Pm narendra modi

ಇಂದು ಉಡುಪಿಗೆ ಪ್ರದಾನಿ ನರೇಂದ್ರ ಮೋದಿ ಆಗಮನ: ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ

(ನ್ಯೂಸ್‌ ಕಡಬ) newskadaba.com,  ನ.28: ಇಂದು ಕೃಷ್ಣನಗರಿ ಉಡುಪಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿದ್ದಾರೆ.   ಪ್ರಧಾನಿ ಮೋದಿ ಸ್ವಾಗತಕ್ಕೆ ಕೃಷ್ಣನಗರಿ ಉಡುಪಿ ಸಜ್ಜಾಗಿದೆ. ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಿ, ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದ ಮೊದಲ ಮಹಡಿಯಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಿ, ನೂತನವಾಗಿ ನಿರ್ಮಿಸಿದ ಅನಂತಪದ್ಮನಾಭ ದೇವರ ಮೂರ್ತಿಯನ್ನು […]

ಇಂದು ಉಡುಪಿಗೆ ಪ್ರದಾನಿ ನರೇಂದ್ರ ಮೋದಿ ಆಗಮನ: ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಛತ್ ಪೂಜೆ – ಪ್ರಧಾನಿ ನರೇಂದ್ರ ಮೋದಿ ವಿಶೇಷ ಮನವಿ

(ನ್ಯೂಸ್‌ ಕಡಬ) newskadaba.com,  ಅ..24 : ಛತ್ ಪೂಜೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ವಿಶೇಷ ಮನವಿ ಮಾಡಿದ್ದಾರೆ. ಪ್ರಕೃತಿ ಮತ್ತು ಸಂಸ್ಕೃತಿಗೆ ಮೀಸಲಾಗಿರುವ ಭವ್ಯ ಹಬ್ಬವಾದ ಛತ್ ಸಮೀಪಿಸುತ್ತಿದೆ. ಬಿಹಾರ ಹಾಗೂ ದೇಶಾದ್ಯಂತ ಭಕ್ತರು ಈಗಾಗಲೇ ಭಕ್ತಿಯಿಂದ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಛತ್ ಪೂಜೆಗೆ ಸಮರ್ಪಿತವಾದ ಹಾಡುಗಳನ್ನು ನನ್ನೊಂದಿಗೆ ಹಂಚಿಕೊಳ್ಳಿ, ಮುಂದಿನ ದಿನಗಳಲ್ಲಿ ನಾನು ಅವುಗಳನ್ನು ದೇಶವಾಸಿಗಳೊಂದಿಗೆ ಹಂಚಿಕೊಳ್ಳುತ್ತೇನೆ ಎಂದು ಮೋದಿ ವಿನಂತಿಸಿದ್ದಾರೆ. ಛತ್ ಪೂಜೆ ಹಿಂದೂ ಹಬ್ಬವಾಗಿದ್ದು, ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ ಮತ್ತು

ಛತ್ ಪೂಜೆ – ಪ್ರಧಾನಿ ನರೇಂದ್ರ ಮೋದಿ ವಿಶೇಷ ಮನವಿ Read More »

ಬ್ರೇಕಿಂಗ್ ನ್ಯೂಸ್

75 ಗಂಟೆಗಳಲ್ಲಿ 303 ಮಾವೋವಾದಿಗಳು ಶರಣು; ನಕ್ಸಲ್ ಮುಕ್ತ ಭಾರತದ ಭರವಸೆ ನೀಡಿದ ಮೋದಿ

(ನ್ಯೂಸ್‌ ಕಡಬ) newskadaba.com,  ಅ.18: ಕಳೆದ 24 ಗಂಟೆಗಳಲ್ಲಿ 300 ಕ್ಕೂ ಹೆಚ್ಚು ಮಾವೋವಾದಿಗಳು ಶರಣಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ರಾತ್ರಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದಾರೆ. ನಕ್ಸಲರು ಶಾಲೆಗಳು ಅಥವಾ ಆಸ್ಪತ್ರೆಗಳನ್ನು ನಿರ್ಮಿಸಲು ಬಿಡುತ್ತಿರಲಿಲ್ಲ. ವೈದ್ಯರನ್ನು ಚಿಕಿತ್ಸಾಲಯಗಳಿಗೆ ಪ್ರವೇಶಿಸಲು ಬಿಡುತ್ತಿರಲಿಲ್ಲ ಸಂಸ್ಥೆಗಳಿಗೆ ಬಾಂಬ್ ಹಾಕುತ್ತಿದ್ದರು. ಮಾವೋವಾದಿ ಭಯೋತ್ಪಾದನೆಯಿಂದ ಯುವಜನರಿಗೆ ಮಾಡಿದ ಅನ್ಯಾಯವಾಗುತ್ತಿತ್ತು. ನಾನು ಉದ್ರೇಕಗೊಳ್ಳುತ್ತಿದ್ದೆ, ಇದೇ ಮೊದಲ ಬಾರಿಗೆ ನನ್ನ ನೋವನ್ನು ಜಗತ್ತಿಗೆ ವ್ಯಕ್ತಪಡಿಸುತ್ತಿದ್ದೇನೆ ಎಂದು ಅವರು ಹೇಳಿದರು. ಈಗ, 303 ನಕ್ಸಲರು ಶರಣಾಗಿದ್ದಾರೆ

75 ಗಂಟೆಗಳಲ್ಲಿ 303 ಮಾವೋವಾದಿಗಳು ಶರಣು; ನಕ್ಸಲ್ ಮುಕ್ತ ಭಾರತದ ಭರವಸೆ ನೀಡಿದ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟೋಕಿಯೋಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್‌ ಕಡಬ) newskadaba.com, ಆ.29: ಭಾರತ ಹಾಗೂ ಜಪಾನ್‌ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಟೋಕಿಯೋಗೆ ತೆರಳಿದ್ದಾರೆ. ಪ್ರಧಾನಿ ಮೋದಿ ಅವರನ್ನು ನೋಡಲು ಭಾರತೀಯ ವಲಸಿಗರು ಕಾತುರದಿಂದ ಕಾದು ಕುಳಿತಿದ್ದರು. ಇಂದು ಪ್ರಧಾನಿ ಮೋದಿ ಅವರು ಜಪಾನ್‌ ಪ್ರಧಾನಿ ಶಿಗೇರು ಇಶಿಬಾ ಅವರನ್ನು ಭೇಟಿಯಾಗಲಿದ್ದಾರೆ. 2 ದಿನಗಳ ದೇಶ ಭೇಟಿಯ ವೇಳೆ ಪ್ರಧಾನಿಯವರು ಟೋಕಿಯೋದಲ್ಲಿ ಜಪಾನ್‌ನ ಕೈಗಾರಿಕೋದ್ಯಮಿಗಳು ಹಾಗೂ ರಾಜಕೀಯ ನಾಯಕರನ್ನು ಕೂಡ ಭೇಟಿ ಮಾಡಲಿದ್ದಾರೆ. ಮೋದಿಯವರ ಎರಡು ದಿನಗಳ ಭೇಟಿಯ ವೇಳೆ

ಟೋಕಿಯೋಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಇಂದು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ ಶುಭಾಂಶು ಶುಕ್ಲಾ

(ನ್ಯೂಸ್‌ ಕಡಬ) newskadaba.com, ಆ.18: ಆಕ್ಸಿಯಂ-4 ಮಿಷನ್‌ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ಕೊಟ್ಟ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಶುಭಾಂಶು ಶುಕ್ಲಾ ಅವರು, ಭೂಮಿಗೆ ಮರಳಿದ ನಂತರ ಮೊದಲ ಬಾರಿಗೆ ತಾಯ್ನಾಡು ಭಾರತಕ್ಕೆ ಮರಳಿದ್ದಾರೆ. ಶುಭಾಂಶು ಶುಕ್ಲಾ ಅವರು ಇಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಪ್ರಧಾನಿ ಮೋದಿ

ಇಂದು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ ಶುಭಾಂಶು ಶುಕ್ಲಾ Read More »

ರಾಷ್ಟ್ರೀಯ ನ್ಯೂಸ್

ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್‌ ನೀಡುತ್ತೇವೆ: ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.15: ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಉಡುಗೊರೆ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದಾರೆ. 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಈ ವರ್ಷ ಜಿಎಸ್‌ಟಿ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ತಿಳಿಸಿದರು. ಈ ದೀಪಾವಳಿಯ ವೇಳೆಗೆ ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಹಾಗೂ ನಮ್ಮ ಆರ್ಥಿಕತೆಯನ್ನು ಬಲಪಡಿಸುವ ಹೊಸ ಸರಳೀಕೃತ ಜಿಎಸ್‌ಟಿ ರಚನೆಯನ್ನು ನೀವು ಕಾಣುತ್ತೀರಿ. ಈ ಬದಲಾವಣೆಗಳು ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ.

ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್‌ ನೀಡುತ್ತೇವೆ: ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.15:‌ ದೇಶಾದ್ಯಂತ ಇಂದು ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣಕ್ಕೂ ಮುನ್ನ ಪ್ರಧಾನಿ ಮೋದಿ ಅವರು ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು. ಬಳಿಕ ಧ್ವಜಾರೋಹಣಕ್ಕೆ ಕೆಂಪುಕೋಟೆಗೆ ಆಗಮಿಸಿದರು. ಪ್ರಧಾನಿ ಮೋದಿ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸ್ವಾಗತಿಸಿದರು. ನಂತರ ಪ್ರಧಾನಿ ಮೋದಿ ಅವರು ಧ್ವಜಾರೋಹಣ ನೇರವೇರಿಸಿದರು. ಈ ವೇಳೆ

ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ರೈತರ ಹಿತಾಸಕ್ತಿ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳಲ್ಲ: ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.07: ರೈತರ ಹಿತಾಸಕ್ತಿ ನಮ್ಮ ಪ್ರಮುಖ ಆದ್ಯತೆಯಾಗಿದೆ. ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಗಳ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಸವಾಲೆಸೆದಿದ್ದಾರೆ. ದೆಹಲಿಯಲ್ಲಿ ನಡೆದ ಎಂಎಸ್ ಸ್ವಾಮಿನಾಥನ್ ಶತಮಾನೋತ್ಸವ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ರೈತರು ಮತ್ತು ಮೀನುಗಾರರ ಹಿತಾಸಕ್ತಿಗಳ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಹಾಗೂ ಇದಕ್ಕಾಗಿ ನಾನು ವೈಯುಕ್ತಿವಾಗಿ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ನನಗೆ

ರೈತರ ಹಿತಾಸಕ್ತಿ ಬಗ್ಗೆ ಭಾರತ ಎಂದಿಗೂ ರಾಜಿ ಮಾಡಿಕೊಳ್ಳಲ್ಲ: ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕಕ್ಕೆ ಬರಲಿದೆ ಮತ್ತೊಂದು ವಂದೇ ಭಾರತ್‌ ರೈಲು

(ನ್ಯೂಸ್‌ ಕಡಬ) newskadaba.com, ಆ.06:‌ ಬೆಂಗಳೂರು–ಬೆಳಗಾವಿ ನೂತನ ವಂದೇ ಭಾರತ್‌ ರೈಲು ಸೇರಿದಂತೆ ಒಟ್ಟು 3 ವಂದೇ ಭಾರತ್‌ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ. ಆ.10ರಂದು ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ಪ್ರಧಾನಿ ಮೋದಿ ಅವರು ಬೆಂಗಳೂರು–ಬೆಳಗಾವಿ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರು ಇದೇ

ಕರ್ನಾಟಕಕ್ಕೆ ಬರಲಿದೆ ಮತ್ತೊಂದು ವಂದೇ ಭಾರತ್‌ ರೈಲು Read More »

ಕರ್ನಾಟಕ

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com , ಏ.03: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ತಂದೆ-ತಾಯಿ ಜತೆಗೆ ನಿನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಪ್ರತಿಕ್ರಿಯಿಸಿರುವ ಸಂಸದ ಕ್ಯಾ ಚೌಟ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನನ್ನ ಹೆತ್ತವರ ಜತೆಗೆ ಭೇಟಿ ಮಾಡುವ ಅವಕಾಶ ಲಭಿಸಿರುವುದು ಬದುಕಿನಲ್ಲಿನ ಬಹಳ ಖುಷಿಯ ಹಾಗೂ ಸಂತೃಪ್ತಿಯ ಭಾವವನ್ನು ಮೂಡಿಸಿದೆ. ಅವರೊಂದಿಗಿನ ಈ ಭೇಟಿ ವೇಳೆ ಹಲವು ವಿಚಾರಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾದ ಸಂಸದ ಕ್ಯಾ.ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top