puttur

ಪುತ್ತಿಲ ಪರಿವಾರದ ವಿರುದ್ಧ ಕೇಸ್ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.29. ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಫಲಿತಾಂಶ ಪ್ರಕಟಗೊಂಡ ನಂತರ ನಗರದ ಮುಖ್ಯರಸ್ತೆಯಲ್ಲಿ ಅನುಮತಿಯಿಲ್ಲದೆ ವಿಜಯೋತ್ಸವ ನಡೆಸಿದ ಪುತ್ತಿಲ ಪರಿವಾರದ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಸಾರ್ವಜನಿಕ ಶಾಂತಿಭಂಗ ಪ್ರಕರಣ ದಾಖಲಾಗಿದೆ. ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರದಿಂದ ಸ್ಪರ್ಧಿಸಿದ್ದ ಸುಬ್ರಹ್ಮಣ್ಯ ಬಲ್ಯಾಯ ಗೆಲುವು ಸಾಧಿಸಿದ್ದರು. ಫಲಿತಾಂಶ ಪ್ರಕಟಗೊಂಡ ಬಳಿಕ ತಾಲೂಕು ಆಡಳಿತ ಸೌಧದ ಬಳಿಯಿಂದ ಪುತ್ತಿಲ ಪರಿವಾರದ ಕಚೇರಿ ತನಕ ನಗರದ ಮುಖ್ಯ ರಸ್ತೆಯಲ್ಲಿ ಡಿಜೆ ಅಳವಡಿಸಿ ಮೆರವಣಿಗೆ ನಡೆಸಲಾಗಿತ್ತು ಎನ್ನಲಾಗಿದೆ. ಮೆರವಣಿಗೆ […]

ಪುತ್ತಿಲ ಪರಿವಾರದ ವಿರುದ್ಧ ಕೇಸ್ ದಾಖಲು Read More »

ಕರಾವಳಿ

ಮನೆಯ ಮೇಲೆ ಕುಸಿದು ಬಿದ್ದ ಮರ – ಮಹಿಳೆ ಅಪಾಯದಿಂದ ಪಾರು !!

(ನ್ಯೂಸ್ ಕಡಬ)newskadaba.com ಪುತ್ತೂರು, ಜು.29. ಮನೆಯ ಮೇಲೆ ಮರ ಬಿದ್ದು ಮನೆ ಭಾಗಶಃ ಹಾನಿಯಾಗಿರುವ ಘಟನೆ ಸರ್ವೆ ಗ್ರಾಮದ ರೆಂಜಿಲಾಡಿಯಲ್ಲಿ ರಾತ್ರಿ ಸಂಭವಿಸಿದೆ ಎನ್ನಲಾಗಿದೆ. ರೆಂಜಿಲಾಡಿ ನಿವಾಸಿ ಸರಕಾರಿ ಪ್ರೌಢ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯಾಗಿರುವ ಮೋಹಿನಿ ಎಂಬವರ ಮನೆಗೆ ರಾತ್ರಿ ವೇಳೆ ಮರ ಮುರಿದು ಬಿದ್ದಿದ್ದು, ಮನೆಯ ಹಿಂಭಾಗದ ಗೋಡೆ, ಶೀಟ್ ಸಂಪೂರ್ಣ ಕುಸಿದು ಬಿದ್ದಿದೆ ಎನ್ನಲಾಗಿದೆ. ಮನೆಯಲ್ಲಿ ಮೋಹಿಣಿ ಮಾತ್ರ ವಾಸವಾಗಿದ್ದು, ತನ್ನ ತಾಯಿಯ ಮನೆಗೆ ಹೋಗಿದ್ದ ವೇಳೆ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.  

ಮನೆಯ ಮೇಲೆ ಕುಸಿದು ಬಿದ್ದ ಮರ – ಮಹಿಳೆ ಅಪಾಯದಿಂದ ಪಾರು !! Read More »

ಕರಾವಳಿ

ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.27. ಅಪರಿಚಿತ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಾಂಗ್ಲಾಯಿಯಲ್ಲಿ ನಡೆದಿದೆ. ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸ್ಥಳೀಯರು ಹಾಗೂ ಆದರ್ಶ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಯಾನಂದ್ ಸಹಕಾರದಿಂದ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.  

ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅನುಮತಿ ಇಲ್ಲದೇ ಡಿಜೆ; ವಿಜಯೋತ್ಸವ – ಪುತ್ತಿಲ ಪರಿವಾರ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.27. ಅನುಮತಿ ಇಲ್ಲದೆ ವಿಜಯೋತ್ಸವ ಮತ್ತು ಡಿಜೆ ಸೌಂಡ್ ಬಳಕೆ ಮಾಡಿದಕ್ಕಾಗಿ ಪುತ್ತಿಲ ಪರಿವಾರ ಸಂಘಟಣೆ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಆರ್ಯಾಪು ಗ್ರಾ.ಪಂ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಜಯಗಳಿಸಿದ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಸೌಧದಿಂದ ಮುಕ್ರಂಪಾಡಿ ತನಕ ಅನುಮತಿ ಇಲ್ಲದೇ ಪುತ್ತಿಲ ಪರಿವಾರ ನಡೆಸಿದ ವಿಜಯೋತ್ಸವದಲ್ಲಿ ಡಿ.ಜೆ ಸೌಂಡ್ ಬಳಕೆ ಮಾಡಿದ ವಿಚಾರಕ್ಕೆ ಸಂಬಂಧಿಸಿ, ಪುತ್ತಿಲ ಪರಿವಾರ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ

ಅನುಮತಿ ಇಲ್ಲದೇ ಡಿಜೆ; ವಿಜಯೋತ್ಸವ – ಪುತ್ತಿಲ ಪರಿವಾರ ವಿರುದ್ದ ದೂರು ದಾಖಲು Read More »

ಕರಾವಳಿ

ಪುತ್ತೂರು ತಾಲೂಕಿಗೆ ಬರಲಿದೆ 110 ಕೆ.ವಿ ಉಪಕೇಂದ್ರ – ಜಮೀನು ಮಂಜೂರು

(ನ್ಯೂಸ್ ಕಡಬ)newskadaba.com ಪುತ್ತೂರು,ಜು.26. ಉಪ್ಪಿನಂಗಡಿ ಭಾಗದ ವಿದ್ಯುತ್ ಸುಧಾರಣೆಗೆ ರೂಪಿಸಿರುವ 34 ನೆಕ್ಕಿಲಾಡಿ ಗ್ರಾಮದ ಕರುವೇಲುವಿನಲ್ಲಿ 110 ಕೆ.ವಿ ಉಪಕೇಂದ್ರ ಸ್ಥಾಪನೆಗೆ ಯೋಜನೆ ರೂಪಿಸಿದೆ. ಇದರ ಅನುಮೋದನೆ ನೀಡುವಂತೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಮನವಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಜಮೀನಿಗೆ ಹಣ ಪಾವತಿಯಾಗಿ ಜಿಲ್ಲಾಧಿಕಾರಿಯಿಂದ ಮಂಜೂರಾತಿ ಕ್ರಮವು ದೊರಕಿದೆ ಎನ್ನಲಾಗಿದೆ. 40 ವರ್ಷಗಳ ಬಳಿಕ ಪುತ್ತೂರು ತಾಲೂಕಿಗೆ 2ನೇ 110 ಕೆವಿ ಉಪಕೇಂದ್ರ ಮಂಜೂರು ಆಗಿದ್ದು, ಕಳೆದ

ಪುತ್ತೂರು ತಾಲೂಕಿಗೆ ಬರಲಿದೆ 110 ಕೆ.ವಿ ಉಪಕೇಂದ್ರ – ಜಮೀನು ಮಂಜೂರು Read More »

ಕರಾವಳಿ

ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಸೋರಿಕೆ – 15 ದಿನಗಳಲ್ಲಿ ಪೂರ್ಣಗೊಳಿಸಲು ಸೂಚನೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.26. ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಹೊಸ ಕಟ್ಟಡ ಸೋರಿಕೆಯಾಗುತ್ತಿದ್ದು, ಈ ಕುರಿತು ಕಟ್ಟಡದ ಕಾಮಗಾರಿ ಗುತ್ತಿಗೆದಾರ ಸಂಸ್ಥೆಯವರನ್ನು ಶಾಸಕರು ತರಾಟೆಗೆತ್ತಿಕೊಂಡು ತನ್ನ ಕಚೇರಿಗೆ ಬರುವಂತೆ ತಿಳಿಸಿದ್ದರು. ಕಚೇರಿಗೆ ಬಂದ ಸಂಸ್ಥೆಯವರನ್ನು ಶಾಸಕರು ಮತ್ತೇ ಎತ್ತಿಕೊಂಡಿದ್ದು, ಕಾಮಗಾರಿ ಕಳಪೆಯಾಗದಂತೆ ಮತ್ತು ಎಲ್ಲಾ ಕೆಲಸಗಳನ್ನು 15 ದಿನದೊಳಗೆ ಪೂರ್ಣ ಮಾಡಲು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆಮೆಗತಿಯಲ್ಲಿ ಸಾಗಿದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಲೇಜಿಗೆ ಭೇಟಿ ನೀಡಿದ ಶಾಸಕರು ನೀರು ಹರಿಯುತ್ತಿರುವುದನ್ನು ಕಂಡು ಆಕ್ರೋಶಗೊಂದ್ದರು.

ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಸೋರಿಕೆ – 15 ದಿನಗಳಲ್ಲಿ ಪೂರ್ಣಗೊಳಿಸಲು ಸೂಚನೆ Read More »

ಕರಾವಳಿ

ಕಟ್ಟಿಗೆಗಾಗಿ ಗುಡ್ಡೆಗೆ ಹೋದ ವ್ಯಕ್ತಿ ಹೆಜ್ಜೇನು ಕಡಿದು ಮೃತ್ಯು

(ನ್ಯೂಸ್ ಕಡಬ)newskadaba.com  ಪುತ್ತೂರು, ಜು.25. ಕಟ್ಟಿಗೆಗಾಗಿ ಮನೆಯ ಪಕ್ಕದ ಗುಡ್ಡೆಗೆ ಹೋಗಿದ್ದ ವೇಳೆ ಹೇಜ್ಜೇನು ಕಡಿದು ಗಂಭೀರ ಗಾಯಗೊಂಡಿದ್ದ ಒಳಮೊಗ್ರು ಗ್ರಾಮದ ಕೈಕಾರ ನಿವಾಸಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಗುರುವ(55) ಎಂದು ಗುರುತಿಸಲಾಗಿದೆ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಕಟ್ಟಿಗೆಗಾಗಿ ಗುಡ್ಡೆಗೆ ಹೋದ ವ್ಯಕ್ತಿ ಹೆಜ್ಜೇನು ಕಡಿದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.25. ಕಳೆದ ಮೂರು ದಿನಗಳಿಂದ ವಿಪರೀತ ಮಳೆಯಾಗುತ್ತಿದ್ದು, ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿಯಾಗಿದೆ. ಅದೃಷ್ಟವಶಾತ್ ಸಾರ್ವಜನಿಕರಿಗೆ ತೊಂದರೆಯಾಗಿಲ್ಲ.

ವಿದ್ಯುತ್ ತಂತಿ ಮೇಲೆ ಮರ ಬಿದ್ದು ಹಾನಿ Read More »

ಕರಾವಳಿ

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ➤  ಮಾದಕ ವಸ್ತು ಸೇವನೆ ಬೆಳಕಿಗೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.25. ಯುವಕನೋರ್ವ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ಸಂಪ್ಯ ಪೊಲೀಸರು ವಿಚಾರಿಸಿದಾಗ ಯುವಕ ಗಾಂಜಾ ಸೇವನೆ ಮಾಡಿರುವುದು ಧೃಢಪಟ್ಟಿದೆ ಎನ್ನಲಾಗಿದೆ. ಪುತ್ತೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ವರದಿ ತಿಳಿಸಿದೆ.

ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ➤  ಮಾದಕ ವಸ್ತು ಸೇವನೆ ಬೆಳಕಿಗೆ Read More »

ಕರಾವಳಿ

ಭಾರಿ ಧಾರಾಕಾರ ಮಳೆ…!- ಸಂಚಾರ ವ್ಯತ್ಯಯ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.25. ಕಳೆದ ಕೆಲವು ದಿನಗಳಿಂದ ಕೊಡಗಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಡಗಿನ ಮರ ಸಹಿತ ಭೂಕುಸಿತ ಉಂಟಾಗಿ ಮಾಣಿ- ಮೈಸೂರು ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಈ ಪ್ರದೇಶದಲ್ಲಿ ಇನ್ನಷ್ಟು ಭೂಕುಸಿತ ಸಾಧ್ಯತೆ ಎದುರಾಗಿದ್ದು, ಆತಂಕ ಸೃಷ್ಟಿಸಿದೆ.

ಭಾರಿ ಧಾರಾಕಾರ ಮಳೆ…!- ಸಂಚಾರ ವ್ಯತ್ಯಯ Read More »

ಕರಾವಳಿ
Scroll to Top