕಾಲಘಟದಲ್ಲಿ ವೈದ್ಯ ಮತ್ತು ರೋಗಿಯ ಸಂಬಂಧವು ಮೊದಲಿನಂತೆ ಉಳಿದಿಲ್ಲ. ‘ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಈಗ ಬಹುಷಃ ಎಲ್ಲ ವೈದ್ಯರಿಗೂ ಅನ್ವಯಿಸಲಿಕ್ಕಿಲ್ಲ. ಅದೇ ರೀತಿ ಇಂದಿನ ರೋಗಿಗಳೂ ಕೂಡಾ ವೈದ್ಯರನ್ನು ಪೂರ್ಣ ವಿಶ್ವಾಸದಿಂದ ನೋಡುವ ಸ್ಥಿತಿಯಲ್ಲಿ ಇಲ್ಲ. ತನ್ನ ವೃತ್ತಿ ಜೀವನ ಏಳು ಬೀಳುಗಳತ್ತ ದೃಷ್ಟಿ ಹರಿಸಿ ತನ್ನ ತಪ್ಪು ಒಪ್ಪುಗಳನ್ನು ಪುನರ್ ವಿಮರ್ಶಿಸಿಕೊಂಡು, ಸಾಧನೆಯ ಮಜಲುಗಳತ್ತ ಹಿನ್ನೋಟ

ವೈದ್ಯ ಮತ್ತು ರೋಗಿಯ ಸಂಬಂಧ ಉದಾರರಾಗಿರಲಿ – ವೈದ್ಯರ ದಿನ, ಜುಲೈ 1 Read More »

ಕರಾವಳಿ
Scroll to Top