reporter

ಸುದ್ದಿ ಬಿಡುಗಡೆ ಹಿರಿಯ ವರದಿಗಾರ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!!!

(ನ್ಯೂಸ್ ಕಡಬ) newskadaba.com ಪುತ್ತೂರು: ಆ.09,.ಇಲ್ಲಿನ ಪ್ರಸಿದ್ಧ ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ವರದಿಗಾರ ನಾರಾಯಣ ನಾಯ್ಕ (48ವ.) ಅವರು  ಕ್ಕೀಡಾಗಿ ಶನಿವಾರ ರಾತ್ರಿ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಕುರಿಯ ಗ್ರಾಮದ ಅಮ್ಮುಂಜೆಯ ನಾರಾಯಣ ಅವರು ಪುತ್ತೂರು ಸುದ್ದಿ ಬಿಡುಗಡೆಯ ಹಿರಿಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ರಾತ್ರಿ ವೇಳೆ […]

ಸುದ್ದಿ ಬಿಡುಗಡೆ ಹಿರಿಯ ವರದಿಗಾರ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!!! Read More »

ಕರಾವಳಿ

ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪ ► ಪತ್ರಕರ್ತ ರವಿ ಬೆಳಗೆರೆಗೆ ಜೈಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.11. ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪದಲ್ಲಿ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರವಿ ಬೆಳಗೆರೆ ಅವರನ್ನು ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಇಂದು ಹಾಜರುಪಡಿಸಿದಾಗ ನ್ಯಾಯಾಧೀಶ ಜಗದೀಶ್ ಅವರು ರವಿಬೆಳೆಗೆರೆಗೆ ಡಿ.23 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದಾರೆ‌. ರವಿ ಬೆಳಗೆರೆಯವರ ವಕೀಲರ ತಂಡವು ಬುಧವಾರದಂದು ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸುವ ನಿರೀಕ್ಷೆ ಇದೆ.

ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪ ► ಪತ್ರಕರ್ತ ರವಿ ಬೆಳಗೆರೆಗೆ ಜೈಲು Read More »

ಕರ್ನಾಟಕ

‘ವಾರ್ತಾಭಾರತಿ’ ವರದಿಗಾರನ ಬಂಧನ ► ರಾಜಕೀಯ‌ ನೇತಾರರು, ವಿವಿಧ ಸಂಘಟನೆಗಳಿಂದ ವ್ಯಾಪಕ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.09. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿಯೊಬ್ಬನ ಮನೆಗೆ ಪೊಲೀಸರು ಇತ್ತೀಚೆಗೆ ನಡೆಸಿದ ದಾಳಿಯ ಕುರಿತಂತೆ ವರದಿ ಮಾಡಿದ ಆರೋಪದಲ್ಲಿ ‘ವಾರ್ತಾಭಾರತಿ’ಯ ಬಂಟ್ವಾಳ ತಾಲೂಕಿನ ಮುಖ್ಯ ವರದಿಗಾರನನ್ನು ಯಾವುದೇ ನೋಟಿಸ್ ನೀಡದೆ ಬಂಟ್ವಾಳ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದು, ಪೊಲೀಸರ ಈ ಕ್ರಮದ ವಿರುದ್ಧ ನಾಡಿನ ವಿವಿಧ ಮುಖಂಡರು, ರಾಜಕೀಯ ನಾಯಕರು ತಮ್ಮ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ನೋಟಿಸನ್ನೂ ನೀಡದೆ ಪೊಲೀಸರು ಪತ್ರಕರ್ತನನ್ನು ಬಂಧಿಸಿದ್ದು, ಇದು ದ.ಕ.

‘ವಾರ್ತಾಭಾರತಿ’ ವರದಿಗಾರನ ಬಂಧನ ► ರಾಜಕೀಯ‌ ನೇತಾರರು, ವಿವಿಧ ಸಂಘಟನೆಗಳಿಂದ ವ್ಯಾಪಕ ಆಕ್ರೋಶ Read More »

ಕರಾವಳಿ

ಪತ್ರಕರ್ತರಿಗೆ ಹಲ್ಲೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ

 (ನ್ಯೂಸ್ ಕಡಬ) newskadaba.com ಮ0ಗಳೂರು. ಆ.05. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ರಕರ್ತರಿಗೆ ಕರ್ತವ್ಯ ನಿರ್ವಹಣೆಯಲ್ಲಿ ಬೆದರಿಕೆ, ಹಲ್ಲೆಯಂತಹ  ಪ್ರಕರಣಗಳು ನಡೆದರೆ ಅಂತಹವರ ವಿರುದ್ಧ ಕಾನೂನು ಪ್ರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು  ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಹೇಳಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗಳ ಮೇಲ್ವಿಚಾರಣೆ ಮತ್ತು ಪರಿಶೀಲನೆಗೆ ರಚಿಸಿರುವ ಜಿಲ್ಲಾಮಟ್ಟದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪತ್ರಕರ್ತರ ವಿರುದ್ಧ  ಯಾವುದೇ ದೂರುಗಳಿದ್ದರೂ ಸಮಿತಿಗೆ ಸಲ್ಲಿಸಬಹುದು. ಅದು ಬಿಟ್ಟು ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಸೂಕ್ತ ಕ್ರಮ ನಡೆಯಲಿದೆ.

ಪತ್ರಕರ್ತರಿಗೆ ಹಲ್ಲೆ ನಡೆಸಿದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ Read More »

ಕರಾವಳಿ
Scroll to Top