ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರ ಬಯಲಿಗೆಳೆದ ಪ್ರಕರಣ ► ಡಿಐಜಿ ರೂಪಾ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.17. ಇತ್ತೀಚಿಗೆ ರಾಜ್ಯದಲ್ಲಿ ಕೋಲಾಹಲವೆಬ್ಬಿಸಿದ್ದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಅವ್ಯವಹಾರವನ್ನು ಬಯಲಿಗೆಳೆದ ಡಿಐಜಿ ರೂಪಾ, ಅವ್ಯವಹಾರ ಆರೋಪ ಹೊತ್ತ ಕಾರಾಗೃಹ ಎಡಿಜಿಪಿ ಎನ್.ಎಚ್. ಸತ್ಯನಾರಾಯಣ ರಾವ್ ಸೇರಿದಂತೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಜೈಲಿನ ಅವ್ಯವಹಾರವನ್ನು ಬಯಲಿಗೆಳೆದ ಡಿಐಜಿ ರೂಪಾ ಡಿ. ಮೌದ್ಗಿಲ್ ರನ್ನು ಸಾರಿಗೆ ಸುರಕ್ಷತಾ ವಿಭಾಗದ ಡಿಐಜಿಯಾಗಿ ವರ್ಗಾಯಿಸಲಾಗಿದೆ. ಜುಲೈ 22 ರಂದು ನಿವೃತ್ತರಾಗಲಿರುವ ಅವ್ಯವಹಾರ ಆರೋಪ ಹೊತ್ತ ಕಾರಾಗೃಹ ಎಡಿಜಿಪಿ […]

