Road accident-Teacher dies

ರಸ್ತೆ ಅಪಘಾತ: ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಮಡಿಕೇರಿ, ಸೆ. 26. ಹುಣಸೂರಿನ ಬನ್ನಿಕುಪ್ಪೆ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಶಿಕ್ಷಕಿ ಕ್ರಿಸ್ಟಲಿನೊ(50) ಮೃತಪಟ್ಟಿದ್ದಾರೆ. ಬುಧವಾರ ತಮ್ಮ ಪುತ್ರನನ್ನು ಮೈಸೂರಿನ ಕಾಲೇಜಿಗೆ ಸೇರಿಸಿ ಪತಿಯೊಂದಿಗೆ ಕಾರಿನಲ್ಲಿ ವಿರಾಜಪೇಟೆಗೆ ಮರಳುತ್ತಿದ್ದ ಸಂದರ್ಭ ಬನ್ನಿಕುಪ್ಪೆ ಬಳಿ ಬೊಲೆರೋ ವಾಹನ ಢಿಕ್ಕಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಕ್ರಿಸ್ಟಲಿನೊರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ರಸ್ತೆ ಅಪಘಾತ: ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ-ಶಿಕ್ಷಕಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,  ಆ. 16. ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಬಂದರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಎಮದು ಗುರುತಿಸಲಾಗಿದೆ.  ಇವರ ಪತಿ ಪೊಲೀಸ್‌ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ.  ಇಂದು (ಶುಕ್ರವಾರ) ಬೆಳಗ್ಗೆ ಶಾಲೆಗೆ ತೆರಳಿದ್ದಅವರಿಗೆ ಅನಾರೋಗ್ಯ ಕಾಡಿದ್ದ ಹಿನ್ನೆಲೆ, ಅಲ್ಲಿಂದ ಮರಳಿ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ  ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ರಸ್ತೆ ಅಪಘಾತ-ಶಿಕ್ಷಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top