pejavara shree

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ► ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ (ನ್ಯೂಸ್ ಕಡಬ) newskadaba.com ಉಡುಪಿ, ಆ.20. ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಪೇಜಾವರ ಶ್ರೀಗಳಾದ ವಿಶ್ವೇಶ ತೀರ್ಥ ಶ್ರೀಪಾದರು ಭಾನುವಾರ ಹರ್ನಿಯ ಶಸ್ತ್ರಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ವಿಶೇಷವೆಂದರೆ ಆಸ್ಪತ್ರೆಯ ಹೊರಗೆ ಪೇಜಾವರ ಬ್ಲಿಡ್ ಡೊನೇಟ್ ತಂಡದ ಮುಸ್ಲಿಂ ಸದಸ್ಯರು ಶ್ರೀಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕು ಎಂದು ವಿಶೇಷ ಪ್ರಾರ್ಥನೆ ನಡೆಸಿದ್ದಾರೆ. ವಾರದ ಕಾಲ ಮಠದಲ್ಲಿ ಪೂಜಾ ಕೈಂಕರ್ಯಗಳನ್ನು ಕಿರಿಯ ಶ್ರೀಗಳು ನೆರವೇರಿಸಲಿದ್ದಾರೆ. ಇದುವರೆಗೆ ಆರೋಗ್ಯ […]

ಪೇಜಾವರ ಶ್ರೀ ಆಸ್ಪತ್ರೆಗೆ ದಾಖಲು ► ಮುಸ್ಲಿಮರಿಂದ ವಿಶೇಷ ಪ್ರಾರ್ಥನೆ Read More »

ಕರ್ನಾಟಕ

ಇಂದು ಪೇಜಾವರ ಶ್ರೀಗೆ ಹರ್ನಿಯಾ ಶಸ್ತ್ರಚಿಕಿತ್ಸೆ

(ನ್ಯೂಸ್ ಕಡಬ) newskadaba.com ಉಡುಪಿ, ಆ.19. ಉಡುಪಿ ಕೃಷ್ಣಮಠದ ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರಿಗೆ ಇಂದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಹರ್ನಿಯಾದ ಶಸ್ತ್ರಚಿಕಿತ್ಸೆ ನಡೆಯಲಿದೆ. ಪೇಜಾವರ ಶ್ರೀಗಳು ಪ್ರಸ್ತುತ 2016 ರ ಜ.18 ರಿಂದ 2 ವರ್ಷಗಳ ಕೃಷ್ಣನ ಪೂಜೆಯ ಪರ್ಯಾಯ ಅಧಿಕಾರ ನಡೆಸುತ್ತಿದ್ದು, ಸಂಪ್ರದಾಯದಂತೆ 2 ವರ್ಷಗಳ ಕಾಲ ಪರ್ಯಾಯ ಶ್ರೀಗಳು ಕೃಷ್ಣ ಮಠವನ್ನು ಬಿಟ್ಟು ಹೊರಗೆ ಹೋಗುವಂತಿಲ್ಲ. ಆದರೆ ಇದು ತೀವ್ರ ಆರೋಗ್ಯದ ಸಮಸ್ಯೆಯಾದ್ದರಿಂದ ಪೇಜಾವರ ಶ್ರೀಗಳು ಆಸ್ಪತ್ರೆಗೆ ಹೋಗಲೇಬೇಕಾಗಿದೆ.

ಇಂದು ಪೇಜಾವರ ಶ್ರೀಗೆ ಹರ್ನಿಯಾ ಶಸ್ತ್ರಚಿಕಿತ್ಸೆ Read More »

ಕರ್ನಾಟಕ

ಆಯತಪ್ಪಿ ಬಿದ್ದು ಗಾಯಗೊಂಡ ಪೇಜಾವರ ಶ್ರೀ ►ಗಾಯದ ನಡುವೆಯೂ ದೈನಂದಿನ ಚಟುವಟಿಕೆಗಳಲ್ಲಿ ತಲ್ಲೀನರಾದ ಶ್ರೀಗಳು

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 28. ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಬುಧವಾರ ಗರ್ಭಗುಡಿಯಲ್ಲಿ ಕಾಲು ಜಾರಿ ಬಿದ್ದ ಪರಿಣಾಮ ಭುಜಕ್ಕೆ ಗಾಯವಾಗಿರುವ ಬಗ್ಗೆ ವರದಿಯಾಗಿದೆ. ಬುಧವರ ಪೂಜೆ ನೆರವೇರಿಸಿ ಹಿಂತಿರುಗುವಾಗ ಪೇಜಾವರ ಶ್ರೀ ಆಯತಪ್ಪಿ ಬಿದ್ದರೆನ್ನಲಾಗಿದೆ. ಇದರಿಂದ ಅವರ ಭುಜಕ್ಕೆ ಗಾಯವಾಗಿದ್ದು, ಬಲಭುಜದ ಚರ್ಮ ಕಿತ್ತು ಹೋಗಿದೆ‌. ತಕ್ಷಣವೇ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿ ವಿಶ್ರಾಂತಿ ತೆಗೆದುಕೊಳ್ಳಲು ಸಲಹೆ ನೀಡಿದ್ದರೂ, ಶ್ರೀಗಳು ತನ್ನ ದೈನಂದಿನ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ ಎನ್ನಲಾಗಿದೆ.

ಆಯತಪ್ಪಿ ಬಿದ್ದು ಗಾಯಗೊಂಡ ಪೇಜಾವರ ಶ್ರೀ ►ಗಾಯದ ನಡುವೆಯೂ ದೈನಂದಿನ ಚಟುವಟಿಕೆಗಳಲ್ಲಿ ತಲ್ಲೀನರಾದ ಶ್ರೀಗಳು Read More »

ಕರ್ನಾಟಕ
Scroll to Top