newskadaba

ಪ್ರಾಮಾಣಿಕ ದಕ್ಷ ನಿಷ್ಠಾವಂತರಿಗೆ ಎಲ್ಲೂ ಗೌರವವಿದೆ – ಸತೀಶ್ ಕೆ

(ನ್ಯೂಸ್ ಕಡಬ) newskadaba.com ಕಡಬ, ಆ .14,  ದಕ್ಷರಾಗಿದ್ದು ಪ್ರಾಮಾಣಿಕತೆಯಿಂದ ಜವಾಬ್ದಾರಿಯುತ ಹುದ್ದೆ ನಿರ್ವಹಿಸಿದ ವ್ಯಕ್ತಿ ಎಲ್ಲಿ ಹೋದರು ಅಂತಹವರಿಗೆ ಗೌರವ ಸಲ್ಲುತ್ತದೆ ಎಂದು ಐತ್ತೂರು ಗ್ರಾ.ಪಂ.ಅಧ್ಯಕ್ಷ ಸತೀಶ್ ಕೆ ಹೇಳಿದರು. ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ತೋಟದ ಅಧೀಕ್ಷಕರಾಗಿ 2010 ರಿಂದ ಕರ್ತವ್ಯ ನಿರ್ವಹಿಸಿ ಇದೀಗ ಬೆಳಗಾಂ ಜಿಲ್ಲೆಯ ಗೋಕಾಕ್ ಪ್ರಾದೇಶಿಕ ವಲಯಕ್ಕೆ ವರ್ಗಾವಣೆಗೊಳ್ಳುತ್ತಿರುವ ವನ್ನೂರು ರವರನ್ನು ಐತ್ತೂರು ಗ್ರಾ.ಪಂ.ವತಿಯಿಂದ ಶುಕ್ರವಾರ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು. ವರ್ಗಾವಣೆಗೊಳ್ಳುತ್ತಿರುವ ತೋಟದ ಅಧೀಕ್ಷಕ ವನ್ನೂರು ರವರನ್ನು, ಗ್ರಾ.ಪಂ.ಅಧ್ಯಕ್ಷ ಸತೀಶ್ […]

ಪ್ರಾಮಾಣಿಕ ದಕ್ಷ ನಿಷ್ಠಾವಂತರಿಗೆ ಎಲ್ಲೂ ಗೌರವವಿದೆ – ಸತೀಶ್ ಕೆ Read More »

ಕರಾವಳಿ

ಸಬಳೂರು: ತುಳುಸಂಸ್ಕೃತಿಯ ಪುನರುತ್ಥಾನಕ್ಕೆಮುನ್ನುಡಿ ಬರೆಯಬೇಕು – ಉಮೇಶ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಕಡಬ, ಆ .14, ನಮ್ಮ ಹಿರಿಯರ ಕಾಲದಲ್ಲಿ ಬಡತನವಿದ್ದರೂ ಸಂಸ್ಕೃತಿಯ ಆಚರಣೆಯಲ್ಲಿ ವೈಭವವಿತ್ತು, ಆದರೆ ನಮಗೆ ಇಂದು ಸಿರಿತನ ವಿದ್ದರೂ ನಮ್ಮ ಸಂಸ್ಕೃತಿಯ ಆಚರಣೆಯಲ್ಲಿ ಬಡತನವಿದೆ ಎಂದು ನೂಜಿಬಾಳ್ತಿಲ ತೆಗರ್ ತುಳುಕೂಟದ ಸಂಚಾಲಕ ಉಮೇಶ್ ಶೆಟ್ಟಿ ಸಾಯಿರಾಂ ಹೇಳಿದರು. ಅವರು ಭಾನುವಾರ ಕೊೖಲ ಗ್ರಾಮದ ಸಬಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸಬಳೂರು ರಾಣಿ ಅಬ್ಬಕ್ಕ ಜ್ಞಾನವಿಕಾಸ ಕೇಂದ್ರದ ವತಿಯಿಂದ ನಡೆದ ಆಟಿಡೊಂಜಿ ದಿನ

ಸಬಳೂರು: ತುಳುಸಂಸ್ಕೃತಿಯ ಪುನರುತ್ಥಾನಕ್ಕೆಮುನ್ನುಡಿ ಬರೆಯಬೇಕು – ಉಮೇಶ್ ಶೆಟ್ಟಿ Read More »

ಕರಾವಳಿ

ಕಡಬ: ಅಖಂಡ ಭಾರತ ಸಂಕಲ್ಪ ದಿನ – ಪಂಜಿನ ಮೆರವಣಿಗೆ

(ನ್ಯೂಸ್ ಕಡಬ) newskadaba.com ಕಡಬ, ಆ .14, ಹಿಂದು ಜಾಗರಣ ವೇದಿಕೆ ಕಡಬ ತಾಲೂಕು ವತಿಯಿಂದ ದೇಶ ವಿಭಜನೆಯ ಕರಾಳ ದಿನವನ್ನು ನೆನಪಿಸುವ ಅಖಂಡ ಭಾರತ ಸಂಕಲ್ಪ ದಿನ-ಪಂಜಿನ ಮೆರವಣಿಗೆ ಕಾರ್ಯಕ್ರಮ ಆದಿತ್ಯವಾರ ರಾತ್ರಿ ಕಡಬದಲ್ಲಿ ನಡೆಯಿತು. ಕಡಬ ಎಪಿಎಂಸಿ ಸಂತೆ ಮಾರುಕಟ್ಟೆ ಬಳಿಯಿಂದ ಪ್ರಾರಂಭವಾದ ಪಂಜಿನ ಮೆರವಣಿಗೆ ಕಡಬ ಪೇಟೆಯಲ್ಲಿ ಸಾಗಿ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮವನ್ನು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ವಿಟ್ಲ ತಾಲೂಕು ಹಿಂದೂ

ಕಡಬ: ಅಖಂಡ ಭಾರತ ಸಂಕಲ್ಪ ದಿನ – ಪಂಜಿನ ಮೆರವಣಿಗೆ Read More »

ಕರಾವಳಿ

ಸಾವು ಹೇಗೆಲ್ಲಾ ಬರುತ್ತದೆಯೆಂದು ಊಹಿಸಲೂ ಸಾಧ್ಯವಿಲ್ಲ…. ► ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಮೇಲೆ ತೆಂಗಿನ ಮರ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಮುಂಬೈ, ಜು.23. ಸಾವು ಹೇಗೆಲ್ಲಾ ಬರುತ್ತದೆ ಎಂದು ಊಹಿಸಲೂ ಸಾಧ್ಯವಿಲ್ಲ. ಅದಕ್ಕೆ ನಿದರ್ಶನವೆಂಬಂತೆ ಬೆಳಗ್ಗಿನ ಜಾವ ವಾಕಿಂಗ್ ಹೋಗುತ್ತಿದ್ದಾಗ ತೆಂಗಿನ ಮರವೊಂದು ಮೈಮೇಲೆ ಉರುಳಿ ಬಿದ್ದ ಪರಿಣಾಮವಾಗಿ ದೂರದರ್ಶನದ ಮಾಜಿ ವಾರ್ತಾ ನಿರೂಪಕಿಯೊಬ್ಬರು ಮೃತಪಟ್ಟ ಘಟನೆ ಮುಂಬೈನ ಚೆಂಬೂರ್‌ನಲ್ಲಿ ನಡೆದಿದೆ. ದೂರದರ್ಶನದ ಮಾಜಿ ವಾರ್ತಾ ನಿರೂಪಕಿ ಮತ್ತು ಯೋಗ ಶಿಕ್ಷಕಿ ಕಾಂಚನ್ ನಾಥ್(58) ಎಂಬವರೇ ತೆಂಗಿನ ಮರ ಬಿದ್ದು ಮೃತಪಟ್ಟ ದುರ್ದೈವಿ. ಗುರುವಾರ ಬೆಳಗ್ಗೆ ಕಾಂಚನ್ ನಾಥ್ ಯೋಗ ತರಗತಿ ಮುಗಿಸಿ ಮನೆಗೆ ಸಂತ

ಸಾವು ಹೇಗೆಲ್ಲಾ ಬರುತ್ತದೆಯೆಂದು ಊಹಿಸಲೂ ಸಾಧ್ಯವಿಲ್ಲ…. ► ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಮೇಲೆ ತೆಂಗಿನ ಮರ ಬಿದ್ದು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಸಿ.ಎ. ಬ್ಯಾಂಕ್ ಉಪಾಧ್ಯಕ್ಷರ ಮೇಲಿನ ಹಲ್ಲೆಗೆ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಖಂಡನೆ

(ನ್ಯೂಸ್ ಕಡಬ) newskadaba.com ಕಡಬ, ಜು.17. ಆದಿತ್ಯವಾರ ಸಂಜೆ ಕಡಬ ಪೇಟೆಯಲ್ಲಿ ನಡೆದ ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ಬಿಜೆಪಿ ಯುವ ಮುಖಂಡ ರಮೇಶ್ ಭಟ್ ಕಲ್ಪುರೆಯವರ ಮೇಲಿನ ಹಲ್ಲೆಯನ್ನು ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ತೀವ್ರವಾಗಿ ಖಂಡಿಸಿದ್ದಾರೆ. ವೈಯಕ್ತಿಕ ದ್ವೇಷವಿದ್ದಲ್ಲಿ ಕಾನೂನು ಮೂಲಕ ಬಗೆಹರಿಸಿಕೊಳ್ಳಬೇಕೇ ಹೊರತು ಕಾನೂನನ್ನು ಕೈಗೆತ್ತಿಕೊಳ್ಳಬಾರದಿತ್ತು.  ಆ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.  

ಸಿ.ಎ. ಬ್ಯಾಂಕ್ ಉಪಾಧ್ಯಕ್ಷರ ಮೇಲಿನ ಹಲ್ಲೆಗೆ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಖಂಡನೆ Read More »

ಕರಾವಳಿ

ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ ಹಿನ್ನೆಲೆ ► ಕಡಬ ಪೇಟೆಯಲ್ಲಿ ಪೊಲೀಸರ ಸರ್ಪಗಾವಲು

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಕಡಬ, ಜು.17. ಆದಿತ್ಯವಾರ ಸಂಜೆ ಕಡಬ ಪೇಟೆಯಲ್ಲಿ ನಡೆದ ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ಬಿಜೆಪಿ ಯುವ ಮುಖಂಡನ ಮೇಲಿನ ಹಲ್ಲೆಗೆ ಸಂಬಂಧಿಸಿ ಕಡಬ ಪೇಟೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸೋಮವಾರದಂದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಕಡಬ ಬಂದ್ ಗೆ ಕರೆ ಕೊಟ್ಟಿದ್ದು, SDPI ಪಕ್ಷವು ಬಂದ್ ನಡೆಸದಂತೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕಡಬ ಪರಿಸರದಲ್ಲಿ ಅನಾಹುತ ನಡೆಯದಂತೆ ತಡೆಯಲು ಹೆಚ್ಚಿನ ಪೊಲೀಸರನ್ನು ಕರೆಸಲಾಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ ಹಿನ್ನೆಲೆ ► ಕಡಬ ಪೇಟೆಯಲ್ಲಿ ಪೊಲೀಸರ ಸರ್ಪಗಾವಲು Read More »

ಕರಾವಳಿ

ಒತ್ತಾಯಪೂರ್ವಕ ಬಂದ್ ಗೆ ಕಾನೂನಿನಲ್ಲಿ ಅವಕಾಶವಿಲ್ಲ ► ಕಡಬ ಠಾಣಾ ಉಪ ನಿರೀಕ್ಷಕರಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.17. ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಕಲ್ಪುರೆಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಹಿನ್ನೆಲೆಯಲ್ಲಿ ಸೋಮವಾರದಂದು ಕಡಬ ಬಂದ್ ಗೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಯ ಪ್ರಮುಖರು ಕರೆ ನೀಡಿದ್ದು, ಕಡಬ ಪೇಟೆಯಲ್ಲಿ ಅಂಗಡಿಗಳಿಗೆ ತೆರಳಿ ಬಂದ್ ಮಾಡುವಂತೆ ಮನವಿ ಮಾಡಿದ್ದಾರೆ. ಇನ್ನೊಂದೆಡೆ SDPI ಪಕ್ಷದ ಪ್ರಮುಖರು ಸೋಮವಾರದಂದು ಕಡಬ ಪೇಟೆಯನ್ನು ಬಂದ್ ಮಾಡದಂತೆ ಅಂಗಡಿ ಮಾಲೀಕರಲ್ಲಿ ವಿನಂತಿಸಿಕೊಂಡಿದ್ದು ಸಾರ್ವಜನಿಕರನ್ನು ಗೊಂದಲಕ್ಕೀಡುಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡಬ ಠಾಣಾ ಪೊಲೀಸ್

ಒತ್ತಾಯಪೂರ್ವಕ ಬಂದ್ ಗೆ ಕಾನೂನಿನಲ್ಲಿ ಅವಕಾಶವಿಲ್ಲ ► ಕಡಬ ಠಾಣಾ ಉಪ ನಿರೀಕ್ಷಕರಿಂದ ಸ್ಪಷ್ಟನೆ Read More »

ಕರಾವಳಿ

ಪುತ್ತೂರು: 50 ಲಕ್ಷ ನಿಷೇಧಿತ ಹಳೆನೋಟು ವಶ ► ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.16. ದಾಖಲೆ ರಹಿತವಾಗಿ 50 ಲಕ್ಷ ರೂ. ನಿಷೇಧಿತ ಹಳೆನೋಟುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ನಗರ ಪೊಲೀಸರು ಮೂವರನ್ನು ಬಂಧಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಆರೋಪಿಗಳಾದ ಻ಬ್ದುಲ್ ನಿಸಾರ್, ಮಹಮ್ಮದ್ ಸಿರಾಜ್ ಹಾಗೂ ಅಬ್ದುಲ್ ಹಾರೀಸ್ ಎಂಬವರು ಮಡಿಕೇರಿಯಿಂದ ಮಾಣಿ ಕಡೆಗೆ ಕಾರಿನಲ್ಲಿ ಹಳೆನೋಟುಗಳನ್ನು ಸಾಗಿಸುತ್ತಿದ್ದಾಗ ಪುತ್ತೂರು ಬೈಪಾಸ್ ಉರ್ಲಾಂಡಿ ಸಮೀಪ ತಪಾಸಣೆ ನಡೆಸಿದ ಪೊಲೀಸರು ಾರೋಪಗಳ ಸಹಿತ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ

ಪುತ್ತೂರು: 50 ಲಕ್ಷ ನಿಷೇಧಿತ ಹಳೆನೋಟು ವಶ ► ಮೂವರು ಆರೋಪಿಗಳ ಬಂಧನ Read More »

ಕರಾವಳಿ

ಶರತ್ ಮಡಿವಾಳ ಹಂತಕರ ಸೆರೆ…? ► ಮಾಧ್ಯಮಗಳಿಗೆ ತಲುಪಿದ ರಹಸ್ಯ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.15. ಇತ್ತೀಚೆಗೆ ಬಿ.ಸಿ.ರೋಡ್‍ನಲ್ಲಿ ನಡೆದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ವಲಯ ಐಜಿಪಿ ಪಿ. ಹರಿಶೇಖರನ್ ನೇತೃತ್ವದಲ್ಲಿ ಆರು ತನಿಖಾ ತಂಡಗಳನ್ನು ರಚಿಸಲಾಗಿತ್ತು. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳಿಗೆ ತಲುಪಿದೆ.  ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಲು

ಶರತ್ ಮಡಿವಾಳ ಹಂತಕರ ಸೆರೆ…? ► ಮಾಧ್ಯಮಗಳಿಗೆ ತಲುಪಿದ ರಹಸ್ಯ ಮಾಹಿತಿ Read More »

ಕರಾವಳಿ

ಕಡಬ ಟೌನ್ ಜುಮಾ ಮಸೀದಿ ಮುದರ್ರಿಸ್‍ಗೆ ಸನ್ಮಾನ, ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಜು.14. ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಕಡಬ ರಹ್ಮಾನಿಯಾ ಟೌನ್ ಜುಮ್ಮಾ ಮಸೀದಿಯ ಮುದರ್ರಿಸ್ ಪಿ.ಎಂ.ಇಬ್ರಾಹಿಂ ದಾರಿಮಿಯವರನ್ನು ಜಮಾಅತ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜುಮ್ಮಾ ಮಸೀದಿಯ ಅಧ್ಯಕ್ಷ ಹಾಜಿ ಎಸ್. ಅಬ್ದುಲ್ ಖಾದರ್ ವಹಿಸಿದ್ದರು. ಉಪಾಧ್ಯಕ್ಷರಾದ ಮಹಮ್ಮದ್ ಮುಸ್ಲಿಯಾರ್, ಹಾಜಿ ಸಯ್ಯದ್ ಸಾಹೇಬ್ ಕಳಾರ, ಪ್ರಧಾನ ಕಾರ್ಯದರ್ಶಿ ಹಾಜಿ ಕೆ.ಎಸ್.ಅಬ್ದುಲ್ ಹಮೀದ್, ಕೋಶಾಧಿಕಾರಿ ಹಾಜಿ ಕೆ.ಅಬ್ದುಲ್ ಖಾದರ್, ಜೊತೆ ಕಾರ್ಯದರ್ಶಿ ಕೆ.ಎಂ.ಫಾರೂಕ್ ಮೊದಲಾದವರು ಶುಭಹಾರೈಸಿದರು. ಕಾರ್ಯದರ್ಶಿ ಅಶ್ರಫ್ ಶೇಡಿಗುಂಡಿ ಸ್ವಾಗತಿಸಿ, ಹಾಜಿ

ಕಡಬ ಟೌನ್ ಜುಮಾ ಮಸೀದಿ ಮುದರ್ರಿಸ್‍ಗೆ ಸನ್ಮಾನ, ಬೀಳ್ಕೊಡುಗೆ Read More »

ಕರಾವಳಿ
Scroll to Top