newskadaba

ಲಾವಣ್ಯ ಹತ್ಯೆ ಪ್ರಕರಣ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಆ. 01. ಕರಾವಳಿ ಭಾಗವನ್ನು ಬೆಚ್ಚಿಬೀಳಿಸಿದ್ದ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಬೆಳವಣಿಗೆಯೊಂದು ಹೊರಬಿದ್ದಿದ್ದು, ಕೃತ್ಯವೆಸಗಿ ತಲೆಮರೆಸಿಕೊಂಡಿದ್ದ ಆರೋಪಿ, ಚೇತನ್‌ಗೆ ಇದೀಗ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಜುಲೈ 16ರಂದು ಸಂಜೆ, ಕಕ್ಯಪದವು ನಿವಾಸಿ 21 ವರ್ಷದ ಲಾವಣ್ಯ ಅವರು ತಮ್ಮ ಊರಿಗೆ ತೆರಳಲು ಬಿ.ಸಿ.ರೋಡ್‌ನ KSRTC ಬಸ್ ನಿಲ್ದಾಣದಲ್ಲಿ ಬಸ್‌ ಹತ್ತಿ ಕುಳಿತಿದ್ದರು. ಈ ವೇಳೆ ಬೆಳ್ತಂಗಡಿ […]

ಲಾವಣ್ಯ ಹತ್ಯೆ ಪ್ರಕರಣ ಆರೋಪಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕಡಬದ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 01.  ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಸುದಾನ  ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್  ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.   ಸುಹಾನ್ ಎಂ ಆರ್, ಸುಶಾಂತ್ ಎಂ ಆರ್, ಕಾಶಿಶ್ ಪಿ.ವಿ ಗೌಡ ಹಾಗೂ ಅನ್ವಿತ್ ಯು ತಂಡದಲ್ಲಿದ್ದರು. 8ನೇ ತರಗತಿಯ 14ರ ವಯೋಮಾನದ ಆಯ್ಕೆ

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಕಡಬದ ಸೈoಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಎಸ್.ಐ.ಆರ್: ಜಿಲ್ಲೆಯಲ್ಲಿ 16.23 ಲಕ್ಷ ಫಾರಂ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 30ರ ವರೆಗೆ 18,03,766 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 16,23,857 ಫಾರ್ಮ್‍ಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ 215784, ಮೂಡಬಿದ್ರೆ 192083, ಮಂಗಳೂರು ನಗರ ಉತ್ತರ 216899, ಮಂಗಳೂರು ನಗರ ದಕ್ಷಿಣ 201614, ಮಂಗಳೂರು 194887, ಬಂಟ್ವಾಳ 208198,

ಎಸ್.ಐ.ಆರ್: ಜಿಲ್ಲೆಯಲ್ಲಿ 16.23 ಲಕ್ಷ ಫಾರಂ ಡಿಜಿಟೈಸ್ Read More »

ಕರ್ನಾಟಕ

ಅಂಬೇಡ್ಕರ್ ಓದು ವಿಶಿಷ್ಟ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಗೋಕರ್ಣನಾಥೇಶ್ವರ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಅಂಬೇಡ್ಕರ್ ಓದು ಕಾರ್ಯಕ್ರಮವು ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕ ಪ್ರೊ.ಮೋಹನ್ ಎಸ್. ಸಿಂಘೆ ಮಾತನಾಡಿ,  ಅಂಬೇಡ್ಕರ್ ಅವರ ಜೀವನ ಸಾಧನೆಯನ್ನು ವಿವರಿಸಿ ಅವರು ಹೆಚ್ಚಿನ ಸಮಯವನ್ನು ಓದಿನಲ್ಲಿ  ಕಳೆಯುತ್ತಿದ್ದರು. ಪುಸ್ತಕ ಉತ್ತಮ ಸಂಗಾತಿ, ಸಾಧ್ಯವಾದಷ್ಟು ನಾವು ಮೂಲ ಕೃತಿಯನ್ನು ಓದಬೇಕು. ಅಂಬೇಡ್ಕರ್ ಅವರ ಛಲ,

ಅಂಬೇಡ್ಕರ್ ಓದು ವಿಶಿಷ್ಟ ಕಾರ್ಯಕ್ರಮ Read More »

ಕರಾವಳಿ

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 2026-27ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿವೇತನ ಸೌಲಭ್ಯವನ್ನು ಪಡೆಯಲು ವೆಬ್‍ಸೈಟ್ https://ssp.postmatric.karnataka.gov.in/ ಮೂಲಕ ಆನ್‍ ಲೈನ್‍ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹತೆಗಳು: ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸ್‍ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ Read More »

ಕರಾವಳಿ

ಪಿಲಿಕುಳ ಆಯುಕ್ತ ಶ್ರೀಕಾಂತ್ ರಾವ್ ನಿವೃತ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ. ಶ್ರೀಕಾಂತ್ ರಾವ್ ಅವರು ಜುಲೈ 31 ರಂದು ಸರ್ಕಾರಿ ಸೇವೆಯಿಂದ ನಿವೃತ್ತರಾದರು. ತಮ್ಮ ಸೇವಾ ಅವಧಿಯಲ್ಲಿ ನೀಡಿದ ಸಹಕಾರಕ್ಕಾಗಿ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿ, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರವು ಇನ್ನಷ್ಟು ಪ್ರಗತಿಯನ್ನು ಸಾಧಿಸಲಿ ಎಂದು ಶುಭ ಹಾರೈಸಿದರು. ಬಳಿಕ ಅಧಿಕಾರಿ ವರ್ಗ ಮತ್ತು ಸಿಬ್ಬಂದಿಗಳು ಅವರನ್ನು ಸನ್ಮಾನಿಸಿ, ಸ್ಮರಣಿಕೆ ನೀಡಿ ಬೀಳ್ಕೊಟ್ಟರು.

ಪಿಲಿಕುಳ ಆಯುಕ್ತ ಶ್ರೀಕಾಂತ್ ರಾವ್ ನಿವೃತ್ತಿ Read More »

ಕರಾವಳಿ

ರಸ್ತೆ ಬದಿ ಕಸ ಎಸೆತ: ರೂ.10 ಸಾವಿರ ದಂಡ ವಿಧಿಸಿದ ಗ್ರಾಮ ಪಂಚಾಯತ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈರಂಗಳ ಗ್ರಾಮದ ಮುಡಿಪು ಮುಖ್ಯ ರಸ್ತೆಯಲ್ಲಿರುವ ಅಂಗಡಿಯು ಪ್ಲಾಸ್ಟಿಕ್ ಕಸವನ್ನು ರಸ್ತೆ ಬದಿ ಎಸೆದು ಬೆಂಕಿ ಹಾಕಿ ಸುಟ್ಟಿರುವ  ಪ್ರಕರಣಕ್ಕೆ ರೂ. 10 ಸಾವಿರ  ದಂಡ ವಿಧಿಸಲಾಗಿದೆ. ಪ್ಲಾಸ್ಟಿಕ್ ಕಸ ಮತ್ತು ಇತರ ಕಸವನ್ನು ಅಂಗಡಿಯ ಎದುರು ಸುಡುತ್ತಿದ್ದು, ಗ್ರಾಮ ಪಂಚಾಯತ್ ಅಂಗಡಿ ಮಾಲಕರಿಗೆ ರೂ. 10 ಸಾವಿರ ದಂಡ ವಿಧಿಸಿದೆ. ದಂಡ ಪಾವತಿ ತಪ್ಪಿದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯತ್ ಅಭಿವೃದ್ಧಿ

ರಸ್ತೆ ಬದಿ ಕಸ ಎಸೆತ: ರೂ.10 ಸಾವಿರ ದಂಡ ವಿಧಿಸಿದ ಗ್ರಾಮ ಪಂಚಾಯತ್ Read More »

ಕರಾವಳಿ

ಸುಳ್ಯ ತಾಲೂಕಿನಾದ್ಯಂತ ವಿಪರೀತ ಮಳೆ ಬಾಳುಗೋಡು ಸೇತುವೆ ಮುಳುಗಡೆ

(ನ್ಯೂಸ್ ಕಡಬ) newskadaba.com ಜು. 31. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಾದ್ಯಂತ ಇಂದು ಮಧ್ಯಾಹ್ನದ ನಂತರ ಭಾರೀ ಗಾಳಿ ಮಳೆಯಾಗಿದ್ದು, ಹಲವೆಡೆ ಮಳೆರಾಯ ಅಬ್ಬರಿಸಿದ್ದಾನೆ. ಸುಬ್ರಹ್ಮಣ್ಯ, ಬಾಳುಗೋಡು, ಹರಿಹರ, ಬಲ್ಪ, ಗುತ್ತಿಗಾರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಗ್ರಾಮೀಣ ಪ್ರದೇಶದ ಹೊಳೆಗಳು, ತೋಡುಗಳು ಭರ್ತಿಯಾಗಿ ತುಂಬಿ ಹರಿಯುತ್ತಿವೆ. ಶುಕ್ರವಾರ ಮಧ್ಯಾಹ್ನದ ನಂತರ ಮಳೆಯು ಸುದೀರ್ಘ ಗಂಟೆಗಳ ಕಾಲ ಸುರಿದ ಕಾರಣ ತಗ್ಗು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಹಠಾತ್ತನೆ ಏರಿಕೆಯಾಗಿದೆ. ಪ್ರಮುಖವಾಗಿ ಬಾಳುಗೋಡಿನಲ್ಲಿ ಈ

ಸುಳ್ಯ ತಾಲೂಕಿನಾದ್ಯಂತ ವಿಪರೀತ ಮಳೆ ಬಾಳುಗೋಡು ಸೇತುವೆ ಮುಳುಗಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಕ್ವಿಟ್ ಇಂಡಿಯಾ ದಿನಾಚರಣೆ ಪ್ರಯುಕ್ತ ಆಗಸ್ಟ್ 9 ರಂದು ಧ್ವಜಾರೋಹಣ ಕಾರ್ಯಕ್ರಮ ನಗರದ ಟಾಗೋರ್ ಪಾರ್ಕ್‍ನ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಬೆಳಿಗ್ಗೆ 9:30ಕ್ಕೆ ನಡೆಯಲಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 10 ಗಂಟೆಗೆ  ಕ್ವಿಟ್ ಇಂಡಿಯಾ ಸ್ಪರ್ಧೆಗಳು ನಡೆಯಲಿದೆ. 79 ನೇ ಸ್ವಾತಂತ್ರ್ಯ ದಿನಾಚರಣೆಯ  ಧ್ವಜಾರೋಹಣ ಕಾರ್ಯಕ್ರಮ  ಆಗಸ್ಟ್ 15 ರಂದು ಟಾಗೋರ್ ಪಾರ್ಕ್‍ ನ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಬೆಳಿಗ್ಗೆ 9:50 ಕ್ಕೆ ನಡೆಯಲಿದೆ. ಸಭಾ ಕಾರ್ಯಕ್ರಮ

ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನಾಚರಣೆ Read More »

ಕರಾವಳಿ

ವಿಬಿ-ಜಿ ರಾಮ್ –ಜಿ ವಿಶೇಷ ಮಾಹಿತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಮನೆ-ಮನೆ ಭೇಟಿ ಮೂಲಕ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗದವರ ಜಾತಿ ಪ್ರಮಾಣ ಪತ್ರ ಹಂಚಿಕೆ ಮಾಡುವ ಕಾರ್ಯ ಈಗಾಗಲೇ ಪ್ರಾರಂಭವಾಗಿದ್ದು, ಈ ನಿಟ್ಟಿನಲ್ಲಿ ಗ್ರಾಮಕ್ಕೆ ಸಂಬಂಧಿಸಿದಂತೆ ಒಕ್ಕೂಟದ ಸದಸ್ಯರು ಈ ಕಾರ್ಯದಲ್ಲಿ ಸಹಕರಿಸಬೇಕು ಎಂದು ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ತಿಳಿಸಿದರು. ಅವರು  ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ವಿಬಿ-ಜಿ ರಾಮ್ –ಜಿ ವಿಶೇಷ ಮಾಹಿತಿ ಕಾರ್ಯಕ್ರಮ ಹಾಗೂ

ವಿಬಿ-ಜಿ ರಾಮ್ –ಜಿ ವಿಶೇಷ ಮಾಹಿತಿ ಕಾರ್ಯಕ್ರಮ Read More »

ಕರ್ನಾಟಕ
Scroll to Top