newskadaba

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಂಜು ಪಾವಗಡ

(ನ್ಯೂಸ್ ಕಡಬ) newskadaba.com ನ. 14. ಬಿಗ್ ಬಾಸ್ ಕನ್ನಡ ಸೀಸನ್ 8’ರ ವಿನ್ನರ್ ಮಂಜು ಪಾವಗಡ ಅವರು ನಂದಿನಿ ಎಂಬವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಮದುವೆಯ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಗುರು ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವ ಮಂಜು ಮತ್ತು ನಂದಿನಿಯವರ ಮದುವೆ ಸಮಾರಂಭವು ಪಾವಗಡದಲ್ಲಿ ನಡೆದಿದೆ. ಮದುವೆ ಕ್ಷಣದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ಮಂಜು ಪಾವಗಡ ಅವರು ಬೆಂಗಳೂರಿನಲ್ಲಿ ತಮ್ಮ ಹೊಸ […]

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಂಜು ಪಾವಗಡ Read More »

ಕರ್ನಾಟಕ

ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಮೆರೆದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ನ. 14. ವಿದ್ಯಾರ್ಥಿಗಳು ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಬಾಂಬ್ ಸ್ಪೋಟಿಸಿ ಹುಚ್ಚಾಟ ಮೆರೆದಿರುವ ಘಟನೆ ಹಾಸನ ಹೊರವಲಯದ ಬೊಮ್ಮನಹಳ್ಳಿ ಎಂಬಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಹಾಗೂ ಕಮೆಂಟ್ಸ್ ಗೋಸ್ಕರ ಹುಚ್ಚಾಟಕ್ಕೆ ಇಳಿದಿರುವ ವಿದ್ಯಾರ್ಥಿಗಳು ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಪೋಟಿಸಿ ಪುಂಡಾ ಮೆರೆದಿದ್ದು, ಸದ್ಯ ವಿಡಿಯೋವನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ ಎನ್ನಲಾಗಿದೆ.

ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಮೆರೆದ ವಿದ್ಯಾರ್ಥಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ನಾಳೆ (ನ.15) ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ನ. 14. ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ನ.15(ಶುಕ್ರವಾರ) ರಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಬಾಧಿತ ಗ್ರಾಮಗಳಿಂದ ಸಾವಿರಾರು ಜನರು ಭಾಗವಹಿಸಿಲಿದ್ದಾರೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಹೇಳಿದರು. ಈ ಕುರಿತು ಬುಧವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಾಧಿತ ಗ್ರಾಮಗಳ ವ್ಯಾಪ್ತಿಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಗುಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ

ಕಸ್ತೂರಿ ರಂಗನ್ ಜಾರಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ನಾಳೆ (ನ.15) ಬೃಹತ್ ಪ್ರತಿಭಟನೆ Read More »

ಕರಾವಳಿ

ಜಿಲ್ಲಾ ಬಾಲ ಭವನದಲ್ಲಿ ಸ್ಪರ್ಧಾ ಕಾರ್ಯಕ್ರಮ: ಫಲಿತಾಂಶ

(ನ್ಯೂಸ್ ಕಡಬ) newskadaba.com ನ. 14. ಬಾಲ ಭವನ ಸೊಸೈಟಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಬಾಲ ಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ ಜಿಲ್ಲೆ ಇದರ ಸಹಯೋಗದಲ್ಲಿ 2024-25ನೇ ಸಾಲಿನ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಪ್ರಯುಕ್ತ 09ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಕದ್ರಿ ಜಿಲ್ಲಾ ಬಾಲ ಭವನದಲ್ಲಿ ಮಂಗಳವಾರದಂದು ಸ್ಪರ್ಧಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಾದ ಸೃಜನಾತ್ಮಕ ಪ್ರದರ್ಶನ ಕಲೆ, ವಾದ್ಯ ಸಂಗೀತ, ವಿಜ್ಞಾನದಲ್ಲಿ ಸೃಜನಾತ್ಮಕ ಆವಿಷ್ಕಾರ,

ಜಿಲ್ಲಾ ಬಾಲ ಭವನದಲ್ಲಿ ಸ್ಪರ್ಧಾ ಕಾರ್ಯಕ್ರಮ: ಫಲಿತಾಂಶ Read More »

ಕರಾವಳಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

(ನ್ಯೂಸ್ ಕಡಬ) newskadaba.com ನ. 14. ಪುತ್ತೂರು ಮಹಾಲಿಂಗೇಶ್ವರ ದೇವಾಲಯಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದ್ದು, ದೇವಸ್ಥಾನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ಪಾಲಿಸುವಂತೆ ಪ್ರವೇಶ ದ್ವಾರದ ಬಳಿ ಸೂಚನಾ ಫಲಕವನ್ನು ಅಳವಡಿಸಲಾಗಿದೆ. ಅದರ ಪ್ರಕಾರ, ದೇವರ ದರ್ಶನಕ್ಕೆ ಬರುವಾಗ ಸ್ವಚ್ಛ, ಶುಭ್ರ ಮತ್ತು ಸಭ್ಯ ಉಡುಪುಗಳನ್ನು ಧರಿಸಿ ಬರುವಂತೆ ಸೂಚಿಸಲಾಗಿದೆ. ಪುರುಷರು ಪ್ಯಾಂಟ್- ಅಂಗಿ ಅಥವಾ ಲುಂಗಿ – ಅಂಗಿ, ಮಹಿಳೆಯರು ಸೀರೆ ಅಥವಾ ಚೂಡಿದಾರ್ ಧರಿಸಿ ದೇವರ ದರ್ಶನ ಪಡೆಯುವಂತೆ ತಿಳಿಸಲಾಗಿದೆ. ದೇವಸ್ಥಾನಕ್ಕೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ Read More »

ಕರಾವಳಿ

ಕನ್ನಡ ನಾಡು ನುಡಿಯ ಅಭಿಮಾನದ ಪ್ರತೀಕ ಕರ್ನಾಟಕ ಸುವರ್ಣ ಸಂಭ್ರಮ- ಅಪರ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ನ. 14. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಆಶಯದೊಂದಿಗೆ ನಡೆಯುತ್ತಿರುವ ಸುವರ್ಣ ಕರ್ನಾಟಕ ಸಂಭ್ರಮ ಕಾರ್ಯಕ್ರಮವು ನಮ್ಮ ರಾಜ್ಯ ಹಾಗೂ ಭಾಷೆಯ ಅಭಿಮಾನದ ಪ್ರತೀಕವಾಗಿದೆ ಎಂದು ದ.ಕ. ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಹೇಳಿದರು. ಅವರು ಬುಧವಾರದಂದು ಮಂಗಳೂರು ತುಳು ಭವನದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಪ್ರಯುಕ್ತ ನಡೆಯುವ ಬಹುಸಂಸ್ಕೃತಿ ಉತ್ಸವದ ಅಂಗವಾಗಿ ಆಯೋಜಿಸಲಾದ ಪ್ರೌಢಶಾಲಾ ಮಕ್ಕಳ ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ನಿತ್ಯೋತ್ಸವ ಮೂಲಕ ಹೆಸರಾಯಿತು ಕರ್ನಾಟಕ,

ಕನ್ನಡ ನಾಡು ನುಡಿಯ ಅಭಿಮಾನದ ಪ್ರತೀಕ ಕರ್ನಾಟಕ ಸುವರ್ಣ ಸಂಭ್ರಮ- ಅಪರ ಜಿಲ್ಲಾಧಿಕಾರಿ Read More »

ಕರಾವಳಿ, ಕರ್ನಾಟಕ

ಜಿಲ್ಲಾ ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ನ. 14. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಅವರು ನ.16 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ನ. 16ರಂದು ಬೆಳಿಗ್ಗೆ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣ ಆಗಮನ. 10.40ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ರಾಜ್ಯ ಮಟ್ಟದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ 2024 ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಡ್ಡೂರು-ಪೊಳಲಿ ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ

ಜಿಲ್ಲಾ ಉಸ್ತುವಾರಿ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ
pilikula

ನ.18ರಂದು ಪಿಲಿಕುಳ ಸಾರ್ವಜನಿಕರ ವೀಕ್ಷಣೆಗೆ ಲಭ್ಯ

(ನ್ಯೂಸ್ ಕಡಬ) newskadaba.com ನ. 14. ನವೆಂಬರ್ 18ರಂದು (ಸೋಮವಾರ) ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲಾ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ.18ರಂದು ಪಿಲಿಕುಳ ಸಾರ್ವಜನಿಕರ ವೀಕ್ಷಣೆಗೆ ಲಭ್ಯ Read More »

ಕರಾವಳಿ

ಮಂಗಳೂರು ವಿವಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 14. 2024-25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆವರಣ ಮತ್ತು ಘಟಕ ಕಾಲೇಜುಗಳ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ 55% ಅಂಕಗಳು ಹಾಗೂ (ಪರಿಶಿಷ್ಟಜಾತಿ/ ಪರಿಶಿಷ್ಟಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳು), ಯು.ಜಿ.ಸಿ. ಎನ್.ಇ.ಟಿ./ಎಸ್.ಎಲ್.ಇ.ಟಿ. ಉತ್ತೀರ್ಣತೆ/ಎಂ.ಫಿಲ್/ಪಿ.ಹೆಚ್.ಡಿ. ಪದವಿ ಪ್ರಮಾಣಪತ್ರ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವಿಶ್ವವಿದ್ಯಾನಿಲಯದ ಅಧಿಕೃತ website ನಲ್ಲಿ ನೀಡಲಾದ Link http://faculty.mangaloreuniversity.in ರಲ್ಲಿ

ಮಂಗಳೂರು ವಿವಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಗ್ರಾಹಕರ ಆಯೋಗ: ಡಿ. 13ರಂದು ಲೋಕ ಅದಾಲತ್

(ನ್ಯೂಸ್ ಕಡಬ) newskadaba.com ನ. 14. ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ಆಯೋಗವು ಬಾಕಿ ಇರುವ ಪ್ರಕರಣಗಳಲ್ಲಿ ಕೂಡಾ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಡಿ. 13ರಂದು ಅವಕಾಶ ನೀಡಲಾಗುತ್ತಿದ್ದು, ಸಂಬಂಧಿಸಿದವರು ಆಯೋಗಕ್ಕೆ ಭೇಡಿ ನೀಡಿ ತಮ್ಮ ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಸಹಕರಿಸುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಹಕರ ಆಯೋಗ: ಡಿ. 13ರಂದು ಲೋಕ ಅದಾಲತ್ Read More »

ಕರಾವಳಿ
Scroll to Top