newskadaba

Crime

ಪರಸ್ಪರ ದ್ವೇಷ, ಕಾಳಗ- ಸೂಕ್ತ ಕ್ರಮಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಜೂ. 11. ಸ್ಥಳೀಯರು, ವಲಸಿಗರು ಎಂದು ಗುಂಪುಕಟ್ಟಿಕೊಂಡು ಬೀದಿ ಕಾಳಗ ನಡೆಸಿದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಕೆಳದಿನಗಳಿಂದ ಪರಸ್ಪರ ದ್ವೇಷಿಸುತ್ತಿದ್ದ ಯುವಕರ ತಂಡಗಳು ನಿನ್ನೆ ರಾತ್ರಿ ಬ್ಯಾಟ್ ನಿಂದ ಪರಸ್ಪರ ಥಳಿಸಿಕೊಂಡು ಹಲ್ಲೆ ನಡೆಸಿದ್ದಾರೆ. ಯುವಕರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಪರಸ್ಪರ ದ್ವೇಷ, ಕಾಳಗ- ಸೂಕ್ತ ಕ್ರಮಕ್ಕೆ ಆಗ್ರಹ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ- ಮೂವರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 11. ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿ ಮೇರೆಗೆ, ಕಡಬ ಠಾಣಾ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ ಘಟನೆ ನಡೆದಿದೆ. ದಾಳಿ ವೇಳೆ ಕೃತ್ಯದಲ್ಲಿ ತೊಡಗಿದ್ದ 8 ಮಂದಿ ಪರಾರಿಯಾಗಿದ್ದು, 3 ಜನರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿದ್ದ 6 ಬೈಕ್, 2 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾಗುವ ಕತ್ತಿ ಹಾಗೂ 3,560

ಕಡಬ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ- ಮೂವರು ವಶಕ್ಕೆ Read More »

ಕರಾವಳಿ

ಮಂಗಳೂರು ಏರ್‌ಪೋರ್ಟ್‌ ಸಂಪರ್ಕಿಸುವ ಮರವೂರು ಸೇತುವೆ-ಮರಕಡ ರಸ್ತೆ ಅಗಲೀಕರಣ, ತುರ್ತು ರಿಪೇರಿಗೆ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಮಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ಮರವೂರು ಸೇತುವೆಯಿಂದ ಮರಕಡ ನಡುವಿನ ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ದಿಪಡಿಸುವುದಕ್ಕೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಪತ್ರ ಬರೆದಿದ್ದಾರೆ. ಮಂಗಳೂರು ನಗರದಿಂದ ಏರ್ ಪೋರ್ಟ್ ಗೆ ಸಂಪರ್ಕಿಸುವ ಮುಖ್ಯರಸ್ತೆಯು ಮರಕಡದವರೆಗೆ ಈಗಾಗಲೇ ಚತುಷ್ಪಥ ರಸ್ತೆಯಾಗಿ ಅಭಿವೃದ್ದಿಯಾಗಿದೆ. ಆದರೆ ಅಲ್ಲಿಂದ ಮುಂದಕ್ಕೆ

ಮಂಗಳೂರು ಏರ್‌ಪೋರ್ಟ್‌ ಸಂಪರ್ಕಿಸುವ ಮರವೂರು ಸೇತುವೆ-ಮರಕಡ ರಸ್ತೆ ಅಗಲೀಕರಣ, ತುರ್ತು ರಿಪೇರಿಗೆ ಆಗ್ರಹ Read More »

ಕರಾವಳಿ, ಕರ್ನಾಟಕ

ಮರಗಳ ತೆರವು: ಜೂನ್ 17 ರಂದು ಅಹವಾಲು ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಬೆಳ್ತಂಗಡಿ ತಾಲೂಕು ಕಸಬಾ ಗ್ರಾಮದ ಬೆಳ್ತಂಗಡಿ ತಾಲೂಕಿನ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಕಾದಿರಿಸಿದ ಜಮೀನಿನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಡಚಣೆಯಾಗಿರುವ 50ಕ್ಕಿಂತ ಹೆಚ್ಚು ಮರಗಳನ್ನು ಗುರುತಿಸಿದ್ದು, ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ ನಿಯಮಗಳನ್ವಯ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ. ಜೂನ್ 17ರಂದು  ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ವನ್ಯಜೀವಿ ವಲಯದ ವಲಯ ಅರಣ್ಯ ಅಧಿಕಾರಿ ಕಛೇರಿ

ಮರಗಳ ತೆರವು: ಜೂನ್ 17 ರಂದು ಅಹವಾಲು ಸಭೆ Read More »

ಕರಾವಳಿ, ಕರ್ನಾಟಕ

ಹೊರಗುತ್ತಿಗೆ ನೌಕರರಿಗೆ ವೇತನ ಪಾವತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿನ ಎಲ್ಲಾ ಹೊರಗುತ್ತಿಗೆ ನಾನ್ ಕ್ಲಿನಿಕ್ ಹಾಗೂ ಗ್ರೂಪ್ ಡಿ ನೌಕರರಿಗೆ ಜೂನ್ 9 ರಂದು ಒಂದು ತಿಂಗಳ ವೇತನವನ್ನು ಪಾವತಿ ಮಾಡಲಾಗಿದ್ದು, ಹೊರಗುತ್ತಿಗೆ ನಾನ್ ಕ್ಲಿನಿಕ್ ಹಾಗೂ ಗ್ರೂಪ್ ಡಿ ನೌಕರರು ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುತ್ತಾರೆ. ಗ್ರೂಪ್ ಡಿ ನೌಕಕರರ ವೇತನಕ್ಕೆ ಸಂಬಂಧಿಸಿದಂತೆ ರಾಜ್ಯವಲಯದಿಂದ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ನೌಕರರಿಗೆ ಹಿಂಬಾಕಿ ಮಾಡದೇ ಒಂದು ವಾರದೊಳಗೆ ವೇತನ ಪಾವತಿಸಲು

ಹೊರಗುತ್ತಿಗೆ ನೌಕರರಿಗೆ ವೇತನ ಪಾವತಿ Read More »

ಕರಾವಳಿ, ಕರ್ನಾಟಕ

ಟ್ರೇಡ್ ಲೈಸೆನ್ಸ್ ನವೀಕರಿಸಲು ನಗರಪಾಲಿಕೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ 60 ವಾರ್ಡ್‍ ಗಳ ಎಲ್ಲಾ ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳಬೇಕಾಗಿದ್ದು, ಆನ್‍ ಲೈನ್ ತಂತ್ರಾಶದ ಮುಖಾಂತರ ಹೊಸ ಉದ್ದಿಮೆದಾರರು ಅರ್ಜಿಯನ್ನು ಸಲ್ಲಿಸಿ ಉದ್ದಿಮೆ ಪರವಾನಿಗೆ ಪಡೆಯುವುದು ಅತ್ಯವಶ್ಯಕವಾಗಿದೆ. ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರು ಈ ಹಿಂದಿನ ಆರ್ಥಿಕ ವರ್ಷದಲ್ಲಿ ಪಡೆದುಕೊಂಡಿರುವ ಉದ್ದಿಮೆ ಪರವಾನಿಗೆ ನವೀಕರಿಸದೇ ಇದ್ದಲ್ಲಿ ಹಿಂದಿನ ಬಾಕಿಯನ್ನು ಹಾಗೂ ನವೀಕರಣ ಶುಲ್ಕವನ್ನು ಆನ್‍ ಲೈನ್‍ನಲ್ಲಿ ಈ ಕೂಡಲೇ ಪಾವತಿಸುವಂತೆ ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಪಾಲಿಕೆಯ ಆರೋಗ್ಯ

ಟ್ರೇಡ್ ಲೈಸೆನ್ಸ್ ನವೀಕರಿಸಲು ನಗರಪಾಲಿಕೆ ಸೂಚನೆ Read More »

ಕರಾವಳಿ, ಕರ್ನಾಟಕ

ಜೂನ್ 23 ರಂದು ತ್ರೈಮಾಸಿಕ ಕೆ.ಡಿ.ಪಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. 2025-26ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಜೂನ್ 23 ರಂದು ಬೆಳಿಗ್ಗೆ 10.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಜೂನ್ 23 ರಂದು ತ್ರೈಮಾಸಿಕ ಕೆ.ಡಿ.ಪಿ ಸಭೆ Read More »

ಕರಾವಳಿ

ನಾಳೆ(ಜೂನ್ 12) ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 12 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ದ ಪ್ರಯುಕ್ತ ಬೆಳಿಗ್ಗೆ 9:30 ಗಂಟೆಗೆ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಪುರಭವನದವರೆಗೆ ಬಾಲಕಾರ್ಮಿಕ ಪದ್ಧತಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು

ನಾಳೆ(ಜೂನ್ 12) ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ Read More »

ಕರಾವಳಿ

ಬಸದಿ, ಸಿಖ್ ಗುರುದ್ವಾರ ಅರ್ಚಕರಿಗೆ ಗೌರವಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಜೈನ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವಧನ ನೀಡಲು ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಗಳು ದಕ್ಷಿಣ ಕನ್ನಡ ಜಿಲ್ಲೆಯ ಜೈನ್ ಬಸದಿಗಳು ಕರ್ನಾಟಕ ರಾಜ್ಯದಲ್ಲಿನ ಸಂಘಗಳ ನೋಂದಾಣಿ ಕಾಯ್ದೆಯನ್ವಯ ಅಥವಾ ಇತರೆ ಸಂಬಂಧಪಟ್ಟ ಕಾಯ್ದೆಯಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಧಾನ ಗ್ರಂಥಿ/ಅರ್ಚಕರಿಗೆ ರೂ.6000 ಮತ್ತು ಸಹಾಯಕ ಗ್ರಂಥಿ/ಅರ್ಚಕರಿಗೆ ರೂ.5000 ಮಾಸಿಕ ಗೌರವಧನ ನೀಡಲಾಗುತ್ತದೆ. ಸಲ್ಲಿಸಬೇಕಾದ

ಬಸದಿ, ಸಿಖ್ ಗುರುದ್ವಾರ ಅರ್ಚಕರಿಗೆ ಗೌರವಧನ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ ಗುರುತಿಸಿ ವರದಿ ನೀಡಲು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್  ಸೂಚಿಸಿದ್ದಾರೆ. ಅವರು ಮಂಗಳವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭೂಕುಸಿತ, ನೀರು ಮುಳುಗಡೆ, ಸೇರಿದಂತೆ ತೀವ್ರ ಮಳೆಯಿಂದಾಗಿ ದುರಂತ ಘಟನೆಗಳು ನಡೆಯುವ ಸಾಧ್ಯತೆ ಇರುವ ಪ್ರದೇಶಗಳನ್ನು

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ
Scroll to Top