protest

ನಾಲ್ಕನೇ ದಿನಕ್ಕೆ ಮುಂದುವರಿದ ಮದ್ಯದಂಗಡಿ ವಿರೋಧಿ ಹೋರಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ.20. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ಗ್ರಾಮಸ್ಥರ ಪ್ರಬಲ ವಿರೋಧದ ನಡುವೆಯೂ ಸೆಪ್ಟೆಂಬರ್ 11 ರಂದು ಪ್ರಾರಂಭಗೊಂಡ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಭಾನುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಗೊಂಡಿದ್ದು, ಬುಧವಾರದಂದು ತೀವ್ರ ರೂಪದಲ್ಲಿ ಮುಂದುವರಿದಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರವರು ಜಮಾಯಿಸಿ ಮದ್ಯದಂಗಡಿಯ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ. ಶಾಲಾ ವಿದ್ಯಾರ್ಥಿಗಳು ಶಾಲೆಗೆ ಹೋಗದೆ ಇಂದು […]

ನಾಲ್ಕನೇ ದಿನಕ್ಕೆ ಮುಂದುವರಿದ ಮದ್ಯದಂಗಡಿ ವಿರೋಧಿ ಹೋರಾಟ Read More »

ಕರಾವಳಿ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭಗೊಂಡ ವೈನ್ ಶಾಪ್ ► ಮದ್ಯದಂಗಡಿ ಮುಚ್ಚುವಂತೆ ಆಗ್ರಹಿಸಿ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ

(ನ್ಯೂಸ್ ಕಡಬ) newskadaba.com ಕಡಬ, ಸೆ.16. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ಗ್ರಾಮಸ್ಥರ ಪ್ರಬಲ ವಿರೋಧದ ನಡುವೆಯೂ ಕಳೆದ ಸೋಮವಾರದಂದು ಪ್ರಾರಂಭಗೊಂಡ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 17 ಭಾನುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಶನಿವಾರ ಸಂಜೆ ನಡೆದ ಸಭೆಯಲ್ಲಿ ಗ್ರಾಮಸ್ಥರ ತೀವ್ರ ವಿರೋಧವನ್ನು ಗ್ರಾಮಸಭೆಯಲ್ಲಿ ನಿರ್ಣಯಿಸಿ ಕಳುಹಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ

ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭಗೊಂಡ ವೈನ್ ಶಾಪ್ ► ಮದ್ಯದಂಗಡಿ ಮುಚ್ಚುವಂತೆ ಆಗ್ರಹಿಸಿ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ Read More »

ಕರಾವಳಿ

ದೇಯಿಬೈದೆತಿಯ ಅವಹೇಳನ ಆರೋಪಿಗೆ ಸೂಕ್ತ ಶಿಕ್ಷೆಗೆ ಆಗ್ರಹ ► ವಿಹಿಂಪ, ಬಜರಂಗದಳದಿಂದ ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿಬೈದೆತಿಯ ಪುತ್ತಳಿಯ ಸಮೀಪ ಕುಳಿತು ಅಶ್ಲೀಲವಾಗಿ ಫೊಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಡಬ ಪ್ರಖಂಡದ ವತಿಯಿಂದ ಬ್ರಹತ್ ಪ್ರತಿಭಟನೆ ಹಾಗೂ ರಸ್ತೆ ತಡೆಯು ಕಡಬದಲ್ಲಿ ನಡೆಯಿತು. ಇತ್ತೀಚೆಗೆ ಈಶ್ವರ ಮಂಗಲದ ಹನೀಫ್ ಎಂಬಾತ ದೇಯಿಬೈದಿತಿಯ ನೆನಪಿಗೋಸ್ಕರ ಸರಕಾರದಿಂದ ನಿರ್ಮಿಸಲ್ಪಟ್ಟ ದೇಯಿಬೈದಿತಿ ಔಷಧಿ ವನದಲ್ಲಿ

ದೇಯಿಬೈದೆತಿಯ ಅವಹೇಳನ ಆರೋಪಿಗೆ ಸೂಕ್ತ ಶಿಕ್ಷೆಗೆ ಆಗ್ರಹ ► ವಿಹಿಂಪ, ಬಜರಂಗದಳದಿಂದ ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ

ಸಾಮಾಜಿಕ ಜಾಲತಾಣದಲ್ಲಿ ದೇಯಿಬೈದೆತಿಯ ಅವಹೇಳನ ಪ್ರಕರಣ ► ವಿಹಿಂಪ, ಬಜರಂಗದಳದಿಂದ ನಾಳೆ ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.12. ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿಬೈದೆತಿಯ ಪುತ್ತಳಿಯ ಸಮೀಪ ಕುಳಿತು ಅಶ್ಲೀಲವಾಗಿ ಫೊಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾಳೆ (ಸೆಪ್ಟೆಂಬರ್ 13) ಕಡಬದಲ್ಲಿ ಪ್ರತಿಭಟನೆ ನಡೆಯಲಿದೆ. ಇತ್ತೀಚೆಗೆ ಈಶ್ವರ ಮಂಗಲದ ಹನೀಫ್ ಎಂಬಾತ ದೇಯಿಬೈದಿತಿಯ ನೆನಪಿಗೋಸ್ಕರ ಸರಕಾರದಿಂದ ನಿರ್ಮಿಸಲ್ಪಟ್ಟ ದೇಯಿಬೈದಿತಿ ಔಷಧಿ ವನದಲ್ಲಿ ಬೈದೆತಿಯ ಎದೆಯ ಭಾಗವನ್ನು ಮುಟ್ಟಿ ಅಶ್ಲೀಲ ರೀತಿಯಲ್ಲಿ ಫೋಟೊ ತೆಗೆದು ಸಾಮಾಹಿಕ ಜಾಲತಾಣದಲ್ಲಿ

ಸಾಮಾಜಿಕ ಜಾಲತಾಣದಲ್ಲಿ ದೇಯಿಬೈದೆತಿಯ ಅವಹೇಳನ ಪ್ರಕರಣ ► ವಿಹಿಂಪ, ಬಜರಂಗದಳದಿಂದ ನಾಳೆ ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ

ಕಾನೂನು ಉಲ್ಲಂಘಿಸಿ ಜ್ಯೋತಿ ವೃತ್ತದಲ್ಲಿ ಸಮಾವೇಶ ► ಯಡಿಯೂರಪ್ಪ ಸೇರಿ 50 ಮಂದಿಯ ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವಮೋರ್ಚಾ ವತಿಯಿಂದ ನಡೆದ‌ ಮಂಗಳೂರು ಚಲೋ ಕಾರ್ಯಕ್ರಮವನ್ನು ನಗರದ ನೆಹರೂ ಮೈದಾನದಲ್ಲಿ ಮಾಡುವ ಬದಲು ಜ್ಯೋತಿ ಸಮೀಪದ ಅಂಬೇಡ್ಕರ್ ವೃತ್ತದ ಬಳಿ ಸಮಾವೇಶ ಮಾಡಿ ಕಾನೂನನ್ನು ಉಲ್ಲಂಘಿಸಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ 50 ಮಂದಿಯ ವಿರುದ್ಧ ಬಂದರ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿ ಯುವಮೋರ್ಚಾ ಸಮಾವೇಶಕ್ಕೆ ಪೊಲೀಸರು ನೆಹರು ಮೈದಾನದಲ್ಲಿ ಮಾತ್ರ ಅನುಮತಿ ನೀಡಿದ್ದು, ಆದರೆ ಬಿಜೆಪಿಯ ನಾಯಕರು, ಕಾರ್ಯಕರ್ತರು ಈ ಆದೇಶವನ್ನು ಉಲ್ಲಂಘಿಸಿ

ಕಾನೂನು ಉಲ್ಲಂಘಿಸಿ ಜ್ಯೋತಿ ವೃತ್ತದಲ್ಲಿ ಸಮಾವೇಶ ► ಯಡಿಯೂರಪ್ಪ ಸೇರಿ 50 ಮಂದಿಯ ವಿರುದ್ಧ ಕೇಸು ದಾಖಲು Read More »

ಕರಾವಳಿ

ಕಾವ್ಯಾ ಸಾವಿಗೆ ನ್ಯಾಯ ದೊರಕಿಸುವಂತೆ ಆಗ್ರಹ ► ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.09. ಮೂಡಬಿದಿರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ಕಾವ್ಯಾ ಪೂಜಾರಿಯ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿ 30ಕ್ಕೂ ಅಧಿಕ ಸಮಾನ ಮನಸ್ಕ ಸಂಘಟನೆಗಳ ನೇತೃತ್ವದಲ್ಲಿ ‘ಜಸ್ಟೀಸ್ ಫಾರ್ ಕಾವ್ಯಾ’ ಹೋರಾಟ ಸಮಿತಿ ದ.ಕ. ಜಿಲ್ಲೆಯ ವತಿಯಿಂದ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರದಂದು ಬೃಹತ್ ಪ್ರತಿಭಟನೆ ನಡೆಯಿತು. ಜ್ಯೋತಿ ವೃತ್ತದಿಂದ ಡಿಸಿ ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಹಲವು ಕಾಲೇಜುಗಳ ವಿದ್ಯಾರ್ಥಿಗಳು, ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಕಾವ್ಯಾ ಸಾವಿನ ಪ್ರಕರಣದ

ಕಾವ್ಯಾ ಸಾವಿಗೆ ನ್ಯಾಯ ದೊರಕಿಸುವಂತೆ ಆಗ್ರಹ ► ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ Read More »

ಕರಾವಳಿ

ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ಪತ್ತೆಗೆ ಆಗ್ರಹ ► ಹಿಂದೂ ಹಿತರಕ್ಷಣಾ ವತಿಯಿಂದ ನಾಳೆ ಜಿಲ್ಲೆಯಾದ್ಯಂತ ಉಪವಾಸ ಸತ್ಯಾಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಆ.07. ಬಂಟ್ವಾಳ ತಾಲೂಕಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ನಡೆದು ತಿಂಗಳು ಕಳೆದರೂ ಪ್ರಕರಣವನ್ನು ಭೇದಿಸುವಲ್ಲಿ ವಿಫಲವಾದ ರಾಜ್ಯ ಸರಕಾರದ ವಿರುದ್ದ ಅಗೋಸ್ತು. 8 ಮಂಗಳವಾರದಂದು ಹಿಂದೂ ಹಿತರಕ್ಷಣಾ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಯಾದ್ಯಂತ ಏಕಕಾಲದಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದೆ. ಅದರಂತೆ ಸಲುವಾಗಿ ಕಡಬದ ಮುಖ್ಯ ಪೇಟೆಯಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 4 ವರೆಗೆ ಉಪವಾಸ ಸತ್ಯಾಗ್ರಹ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.  

ಆರೆಸ್ಸೆಸ್ ಕಾರ್ಯಕರ್ತ ಶರತ್ ಕೊಲೆ ಪತ್ತೆಗೆ ಆಗ್ರಹ ► ಹಿಂದೂ ಹಿತರಕ್ಷಣಾ ವತಿಯಿಂದ ನಾಳೆ ಜಿಲ್ಲೆಯಾದ್ಯಂತ ಉಪವಾಸ ಸತ್ಯಾಗ್ರಹ Read More »

ಕರಾವಳಿ
Scroll to Top