puttur

ಪುತ್ತೂರು: ಹರಿವೆ ಸೊಪ್ಪಿನ ಪದಾರ್ಥ ಸೇವಿ ಮೂವರು ಅಸ್ವಸ್ಥ       ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಏ.29. ಮನೆಯಲ್ಲೇ ಬೆಳೆದ ಹರಿವೆ ಸೊಪ್ಪಿನ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಮೂವರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೈಲಾಜೆ ಎಂಬವಲ್ಲಿ ನಡೆದಿದೆ. ಬೆಳ್ಳಿಪ್ಪಾಡಿಯ ಕೈಲಾಜೆ ಕೊರಗಪ್ಪ ಗೌಡ ಹಾಗೂ ಅವರ ಪತ್ನಿ ಲಲಿತಾ ಹಾಗೂ ಮನೆಗೆ ಬಂದಿದ್ದ ರಮೇಶ ಅಡ್ಕರಗುರಿ ಆಸ್ಪತ್ರೆಗೆ ದಾಖಲಾದವರು ಎಂದು ವರದಿಯಾಗಿದೆ.  

ಪುತ್ತೂರು: ಹರಿವೆ ಸೊಪ್ಪಿನ ಪದಾರ್ಥ ಸೇವಿ ಮೂವರು ಅಸ್ವಸ್ಥ       ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ

➤ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಗ್ರಾ.ಪಂ.ಅಧ್ಯಕ್ಷೆ..!  

(ನ್ಯೂಸ್ ಕಡಬ)Newskadaba.com ಪುತ್ತೂರು,ಏ.23 ಪಾಣಾಜೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಭಾರತಿ ಭಟ್‌ 24 ವರ್ಷಗಳ ಬಳಿಕ ದ್ವಿತೀಯ ಪಿಯು ಪರೀಕ್ಷೆಯನ್ನು ಖಾಸಗಿಯಾಗಿ ಬರೆದು 421 ಅಂಕಗಳೊಂದಿಗೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಕಳೆದ ಬಾರಿ ಎಸೆಸೆಲ್ಸಿ ಪರೀಕ್ಷೆಯನ್ನು ಖಾಸಗಿಯಾಗಿ ಬರೆದು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು. ಬಡ ಕುಟುಂಬದಲ್ಲಿ ಜನಿಸಿದ್ದ ಭಾರತಿ 1997-98ರಲ್ಲಿ 8ನೇ ತರಗತಿ ತೇರ್ಗಡೆ ಹೊಂದಿದ್ದು, ತಂದೆಯ ವಿಯೋಗದಿಂದಾಗಿ ವಿದ್ಯಾಭ್ಯಾಸ ಮುಂದುವರಿಸಲಾಗಲಿಲ್ಲ.ಅನಂತರ ವೆಂಕಟ್ರಮಣ ಭಟ್‌ ಅವರನ್ನು ವಿವಾಹವಾಗಿ ಪಾಣಾಜೆಯಲ್ಲಿ ನೆಲೆಸಿರುವ ಅವರು 2020-21ನೇ ಸಾಲಿನ ಗ್ರಾ.ಪಂ. ಚುನಾವಣೆಯಲ್ಲಿ ಸದಸ್ಯೆಯಾಗಿ ಆಯ್ಕೆಯಾಗಿ 2

➤ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಗ್ರಾ.ಪಂ.ಅಧ್ಯಕ್ಷೆ..!   Read More »

ಕರಾವಳಿ

ಪುತ್ತೂರು: ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟ..!

(ನ್ಯೂಸ್ ಕಡಬ)newskadaba.com ಪುತ್ತೂರು, ಏ.12. ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಆಶಾ ತಿಮ್ಮಪ್ಪ ಗೌಡ ಅವರಿಗೆ ಪುತ್ತೂರಿನ ಬಿಜೆಪಿ ಟಿಕೆಟ್ ನೀಡಿದೆ ವರದಿ ತಿಳಿಸಿದೆ. ಇದರ ಬೆನ್ನಲ್ಲೇ ಪುತ್ತೂರು ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದೆ ಎನ್ನಲಾಗಿದೆ. ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ನಡೆಯಲಿದೆ.  

ಪುತ್ತೂರು: ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟ..! Read More »

ಕರಾವಳಿ

ಪುತ್ತೂರು: ಹೋರಿಯನ್ನು ನಡೆಸಿಕೊಂಡು ಹೋಗುತ್ತಿದ್ದ ಭಿನ್ನ ಸಮುದಾಯದ ವ್ಯಕ್ತಿಗಳು ➤ ಈರ್ವರು ಪೊಲೀಸ್ ವಶಕ್ಕೆ!

(ನ್ಯೂಸ್ ಕಡಬ)newskadaba.com ಪುತ್ತೂರು, ಮಾ.03. ಹೋರಿಯೊಂದನ್ನು ನಡೆಸಿಕೊಂಡು ಹೋಗುತ್ತಿದ್ದ ಹಿಂದು ಮತ್ತು ಮುಸ್ಲಿಂ  ವ್ಯಕ್ತಿಗಳಿಬ್ಬರನ್ನು ಹಿಂದು ಸಂಘಟನೆ ಕಾರ್ಯಕರ್ತರು ವಿಚಾರಿಸಿದ  ಘಟನೆ ಕೃಷ್ಣನಗರದಲ್ಲಿ  ನಡೆದಿದ್ದು ಮಾಹಿತಿ ತಿಳಿದು ಪೊಲೀಸರು ಆಗಮಿಸಿ ಅಹಿತಕರ ಘಟನೆಗಳಾಗದಂತೆ  ನೋಡಿಕೊಂಡಿದ್ದಾರೆ. ಕೆರೆಮೂಲೆ ನಿವಾಸಿ ಮುಸ್ಲಿಂ ಮತ್ತು ಕೆಮ್ಮಾಯಿಯ ಹಿಂದು ಓರ್ವರು ಸೇರಿಕೊಂಡು ಹೋರಿಯೊಂದನ್ನು ನಡೆಸಿಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.

ಪುತ್ತೂರು: ಹೋರಿಯನ್ನು ನಡೆಸಿಕೊಂಡು ಹೋಗುತ್ತಿದ್ದ ಭಿನ್ನ ಸಮುದಾಯದ ವ್ಯಕ್ತಿಗಳು ➤ ಈರ್ವರು ಪೊಲೀಸ್ ವಶಕ್ಕೆ! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ           ➤ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.15. ಕಾರು ನಿಯಂತ್ರಣ ಕಳೆದುಕೊಂಡು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು 50 ಅಡಿ ಆಳದ ತೋಟಕ್ಕೆ ಬಿದ್ದು ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಸಂಟ್ಯಾರು ಬಳಿ ನಡೆದಿದೆ. ನಿಡ್ಪಳ್ಳಿ ಗ್ರಾ.ಪಂ.ನ ಬೆಂಬಲಿತ ಸದಸ್ಯ ಮುರಳೀಧರ್‌ ಭಟ್‌ ಮೃತರು ಎಂದು ಗುರುತಿಸಲಾಗಿದೆ. ಇವರು ಬೆಟ್ಟಂಪಾಡಿಯ ದಿಲೀಪ್‌ ಕುಮಾರ್‌ರಾವ್‌, ಶಶಿಕುಮಾರ್‌, ನವನೀತ್‌ ಜೊತೆ ಕಾರಿನಲ್ಲಿ ಬೆಟ್ಟಂಪಾಡಿ ಕಡೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮುರಳೀಧರ್

ಪುತ್ತೂರು: ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ           ➤ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.14. ಪುತ್ತೂರು ನಗರ ಠಾಣೆಯಲ್ಲಿ 2015ರಲ್ಲಿ ಚೆಕ್ ಅಮಾನ್ಯ ಪ್ರಕರಣದಲ್ಲಿ ವಾರೆಂಟ್ ಜಾರಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಾಂತಿಗೋಡು ಗ್ರಾಮದ ಅಕ್ಷಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಅಕ್ಷಿತ್ ಶೆಟ್ಟಿಯನ್ನು ಪುತ್ತೂರು ನಗರ ಠಾಣಾ ಪರಮೇಶ್ವರ ಮತ್ತು ಪಿ ಸಿ ಗಿರಿಪ್ರಶಾಂತ್ ಅವರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ

ಪುತ್ತೂರು: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.06. ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನರಿಂಗಾನ ನಿವಾಸಿ ಮೊಹಮ್ಮದ್ ಬಶೀರ್ ಎಂದು ಗುರುತಿಸಲಾಗಿದೆ. ಗಾಂಜಾ ಪ್ರಕರಣದಲ್ಲಿ ಬಶೀರ್ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಿದ್ದು, ಕಳೆದ ಐದು ವರ್ಷಗಳಿಂದ ವಿಚಾರಣೆಗೆ ಒಳಗಾಗಲು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಆರೋಪಿ ವಿರುದ್ಧ ವಾರೆಂಟ್ ಜಾರಿ ಮಾಡಲಾಗಿದ್ದು, ಇದೀಗ ಪುತ್ತೂರು ನಗರ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ ಮೊಹಮ್ಮದ್ ಬಶೀರ್ ನನ್ನು ಬಂಧಿಸಲಾಗಿದೆ.  

ಪುತ್ತೂರು: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕಿ

(ನ್ಯೂಸ್ ಕಡಬ)newskadaba.com  ಪುತ್ತೂರು, ಫೆ.05. ಶಿಕ್ಷಕಿಯೋರ್ವರು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರಿಗೆ ತಿಳಿಸದೆ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಘಟನೆ ಚಿಕ್ಕಮುಡ್ನೂರು ಗ್ರಾಮದ ಬೀರ್ನಹಿತ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಚಿಕ್ಕಮುಡ್ನೂರು ಬೀರ್ನಹಿತ್ಲು ಶಾಲೆಯ ಮೂರನೇ ಹಾಗೂ ಒಂದನೇ ತರಗತಿ ಮಕ್ಕಳನ್ನು ಶಿಕ್ಷಕಿಯೋರ್ವರು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಸ್‌ಡಿಎಂಸಿಯವರಿಗೆ ತಿಳಿಸಿದೆ ಕರೆದುಕೊಂಡು ಹೋಗಿದ್ದು, ಈ ಕುರಿತು ಪೋಷಕರು ಮತ್ತು ಸಾರ್ವಜನಿಕರು ಆರೋಪಿಸಿದ್ದಾರೆ. ಶಾಲೆಯಲ್ಲಿ ಪತ್ರವೊಂದು ದೊರೆತಿದ್ದು, ಅದರಲ್ಲಿ ಪ್ರವಾಸಕ್ಕೆ ಹೋಗುವ ಸ್ಥಳಗಳನ್ನು ಉಲ್ಲೇಖಿಸಲಾಗಿದೆ.

ಪುತ್ತೂರು: ಮುಖ್ಯ ಶಿಕ್ಷಕರ ಗಮನಕ್ಕೆ ತಾರದೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ದ ಶಿಕ್ಷಕಿ Read More »

ಕರಾವಳಿ

ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ➤ ಓರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.03. ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ನಡೆದ ಘಟನೆ ಮುಂಡೂರಿನಲ್ಲಿ ನಡೆದಿದೆ. ಅಶ್ರಫ್ ಗಾಯಗೊಂಡವರು ಎಂದು ತಿಳಿದುಬಂದಿದೆ. ಅಶ್ರಫ್ ಗಂಭೀರವಾಗಿ ಗಾಯಗೊಂಡ ಕಾರಣ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಶ್ರಫ್ ಮತ್ತು ಸ್ಥಳೀಯ ಕೆಲವರ ಜೊತೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಅಶ್ರಫ್ ಗೆ ಗಂಭೀರವಾಗಿ ಗಾಯಗೊಂಡಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪುತ್ತೂರು: ಜಾಗದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ➤ ಓರ್ವನಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಸ್ಕೂಟರ್ ಮತ್ತು ಮಾರುತಿ ಕಾರಿನ ನಡುವೆ ಅಪಘಾತ   ➤ ಸವಾರ ಗಂಭೀರ

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.02.  ಸ್ಕೂಟರ್ ಮತ್ತು ಮಾರುತಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪೋಳ್ಯದಲ್ಲಿ ನಡೆದಿದೆ. ಅಪಘಾತದಿಂದಾಗಿ ಸ್ಕೂಟರ್ ಸವಾರ ಗಾಯಗೊಂಡಿದ್ದಾರೆ. ಪುತ್ತೂರು ದ್ವಾರಕ ಕನ್ ಸ್ಟ್ರಕ್ಷನ್ ನ ಶರಣ್ ಎಂಬವರು ಸೈಟ್ ಇನ್ಸ್ಪೆಕ್ಷನ್ ಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಪೋಳ್ಯ ಸಮೀಪ ವಿರುದ್ಧ ದಿಕ್ಕಿನಿಂದ ಬಂದ ಮಾರುತಿ ವ್ಯಾನ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ತೀವ್ರ ಗಾಯಗೊಂಡ ಶರಣ್ ಅವರನ್ನು ಅದೇ ದಾರಿಯಲ್ಲಿ ಬರುತ್ತಿದ್ದ ಡಾ.ದೇವಿಪ್ರಸಾದ್

ಪುತ್ತೂರು: ಸ್ಕೂಟರ್ ಮತ್ತು ಮಾರುತಿ ಕಾರಿನ ನಡುವೆ ಅಪಘಾತ   ➤ ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top