ಸಂಪೂರ್ಣ ಹದಗೆಟ್ಟಿರುವ ಕಾಯರಡ್ಕ – ಪೆರಿಯಶಾಂತಿ ರಸ್ತೆ ದುರಸ್ತಿಗೆ ಆಗ್ರಹ ► ನಾಳೆ ‘ನೀತಿ ತಂಡ’ದಿಂದ ಸಾರ್ವಜನಿಕ ಭಿಕ್ಷಾಟನೆ
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.13. ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚಿಲಂಪಾಡಿಯ ಕಾಯರಡ್ಕ- ಪೆರಿಯಶಾಂತಿ ನಡುವಿನ ಎರಡು ಕಿಮೀ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ರಸ್ತೆ ಕಾಮಗಾರಿಗೆ ಆಗ್ರಹಿಸಿ ಇಚಿಲಂಪಾಡಿಯ ನೀತಿ ತಂಡದ ವತಿಯಿಂದ ಡಿಸೆಂಬರ್ 14 ಗುರುವಾರದಂದು ಸಾರ್ವಜನಿಕ ಭಿಕ್ಷಾಟನೆ ನಡೆಸಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ನೀತಿ ತಂಡದ ರಾಜ್ಯಾಧ್ಯಕ್ಷರಾದ ಜಯನ್ ಟಿ. ತಿಳಿಸಿದ್ದಾರೆ. ಈ ರಸ್ತೆಯ ಅವ್ಯವಸ್ಥೆ ಬಗ್ಗೆ ನೀತಿ ತಂಡವು ಸಾರ್ವಜನಿಕರ ಸಹಕಾರದೊಂದಿಗೆ 2017 ಮಾರ್ಚ್ 22 […]

