police officer

ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ. ರೂಪಾ ನೇಮಕ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 15. ಕೆಲ ತಿಂಗಳಿಂದ ಹುದ್ದೆಯ ನಿರೀಕ್ಷೆಯಲ್ಲಿದ್ದ ಡಿ. ರೂಪಾಗೆ ಆಂತರಿಕ ಭದ್ರತಾ ವಿಭಾಗದ(ಐಎಸ್‌ಡಿ) ಐಜಿಪಿ ಹುದ್ದೆಗೆ ನೇಮಿಸಿ ಸರಕಾರ ಆದೇಶಿಸಿದೆ. ಇನ್ನುಳಿದಂತೆ ಮಂಗಳೂರು ಆಯುಕ್ತ ಹುದ್ದೆಯಿಂದ ವರ್ಗಾವಣೆಗೊಂಡಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ಬೆಂಗಳೂರು ನಗರ ಪೂರ್ವ ವಿಭಾಗ (ಸಂಚಾರ) ಡಿಸಿಪಿಯಾಗಿ ನೇಮಿಸಿದೆ. ಶಿವಪ್ರಕಾಶ್ ದೇವರಾಜ್ ರವರಿಗೆ ದಕ್ಷಿಣ ವಿಭಾಗ (ಸಂಚಾರ) ಹುದ್ದೆ ನೀಡಿ ಆದೇಶಿಸಿದೆ.

ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ಡಿ. ರೂಪಾ ನೇಮಕ Read More »

ಕರ್ನಾಟಕ

ಹೃದಯಾಘಾತ- ಕಾವೂರು ಹೆಡ್ ಕಾನ್ಸ್ಟೇಬಲ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 15. ಕಾವೂರು ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕಳೆದ ಎರಡು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ಲಮಾಣಿ (38) ಅವರು ಗುರುವಾರ ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರು ತಮ್ಮ ಊರಾದ ಬಾಗಲಕೋಟೆಗೆ ಹೋಗಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. 2008 ರ ಬ್ಯಾಚ್ ನಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದ ಇವರು ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದವರಾಗಿದ್ದು ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಹೃದಯಾಘಾತ- ಕಾವೂರು ಹೆಡ್ ಕಾನ್ಸ್ಟೇಬಲ್ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top