police

ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.10. ಬೆಂಗಳೂರು ನಗರದಿಂದ ಮೂವರನ್ನು ಅಪಹರಿಸಿ ಇಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರೋ ಘಟನೆ ಚಿಕ್ಕಬಳ್ಳಾಪುರ  ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿರಟೆಗೆರೆ ಗ್ರಾಮದಲ್ಲಿ ನಡೆದಿದೆ. ನೂರ್ ಅಹಮದ್ ಹಾಗೂ ಮುಬಷೀರ್ ಕೊಲೆಯಾದ ದುರ್ದೈವಿಗಳು. ಹಣಕಾಸಿನ ವಿಚಾರದ ಸಂಬಂಧದ ಜಗಳವೇ ಕೊಲೆಗೆ ಕಾರಣ ಎಂದು ತಿಳಿದು ಬಂದಿದೆ. ಜುನೈದ್ ಕೊಲೆಯ ಮೂಲ ಸೂತ್ರಧಾರನಾಗಿದ್ದು ತನ್ನ ಸಹಚರರೊಂದಿಗೆ ನೂರ್ ಅಹಮದ್, ಮುಬಷೀರ್ ಮತ್ತು ಕಾಳು ಎಂಬವರನ್ನು ಬೆಂಗಳೂರು ನಗರದಿಂದ ಅಪಹರಿಸಿ ಕೊಲೆಗೆ ಸಂಚು ರೂಪಿಸಿದ್ದನು. ಈ ಮೂವರನ್ನು ಅಪಹರಿಸಿದ ಜುನೈದ್ […]

ಮೂವರ ಅಪಹರಣ, ಇಬ್ಬರ ಬರ್ಬರ ಹತ್ಯೆ ► ಮಳೆಯಿಂದಾಗಿ ಸಿಕ್ಕಿಬಿದ್ದ ಆರೋಪಿಗಳು Read More »

ಕರ್ನಾಟಕ

ಪುತ್ತೂರು: ಒಂಟಿ ವೃದ್ಧರನ್ನು ಟಾರ್ಗೆಟ್ ಮಾಡಿ ► ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.09. ಒಂಟಿ ವೃದ್ಧರನ್ನು ತನ್ನ ಮಾತಿನ ಮೋಡಿಯಿಂದ ವಂಚಿಸಿ ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯೋರ್ವನನ್ನು ಪುತ್ತೂರು ನಗರ ಪೊಲೀಸರು ಭಾನುವಾರದಂದು ಬಂಧಿಸಿದ್ದಾರೆ. ಆರೋಪಿಯನ್ನು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮರಾಠಿಮೂಲೆ ನಿವಾಸಿ ಸುರೇಶ್ ನಾಯ್ಕ(51) ಎಂದು ಗುರುತಿಸಲಾಗಿದ್ದು, ಬಂಧಿತನಿಂದ ಸುಮಾರು 1.70 ಲಕ್ಷ ರೂ.ವೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ‌. ಆರೋಪಿಯು ವೃದ್ಧರನ್ನೇ ಗುರಿಯಾಗಿರಿಸಿ ಅವರೊಂದಿಗೆ ಪರಿಚಯಸ್ಥನಂತೆ ನಟಿಸಿ, ನಂಬಿಕೆ ಹುಟ್ಟಿಸಿ ಬಳಿಕ ಅವರಿಂದ ಬೆಲೆ ಬಾಳುವ ಸೊತ್ತುಗಳನ್ನು ಎಗರಿಸುತ್ತಿದ್ದನೆನ್ನಲಾಗಿದೆ. ಪುತ್ತೂರು ಹಾಗೂ ಉಪ್ಪಿನಂಗಡಿ ಬಸ್ಸು

ಪುತ್ತೂರು: ಒಂಟಿ ವೃದ್ಧರನ್ನು ಟಾರ್ಗೆಟ್ ಮಾಡಿ ► ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯ ಬಂಧನ Read More »

ಕರಾವಳಿ

ಮಂಗಳೂರು: ಮೊದಲ ಮಹಿಳಾ ಡಿಸಿಪಿಯಾಗಿ ► ಉಮಾ ಪ್ರಶಾಂತ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.5. ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಅಪರಾಧ ಮತ್ತು ಸಂಚಾರ ವಿಭಾಗದ ಪೊಲೀಸ್ ಉಪ ಆಯುಕ್ತರಾಗಿ ಉಮಾ ಪ್ರಶಾಂತ್ ನೇಮಕಗೊಂಡಿದ್ದು, ಇವರು ಮೊದಲ ಮಹಿಳಾ ಡಿಸಿಪಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಂಗಳೂರು ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಹನುಮಂತರಾಯರಿಂದ ತೆರವಾಗಿದ್ದ ಸ್ಥಾನಕ್ಕೆ ಉಮಾ ಪ್ರಶಾಂತ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹನುಮಂತ್ ಈಗ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದಾರೆ. ಮೂಲತ: ಮೈಸೂರಿನವರಾದ ಉಮಾ ಅವರು

ಮಂಗಳೂರು: ಮೊದಲ ಮಹಿಳಾ ಡಿಸಿಪಿಯಾಗಿ ► ಉಮಾ ಪ್ರಶಾಂತ್ ನೇಮಕ Read More »

ಕರಾವಳಿ

ಉಳ್ಳಾಲ: ಯುವಕರಿಬ್ಬರಿಗೆ ಚೂರಿ ಇರಿತ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.03. ಮುಸುಕುಧಾರಿಗಳ ತಂಡವೊಂದು ಯುವಕರಿಬ್ಬರ ಮೇಲೆ ತಲವಾರಿನಿಂದ ದಾಳಿ ನಡೆಸಿದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಉಳ್ಳಾಲ ಸಮೀಪದ ಮುಕ್ಕಚ್ಚೇರಿ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಜುಬೈರ್ ಎಂದು ಗುರುತಿಸಲಾಗಿದ್ದು, ಜತೆಗಿದ್ದ ಇಲ್ಯಾಸ್ ಎಂಬವರ ಕೈ, ಕಾಲು ಸೇರಿದಂತೆ ಹಲವೆಡೆ ಇರಿಯಲಾಗಿದೆ. ದುಷ್ಕರ್ಮಿಗಳ ದಾಳಿಗೆ ಒಳಗಾದ ಜುಬೈರ್ ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ‌. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ

ಉಳ್ಳಾಲ: ಯುವಕರಿಬ್ಬರಿಗೆ ಚೂರಿ ಇರಿತ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ Read More »

ಕರಾವಳಿ

ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಅವಹೇಳನ ► ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ದೂರು

(ನ್ಯೂಸ್ ಕಡಬ) newskadabacom ಪುತ್ತೂರು, ಅ.01. ಸಾಮಾಜಿಕ ಜಾಲತಾಣಗಳಲ್ಲಿ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಬಗ್ಗೆ ಅವಹೇಳನಕಾರಿಯಾಗಿ ಸಂದೇಶ ಕಳುಹಿಸಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ನಗರ ಠಾಣೆಗೆ ದೂರು ನೀಡಲಾಗಿದೆ. ಸಂತೋಷ್ ಉಪ್ಪುರ್ ಎನ್ನುವ ವ್ಯಕ್ತಿ ಕೊರಗಜ್ಜನ ಬಗ್ಗೆ ತನ್ನ ಫೇಸ್‌ಬುಕ್‌ ವಾಲ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು, ಅದನ್ನು ಏಂಜೆಲ್ ನಯನ ಪ್ರಜ್ವಲ್ ಮತ್ತು ಕುಂಜತ್ತುಮೊಯಿದಿನ್ ಕುಂಜತ್ತೂರು ಎಂಬವರು ಶೇರ್ ಮಾಡಿ ಕಮೆಂಟ್ಸ್ ಮಾಡಿರುತ್ತಾರೆ. ಕೊರಗಜ್ಜನನ್ನು ನಿಂದಿಸಿದ ಇವರ ಮೇಲೆ

ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಅವಹೇಳನ ► ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ದೂರು Read More »

ಕರಾವಳಿ

ಮಂಗಳೂರು: ಗಾಂಜಾ ಮಾರಾಟ ಆರೋಪಿಯ ಸೆರೆ ► 7,000 ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು..!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.26. ತಲಪಾಡಿ ಗ್ರಾಮದ ತಚ್ಚಾಣಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಶೇಖರ್‌ ಯಾನೆ ಕ್ಯಾಮು (32) ನನ್ನು  ಸೋಮವಾರ ಇಕೊನಮಿಕ್ ಅಂಡ್‌‌ ನಾರ್ಕೊಟಿಕ್ ಕ್ರೈಂ ಪೊಲೀಸ್ ಠಾಣಾ ಪೊಲೀಸರು ಬಂಧಿಸಿ 7,000 ರೂ. ಮೌಲ್ಯದ 433 ಗ್ರಾಂ ಗಾಂಜಾ, ವಶಪಡಿಸಿಕೊಂಡಿದ್ದಾರೆ. ಈತನನ್ನು ಕೇರಳ ಮೂಲದ ಮಂಜೇಶ್ವರ ತೂಮಿನಾಡು ಸಮೀಪದ ಕಣ್ವತೀರ್ಥದ ಶೇಖರ್‌ ಯಾನೆ ಕ್ಯಾಮು (32) ಎಂದು ಗುರುತಿಸಲಾಗಿದೆ. ಈತ ತಲಪಾಡಿ ಗ್ರಾಮದ ತಚ್ಚಾಣಿ ಎಂಬಲ್ಲಿ ಗಾಂಜಾದೊಂದಿಗೆ ಇರುವ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ

ಮಂಗಳೂರು: ಗಾಂಜಾ ಮಾರಾಟ ಆರೋಪಿಯ ಸೆರೆ ► 7,000 ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು..!!! Read More »

ಕರಾವಳಿ

ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ ದಾವೂದ್ ಇಬ್ರಾಹಿಂ ► ಕಾರಣ ಯಾರು ಗೊತ್ತೆ…???

(ನ್ಯೂಸ್ ಕಡಬ) newskadaba.com ಮುಂಬೈ,ಸೆ.21. ಭೂಗತ ದೊರೆ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದಾನೆ ಎಂಬ ಆಘಾತಕಾರಿ ಸತ್ಯ ಸಹೋದರ ಇಕ್ಬಾಲ್ ಕಸ್ಕರ್ ಬಾಯ್ಬಿಟ್ಟಿದ್ದಾನೆ. ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್‍ನನ್ನು 8 ದಿನಗಳ ಕಾಲ ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತನ ವಿಚಾರಣೆ ವೇಳೆ ಹಲವಾರು ಸಂಗತಿಗಳು ಬಹಿರಂಗಗೊಂಡಿದೆ. ಡಿ ಕಂಪೆನಿ ಮುಖ್ಯಸ್ಥನಾದ ದಾವೂದ್ ಪಶ್ಚಿಮ ಮತ್ತು ಪೂರ್ವ ಆಫ್ರಿಕಾ ರಾಷ್ಟ್ರಗಳಲ್ಲಿ ಹೂಡಿಕೆ ಮಾಡಿದ್ದಾನೆಂದು ತಿಳಿಸಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅಧಿಕಾರಕ್ಕೆ ಬಂದ ನಂತರ ದಾವೂದ್ ಪಾಕಿಸ್ತಾನದಲ್ಲಿ

ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ ದಾವೂದ್ ಇಬ್ರಾಹಿಂ ► ಕಾರಣ ಯಾರು ಗೊತ್ತೆ…??? Read More »

ಕರ್ನಾಟಕ

3 ಕೆಜಿ ಬೆಳ್ಳಿ ಕದ್ದ ನೇಪಾಳಿಗರು ► ಉಡುಪಿ ಪೊಲೀಸರ ಬಲೆಗೆ..!!!

(ನ್ಯೂಸ್ ಕಡಬ) newskadaba.com ಉಡುಪಿ, ಸೆ.20, ಚಿನ್ನದಂಗಡಿಯಿಂದ ಆಭರಣಗಳನ್ನು ಕಳವು ಮಾಡಿದ್ದ ನೇಪಾಳಿಗರನ್ನು ಉಡುಪಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ. ಐದು ಜನ ಕಳ್ಳರನ್ನು ನೇಪಾಲ ಮೂಲದವರು ಎಂದು ಗುರುತಿಸಲಾಗಿದೆ. ಶಿವಾಸಿಂಗ್ ಬಹುದ್ದೂರ್, ಕಮರ್ ಸಿಂಗ್, ರಮೇಶ್ ಸಿಂಗ್ ಪಾರ್ಕಿ, ಹರ್ಕ್ ಬಹುದ್ದೂರ್ ಸೌದ್, ಮತ್ತು ಪ್ರೇಮ್ ಬಹುದ್ದೂರ್ ಸೌದ್ ಬಂಧಿತ ಆರೋಪಿಗಳು. ಬಂಧಿತರಿಂದ 1 ಲಕ್ಷದ 80 ಸಾವಿರ ಮೌಲ್ಯದ 3 ಕೆಜಿ ಬೆಳ್ಳಿಯ ಕಾಲು ಚೈನ್‍ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೈಂದೂರಿನ ಶೀರೂರು ಗೋಲ್ಡ್ ಪ್ಯಾಲೇಸ್ ಜ್ಯುವೆಲ್ಲರಿಯಲ್ಲಿ

3 ಕೆಜಿ ಬೆಳ್ಳಿ ಕದ್ದ ನೇಪಾಳಿಗರು ► ಉಡುಪಿ ಪೊಲೀಸರ ಬಲೆಗೆ..!!! Read More »

ಕರಾವಳಿ

ಬಡಗನ್ನೂರಿನ ಅಪಘಾತದ ಗಾಯಾಳು ವಿಧಿವಶ ► ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಹನುಮಂತಪ್ಪ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.18. ಅಪಘಾತದಲ್ಲಿ ಗಾಯಗೊಂಡಿದ್ದ ಪುತ್ತೂರು ಗ್ರಾಮಾಂತರ ಠಾಣೆಯ ಸಿಬ್ಬಂದಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. 2008ರಲ್ಲಿ ಡಿಎಆರ್ ಗೆ ಸೇರಿ ತದನಂತರ ನಾಗರಿಕ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ಹನುಮಂತಪ್ಪ ಇತ್ತೀಚೆಗೆ ಬಡಗನ್ನೂರಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ನಿಧನರಾದರು.

ಬಡಗನ್ನೂರಿನ ಅಪಘಾತದ ಗಾಯಾಳು ವಿಧಿವಶ ► ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಹನುಮಂತಪ್ಪ ಮೃತ್ಯು Read More »

ಕರಾವಳಿ

ಜಿಂಕೆ ಚರ್ಮ ಮಾರಾಟ ಪ್ರಕರಣ ► ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.14. ಜಿಂಕೆ ಚರ್ಮವನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆಯ ವಿಶೇಷ ಸಿಬ್ಬಂದಿ ಹಿಡಿದು ಪೊಲೀಸರ ವಶಕ್ಕೆ ನೀಡಿರುವ ಘಟನೆ ಬನ್ನೇರುಘಟ್ಟದಲ್ಲಿ ಗುರುವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ನಾರಾಯಣಸ್ವಾಮಿ (42) ಮತ್ತು ನಾಗಮಾದ(27) ಎಂದು ಗುರುತಿಸಲಾಗದ. ಇವರಿಬ್ಬರು ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದಾಗ ಅರಣ್ಯ ಇಲಾಖೆಯ ವಿಶೇಷ ದಳದ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಬಂಧಿತರ ಬಳಿಯಿದ್ದ ಜಿಂಕೆ ಚರ್ಮವನ್ನು ಪೊಲೀಸರು ವಶಪಡಿಸಿಕೊಂಡಿದ್ದು,

ಜಿಂಕೆ ಚರ್ಮ ಮಾರಾಟ ಪ್ರಕರಣ ► ಇಬ್ಬರ ಬಂಧನ Read More »

ಕರ್ನಾಟಕ
Scroll to Top