newskadaba

ಉಳ್ಳಾಲ: ಪ.ಜಾತಿ/ಪ.ಪಂಗಡ ಕುಂದುಕೊರತೆ ಸಭೆ

(ನ್ಯೂಸ್ ಕಡಬ) newskadaba.com ನ. 14. ಉಳ್ಳಾಲ ತಾಲೂಕಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಬಗ್ಗೆ ಚರ್ಚಿಸಲು ಸಂಘ ಸಂಸ್ಥೆಯ ಪದಾಧಿಕಾರಿಗಳ ಸಭೆಯು ನ.16 ರಂದು ಬೆಳಿಗ್ಗೆ 11 ಗಂಟೆಗೆ ನರಿಂಗಾನ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಳ್ಳಾಲ: ಪ.ಜಾತಿ/ಪ.ಪಂಗಡ ಕುಂದುಕೊರತೆ ಸಭೆ Read More »

ಕರಾವಳಿ, ಕರ್ನಾಟಕ

ಕಾಲೇಜಿನಲ್ಲಿ ಕುಸಿದುಬಿದ್ದು ತೀವ್ರ ಅಸ್ವಸ್ಥ- ಉಪನ್ಯಾಸಕಿ ಮೃತ್ಯು

(ನ್ಯೂಸ್ ಕಡಬ) newskadaba.com ನ. 14. ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿಯೋರ್ವರು ಮೃತಪಟ್ಟಿರುವ ಕುರಿತು ಬುಧವಾರದಂದು ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ನಗರದ ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ, ಬಜಪೆ ನಿವಾಸಿ ಗ್ಲೋರಿಯಾ ರೋಡ್ರಿಗಸ್(23) ಎಂದು ಗುರುತಿಸಲಾಗಿದೆ. ಫುಡ್ ಅಲರ್ಜಿ ಕಾರಣ ಗ್ಲೋರಿಯಾ ಕಳೆದ ಶುಕ್ರವಾರ ಮಧ್ಯಾಹ್ನ ಊಟ ಸೇವಿಸಿದ ಬಳಿಕ ಕಾಲೇಜಿನಲ್ಲಿ ಏಕಾಏಕಿ ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ಕಂಕನಾಡಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ನಡುವೆ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ವೈದ್ಯರ ತಂಡ ತಿಳಿಸಿತ್ತು. ಗ್ಲೋರಿಯಾ

ಕಾಲೇಜಿನಲ್ಲಿ ಕುಸಿದುಬಿದ್ದು ತೀವ್ರ ಅಸ್ವಸ್ಥ- ಉಪನ್ಯಾಸಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

PUC ಪಾಸಾದವರಿಗೆ ಲೋಕಾಯುಕ್ತದಲ್ಲಿ ಉದ್ಯೋಗಾವಕಾಶ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 13. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್ ‘ಸಿ’ ವೃಂದದ ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 14 ಕ್ಲರ್ಕದ-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.   ಹುದ್ದೆಗಳ ಕುರಿತ ಮಾಹಿತಿ ಇಲ್ಲಿದೆ ಹುದ್ದೆ: ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ಸಂಖ್ಯೆ: 14 ವೇತನ: 34100-800, 35700-900, 39300-1000, 43300-1125, 47800-1250, 52800-1375, 58300-1500, 64300-1650 67600 ವಿದ್ಯಾರ್ಹತೆ: ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಅಥವಾ ತತ್ಸಮಾನ, ಕರ್ನಾಟಕ ಪ್ರೌಢ

PUC ಪಾಸಾದವರಿಗೆ ಲೋಕಾಯುಕ್ತದಲ್ಲಿ ಉದ್ಯೋಗಾವಕಾಶ – ಅರ್ಜಿ ಆಹ್ವಾನ Read More »

ಉದ್ಯೋಗ

ಕಡಬ: ವೃದ್ದ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..!

(ನ್ಯೂಸ್ ಕಡಬ) newskadaba.com ಕಡಬ, ನ. 13. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಆರು ವರ್ಷಗಳಿಂದ ವಾಸವಿದ್ದ ವೃದ್ದ ದಂಪತಿಗಳ ಮನೆಯೊಂದನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ನೆಲಸಮ ಮಾಡಿದ ಅಮಾನವೀಯ ಘಟನೆ ತಾಲೂಕಿನ ಕೌಕ್ರಾಡಿ ಎಂಬಲ್ಲಿ ನಡೆದಿದೆ. ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿ ಮನೆಯನ್ನು ಬುಧವಾರ ಏಕಾಏಕಿ ಧ್ವಂಸಗೊಳಿಸಲಾಗಿದೆ. ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿ ನಿವಾಸಿಗಳಾಗಿದ್ದ ದಂಪತಿ ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ

ಕಡಬ: ವೃದ್ದ ದಂಪತಿ ವಾಸವಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊಲೆಯಾದ 18 ವರ್ಷಗಳ ನಂತರ ಪೋಷಕರಿಂದ ಬಾಲಕಿಯ ಅಸ್ಥಿಪಂಜರ ಅಂತ್ಯಕ್ರಿಯೆ..!

(ನ್ಯೂಸ್ ಕಡಬ) newskadaba.com ನ. 13. ಬರೋಬ್ಬರಿ 18 ವರ್ಷಗಳ ಹಿಂದೆ ಕೆಲಸ ಮಾಡುತ್ತಿದ್ದ ಮನೆ ಮಾಲೀಕನಿಂದ ಹತ್ಯೆಯಾಗಿದ್ದ ಬಾಲಕಿಯ ತಲೆಬುರುಡೆಯನ್ನು ಧಾರ್ಮಿಕ ವಿಧಿ ವಿಧಾನದಂತೆ ಅಂತ್ಯಸಂಸ್ಕಾರ ಮಾಡಲು ಪೋಷಕರು ಸ್ವೀಕರಿಸಿದ ಘಟನೆ ಕಾಸರಗೋಡು ನ್ಯಾಯಾಲಯದಲ್ಲಿ ನಡೆದಿದೆ.   ಗೋವಾದಲ್ಲಿ ಗುತ್ತಿಗೆದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಸರಗೋಡಿನ ಮುಳಿಯಾರ್ ನಿವಾಸಿ ಕೆ.ಸಿ.‌ ಹಂಝ ಎಂಬವರ ಮನೆಯಲ್ಲಿ ಹದಿನೆಂಟು ವರ್ಷಗಳ ಹಿಂದೆ ಕರ್ನಾಟಕದ ಕೊಡಗು ಜಿಲ್ಲೆಯ ಅಯ್ಯಂಗೇರಿ ನಿವಾಸಿ 13ನೇ ವಯಸ್ಸಿನ ಸಫಿಯಾ ಕೆಲಸಕ್ಕಿದ್ದಳು. ಮನೆಗೆಲಸ ಮಾಡುತ್ತಿದ್ದ ಸಫಿಯಾಳಿಗೆ ಕೆಲಸದ

ಕೊಲೆಯಾದ 18 ವರ್ಷಗಳ ನಂತರ ಪೋಷಕರಿಂದ ಬಾಲಕಿಯ ಅಸ್ಥಿಪಂಜರ ಅಂತ್ಯಕ್ರಿಯೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾಕಪ್ ಡೆತ್: ಪಿಎಸ್ಐ, ಹೆಡ್ ಕಾನ್ ಸ್ಟೇಬಲ್ ಅಮಾನತು

(ನ್ಯೂಸ್ ಕಡಬ) newskadaba.com ನ. 13. ಬ್ರಹ್ಮಾವರ ಠಾಣೆಯಲ್ಲಿ ನವೆಂಬರ್ 10ರಂದು ನಡೆದ ಲಾಕಪ್ ಡೆತ್ ಘಟನೆಯ ಹಿನ್ನೆಲೆ ಬ್ರಹ್ಮಾವರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಮಧು ಬಿ.ಇ ಮತ್ತು ಹೆಡ್ ಕಾನ್‌ಸ್ಟೇಬಲ್ ಸುಜಾತಾ ಅವರನ್ನು ಅಮಾನತುಗೊಳಿಸಲಾಗಿದೆ. ಮೃತ ಬಿಜು ಮೋಹನ್ ಎಂಬಾತನನ್ನು, ಬ್ರಹ್ಮಾವರ ಠಾಣಾ ವ್ಯಾಪ್ತಿಯ ಚೇರ್ಕಾಡಿ ಗ್ರಾಮದಲ್ಲಿ ನಡೆದ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 9 ರಂದು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿದ್ದಾಗ ಅವರು ಮೃತಪಟ್ಟಿದ್ದರು. ಘಟನೆ ಸಂಬಂಧ ಬಿಜು ಮೋಹನ್ ಅವರ ಕುಟುಂಬಸ್ಥರು ಬ್ರಹ್ಮಾವರ

ಲಾಕಪ್ ಡೆತ್: ಪಿಎಸ್ಐ, ಹೆಡ್ ಕಾನ್ ಸ್ಟೇಬಲ್ ಅಮಾನತು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವರ್ಷದ ಬಳಿಕ ಕಂ ಬ್ಯಾಕ್ ಆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ..!

(ನ್ಯೂಸ್ ಕಡಬ) newskadaba.com ನ. 13. ನಾಳೆಯಿಂದ ಶುರುವಾಗಲಿರುವ ರಣಜಿ ಟ್ರೋಫಿಯ ಗ್ರೂಪ್-ಸಿ ಪಂದ್ಯದಲ್ಲಿ ಬಂಗಾಲ ಪರ ಒಂದು ವರ್ಷದ ಬಳಿಕ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಕ್ರಿಕೆಟ್‌ ಆಡಲು ಸಜ್ಜಾಗಿದ್ದಾರೆ. ಮೊಹಮ್ಮದ್ ಶಮಿ ಕಳೆದೊಂದು ವರ್ಷದಿಂದ ಪಾದದ ನೋವಿನ ಕಾರಣ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದು, ಇದೀಗ ಇಂದೋರ್​ ನಲ್ಲಿ ನಡೆಯಲಿರುವ ಮಧ್ಯ ಪ್ರದೇಶ್ ವಿರುದ್ಧದ ಪಂದ್ಯದ ಮೂಲಕ ಮತ್ತೆ ಕಣಕ್ಕಿಳಿಯಲು ಸಿದ್ದರಾಗಿದ್ದಾರೆ. 2023ರ ಏಕದಿನ ವಿಶ್ವಕಪ್ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು

ವರ್ಷದ ಬಳಿಕ ಕಂ ಬ್ಯಾಕ್ ಆದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ..! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೀವ್ರ ವಾಯುಮಾಲಿನ್ಯ- ಜನರು ಓಡಾಟಕ್ಕೆ ಬ್ರೇಕ್ ಹಾಕಿದ ಪಾಕ್..!

(ನ್ಯೂಸ್ ಕಡಬ) newskadaba.com ನ. 13. ದಿನದಿಂದ ದಿನಕ್ಕೆ ಪಾಕಿಸ್ತಾನದಲ್ಲಿ ವಾಯುಮಾಲಿನ್ಯ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆ ಜನರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಸರ್ಕಾರ ಜನರ ಓಡಾಟಕ್ಕೆ ಬ್ರೇಕ್ ಹಾಕಿದೆ. ತೀವ್ರ ವಾಯುಮಾಲಿನ್ಯದಿಂದಾಗಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯವು ಹೆಚ್ಚಿನ ಹೊರಾಂಗಣ ಚಟುವಟಿಕೆಗಳನ್ನು ನಿಷೇಧಿಸಿದೆ. ವಾಯುಮಾಲಿನ್ಯದಿಂದ ಉಂಟಾಗುವ ಕಾಯಿಲೆಗಳನ್ನು ನಿಗ್ರಹಿಸಲು ಕೆಲವು ಪ್ರದೇಶಗಳಲ್ಲಿ ಅಂಗಡಿಗಳು, ಮಾರುಕಟ್ಟೆಗಳು ಮತ್ತು ಮಾಲ್‌ ಗಳನ್ನು ಮುಚ್ಚಲು ಸರ್ಕಾರ ಆದೇಶ ಹೊರಡಿಸಿದೆ. ವಾಯುಗುಣಮಟ್ಟದಲ್ಲಿ ವಿಶ್ವದ ಅತ್ಯಂತ ಕಲುಷಿತ ನಗರವಾದ ಲಾಹೋರ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ

ತೀವ್ರ ವಾಯುಮಾಲಿನ್ಯ- ಜನರು ಓಡಾಟಕ್ಕೆ ಬ್ರೇಕ್ ಹಾಕಿದ ಪಾಕ್..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ನ. 13. ನಗರದ ಪಕ್ಷಿಕೆರೆ ಎಂಬಲ್ಲಿ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಇಬ್ಬರು ಆರೋಪಿಗಳು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹತ್ಯೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೃತ ಕಾರ್ತಿಕ್ ತಾಯಿ ಶ್ಯಾಮಲಾ ಭಟ್ ಹಾಗೂ ಸಹೋದರಿ ಕಣ್ಮಣಿಯವರನ್ನು ಬಂಧಿಸಲಾಗಿದೆ. ಬಂಧಿತ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲೇ ಇಬ್ಬರು ಆರೋಪಿಗಳು ತಲೆ‌ತಿರುಗಿ ಬಿದ್ದಿದ್ದು, ಈ ಹಿನ್ನಲೆ ಇಬ್ಬರನ್ನೂ ಮೂಡಬಿದ್ರೆಯ ಖಾಸಗಿ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಕೌಟುಂಬಿಕ

ಮಂಗಳೂರಿನಲ್ಲಿ ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ- ಇಬ್ಬರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹಿಂಸಾಚಾರ ಪ್ರಕರಣ: ಇಬ್ಬರ ಮೃತದೇಹ ಪತ್ತೆ, 6 ಮಂದಿ ನಾಪತ್ತೆ

(ನ್ಯೂಸ್ ಕಡಬ) newskadaba.com ಇಂಫಾಲ್, ನ. 13. ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇಲ್ಲಿನ ಜಿರಿಬಾಮ್ ಜಿಲ್ಲೆಯಲ್ಲಿ ಬೆಳಗ್ಗೆ ಇಬ್ಬರು ವೃದ್ಧರ ಶವ ಪತ್ತೆಯಾಗಿದೆ. ಜೊತೆಗೆ 6 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ನ. 12ರಂದು ನಡೆದ ಗುಂಡಿನ ದಾಳಿಯ ನಂತರ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಒಂದು ದಿನದ ಹಿಂದೆ, ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿತ್ತು. ಈ ಎನ್‌ಕೌಂಟರ್ ನಲ್ಲಿ

ಹಿಂಸಾಚಾರ ಪ್ರಕರಣ: ಇಬ್ಬರ ಮೃತದೇಹ ಪತ್ತೆ, 6 ಮಂದಿ ನಾಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top