Padubidri

Death, deadbody, Waterfall

ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ) newskadaba.com ಡಿ.30: ಇಬ್ಬರು ಯುವಕರು ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿರುವ ಘಟನೆ ಹೆಜಮಾಡಿಯ ಅಮಾಸಕರಿಯ ಬಳಿ ನಡೆದಿದೆ. ಮೃತರನ್ನು ಅಮ್ಮಾನ್ (17), ಅಕ್ಷಯ್ (20) ಎಂದು ಗುರುತಿಸಲಾಗಿದೆ. ಇಂದು(ಸೋಮವಾರ) ಮಧ್ಯಾಹ್ನದ ವೇಳೆ ಸಮುದ್ರದ ಅಲೆಗೆ ಸಿಲುಕಿ ಯುವಕರು ಸಮುದ್ರ ಪಾಲಾಗಿದ್ದರು. ಕೂಡಲೇ ಅವರನ್ನು ಸ್ಥಳೀಯರು ಮೇಲೆಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಿದ್ದಾದರೂ, ಯುವಕರು ಮೃತಪಟ್ಟಿದ್ದಾರೆ. ಇನ್ನೊರ್ವ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರು ಮೃತ್ಯು Read More »

ಕರಾವಳಿ

ಕಾಣಿಕೆ ಡಬ್ಬಿಗೆ ಕನ್ನ- ನಗದು ಕಳವು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಆ. 30. ಶ್ರೀ ನಾರಾಯಣ ಗುರು ಮಂದಿರದ ಕಿಟಿಕಿಯ ಮರದ ಮೂರು ದಳಿಗಳನ್ನು ಮುರಿದು ಒಳಗೆ ಪ್ರವೇಶಿಸಿದ ಕಳ್ಳರು ಮಂದಿರದ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿದ್ದ ಸುಮಾರು 15,000 ರೂ. ನಗದನ್ನು ಕಳವುಗೈದಿರುವ ಘಟನೆ ಮುದರಂಗಡಿ ಎಂಬಲ್ಲಿ ನಡೆದಿದೆ. ಮಂಗಳವಾರದಂದು ಬೆಳಗ್ಗೆ ಅರ್ಚಕ ಆನಂದ ಪೂಜಾರಿ ಮಂದಿರಕ್ಕೆ ಬಂದಾಗ ಕಳ್ಳತನ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಪಡುಬಿದ್ರಿ ಪೊಲೀಸರಿಗೆ ದೂರು ನೀಡಲಾಗಿದೆ.

ಕಾಣಿಕೆ ಡಬ್ಬಿಗೆ ಕನ್ನ- ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ತಾಯಿಯ 11ನೇ ದಿನದ ತಿಥಿ ವಿಧಿ ವಿಧಾನದ ಬಳಿಕ ಮಕ್ಕಳಿಬ್ಬರು ಮೃತ್ಯು.!!!

(ನ್ಯೂಸ್ ಕಡಬ) newskadaba.com ಪಡುಬಿದ್ರಿ: ಜು.25., ತಾಯಿ ಮೃತಪಟ್ಟ 11ನೇ ದಿನಕ್ಕೆ ಇನ್ನಿಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಉಡುಪಿಯ ಪಡುಬಿದ್ರಿಯಲ್ಲಿ ನಡೆದಿದೆ. o ಪಡುಬಿದ್ರಿಯ ದಿ.ವೆಂಕಟರಾಯ ಆಚಾರ್ಯ ಅವರ ಪತ್ನಿ ವಾರಿಜಾಕ್ಷಿ ಆಚಾರ್ಯ (80) ನಿಧನ ಹೊಂದಿದ್ದರು. ಜುಲೈ 22ರ ಬುಧವಾರದಂದು 11ನೇ ದಿನದ ತಿಥಿ ವಿಧಿ ವಿಧಾನಗಳು ನಡೆದು ಕೆಲ ಗಂಟೆಗಳಲ್ಲಿ ಮಕ್ಕಳ ಪೈಕಿ ಹಿರಿಯ ಮಗನಾದ ಉದಯ ಆಚಾರ್ಯ(55) ಎಂಬವರು ಮಧ್ಯಾಹ್ನದ ಊಟ ಮುಗಿಸಿ 4 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದರು.

ತಾಯಿಯ 11ನೇ ದಿನದ ತಿಥಿ ವಿಧಿ ವಿಧಾನದ ಬಳಿಕ ಮಕ್ಕಳಿಬ್ಬರು ಮೃತ್ಯು.!!! Read More »

ಕರಾವಳಿ

ಮಹಾಮಾರಿ ಕೊರೊನಾಗೆ ಪಡುಬಿದ್ರಿ ವ್ಯಕ್ತಿ ಬಲಿ ➤ ಅಬುಧಾಬಿಯಲ್ಲಿ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಮೇ.26.,  ಕಳೆದ 8 ವರ್ಷಗಳಿಂದ ಅಬುಧಾಬಿಯಲ್ಲಿ ಉದ್ಯೋಗ ಮಾಡಿಕೊಂಡಿದ್ದ ಹೆಜಮಾಡಿಯ 44ರ ಹರೆಯದ ವ್ಯಕ್ತಿಯೊಬ್ಬರಿಗೆ‍‍ ಕೋವಿಡ್ ಕಾಯಿಲೆ ಉಲ್ಬಣಿಸಿ ಭಾನುವಾರ ಮೃತಪಟ್ಟಿದ್ದಾರೆ. ಹೆಜಮಾಡಿ ಬ್ರಹ್ಮಸ್ಥಾನ ಬಳಿಯ ಇವರು ಅಬುಧಾಬಿಯಲ್ಲಿ ಉದ್ಯೋಗದಲ್ಲಿದ್ದರು. ವಿಶ್ವದಾದ್ಯಂತ ಕೋವಿಡ್ ಉಲ್ಬಣಿಸಿದ ಪರಿಣಾಮವಾಗಿ ಅವರು ಊರಿಗೆ ಬರಲಾಗಲಿಲ್ಲ. ಉದ್ಯೋಗ ಮಾಡಿಕೊಂಡ ಸ್ಥಳದಲ್ಲಿ ಎರಡು ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಸಂದರ್ಭ ನೆಗೆಟಿವ್‌ ಬಂದಿತ್ತು. ಮೂರನೇ ಬಾರಿಯ ಪರೀಕ್ಷೆ ವೇಳೆ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಸರಕಾರಿ ಸ್ವಾಮ್ಯದ ಶೇಖ್‌ ಖಲೀಫಾ

ಮಹಾಮಾರಿ ಕೊರೊನಾಗೆ ಪಡುಬಿದ್ರಿ ವ್ಯಕ್ತಿ ಬಲಿ ➤ ಅಬುಧಾಬಿಯಲ್ಲಿ ಅಂತ್ಯಕ್ರಿಯೆ Read More »

ಕರಾವಳಿ

ಪಡುಬಿದ್ರೆ: ನಿಂತಿದ್ದ ಲಾರಿಗೆ ಟೆಂಪೊ ಢಿಕ್ಕಿ ► ಓರ್ವ ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಆ.19. ಠಾಣಾ ವ್ಯಾಪ್ತಿಯ ಎರ್ಮಾಳು ರಾಷ್ಟ್ರೀಯ ಹೆದ್ದಾರಿಯ ಸಮೀಪದ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಲಾರಿಗೆ ಮೀನು ಸಾಗಾಟದ ಟೆಂಪೊ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ‌. ಮಂಗಳೂರಿನಿಂದ ಉಡುಪಿ ಕಡೆಗೆ ಮೀನು ಸಾಗಿಸುತ್ತಿದ್ದ ಈಚರ್ ಟೆಂಪೊ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿದ್ದ ಇನ್ನೊಂದು ಲಾರಿಯ ಚಾಲಕ ಮೃತಪಟ್ಟಿದ್ದು, ಟೆಂಪೊ ಚಾಲಕ ಸೇರಿ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಪಡುಬಿದ್ರೆ: ನಿಂತಿದ್ದ ಲಾರಿಗೆ ಟೆಂಪೊ ಢಿಕ್ಕಿ ► ಓರ್ವ ಮೃತ್ಯು, ಮೂವರು ಗಂಭೀರ Read More »

ಕರ್ನಾಟಕ
Scroll to Top