Republic day

ಗಣರಾಜ್ಯೋತ್ಸವ ಪರೇಡ್ ನಲ್ಲಿ ಗಮನ ಸೆಳೆದ ಕರ್ನಾಟಕದ ಸ್ತಬ್ದಚಿತ್ರ..!

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.26. 74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಎಲ್ಲರ ಗಮನಸೆಳೆಯಿತು. ಪರೇಡ್ ನಲ್ಲಿ ಕರ್ನಾಟಕದಿಂದ ನಾರಿ ಶಕ್ತಿ ಸಾರುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಯಿತು. ಸ್ತಬ್ಧ ಚಿತ್ರದ ಮೂಲಕ ಪದ್ಮಶ್ರೀ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಮತ್ತು ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳ ಅನಾವರಣಗೊಳಿಸಲಾಯಿತು. ಗಿಡ-ಮರ ,ಬೆಟ್ಟ-ಗುಡ್ಡಗಳಿಂದ ಸ್ತಬ್ಧಚಿತ್ರ ಶೃಂಗಾರಗೊಂಡಿತ್ತು ಎನ್ನಲಾಗಿದೆ.  

ಗಣರಾಜ್ಯೋತ್ಸವ ಪರೇಡ್ ನಲ್ಲಿ ಗಮನ ಸೆಳೆದ ಕರ್ನಾಟಕದ ಸ್ತಬ್ದಚಿತ್ರ..! Read More »

ರಾಷ್ಟ್ರೀಯ ನ್ಯೂಸ್

ಜ.26. ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ ➤ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಜ. 26 ರಂದು ನಡೆಯಲಿರುವ ಗಣರಾಜೋತ್ಸವ ಸಮಾರಂಭಗಳಲ್ಲಿ ಡಾ||ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 26 ರಂದು ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಆಚರಿಸಲಾಗುವ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನದ ಪಿತಾಮಹ, ಭಾರತರತ್ನ ಡಾ| ಬಿ.ಆರ್. ಅಂಬೇಡ್ಕರ್ ರವರ ಭಾವ ಚಿತ್ರವನ್ನು ಕಡ್ಡಾಯವಾಗಿ ಇಟ್ಟು ಸಮಾರಂಭವನ್ನು ಆಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಎಸ್.ಶಿವಲಿಂಗಯ್ಯ ಆದೇಶ ಹೊರಡಿಸಿದ್ದಾರೆ.  

ಜ.26. ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ ➤ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಗಣರಾಜ್ಯೋತ್ಸವ ನೌಕಾಪಡೆ ತಂಡಕ್ಕೆ ಮಂಗಳೂರಿನ ಲೆ|ಕ ದಿಶಾ ಅಮೃತ್ ನೇತೃತ್ವ !

(ನ್ಯೂಸ್ ಕಡಬ)newskadaba.com ಮಂಗಳೂರು, ಜ.21. ಭಾರತವು ತನ್ನ 74 ನೇ ಗಣರಾಜ್ಯೋತ್ಸವವನ್ನು ಜನವರಿ 26 ರಂದು ಆಚರಿಸಲು ಸಜ್ಜಾಗಿದ್ದು, ವಿಶೇಷವೆಂದರೆ ಈ ವರ್ಷ, ಕರ್ತವ್ಯ ಪಥದಲ್ಲಿ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿರುವ ಮಂಗಳೂರಿನ ಕುವರಿ ದಿಶಾ ಅಮೃತ್ ನೌಕಾಪಡೆ ತಂಡವನ್ನು ಮುನ್ನಡೆಸಲಿದ್ದಾರೆ. ಈ ತುಕಡಿಯು 144 ಯುವ ನಾವಿಕರನ್ನು ಒಳಗೊಂಡಿದ್ದು, ನಾರಿ ಶಕ್ತಿ ಸ್ತಬ್ದಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರ್‌ಗಳು ಭಾಗವಹಿಸಲಿದ್ದಾರೆ. ಅಮೃತ್ ಜೊತೆಗೆ, ಮತ್ತೊಬ್ಬ ಮಹಿಳಾ ಅಧಿಕಾರಿ,

ಗಣರಾಜ್ಯೋತ್ಸವ ನೌಕಾಪಡೆ ತಂಡಕ್ಕೆ ಮಂಗಳೂರಿನ ಲೆ|ಕ ದಿಶಾ ಅಮೃತ್ ನೇತೃತ್ವ ! Read More »

ಕರಾವಳಿ, ಕರ್ನಾಟಕ
Scroll to Top