Noojibalthila

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಸೆ. 06. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಫಕೀರ ಎಂಬವರ ಮನೆಯು ಸಂಪೂರ್ಣ ನೆಲಸಮಗೊಂಡ ಘಟನೆ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಬಲಾಡಿ ಪಂಜಳ ಎಂಬಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಗ್ರಾಮಕರಣಿಕ ಸಂತೋಷ್, ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ಗುರುವ ಎಸ್, ಗ್ರಾಮ ಪಂಚಾಯತ್ ಸದಸ್ಯರಾದ ವಸಂತ ಕುಬಲಾಡಿ ಗ್ರಾಮ ಸಹಾಯಕ ಗ್ರಾಮ ಪಂಚಾಯತ್ ಸಿಬ್ಬಂದಿ ಭೇಟಿ ನೀಡಿದ್ದರು.

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಾಳೆ (ಡಿ.17) ಕಡಬಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಮಾನ್ಯ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ   ರವರು ನಾಳೆ (ಡಿ.17) ಪೂರ್ವಾಹ್ನ 11 ಘಂಟೆಗೆ ಕಡಬ ತಾಲೂಕು ಕಚೇರಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆಕೊಳ್ಳಬೇಕೆಂದು ಕಡಬ ತಹಶೀಲ್ದಾರ್ ಅನಂತ ಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ನಾಳೆ (ಡಿ.17) ಕಡಬಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

ಕರ್ನಾಟಕ ಬಂದ್ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ➤ ಎಂದಿನಂತೆ ಜನಜೀವನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್ ಗೆ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.   ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟು ಎಂದಿನಂತಿವೆ. ಜಿಲ್ಲೆಯ ಯಾವುದೇ ಸಂಘಟನೆಗಳು ಇಂದಿನ ಬಂದ್ ಗೆ ಬೆಂಬಲ ಸೂಚಿಸಿಲ್ಲ. ಖಾಸಗಿ, ಸರಕಾರಿ ಬಸ್, ಆಟೋ ಮತ್ತಿತರ ವಾಹನಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಕೊರೊನಾದಿಂದಾಗಿ ದುಡಿಮೆ ಇಲ್ಲದೆ ಕಂಗೆಟ್ಟ ಹೋಟೆಲ್

ಕರ್ನಾಟಕ ಬಂದ್ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ➤ ಎಂದಿನಂತೆ ಜನಜೀವನ Read More »

ಕರಾವಳಿ

ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಕರಿಂದ ಪಾಠ!➤ ಮಕ್ಕಳ ಕಲಿಕಾ ಕೇಂದ್ರವಾದ ದೇವಸ್ಥಾನ, ಚರ್ಚ್, ಮಸೀದಿ, ಮಂದಿರಗಳು

(ನ್ಯೂಸ್ ಕಡಬ) newskadaba.com ಕಡಬ: ಆ.12,.ಕೊರೊನಾ ಪರಿಣಾಮ ಶಾಲೆಗಳನ್ನು ತೆರೆಯಲು ಅಸಾಧ್ಯವಾದ ಈ ಸಂದರ್ಭದಲ್ಲಿ ಕಡಬ ತಾಲೂಕಿನ ನೂಜಿಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಿಕ್ಷಕರೇ ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಪಾಠ ಹೇಳಿ ಕೊಡುತ್ತಿದ್ದಾರೆ. ನೂಜಿಬಾಳ್ತಿಲ ಕ್ಲಸ್ಟರ್ ವ್ಯಾಪ್ತಿಯ ಶಾಲೆಯ ಮಕ್ಕಳನ್ನು ಒಟ್ಟು ಸೇರಿಸಿ, ಊರಿನ ದೇವಸ್ಥಾನ, ಚರ್ಚ್, ಮಸೀದಿ, ಮಂದಿರ, ಯುವಕ ಮಂಡಲಗಳ ಕಟ್ಟಡಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಾಠ ಕಲಿಸಲಾಗುತ್ತಿದೆ. ಇದಕ್ಕೆ ಮಕ್ಕಳು, ಪೋಷಕರು ಸಹಕಾರ ನೀಡುತ್ತಿದ್ದು, ಉತ್ತಮ ರೀತಿಯಲ್ಲಿ ಕಲಿಕೆ ಸಾಗುತ್ತಿದೆ ಎಂದು ಅಧಿಕಾರಿಗಳು

ವಿದ್ಯಾರ್ಥಿಗಳ ಮನೆ ಮನೆಗೆ ತೆರಳಿ ಶಿಕ್ಷಕರಿಂದ ಪಾಠ!➤ ಮಕ್ಕಳ ಕಲಿಕಾ ಕೇಂದ್ರವಾದ ದೇವಸ್ಥಾನ, ಚರ್ಚ್, ಮಸೀದಿ, ಮಂದಿರಗಳು Read More »

ಕರಾವಳಿ

ನೂಜಿಬಾಳ್ತಿಲ: ಮನೆಯ ಗೋಡೆ ಕುಸಿತ ➤ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ: ಆ.09,. ನಿರಂತರ ಮಳೆಯಿಂದಾಗಿ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯ ಸೋಮಶೇಖರ ಅವರ ಮನೆಯ ಗೋಡೆ ಕುಸಿದು ನಷ್ಟ ಸಂಭವಿಸಿದ ಘಟನೆ ಶನಿವಾರ ನಡೆದಿದೆ. ಬಾರೀ ಮಳೆ ಸುರಿಯುತ್ತಿರುವುದರಿಂದ ಮನೆಯ ಸುತ್ತಲಿನ ಗೋಡೆಗಳೆಲ್ಲ ನೆನೆದು ಕುಸಿದು ಬಿದ್ದಿದೆ. ಆದರೆ ಕುಸಿತದ ಶಬ್ದಕ್ಕೆ ಮನೆ ಮಂದಿ ಹೊರಗಡೆ ಬಂದಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನೂಜಿಬಾಳ್ತಿಲ: ಮನೆಯ ಗೋಡೆ ಕುಸಿತ ➤ ಪ್ರಾಣಾಪಾಯದಿಂದ ಪಾರು Read More »

ಕರಾವಳಿ

ಕಲ್ಲುಗುಡ್ಡೆ: ಬುಡ ಸಮೇತ ಉರುಳಿ ಬಿದ್ದ ಹಲಸಿನ ಮರ ➤ ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಆ.8., ಭಾರೀ ಗಾಳಿ, ಮಳೆಗೆ ಹಲಸಿನ ಮರವೊಂದು ಉರುಳಿಬಿದ್ದು, ಮನೆ ಹಾಗೂ ವಿದ್ಯುತ್ ಲೈನ್‍ಗೆ ಹಾನಿಯುಂಟಾದ ಘಟನೆ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆ ಸಮೀಪ ಗುರುವಾರ ರಾತ್ರಿ ಸಂಭವಿಸಿದೆ. ಕಲ್ಲುಗುಡ್ಡೆ ಕಾಂತಪ್ಪ ಅಜಿಲ ಎಂಬವರ ಮನೆ ಬಳಿಯ ಹಲಸಿನ ಮರ ಬುಡ ಸಮೇತ ಉರುಳಿ ಬಿದ್ದಿದ್ದು, ಮನೆಯ ಒಂದು ಭಾಗಕ್ಕೆ ಹಾನಿಯಾಗಿ, ವಿದ್ಯುತ್ ಲೈನ್ ಮೇಲೆ ಮರ ಬಿದ್ದಿದೆ ಇದರಿಂದ ವಿದ್ಯುತ್ ಸಂಪರ್ಕದಲ್ಲೂ ವ್ಯತ್ಯಯಗೊಂಡಿತ್ತು. ಸ್ಥಳಕ್ಕೆ ಕಂದಾಯ ಇಲಾಖೆಯವರು ಬಂದು ಪರಿಶೀಲನೆ

ಕಲ್ಲುಗುಡ್ಡೆ: ಬುಡ ಸಮೇತ ಉರುಳಿ ಬಿದ್ದ ಹಲಸಿನ ಮರ ➤ ಮನೆಗೆ ಹಾನಿ Read More »

ಕರಾವಳಿ

ನೂಜಿಬಾಳ್ತಿಲ ಗ್ರಾ.ಪಂ. ಆಡಳಿತಾಧಿಕಾರಿ ಭರತ್ ಬಿ.ಎಂ. ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಜು .01. ನೂಜಿಬಾಳ್ತಿಲ ಗ್ರಾ.ಪಂ. ಆಡಳಿತಾವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಆಡಳಿತಾಧಿಕಾರಿಯಾಗಿ ನೇಮಕಗೊಂಡ ಪುತ್ತೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಭರತ್ ಬಿ.ಎಂ. ಅವರು ಸೋಮವಾರ ನಿರ್ಗಮನ ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ ಅವರಿಂದ ಅಧಿಕಾರ ವಹಿಸಿಕೊಂಡರು. ಗ್ರಾ.ಪಂ. ಸದಸ್ಯ ತೋಮಸ್ ಕೆ.ಜೆ., ಸಿಬಂದಿಗಳು ಉಪಸ್ಥಿತರಿದ್ದರು. ಪಿಡಿಒ ಆನಂದ ಎ. ಸ್ವಾಗತಿಸಿ, ಧನರಾಜ್ ವಂದಿಸಿದರು.

ನೂಜಿಬಾಳ್ತಿಲ ಗ್ರಾ.ಪಂ. ಆಡಳಿತಾಧಿಕಾರಿ ಭರತ್ ಬಿ.ಎಂ. ಅಧಿಕಾರ ಸ್ವೀಕಾರ Read More »

ಕರಾವಳಿ

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಶೂ ವಿತರಿಸಿ ಮಕ್ಕಳ ದಿನಾಚರಣೆ ಆಚರಣೆ

 (ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ನ.15  ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ ಚಾಚಾ ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಪುಟಾಣಿಗಳಿಗೆ ಶೂ ವಿತರಣೆ ಹಾಗೂ ಆಟೋಟ ಸ್ಪರ್ದೆಯಲ್ಲಿ ಪುಟಾಣಿಗಳಿಗೆ ಬಹುಮಾನ ವಿತರಣೆ ಮಾಡಿ ಆಚರಿಸಲಾಯಿತು. ಪಂಡಿತ್‍ ಜವಾಹರ್ ಲಾಲ್ ನೆಹರುರವರ ಹುಟ್ಟುಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪುತ್ತೂರು ಸತ್ಯಸಾಯಿ ಸೇವಾಸಮಿತಿ ಕೊಡುಗೆಯಾಗಿ ನೀಡಿದ ಶೂ ವಿತರಿಸಿದಲ್ಲದೆ, ಮಕ್ಕಳ ದಿನಾಚರಣೆ ಅಂಗವಾಗಿ ನಡೆಸಲಾಗಿದ್ದ ಮಕ್ಕಳ ಆಟೋಟ ಸ್ಪರ್ದೆಯಲ್ಲಿ ವಿಜೇತರಾದ ಹಾಗೂ ಭಾಗವಹಿಸಿದ ಎಲ್ಲಾ ಪುಟಾಣಿಗಳಿಗೆ

ಕಲ್ಲುಗುಡ್ಡೆ ಅಂಗನವಾಡಿಯಲ್ಲಿ ಶೂ ವಿತರಿಸಿ ಮಕ್ಕಳ ದಿನಾಚರಣೆ ಆಚರಣೆ Read More »

ಕರಾವಳಿ

ವೇಗದ ನಡಿಗೆಯಲ್ಲಿ ನೂಜಿಬಾಳ್ತಿಲದ ಸ್ವಪ್ನ ರಾಷ್ಟ್ರಮಟ್ಟಕ್ಕೆ

 (ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ನ.14  ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಮಂಡ್ಯ ಇದರ ಆಶ್ರಯದಲ್ಲಿ ಮಂಡ್ಯದ ನೆಲಮಂಗಲದಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ಅಥ್ಲೆಟಿಕ್ ಕ್ರೀಡಾಕೂಟದ 3 ಕಿ.ಮೀ. ವೇಗದ ನಡಿಗೆಯಲ್ಲಿ ನೂಜಿಬಾಳ್ತಿಲ ಬೆಥನಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸ್ವಪ್ನ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ನೂಜಿಬಾಳ್ತಿಲ ಗ್ರಾಮದ ಕುರಿಯಾಳಕೊಪ್ಪ ದಿ. ನಾರಾಯಣ ಹಾಗೂ ಪುಷ್ಪಾ ದಂಪತಿಗಳ ಪುತ್ರಿ. ಇವರಿಗೆ ಸಂಸ್ಥೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಭಟ್

ವೇಗದ ನಡಿಗೆಯಲ್ಲಿ ನೂಜಿಬಾಳ್ತಿಲದ ಸ್ವಪ್ನ ರಾಷ್ಟ್ರಮಟ್ಟಕ್ಕೆ Read More »

ಕರಾವಳಿ

ನೂಜಿಬಾಳ್ತಿಲ ಬೆಥನಿ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

 (ನ್ಯೂಸ್ ಕಡಬ) newskadaba.com  ಕಲ್ಲುಗುಡ್ಡೆ,  ನ.9  ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ಕಾವೂರು ಬಿ.ಜಿ.ಎಸ್. ವಿದ್ಯಾಸಂಸ್ಥೆ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನೂಜಿಬಾಳ್ತಿಲ ಬೆಥನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿತೇಶ್ 3 ಸಾವಿರ ಮೀಟರ್ ಓಟದಲ್ಲಿ ಪ್ರಥಮ, 1500 ಮೀಟರ್ ಓಟದಲ್ಲಿ ದ್ವಿತೀಯ, ಸ್ವಪ್ನ 3 ಕಿ.ಮೀ. ವೇಗದ ನಡಿಗೆಯಲ್ಲಿ ಪ್ರಥಮ ಸ್ಥಾನ, ಸೌಮ್ಯ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಉಷಾ 600 ಮೀಟರ್

ನೂಜಿಬಾಳ್ತಿಲ ಬೆಥನಿ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ Read More »

ಕರಾವಳಿ
Scroll to Top