Noojibalthila

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭವಾದ ಮದ್ಯದಂಗಡಿ ► ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಸುಪ್ರೀಂ ಕೋರ್ಟ್ ಆದೇಶದನ್ವಯ ನೆಲ್ಯಾಡಿ ಹೆದ್ದಾರಿ ಬದಿಯಲ್ಲಿನ ಬಾರನ್ನು ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಸ್ಥಳೀಯರು ಕಡಬ ತಹಶಿಲ್ದಾರ್ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರದಂದು ನಡೆದಿದೆ. ಕಲ್ಲುಗುಡ್ಡೆಯಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಬಾರನ್ನು ತೆರೆಯಲು ಕೆಲವರು ತೆರೆಮರೆಯಲ್ಲಿ ಕಸರತ್ತು ನಡೆಸಿ, ಊರವರು ಕಡಬದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲೇ ಕಲ್ಲುಗುಡ್ಡೆಯಲ್ಲಿ ಸೋಮವಾರದಂದು ಬೆಳಿಗ್ಗೆ ಪೊಲೀಸ್ ರಕ್ಷಣೆಯಲ್ಲಿ ಮದ್ಯದಂಗಡಿಯನ್ನು ತೆರೆಯಲಾಯಿತು. ವಿಷಯ ತಿಳಿದ‌ ಪ್ರತಿಭಟನಾಕಾರರು ಅಬಕಾರಿ […]

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭವಾದ ಮದ್ಯದಂಗಡಿ ► ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ Read More »

ಕರಾವಳಿ

ಪ್ರತಿಭಾಕಾರಂಜಿ ಸ್ಪರ್ಧೆ ► ಸಾಂತೋಮ್ ವಿಧ್ಯಾನಿಕೇತನ ವಿಧ್ಯಾರ್ಥಿಗಳ ಸಾಧನೆ

(ನ್ಯೂಸ್ ಕಡಬ) newskadaba.com ಕಡಬ,ಸೆ.02, ದ.ಕ.ಜಿ.ಪ.ಹಿ.ಪ್ರಾ.ಶಾಲೆ ನೂಜಿ ಬಾಳ್ತಿಲದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯ ವಿವಿಧ ಸ್ಪರ್ಧೆಯಲ್ಲಿ ರೆಂಜಿಲಾಡಿಯ ಸಾಂತೋಮ್ ವಿಧ್ಯಾನಿಕೇತನ ವಿಧ್ಯಾರ್ಥಿಗಳು ಜಯ ಗಳಿಸಿರುತ್ತಾರೆ. ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ ಶಾಲೆಯ ವಿದ್ಯಾರ್ಥಿಗಳು 10 ಪ್ರಥಮ, 6 ದ್ವಿತೀಯ , 11 ತೃತೀಯ ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.

ಪ್ರತಿಭಾಕಾರಂಜಿ ಸ್ಪರ್ಧೆ ► ಸಾಂತೋಮ್ ವಿಧ್ಯಾನಿಕೇತನ ವಿಧ್ಯಾರ್ಥಿಗಳ ಸಾಧನೆ Read More »

ಕರಾವಳಿ

ವಲಯಮಟ್ಟದ ಚದುರಂಗ ಆಟ ► ಕಡಬ ಸೈಂಟ್ ಆನ್ಸ್‌ ಆಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.31. ನೂಜಿಬಾಳ್ತಿಲ ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ವಲಯಮಟ್ಟದ ಚದುರಂಗ ಆಟದಲ್ಲಿ ಕಡಬ ಸೈಂಟ್ ಆನ್ಸ್‌ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. 17ರ ವಯೋಮಿತಿಯಲ್ಲಿ ನಡೆದ ಚದುರಂಗ ಆಟದಲ್ಲಿ  ದಿಲೀಪ್ ಕುಮಾರ್ ಆರ್ 4ನೇ ಸ್ಥಾನ, ಜಿತೇಶ್ ಕುಮಾರ್.ಎಸ್ 5ನೇ ಸ್ಥಾನ ಪಡೆದುಕೊಂಡಿರುತ್ತಾರೆ. 14ರ ವಯೋಮಿತಿಯಲ್ಲಿ ಅಭಿನವ್ ಪಿ.ಎಸ್ ಪ್ರಥಮ, ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಮನೀಶ್ ರೈ ದ್ವಿತೀಯ ಸ್ಥಾನ, ಹುಡುಗಿಯರ ವಿಭಾಗದಲ್ಲಿ

ವಲಯಮಟ್ಟದ ಚದುರಂಗ ಆಟ ► ಕಡಬ ಸೈಂಟ್ ಆನ್ಸ್‌ ಆಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ Read More »

ಕರಾವಳಿ

ಗೋಳಿಯಡ್ಕ ಧರ್ಮಶಿಖರದಲ್ಲಿ ಗಣೇಶೋತ್ಸವ ಸಂಭ್ರಮ ► ಶೋಭಾಯಾತ್ರೆ

(ನ್ಯೂಸ್ ಕಡಬ) newskadaba.com ಕಡಬ, ಆ.31. ರೆಂಜಿಲಾಡಿ ನೂಜಿಬಾಳ್ತಿಲ ಗ್ರಾಮದ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 21ನೇ ವರ್ಷದ ಶ್ರೀ ಗಣೇಶೋತ್ಸವ ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರದಲ್ಲಿ ನಡೆಯಿತು. ಬೆಳಿಗ್ಗೆ ಸುಪ್ರಭಾತ, ಗಣಹೋಮ, ಶ್ರೀ ಮಹಾಗಣಪತಿ ದೇವರ ಪ್ರತಿಷ್ಟೆ, ಭಜನಾಕಾರ್ಯಕ್ರಮ ನಡೆದು ಬಳಿಕ ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಸಂಜೆ ಓಕುಳಿ ಏಲಂ ಬಳಿಕ ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರದ ಎದುರು ಅಶ್ವಥ ಕಟ್ಟೆಯಲ್ಲಿ ಶ್ರೀದೇವರ ಪೂಜೆ ನಡೆಸಲಾಯಿತು. ಗೋಳಿಯಡ್ಕದಿಂದ

ಗೋಳಿಯಡ್ಕ ಧರ್ಮಶಿಖರದಲ್ಲಿ ಗಣೇಶೋತ್ಸವ ಸಂಭ್ರಮ ► ಶೋಭಾಯಾತ್ರೆ Read More »

ಕರಾವಳಿ

ನೂಜಿಬಾಳ್ತಿಲ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

(ನ್ಯೂಸ್ ಕಡಬ) newskadaba.com ಕಡಬ, ಆ .22, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ನೂಜಿಬಾಳ್ತಿಲ ಶಾಲಾಭಿವೃದ್ದಿ ಸಮಿತಿ, ಶಾಲಾ ಮೇಲುಸ್ತುವಾರಿ ಸಮಿತಿ ವತಿಯಿಂದ ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2017-18 ನೂಜಿಬಾಳ್ತಿಲ ಉ.ಹಿ.ಪ್ರಾ.ಶಾಲೆಯಲ್ಲಿ ಸೋಮವಾರ ನಡೆಯಿತು. ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್ ದೀಪ ಪ್ರಜ್ವಲನಗೊಳಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ಇಂದು ಇಲ್ಲಿ ಬೆಳಗಿಸಿದ ಜ್ಯೋತಿಯಂತೆ ಈ ಕ್ಲಸ್ಟರ್ ಮಟ್ಟದ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಬೆಳಕಾಗಲಿ

ನೂಜಿಬಾಳ್ತಿಲ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ಕರಾವಳಿ

ನೂಜಿಬಾಳ್ತಿಲ: 33ನೇ ವರ್ಷದ ಕೃಷ್ಣ ಜನ್ಮಾಷ್ಟಮಿ

(ನ್ಯೂಸ್ ಕಡಬ) newskadaba.com ಕಡಬ, ಆ .15, ನೂಜಿಬಾಳ್ತಿಲ ಉ.ಹಿ.ಪ್ರಾ.ಶಾಲಾ ವಠಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವು ಸೋಮವಾರ ನಡೆಯಿತು. ಬೆಳಿಗ್ಗೆ ನೂಜಿಶ್ರೀ ಉಳ್ಳಾಲ್ತಿ ದೈವಸ್ಥಾನದ ಅರ್ಚಕರಾದ ಕೃಷ್ಣ ಹೆಬ್ಬಾರ್ ಪೂಜಾವಿಧಿವಿಧಾನಗಳನ್ನು ನಡೆಸಿದರು. ಕಡಬ ಮೆಸ್ಕಾಂ ಸಿಬ್ಬಂದಿ ರವಿ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ನೂಜಿಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಸದಾನಂದ ಗೌಡ, ನೂಜಿಬಾಳ್ತಿಲ ಉ.ಹಿ.ಪ್ರಾ.ಶಾಲಾ ಮುಖ್ಯೋಪಧ್ಯಾಯ ಶ್ರೇಯಾಂಸ್, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಮೋನಪ್ಪ ಗೌಡ ಅರಿಮಜಲು, ಗ್ರಾ.ಪಂ.ಸದಸ್ಯ ರಾಮಚಂದ್ರ ಗೌಡ ಶುಭಹಾರೈಸಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಹರೀಶ್ ಗೌಡ

ನೂಜಿಬಾಳ್ತಿಲ: 33ನೇ ವರ್ಷದ ಕೃಷ್ಣ ಜನ್ಮಾಷ್ಟಮಿ Read More »

ಕರಾವಳಿ

ನೂಜಿಬಾಳ್ತಿಲ ಗ್ರಾ.ಪಂ. PDO ಅರಂತೋಡಿಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಕಡಬ, ಆ.03. ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿ ಕಳೆದ ಮೂರು ವರ್ಷದಿಂದ ಕಾರ್ಯನಿರ್ವಹಿಸುತ್ತಿರುವ ಜಯಪ್ರಕಾಶ್ ರವರಿಗೆ ವರ್ಗಾವಣೆಯಾಗಿದ್ದು ನೂಜಿಬಾಳ್ತಿಲ ಪಂಚಾಯತಿಗೆ ಕಡಬ ಗ್ರಾ.ಪಂ.ನಲ್ಲಿ ಕಾರ್ಯದರ್ಶಿಯಾಗಿರುವ ಆನಂದ ಎ.ರವರನ್ನು ಪ್ರಭಾರ ಅಭಿವೃದ್ದಿ ಅಧಿಕಾರಿಯಾಗಿ ನೇಮಕಗೊಳಿಸಲಾಗಿದೆ. ಕಳೆದ 3 ವರ್ಷದಿಂದ ನೂಜಿಬಾಳ್ತಿಲದಲ್ಲಿ ಅಭಿವೃದ್ದಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಯಪ್ರಕಾಶ್ ಎಂ.ರವರು ಸುಳ್ಯ ತಾಲೂಕಿನ ಆರಂತೋಡು ಪಂಚಾಯತಿಗೆ ವರ್ಗಾವಣೆಗೊಂಡಿದ್ದಾರೆ. ಬುಧವಾರದಂದು ಗ್ರಾ.ಪಂ.ನಲ್ಲಿ ಪ್ರಭಾರ ಅಭಿವೃದ್ದಿ ಅಧಿಕಾರಿಯವರಿಗೆ ಅಧಿಕಾರ ಹಸ್ತಾಂತರಿಸಲಾಯಿತು.  

ನೂಜಿಬಾಳ್ತಿಲ ಗ್ರಾ.ಪಂ. PDO ಅರಂತೋಡಿಗೆ ವರ್ಗಾವಣೆ Read More »

ಕರಾವಳಿ

ಗದ್ದಲದಲ್ಲಿ ನಡೆದ ನೂಜಿಬಾಳ್ತಿಲ ಗ್ರಾಮ ಸಭೆ ► ಕಲ್ಲುಗುಡ್ಡೆಯಲ್ಲಿ ಮದ್ಯದಂಗಡಿ ತೆರೆಯುವುದಕ್ಕೆ ವ್ಯಾಪಕ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ಜು.18. ಇಲ್ಲಿಗೆ ಸಮೀಪದ ನೂಜಿಬಾಳ್ತಿಲ ಗ್ರಾಮ ಸಭೆಯು ಕಲ್ಲುಗುಡ್ಡೆಯಲ್ಲಿ ನೂತನವಾಗಿ ಆರಂಭವಾಗಲಿರುವ ಮದ್ಯದಂಗಡಿ ವಿರೋಧಿಸಿ ಹಲವು ಗದ್ದಲದ ನಡುವೆ ಮಂಗಳವಾರದಂದು ನೂಜಿಬಾಳ್ತಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹೆದ್ದಾರಿ ಬದಿಯಲ್ಲಿನ ಬಾರ್ ಗಳನ್ನು ಮುಚ್ಚಬೇಕೆನ್ನುವ ಸುಪ್ರೀಂ ಕೋರ್ಟಿನ ಆದೇಶದ ಹಿನ್ನೆಲೆಯಲ್ಲಿ ನೆಲ್ಯಾಡಿಯಲ್ಲಿನ ಬಾರನ್ನು ಕಲ್ಲುಗುಡ್ಡೆಗೆ ವರ್ಗಾಯಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಜನಪ್ರತಿನಿಧಿಗಳು, ಅಧಿಕಾರಿಗಳು ಕಲ್ಲುಗುಡ್ಡೆಯಲ್ಲಿ ಮದ್ಯದಂಗಡಿ ತೆರೆಯುವುದಕ್ಕೆ ಗ್ರಾಮಸ್ಥರ ವಿರೋಧ ಇರುವುದರಿಂದ

ಗದ್ದಲದಲ್ಲಿ ನಡೆದ ನೂಜಿಬಾಳ್ತಿಲ ಗ್ರಾಮ ಸಭೆ ► ಕಲ್ಲುಗುಡ್ಡೆಯಲ್ಲಿ ಮದ್ಯದಂಗಡಿ ತೆರೆಯುವುದಕ್ಕೆ ವ್ಯಾಪಕ ಆಕ್ರೋಶ Read More »

ಕರಾವಳಿ
Scroll to Top