ಕಲ್ಲುಗುಡ್ಡೆ: ಮದ್ಯದಂಗಡಿ ವಿರೋಧಿಸಿ ಜಮಾಯಿಸಿದ ಗ್ರಾಮಸ್ಥರು ► ನಾಳೆ ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕಡಬ, ಸೆ.10. ಸುಪ್ರೀಂ ಕೋರ್ಟ್ ಆದೇಶದನ್ವಯ ನೆಲ್ಯಾಡಿ ಹೆದ್ದಾರಿ ಬದಿಯಲ್ಲಿನ ಬಾರನ್ನು ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಸ್ಥಳೀಯರು ಜಮಾಯಿಸಿದ್ದು, ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರಿಂದ ಪರಿಸ್ಥಿತಿ ಶಾಂತವಾದ ಘಟನೆ ಭಾನುವಾರ ಸಂಜೆ ಕಲ್ಲುಗುಡ್ಡೆಯಲ್ಲಿ ನಡೆದಿದೆ. ಕಲ್ಲುಗುಡ್ಡೆಯಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಬಾರನ್ನು ತೆರೆಯಲು ಕೆಲವರು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದ್ದು, ಅದರಂತೆ ಶನಿವಾರ ತಡರಾತ್ರಿ ಮದ್ಯವನ್ನು ದಾಸ್ತಾನು ಮಾಡಲಾಗಿದೆ ಎಂದು ಸ್ಥಳೀಯರು ಆರೋಪಿಸಿ ಭಾನುವಾರ ಸಂಜೆ ವೇಳೆ […]

