puttur

ಪುತ್ತೂರು: ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದ ಸಂದರ್ಭ ಲೈಂಗಿಕ ಕಿರುಕುಳ ಆರೋಪ ➤ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 06. ವಿದ್ಯಾರ್ಥಿನಿಯೋರ್ವಳು ಅಪ್ರಾಪ್ತೆಯಾಗಿದ್ದ ಸಂದರ್ಭ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೋಡಿಯಡ್ಕ ನಿವಾಸಿ ಯುವಕನ ವಿರುದ್ಧ ಸಂಪ್ಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆ ವರದಿಯಾಗಿದೆ. ಆರೋಪಿ ಕೋಳಿ ಅಂಗಡಿ ಹೊಂದಿರುವ ಕೋಡಿಯಡ್ಕ ನಿವಾಸಿ ರಾಹುಲ್ ಎಂದು ಗುರುತಿಸಲಾಗಿದೆ. ಆರೋಪಿ ರಾಹುಲ್, ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದ ಸಂದರ್ಭ ಆಕೆಗೆ ಕೋಳಿ ಫಾರಂನಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಮತ್ತು ಆಕೆಗೆ ಬೆದರಿಕೆಯೊಡ್ಡಿರುವುದಾಗಿ ಪುತ್ತೂರು ನಿವಾಸಿ ಸದ್ಯ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿನಿ ನೀಡಿದ […]

ಪುತ್ತೂರು: ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದ ಸಂದರ್ಭ ಲೈಂಗಿಕ ಕಿರುಕುಳ ಆರೋಪ ➤ ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು     ➤ ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯ                                   

(ನ್ಯೂಸ್ ಕಡಬ) newskadaba.com  ಪುತ್ತೂರು, ಜ.03. ರಸ್ತೆ ಬದಿ ರಾಶಿ ಹಾಕಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಪರಿಣಾಮ ಮೂವರು ಗಾಯಗೊಂಡ ಘಟನೆ ಕುಂಬ್ರ ಕೆ.ಇ.ಬಿ ಕಛೇರಿ ಮುಂಭಾಗ ಸಂಭವಿಸಿದೆ. ಸಾರೆಪುಣಿ ಮೂಲದ ಕುಟುಂಬವೊಂದು ಮಂಗಳೂರಿಗೆ ತೆರಳಿ ವಾಪಾಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.    

ಪುತ್ತೂರು : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು     ➤ ಪುಟ್ಟ ಮಗು ಸೇರಿ, ಇಬ್ಬರಿಗೆ ಗಾಯ                                    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ಪುತ್ತೂರು: ಜೆರಾಕ್ಸ್ ಅಂಗಡಿಯಿಂದ ಕಳವು     

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 02. ಜೆರಾಕ್ಸ್ ಅಂಗಡಿಯಿಂದ ಸಾವಿರಾರು ರೂಪಾಯಿ ಕಳವುಗೈದಿರುವ ಘಟನೆ ಕೌಡಿಚ್ಚಾರಿನಲ್ಲಿ ವರದಿಯಾಗಿದೆ. ಕೌಡಿಚ್ಚಾರಿನಲ್ಲಿರುವ ವಿಶ್ವನಾಥ ಗೌಡ ಎಂಬವರಿಗೆ ಸೇರಿದ ಜೆರಾಕ್ಸ್ ಅಂಗಡಿಯಿಂದ ಕಳವಾಗಿದ್ದು, ಅವರು ಅಂಗಡಿಗೆ ಬಂದಾಗ ಅಂಗಡಿಯ ಎದುರಿನ ಬಾಗಿಲಿನ ಬೀಗ ಮುರಿದಿರುವುದು ಬೆಳಕಿಗೆ ಬಂದಿದೆ. ಅಂಗಡಿ ಒಳಗೆ ನೋಡಿದಾಗ ಡ್ರವರ್ ನಲ್ಲಿದ್ದ ಸುಮಾರು 20 ಸಾವಿರ ನಗದು ಮತ್ತು ಮೊಬೈಲ್ ಕಳವಾಗಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: ಜೆರಾಕ್ಸ್ ಅಂಗಡಿಯಿಂದ ಕಳವು      Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 28. ಕೃಷಿ ಜಾಗಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಆಶಾಎಂದು ಗುರುತಿಸಲಾಗಿದೆ. ಅರುಣ್ ಕುಮಾರ್ ರೈ ಮತ್ತು ಕೆಲಸಗಾರರಾದ ವಿನಯ್ ಮತ್ತು ಸುಂದರರವರು ಅಕ್ರಮವಾಗಿ ತಂತಿ ಬೀಲಿ ಹಾಕುತ್ತಿದ್ದು, ಈ ಕುರಿತು ಪ್ರಶ್ನಿಸಿದಾಗ ನನಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂಧಿಸಿ ಮಾನಭಂಗಕ್ಕೆ ಯತ್ನಿಸಿದ್ದಾರಲ್ಲದೆ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ

ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕುಸಿದು ಬಿದ್ದು ವ್ಯಕ್ತಿ ಮೃತ್ಯು 

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 26. ಮನೆಯ ಟೆರೇಸಿಗೆ ಹತ್ತುವ ಮೆಟ್ಟಿಲಿನ ಸಮೀಪ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಾಲ್ಮರ ಮುದ್ದೋಡಿ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಸಾಲ್ಮರ ಮುದ್ದೋಡಿ ನಿವಾಸಿ ನಾರಾಯಣ ನಾಯ್ಕ (64) ಎಂದು ಗುರುತಿಸಲಾಗಿದೆ. ಅವರು ಮನೆಯ ಟೆರೇಸಿಗೆ ಹತ್ತುವ ಮೆಟ್ಟಿಲಿನ ಸಮೀಪ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.  

ಪುತ್ತೂರು: ಕುಸಿದು ಬಿದ್ದು ವ್ಯಕ್ತಿ ಮೃತ್ಯು  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ   ➤ ಆರೋಪಿ ಅರೆಸ್ಟ್                        

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 26. ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾವು ಮಾಲಡ್ಕ ನಿವಾಸಿಯೋರ್ವನನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಾವು ಇಲ್ಲಿನ ನಿವಾಸಿ ತಕಿಯುದ್ದೀನ್ ಎಂದು ಗುರುತಿಸಲಾಗಿದೆ. ಈತ ಸಂತ್ರಸ್ಥ ಬಾಲಕಿಯ ತಂದೆಯ ಸ್ನೇಹಿತ ಎಂದು ತಿಳಿದುಬಂದಿದೆ. ಸಂತ್ರಸ್ತೆಯು ಶಾಲೆಗೆ ಹೋಗಲು ಮನೆಯಿಂದ ಬಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಆಕೆಯನ್ನು ತಡೆದು ನಿಲ್ಲಿಸಿದ ಆರೋಪಿ ತನ್ನ ಜೊತೆಗೆ ಬೈಕ್ ನಲ್ಲಿ ಬರುವಂತೆ ಒತ್ತಾಯಿಸಿ

ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ   ➤ ಆರೋಪಿ ಅರೆಸ್ಟ್                         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ವ್ಯಕ್ತಿಯ ಮೃತದೇಹ ರೈಲ್ವೇ ಹಳಿ ಸಮೀಪ ಚರಂಡಿಯಲ್ಲಿ ಪತ್ತೆ…!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 23. ವ್ಯಕ್ತಿಯೊಬ್ಬರ ಮೃತದೇಹ ಚರಂಡಿಯೊಂದರಲ್ಲಿ ಪತ್ತೆಯಾದ ಘಟನೆ ಮುರದ ರೈಲ್ವೇ ಹಳಿ ಬಳಿ ವರದಿಯಾಗಿದೆ. ಮುರದಲ್ಲಿರುವ ರೈಲ್ವೇ ಹಳಿ ಸಮೀಪದ ಮೃತದೇಹ ಪತ್ತೆಯಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆಯ ಬಳಿಕವಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.  

ಪುತ್ತೂರು: ವ್ಯಕ್ತಿಯ ಮೃತದೇಹ ರೈಲ್ವೇ ಹಳಿ ಸಮೀಪ ಚರಂಡಿಯಲ್ಲಿ ಪತ್ತೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ಅಪಘಾತ ➤ ಓರ್ವನಿಗೆ ಗಾಯ                      

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 21. ಬೈಕ್ ಮತ್ತು ಮಾರುತಿ ಓಮ್ನಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ನೆಹರುನಗರ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಅನಂತಾಡಿ ನಿವಾಸಿ ಪುಷ್ಪರಾಜ್ ಗೌಡ ಎಂದು ಗುರುತಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.    

ಬೈಕ್ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ಅಪಘಾತ ➤ ಓರ್ವನಿಗೆ ಗಾಯ                       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ತಳ್ಳುಗಾಡಿ ತೆರವು ಹಿನ್ನೆಲೆ – ಗ್ರಾ.ಪಂ. ಪಿಡಿಓಗೆ ಜೀವ ಬೆದರಿಕೆ  ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾಣಿಯೂರು, ಡಿ. 21. ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯಿಮಣ ಗ್ರಾಮದ ಅಂಕಜಾಲು ಎಂಬಲ್ಲಿ ಅಕ್ರಮ ತಳ್ಳುಗಾಡಿಯನ್ನು ತೆರವು ಮಾಡಿರುವುದಕ್ಕೆ ಪುತ್ತೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಮತ್ತು ಗ್ರಾ.ಪಂ ಪ್ರಭಾರ ಆಭಿವೃದ್ಧಿ ಅಧಿಕಾರಿ ನಾರಾಯಣ ಕೆ ಅವರಿಗೆ ವಾಟ್ಸಪ್ ಕರೆ ಮೂಲಕ ಜೀವ ಬೆದರಿಕೆಯೊಡ್ಡಿರುವ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಮತ್ತು ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯಿಮಣ

ಪುತ್ತೂರು: ಅಕ್ರಮ ತಳ್ಳುಗಾಡಿ ತೆರವು ಹಿನ್ನೆಲೆ – ಗ್ರಾ.ಪಂ. ಪಿಡಿಓಗೆ ಜೀವ ಬೆದರಿಕೆ  ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕಾಂಕ್ರೀಟ್ ಮಿಶ್ರಣದ ಲಾರಿ ಪಲ್ಟಿ ➤ ಕಾರ್ಮಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 21. ರಸ್ತೆ ಬದಿ ಕುಸಿದ ಪರಿಣಾಮ ರಸ್ತೆ ಅಭಿವೃದ್ದಿ ಕಾಮಗಾರಿಗೆಂದು ಬಂದಿದ್ದ ಕಾಂಕ್ರೀಟ್ ಮಿಕ್ಸಿಂಗ್ ಮಿಲ್ಲರ್ ಲಾರಿಯು ಪಲ್ಟಿಯಾದ ಘಟನೆ ಚೆಲ್ಯಡ್ಯ ಎಂಬಲ್ಲಿ ನಡೆದಿದೆ. ಕಾಂಕ್ರೀಟ್ ಮಿಕ್ಸಿಂಗ್ ತುಂಬಿಸಿಕೊಂಡು ಪುತ್ತೂರು ಕಡೆಯಿಂದ ಬಂದ ಲಾರಿಯು ರಸ್ತೆ ಬದಿ ನಿಲ್ಲಿಸಿ ತಡೆಗೋಡೆಗೆ ಕಾಂಕ್ರೀಟ್ ತುಂಬಿಸುವ ಸಂದರ್ಭ ರಸ್ತೆ ಬದಿ ಕುಸಿದು ಲಾರಿಯು ಸುಮಾರು ಇಪ್ಪತ್ತು ಅಡಿ ಆಳಕ್ಕೆ ಪಲ್ಟಿಯಾಗಿದೆನ್ನಲಾಗಿದೆ. ಕೆಳಭಾಗದಲ್ಲಿದ್ದ ಕಾರ್ಮಿಕರು ಓಡಿಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಪುತ್ತೂರು: ಕಾಂಕ್ರೀಟ್ ಮಿಶ್ರಣದ ಲಾರಿ ಪಲ್ಟಿ ➤ ಕಾರ್ಮಿಕರು ಅಪಾಯದಿಂದ ಪಾರು Read More »

ಕರಾವಳಿ
Scroll to Top