ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ – ಹ್ಯಾಕರ್ ಗಳ ಬಲೆಗೆ ಸಿಲುಕಿದ ಕಡಬದ ಯುವಕ ಚಂದ್ರಶೇಖರ್ ಮನವಿ
(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಯಾವುದೇ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗರೂಕರಾಗಿರಬೇಕು. ಅಗತ್ಯವಿಲ್ಲದೇ ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳುವಾಗ ಎಚ್ಚರಿಕೆ ಅತೀ ಅಗತ್ಯ ಎಂದು ಕಡಬ ತಾಲೂಕಿನ ಐತ್ತೂರು ನಿವಾಸಿ ಚಂದ್ರಶೇಖರ್ ರವರು ಹೇಳಿದರು. ತಾನು ಮಾಡದ ತಪ್ಪಿಗೆ ಸೌದಿ ಅರೇಬಿಯಾದ ರಿಯಾದ್ನಲ್ಲಿ ಸುಮಾರು ಒಂದು ವರ್ಷಗಳ ಕಾಲ ಜೈಲುವಾಸ ಅನುಭವಿಸಿ ತಾಯ್ನಾಡಿಗೆ ವಾಪಾಸಾಗಿರುವ ಅವರು ಗುರುವಾರದಂದು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ರೀತಿ ಮನವಿ ಮಾಡಿದರು. ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿದ ಹ್ಯಾಕರ್ಗಳ […]




