puttur

ಪುತ್ತೂರು: ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ ಶಂಕೆ ಮುಂದುವರಿದ ತನಿಖೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.20. ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ  ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆ ಬಳಿ ನಡೆದಿದೆ ಎನ್ನಲಾಗಿದೆ. ಯುವಕನನ್ನು ಮಹೀಂದ್ರ ಶೋರೂಂ ಉದ್ಯೋಗಿ ಸನ್ಮಿತ್ (21) ಎಂದು ತಿಳಿದುಬಂದಿದೆ. ಈತನ ಸ್ಕೂಟರ್  ಹೊಳೆಯ ಬದಿಯಿಂದ 150 ಮೀ ದೂರದಲ್ಲಿ ನಿಲ್ಲಿಸಿದ್ದ ಎನ್ನಲಾಗಿದೆ. ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದು, ಹೊಳೆಯಲ್ಲಿ ಸನ್ಮಿತ್‌ ಮೃತದೇಹಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ. ಸನ್ಮಿತ್‌ ನಿಜವಾಗಿಯೂ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಎನ್ನುವ […]

ಪುತ್ತೂರು: ಯುವಕನೋರ್ವ ಹೊಳೆಗೆ ಹಾರಿ ಆತ್ಮಹತ್ಯೆ ಶಂಕೆ ಮುಂದುವರಿದ ತನಿಖೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 21. ಇಲ್ಲಿನ ಮುಕ್ರಂಪಾಡಿ ಜಂಕ್ಷನ್ ನಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆಯಲಾದ ನಾಲ್ವರು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪುತ್ತೂರು: ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರಿಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ‌ ಮುಖ್ಯಸ್ಥನ ಬರ್ಬರ ಹತ್ಯೆ – ಪೊಲೀಸರಿಗೆ ಶರಣಾದ ಇಬ್ಬರು ಆರೋಪಿಗಳು

(ನ್ಯೂಸ್ ಕಡಬ) newskadaba.com ಪುತ್ತೂರು, ನ.07. ಕಲ್ಲೇಗ ಟೈಗರ್ಸ್‌ ತಂಡದ ಮುಖ್ಯಸ್ಥ ಅಕ್ಷಯ್‌ ಕಲ್ಲೇಗ(24) ಅವರನ್ನು ಪುತ್ತೂರಿನ ನೆಹರೂ ನಗರದಲ್ಲಿ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ಕೊಚ್ಚಿ ಕೊಲೆಗೈದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್‌ ಹಾಗೂ ತಂಡದ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ಅಕ್ಷಯ್‌ ನನ್ನು ತಡರಾತ್ರಿ ನೆಹರೂ ನಗರಕ್ಕೆ ಕರೆಸಿ ಹತ್ಯೆ ನಡೆಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಕೃತ್ಯ ನಡೆದ ಬಳಿಕ ಮನೀಶ್‌ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ‌ ಮುಖ್ಯಸ್ಥನ ಬರ್ಬರ ಹತ್ಯೆ – ಪೊಲೀಸರಿಗೆ ಶರಣಾದ ಇಬ್ಬರು ಆರೋಪಿಗಳು Read More »

ಕರಾವಳಿ

ಪುತ್ತೂರು: ಗೃಹರಕ್ಷಕ ಘಟಕ ಕಛೇರಿ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 13. ಇಲ್ಲಿನ ಗೃಹರಕ್ಷಕ ದಳದ ಘಟಕ ಕಛೇರಿಯನ್ನು ಪುತ್ತೂರು ಹಳೆಯ ಪೊಲೀಸ್ ಠಾಣೆಯ ಎದುರು ಭಾಗದಲ್ಲಿರುವ ಮಹಾಲಿಂಗೇಶ್ವರ ವೆಂಚರ್ಸ್ ಕಟ್ಟಡಕ್ಕೆ (ಹಳೆಯ ಬೋನಂತಾಯ ಆಸ್ಪತ್ರೆ) ಸ್ಥಳಾಂತರ ಮಾಡಲಾಯಿತು.   ಈ ಕಾರ್ಯಕ್ರಮದಲ್ಲಿ ಶ್ರೀ ಸುರೇಶ್ ಬಲ್ನಾಡು ಅವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗೃಹರಕ್ಷಕರು ಒಳೆಯ ರೀತಿಯಲ್ಲಿ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ, ಅವರಿಗೆ ಜನರು ಹೆಚ್ಚಿನ ಸಹಕಾರವನ್ನು ಕೊಡಬೇಕು ಹಾಗೂ ಪ್ರೋತ್ಸಾಹ ಕೊಡಬೇಕು, ಶಾಂತಿ ಸುವ್ಯವಸ್ಥೆ

ಪುತ್ತೂರು: ಗೃಹರಕ್ಷಕ ಘಟಕ ಕಛೇರಿ ಸ್ಥಳಾಂತರ Read More »

ಕರಾವಳಿ

ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಬಾಲಕರಿಬ್ಬರು ಪುತ್ತೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 22. ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಪುತ್ತೂರಿನಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಎಂದಿನಂತೆ ಶಾಲೆಗೆ ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಸಂಜೆ ವಾಪಾಸ್ಸು ಬಂದಿರಲಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ ವಿಚಾರಿಸಿದಾಗ ಶಾಲೆಗೆ ಹೋಗದೇ ಇರುವ ವಿಚಾರ ತಿಳಿದುಬಂದಿದೆ. ಬಾಲಕರ ಮನೆಯಲ್ಲೂ ವಿಚಾರಿಸಿ, ವಿದ್ಯಾರ್ಥಿ ನಿಲಯದ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆ ಹಾಸ್ಟೆಲ್ ಮೇಲ್ವಿಚಾರಕಿ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದ ಬಾಲಕರಿಬ್ಬರು ಪುತ್ತೂರಿನಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಾವಿಗೆ ಬಿದ್ದು ಕಾಡುಕೋಣ ಮೃತ್ಯು – ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 19. ಕಾಡುಕೋಣವೊಂದು ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ನರಿಮೊಗರು ಐಟಿಐ ಮೈದಾನದ ಪಕ್ಕದಲ್ಲಿ ಶನಿವಾರದಂದು ನಡೆದಿದೆ. ಪ್ರಕಾಶ್ ಎಂಬವರ ಜಾಗದಲ್ಲಿರುವ ಬಾವಿಯಲ್ಲಿ ಬೆಳಗ್ಗಿನ ಹೊತ್ತು ಕಾಡುಕೋಣವೊಂದು ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಕಂಡುಬಂದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯವರು ಕ್ರೇನ್ ಮುಖಾಂತರ ಕಾಡುಕೋಣವನ್ನು ಬಾವಿಯಿಂದ ಮೇಲಕೆತ್ತಿದ್ದಾರೆ. ಮೃತಪಟ್ಟಿರುವ ಕಾಡುಕೋಣಕ್ಕೆ ಅಂದಾಜು 4 ರಿಂದ 5 ವರ್ಷ ಪ್ರಾಯವಾಗಿರಬಹುದು ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಎಸಿಎಫ್ ಸುಬ್ಬಯ್ಯ ನಾಯ್ಕ,

ಬಾವಿಗೆ ಬಿದ್ದು ಕಾಡುಕೋಣ ಮೃತ್ಯು – ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅಡಿಕೆ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಆ.11. ವ್ಯಕ್ತಿಯೋರ್ವರ ಮನೆಯಿಂದ ಅಡಿಕೆ ಯನ್ನು ಕದ್ದ ಕಳ್ಳರನ್ನು ಬಂಧಿಸುವಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ. ಬಂಧಿತರನ್ನು ಆರೋಪಿಗಳನ್ನು ಪುತ್ತೂರಿನ ನಿವಾಸಿಗಳಾದ ಕಿರಣ್ ಕುಮಾರ್ ಹಾಗೂ ಸಂತೋಷ್ ಎಂದು ಗುರುತಿಸಲಾಗಿದ್ದು, ಆರೋಪಿಗಳು ವಿಷ್ಣುಕಲ್ಲುರಾಯ ಅವರ ಮನೆಯಿಂದ 2 ಕ್ವಿಂಟಾಲ್ ಒಣ ಅಡಿಕೆ ಹಾಗೂ ಹುಲ್ಲು ತೆಗೆಯುವ ಮೇಷಿನ್ ಕಳ್ಳತನ ಮಾಡಿದ್ದರು. ಈ ಕುರಿತಂತೆ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 1 ಕ್ವಿಂಟಾಲ್ ಅಡಿಕೆ

ಪುತ್ತೂರು: ಅಡಿಕೆ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ತೆಂಗಿನಕಾಯಿ ಕೀಳುವ ವೇಳೆ ಮರದಿಂದ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಆ.09. ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಪ್ರಸಿದ್ದಿ ಪಡೆದಿದ್ದ ಮಹಿಳೆ ದುರಾದೃಷ್ಟವಶಾತ್ ತೆಂಗಿನ ಮರದಿಂದಲೇ ಬಿದ್ದು ಮೃತಪಟ್ಟ ಘಟನೆ ಸವಣೂರು ಬಳಿ ನಡೆದಿದೆ. ಮೃತರನ್ನು ಪ್ರಮೋದ್ ಬೊಳ್ಳಾಜೆ ಪತ್ನಿ ಸುಚಿತ್ರಾ (30) ಎಂದು ಗುರುತಿಸಲಾಗಿದೆ. ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಯಿ ಕೀಳುತ್ತಿರುವಾಗ ಈ ಘಟನೆ ನಡೆದಿದ್ದು, ಮಹಿಳೆಯಾಗಿ ಸುಚಿತ್ರ ರವರು ತೆಂಗಿನಕಾಯಿ ಕೀಳುವ ಕಾಯಕದಲ್ಲಿ ತೊಡಕಿಸಿಕೊಂಡಿದ್ದರಿಂದ ಅವರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ

ತೆಂಗಿನಕಾಯಿ ಕೀಳುವ ವೇಳೆ ಮರದಿಂದ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪುತ್ತೂರು, ಆ.05. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಅಪರಾಧ ಪ್ರಕರಣವೊಂದರ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಸತೀಶ್‌ ಗುಪ್ತ ಯಾನೆ ಮಹೋರಿ (33)ಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ವೃತ್ತ ನಿರೀಕ್ಷಕ ರವಿ ಬಿ.ಎಸ್‌.ಅವರ ಮಾರ್ಗದರ್ಶನದಲ್ಲಿ ಮಂಗಳೂರು ಗ್ರಾಮಾಂತರ ವಾಮಂಜೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.  

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ನನಗೆ ಲಂಚ ಕೊಡಬೇಡಿ; ನಾನು ಭ್ರಷ್ಟ ಅಧಿಕಾರಿ ಆಗಲಾರೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.31. ನನಗೆ ಯಾರೂ ಲಂಚ ಕೊಡಬೇಡಿ, ನಾನು ಭ್ರಷ್ಟ ಅಧಿಕಾರಿ ಆಗಲಾರೆ ಎಂದು ವಿಜಯನಗರ ಜಿಲ್ಲಾ ಆಯುಷ್ ಇಲಾಖೆಯ ಮಹಿಳಾ ಅಧಿಕಾರಿ ತಮ್ಮ ಕಚೇರಿಯಲ್ಲಿ ಬ್ಯಾನರ್ ಅಳವಡಿಸಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಶ್ಲಾಘನೆಗೆ ಪಾತ್ರವಾಗಿದ್ದು, ಎಲ್ಲೆಡೆ ವೈರಲ್ ಆಗಿದೆ. ಇದು ಮಾದರಿ ನಡೆ, ಎಲ್ಲಾ ಅಧಿಕಾರಿಗಳೂ ಈ ರೀತಿ ಬೋರ್ಡ್ ಹಾಕಿಸಿಕೊಳ್ಳಬೇಕು ಎಂದು ಜನರು ವ್ಯಕ್ತಪಡಿಸಿದ್ದಾರೆ. ಸರಕಾರಿ ಕಚೇರಿಯಲ್ಲಿ ವ್ಯಾಪಕ ಲಂಚ ಕೊಟ್ಟರೆ ಮಾತ್ರ ಅಧಿಕಾರಿಗಳೂ ಸ್ಪಂದನೆ ನೀಡುತ್ತಾರೆ ಎಂಬ ಭಾವನೆ ಜನ

ನನಗೆ ಲಂಚ ಕೊಡಬೇಡಿ; ನಾನು ಭ್ರಷ್ಟ ಅಧಿಕಾರಿ ಆಗಲಾರೆ Read More »

ಕರಾವಳಿ
Scroll to Top