newskadaba

ಕೆದಿಲ ಶೌರ್ಯ ವಿಪತ್ತು ತಂಡದಿಂದ ಹಿಂದೂ ರುದ್ರಭೂಮಿ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಡಿ. 20. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗಾಂಧಿನಗರದಲ್ಲಿನ ಹಿಂದೂ ರುದ್ರ ಭೂಮಿಯನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ಕೆದಿಲ ಒಕ್ಕೂಟದ ಸದಸ್ಯರಾದ ಜಗದೀಶ, ಶೀನಪ್ಪ, ವೆಂಕಪ್ಪ, ಗಿರೀಶ ಹಾಗೂ ಕೆದಿಲ “B” ಒಕ್ಕೂಟದ ಸೇವಾಪ್ರತಿನಿಧಿ ಜಯಂತಿರವರು ಉಪಸ್ಥಿತರಿದ್ದರು.

ಕೆದಿಲ ಶೌರ್ಯ ವಿಪತ್ತು ತಂಡದಿಂದ ಹಿಂದೂ ರುದ್ರಭೂಮಿ ಸ್ವಚ್ಛತೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ..!

(ನ್ಯೂಸ್ ಕಡಬ) newskadaba.com ಡಿ. 19. ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಟ್ರಾವೆಲ್ ವಾಹನವೊಂದು ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿರುವ ಟಿ.ಟಿ.ವಾಹನ ಬೆಳಿಗ್ಗೆ 6:30ರ ಸುಮಾರಿಗೆ ಫರಂಗಿಪೇಟೆ ಜಂಕ್ಷನ್ ನಲ್ಲಿ ಡಿವೈಡರ್ ಮೇಲೆ ಏರಿ ಬಳಿಕ ಹೆದ್ದಾರಿಗೆ ಪಲ್ಟಿಯಾಗಿದೆ. ಟಿ.ಟಿ.ಯಲ್ಲಿ ಸುಮಾರು 10 ಮಂದಿ ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಯಾವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳಗ್ಗಿನ ಹೊತ್ತು ಚಾಲಕ ನಿದ್ಧೆ ಮಂಪರಿನಲ್ಲಿ ನಿಯಂತ್ರಣ ಕಳೆದು ಡಿವೈಡರ್

ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ – ಅಧಿಕಾರಿಗಳಿಂದ ಕಾರ್ಯಾಚರಣೆ, ದಂಡ

(ನ್ಯೂಸ್ ಕಡಬ) newskadaba.com ಡಿ. 19. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ವಿರುದ್ಧ ಜಂಟಿ ಕಾರ್ಯಾಚರಣೆ ನಡೆಸಿದ ಆರೋಗ್ಯ ಇಲಾಖೆ ಮತ್ತು ಪೊಲೀಸರ ತಂಡವು,  51 ಪ್ರಕರಣಗಳನ್ನು ದಾಖಲಿಸಿ, ದಂಡ ವಿಧಿಸಿದೆ. ನಗರದ ಫಳ್ನೀರ್, ಅತ್ತಾವರ, ಹಂಪನಕಟ್ಟೆ, ಆರ್.ಟಿ.ಓ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿದ ತಂಡವು ಹೋಟೆಲ್, ಕೆಫೆ, ಟೀ ಸ್ಟಾಲ್, ಅಂಗಡಿ ವಠಾರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗವಾಗಿ ಸಿಗರೇಟ್ ಸೇದುತ್ತಿದ್ದವರಿಗೆ ತಲಾ ರೂ. 200 ವರೆಗೆ ದಂಡ ವಿಧಿಸಿದೆ. ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನ ಕಾಯಿದೆ(ಕೋಪ್ಟಾ)

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ – ಅಧಿಕಾರಿಗಳಿಂದ ಕಾರ್ಯಾಚರಣೆ, ದಂಡ Read More »

ಕರಾವಳಿ

ಯುವ ಸಮಾಲೋಚಕರ ನೇಮಕಾತಿ : ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 19. ಜನ ಆರೋಗ್ಯ ಸಂಸ್ಥೆ ಎಪಿಡೀಮಿಯಾಲಜಿ ವಿಭಾಗ, ನಿಮಾನ್ಸ್, ಬೆಂಗಳೂರು ಇವರಿಂದ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ  ಅನುದಾನಿತ ಯೋಜನೆಯಾದ “ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಯುವ ಸ್ಪಂದನ ಸೇವೆಗಳ ಸಮಗ್ರ ಅಭಿವೃದ್ದಿ ಮತ್ತು ಅನುಷ್ಠಾನ ಯೋಜನೆ” ಯುವ ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ  ಹಾಗೂ ಯುವ ಸಮಾಲೋಚಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಗೆ 4 ಯುವ ಪರಿವರ್ತಕರು ಹಾಗೂ ಒಬ್ಬರು ಯುವ ಸಮಾಲೋಚಕರ ಅಗತ್ಯವಿದೆ. ಶೈಕ್ಷಣಿಕ ಅರ್ಹತೆ :

ಯುವ ಸಮಾಲೋಚಕರ ನೇಮಕಾತಿ : ಅರ್ಜಿ ಆಹ್ವಾನ Read More »

ಕರಾವಳಿ

ಪರಿಶಿಷ್ಟ ಪಂಗಡದವರಿಗೆ ಡ್ರೋನ್ ತರಬೇತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಡಿ. 19. ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 23ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಅಭ್ಯರ್ಥಿಯು ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪುರುಷರಿಗೆ 18 ರಿಂದ 35 ವರ್ಷ, ಮಹಿಳೆಯರಿಗೆ 18 ರಿಂದ 40 ವರ್ಷಗಳಾಗಿರಬೇಕು. ಅಭ್ಯರ್ಥಿಯ ಕುಟುಂಬದ ಆದಾಯ ರೂ.2.50 ಮೀರಿರಬಾರದು.

ಪರಿಶಿಷ್ಟ ಪಂಗಡದವರಿಗೆ ಡ್ರೋನ್ ತರಬೇತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ Read More »

ಕರಾವಳಿ

ಮಕ್ಕಳ ಕಾನೂನುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಡಿ. 19. ಮಕ್ಕಳ ಸಂರಕ್ಷಣೆಗಾಗಿ ಜಾರಿಯಾದ ಕಾಯಿದೆಗಳು ಕೇವಲ ಅಧಿಕಾರಿಗಳ ತರಬೇತಿ, ಕಾರ್ಯಾಗಾರ, ಸಭೆಗಳಿಗೆ ಮಾತ್ರ ಸೀಮಿತವಾಗದೆ ಕಾರ್ಯರೂಪಕ್ಕೆ ತರುವಲ್ಲಿ ಪ್ರತಿಯೊಬ್ಬ ಅಧಿಕಾರಿಯೂ ಸ್ವ-ಇಚ್ಚೆಯಿಂದ ಕೆಲಸ ಮಾಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಡಾ. ತಿಪ್ಪೇಸ್ವಾಮಿ ಕೆ.ಟಿ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು

ಮಕ್ಕಳ ಕಾನೂನುಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಚನೆ Read More »

ಕರಾವಳಿ

ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕತೆ, ಸಂಸ್ಕೃತಿ ಅನಾವರಣ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಡಿ. 19. ಹಲವು ವರ್ಷಗಳ ಬಳಿಕ ನಡೆಯಲಿರುವ ಕರಾವಳಿ ಉತ್ಸವದ ಕಾರ್ಯಕ್ರಮಗಳಲ್ಲಿ ಕರಾವಳಿಯ ನೈಜ ಸಂಸ್ಕೃತಿ ಸಾಹಿತ್ಯ, ಉಡುಗೆ ತೊಡುಗೆಗಳು  ಹಾಗೂ ಸಾಂಪ್ರದಾಯಿಕ ತಿಂಡಿ ತಿನಿಸುಗಳ ಪ್ರದರ್ಶನ ಮತ್ತು ಮಾರಾಟದ ಅಪೂರ್ವ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕರಾವಳಿ ಉತ್ಸವ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಉತ್ಸವದಿಂದ ಕರಾವಳಿಯ ನೈಜ ಸಂಸ್ಕೃತಿಯ ಅನಾವರಣಗೊಳ್ಳಲಿದೆ. ಈ ನಿಟ್ಟಿನಲ್ಲಿ

ಕರಾವಳಿ ಉತ್ಸವದಲ್ಲಿ ಸಾಂಪ್ರದಾಯಿಕತೆ, ಸಂಸ್ಕೃತಿ ಅನಾವರಣ- ಜಿಲ್ಲಾಧಿಕಾರಿ Read More »

ಕರಾವಳಿ

ಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಡಿ. 19. ಎಂಡೋಸಲ್ಫಾನ್‌ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರವು ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಮತ್ತು ಆಲಂಕಾರು ಗ್ರಾಮ ಪಂಚಾಯತ್‌ ನ ಸಹಕಾರದಲ್ಲಿ ಆಲಂಕಾರು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಮಂಗಳವಾರದಂದು ನಡೆಯಿತು. ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ಎಲುಬು ಮತ್ತು ಮೂಳೆ ಚಿಕಿತ್ಸಾ ವಿಭಾಗ ಹಾಗೂ ಸಾಮಾನ್ಯ ರೋಗ ವಿಭಾಗದ ತಜ್ವ ವೈದ್ಯರುಗಳು ತಪಾಸಣೆ ಮಾಡಿ

ಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಪ್ರವಾಸೋದ್ಯಮ ಕೌಶಲ್ಯ ತರಬೇತಿ- ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ*

(ನ್ಯೂಸ್ ಕಡಬ) newskadaba.com ಡಿ. 19. 2024-25 ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI)  ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ (IHM) ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಂದ  ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಭೇತಿ ವಿವರ :

ಪ್ರವಾಸೋದ್ಯಮ ಕೌಶಲ್ಯ ತರಬೇತಿ- ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ* Read More »

ಕರಾವಳಿ

ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಡಿ. 19. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಡಿಸೆಂಬರ್ 23 ಮತ್ತು 24ರಂದು ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 23ರಂದು ಸೋಮವಾರ ಬೆಳಿಗ್ಗೆ 10:15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ, 10:45 – ಮಂಗಳೂರು ಬೀದಿಬದಿ ವ್ಯಾಪಾರಸ್ಥರ ವಲಯ ಉದ್ಘಾಟನೆ,  11- ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 1:30

ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ
Scroll to Top