ಪುತ್ತೂರು: ಬಸ್ಸಿನಿಂದ ಬಿದ್ದು ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 11. ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ವಿದ್ಯಾರ್ಥಿಗಳಿಬ್ಬರು ಗಾಯಗೊಂಡ ಘಟನೆ ಗುರುವಾರದಂದು ಬೆಳಗ್ಗೆ ಪುತ್ತೂರು ನಗರದ ಬೊಳುವಾರಿನಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ವಿವೇಕಾನಂದ ಪಿಯು ಕಾಲೇಜಿನ ಪವನ್ ಕುಮಾರ್ ಮತ್ತು ವಿವೇಕಾನಂದ ಪಾಲಿಟೆಕ್ನಿಕ್ ವಿದ್ಯಾರ್ಥಿ ಗಣೇಶ್ ಎಂದು ಗುರುತಿಸಲಾಗಿದೆ. ಅವರು ಕಾಲೇಜಿಗೆ ಬಸ್‌ನಲ್ಲಿ ಹೋಗುತ್ತಿದ್ದ ವೇಳೆ ಬಸ್‌ನಲ್ಲಿ ಪ್ರಯಾಣಿಕರು ತುಂಬಿದ್ದು, ಬಸ್ಸಿನ ಫುಟ್‌ ಬೋರ್ಡ್‌ ನಲ್ಲಿ ನಿಂತು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಪುತ್ತೂರು: ಬಸ್ಸಿನಿಂದ ಬಿದ್ದು ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ