newskadaba

ನ.16ರಂದು ಗಡಿನಾಡ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ನ. 12. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೇರಳ ಹಾಗೂ ಗೋವಾ ರಾಜ್ಯಗಳ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವು ನವೆಂಬರ್ 16ರಂದು ಬೆಳಗ್ಗೆ 11 ಗಂಟೆಗೆ ಮಂಜೇಶ್ವರ ಹೊಸಬೆಟ್ಟು ಕಲಾಸ್ಪರ್ಶಂ ಅಡಿಟೋರಿಯಂನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಉದ್ಘಾಟಿಸಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಪ್ರಶಸ್ತಿ ಪ್ರದಾನ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ ಅಶ್ರಫ್ […]

ನ.16ರಂದು ಗಡಿನಾಡ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ Read More »

ಕರಾವಳಿ

ವೆನ್‍ ಲಾಕ್ ಶಸ್ತ್ರಚಿಕಿತ್ಸೆ- ಉಸ್ತುವಾರಿ ಸಚಿವರಿಂದ ಶ್ಲಾಘನೆ

(ನ್ಯೂಸ್ ಕಡಬ) newskadaba.com ನ. 12. ವೆನ್‍ಲಾಕ್ ಜಿಲ್ಲಾಸ್ಪತ್ರೆಯ ನೂತನ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ರೋಗಿಗಳ ಸೇವೆ ಆರಂಭಗೊಂಡಿರುವುದಕ್ಕೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳನ್ನು ಅಭಿನಂದಿಸಿದ್ದಾರೆ. ಆಗಸ್ಟ್ 15ರಂದು ಉದ್ಘಾಟನೆಗೊಂಡಿದ್ದ, ಈ ನೂತನ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ನವೆಂಬರ್ 7ರಿಂದ ರೋಗಿಗಳ ಶಸ್ತ್ರಚಿಕಿತ್ಸೆಗಳು ಆರಂಭಗೊಂಡು, ಮೊದಲ ದಿನವೇ 7 ಶಸ್ತ್ರಚಿಕಿತ್ಸೆಗಳು ನಡೆದಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಹೆಚ್ಚಿನ ಶಸ್ತ್ರಚಿಕಿತ್ಸೆ ನಡೆಸಲು ಕಾರ್ಯಯೋಜನೆ ರೂಪಿಸಲಾಗುವುದು. ಈ ನೂತನ ಶಸ್ತ್ರಚಿಕಿತ್ಸಾ ಘಟಕದಿಂದ

ವೆನ್‍ ಲಾಕ್ ಶಸ್ತ್ರಚಿಕಿತ್ಸೆ- ಉಸ್ತುವಾರಿ ಸಚಿವರಿಂದ ಶ್ಲಾಘನೆ Read More »

ಕರಾವಳಿ

ಕಡಬ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

(ನ್ಯೂಸ್ ಕಡಬ) newskadaba.com ನ. 09. ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಹಾಗೂ ಸರಸ್ವತಿ ವಿದ್ಯಾಲಯ ವಿದ್ಯಾನಗರ ಕಡಬ ಇದರ ಆಶ್ರಯದಲ್ಲಿ ನಡೆದ ಕಡಬ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಹಿರಿಯ ಪ್ರಾಥಮಿಕ ವಿಭಾಗದ ಅಭಿನಯ ಗೀತೆ ಸ್ಪರ್ಧೆಯಲ್ಲಿ ಶಾರ್ವಿ ಎಸ್. ರೈ (6ನೇ ತರಗತಿ) ಪ್ರಥಮ ಸ್ಥಾನ, ಚಿತ್ರಕಲೆಯಲ್ಲಿ ಶಾಶ್ವತ್ ವಿ.ಎ. (6ನೇ ತರಗತಿ) ಪ್ರಥಮ ಸ್ಥಾನ,

ಕಡಬ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ Read More »

ಕರಾವಳಿ

ಚಾರ್ಮಾಡಿ ಘಾಟ್ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ- ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ನ. 09. ಚಾರ್ಮಾಡಿ ಘಾಟ್‌ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯ ಮೂಲಕ ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಈ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ

ಚಾರ್ಮಾಡಿ ಘಾಟ್ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ- ಸಂಸದ ಕ್ಯಾ.ಚೌಟ Read More »

ಕರಾವಳಿ, ಕರ್ನಾಟಕ

MBBS ವ್ಯಾಸಂಗ ಮಾಡುವ ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳಿಗೆ 50 ಲಕ್ಷ ರೂ. ನೀಡುವ ಸ್ಕೀಂ ಗೆ ಕೊಕ್..!

(ನ್ಯೂಸ್ ಕಡಬ) newskadaba.com ನ. 09. ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಕೋಟಾದಡಿ MBBS ವ್ಯಾಸಂಗ ಮಾಡುವ ಎಸ್ಸಿ, ಎಸ್ಟಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50 ಲಕ್ಷ ರೂ.ವರೆಗೆ ಕಾಲೇಜು ಶುಲ್ಕ ಪಾವತಿಸುವ ಸಮಾಜ ಕಲ್ಯಾಣ ಇಲಾಖೆಯ ‘ಪ್ರೋತ್ಸಾಹಧನ ಯೋಜನೆ’ಯನ್ನು ಆರ್ಥಿಕ ಇಲಾಖೆ ತಿರಸ್ಕರಿಸಿರುವ ಕುರಿತು ವರದಿಯಾಗಿದೆ. ಸಮಾಜ ಕಲ್ಯಾಣ ಇಲಾಖೆಯು ಅ. 24ರಂದು ಹೊರಡಿಸಿರುವ ‘ಸೇರ್ಪಡೆ ಆದೇಶ’ದ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.95ರಷ್ಟು ಅಂಕ ಪಡೆದು, ನೀಟ್‌ ಪರೀಕ್ಷೆಯ ರ್‍ಯಾಂಕ್‌ ನಿಂದ ಸರ್ಕಾರಿ ಕೋಟಾದಡಿ

MBBS ವ್ಯಾಸಂಗ ಮಾಡುವ ಎಸ್.ಸಿ, ಎಸ್.ಟಿ ವಿದ್ಯಾರ್ಥಿಗಳಿಗೆ 50 ಲಕ್ಷ ರೂ. ನೀಡುವ ಸ್ಕೀಂ ಗೆ ಕೊಕ್..! Read More »

ಕರ್ನಾಟಕ

ಸರ್ಕಾರಿ ಕಛೇರಿಗಳಲ್ಲಿ ತಂಬಾಕು ನಿಷೇಧ- ರಾಜ್ಯ ಸರಕಾರ ಆದೇಶ

(ನ್ಯೂಸ್ ಕಡಬ) newskadaba.com ನ. 09. ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ನಿಷೇಧಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಸೇವೆ ಸಲ್ಲಿಸಲು ಇರುವ ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಜವಾಬ್ದಾರಿ ನಮ್ಮದು. ಹೀಗಾಗಿ ನಮ್ಮ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ಸರ್ಕಾರಿ ಕಛೇರಿಗಳಲ್ಲಿ ತಂಬಾಕು ನಿಷೇಧ- ರಾಜ್ಯ ಸರಕಾರ ಆದೇಶ Read More »

ಕರ್ನಾಟಕ

ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 24 ಮಂದಿ ಮೃತ್ಯು, 40ಕ್ಕೂ ಹೆಚ್ಚು ಜನರಿಗೆ ಗಾಯ..!

(ನ್ಯೂಸ್ ಕಡಬ) newskadaba.com ನ. 09. ರೈಲ್ವೇ ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 24 ಜನರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಕುರಿತು ಪಾಕಿಸ್ತಾನದ ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ವರದಿಯಾಗಿದೆ. ಸದ್ಯ ಬಾಂಬ್ ಸ್ಫೋಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದು ಪಾಕಿಸ್ತಾನ ಸೇನಾ ಸೈನಿಕರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಯಾಗಿದೆ. ಪಾಕಿಸ್ತಾನವು ದಕ್ಷಿಣದಲ್ಲಿ ಪ್ರತ್ಯೇಕತಾವಾದಿ ಜನಾಂಗೀಯ ಉಗ್ರಗಾಮಿಗಳು ಮತ್ತು ವಾಯುವ್ಯದಲ್ಲಿ ಇಸ್ಲಾಮಿಕ್ ಉಗ್ರಗಾಮಿಗಳ ದಾಳಿಯ ಉಲ್ಬಣವನ್ನು ಎದುರಿಸುತ್ತಿದೆ. ಸ್ಫೋಟದಲ್ಲಿ ಈವರೆಗೆ 24 ಜನರು ಮೃಪಟ್ಟಿದ್ದಾರೆ

ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಸ್ಫೋಟ: 24 ಮಂದಿ ಮೃತ್ಯು, 40ಕ್ಕೂ ಹೆಚ್ಚು ಜನರಿಗೆ ಗಾಯ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಯೂನಿಯನ್ ಬ್ಯಾಂಕ್ ನಲ್ಲಿ 1500 ಹುದ್ದೆಗಳು- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 09. ಯೂನಿಯನ್ ಬ್ಯಾಂಕ್ ನಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಮುಂಬರುವ 13ನೇ ತಾರೀಖಿನೊಳಗೆ ಅರ್ಜಿ ಸಲ್ಲಿಕೆ ಮಾಡಬೇಕು.   ಇದರ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಅಕ್ಟೋಬರ್ 24ರಿಂದ ಆರಂಭವಾಗಿದ್ದು, ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು 20 ರಿಂದ 30 ವರ್ಷದೊಳಗಿರಬೇಕು. ಸರ್ಕಾರಿ ನಿಯಮಗಳ ಪ್ರಕಾರ, ಹಿಂದುಳಿದ ವರ್ಗದವರಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ವಿನಾಯಿತಿ ನೀಡಲಾಗುವುದು. ಅಭ್ಯರ್ಥಿಗಳು ಯಾವ ರಾಜ್ಯಕ್ಕೆ ಸಲ್ಲಿಸುತ್ತಾರೋ

ಯೂನಿಯನ್ ಬ್ಯಾಂಕ್ ನಲ್ಲಿ 1500 ಹುದ್ದೆಗಳು- ಅರ್ಜಿ ಆಹ್ವಾನ Read More »

ಉದ್ಯೋಗ

ಕೆವೈಸಿ ಅಪ್ ಡೇಟ್ ನೆಪದಲ್ಲಿ ಸಾವಿರಾರು ರೂ.ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ನ. 09. ಕೆವೈಸಿ ಅಪ್‌ ಡೇಟ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯೋರ್ವರ ಮೊಬೈಲ್ ಗೆ ನ.7ರಂದು ಕೆನರಾ ಬ್ಯಾಂಕ್‌ ನವರು ಎಂದು ಹೇಳಿ ಕರೆ ಮಾಡಿದ್ದ ಅಪರಿಚಿತರು, ಕೆವೈಸಿ ಅಪ್‌ಡೇಟ್ ಆಗದೇ ಇರುವುದರಿಂದ ಅಕೌಂಟ್ ಬ್ಲಾಕ್ ಮಾಡುವುದಾಗಿ ತಿಳಿಸಿ, ಬಳಿಕ ದೂರುದಾರರಿಂದ ಬ್ಯಾಂಕ್ ಖಾತೆ ವಿವರ, ಓಟಿಪಿ ಪಡೆದುಕೊಂಡ ಅಪರಿಚಿತರು, 51,908ರೂ. ಹಣವನ್ನು ಖಾತೆಯಿಂದ ಮೋಸದಿಂದ ಡ್ರಾ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.

ಕೆವೈಸಿ ಅಪ್ ಡೇಟ್ ನೆಪದಲ್ಲಿ ಸಾವಿರಾರು ರೂ.ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ- ಆರೋಪಿಗಳ ನ್ಯಾಯಾಂಗ ಬಂಧನ 14 ದಿನಗಳ ಕಾಲ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 09. ಸ್ಲೋಪಾಯಿಸನ್ ನೀಡಿ ಪತಿಯ ಕೊಲೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕಾರ್ಕಳ ನ್ಯಾಯಾಲಯವು ಶುಕ್ರವಾರದಂದು ಆದೇಶ ಹೊರಡಿಸಿದೆ. ಆರೋಪಿ ಪ್ರತಿಮಾಳನ್ನು ವಶಕ್ಕೆ ಪಡೆದ ಪೊಲೀಸರು ಅ.25ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ನ.07ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವೇಳೆ ಮೂರು ದಿನಗಳ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದ್ದ ಆರೋಪಿ ದಿಲೀಪ್‌

ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ- ಆರೋಪಿಗಳ ನ್ಯಾಯಾಂಗ ಬಂಧನ 14 ದಿನಗಳ ಕಾಲ ವಿಸ್ತರಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top