ಫರಂಗಿಪೇಟೆ: ದಿಗಂತ್ ನಾಪತ್ತೆ ಪ್ರಕರಣದ ತನಿಖೆಗೆ ಸಂಬಂದಿಸಿ ಎಸ್ಪಿ ನೇತೃತ್ವದ 7 ತಂಡಗಳ ರಚನೆ-ಸಚಿವ ಮಧು ಬಂಗಾರಪ್ಪ
(ನ್ಯೂಸ್ ಕಡಬ) newskadaba.com ಮಾ. 05 ಫರಂಗಿಪೇಟೆ: ಫರಂಗಿಪೇಟೆಯಲ್ಲಿ ನಾಪತ್ತೆಯಾಗಿರುವ ಪಿಯು ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ವಿಚಾರ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಬುಧವಾರ ಪ್ರಸ್ತಾಪವಾಯಿತು. ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್, ತನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಫೆ.25ರಿಂದ ನಾಪತ್ತೆಯಾಗಿರುವ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ತನಿಖೆ ಏನಾಯಿತು? ಆತನ ಪತ್ತೆಗೆ ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ? ಎಂದು ಪ್ರಶ್ನಿಸಿದರು. ದಿಗಂತ್ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಸರಕಾರಕ್ಕೆ ಸೂಚಿಸಿದರು. ಈ ವೇಳೆ ರಾಜ್ಯ ಗೃಹಸಚಿವರ ಅನುಪಸ್ಥಿತಿಯಲ್ಲಿ ಪ್ರತಿಕ್ರಿಯೆ ನೀಡಿದ […]

