shirva

ಮದ್ಯಪಾನದ ನಶೆಯಲ್ಲಿ ಬಾವಿಗೆ ಹಾರಿ ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಶಿರ್ವ,ಫೆ.07. ಕುಡಿದ ಮತ್ತಿನಲ್ಲಿ ಬಾವಿಗೆ ಹಾರಿದ ಯುವಕ ಮೃತಪಟ್ಟ ಘಟನೆ ವರದಿಯಾಗಿದೆ. ತೊಟ್ಲಗುರಿ ನಿವಾಸಿಯಾದ  ರಾಜು(45) ತನ್ನ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು,ಬಾವಿಗೆ ಹಾರುವ ವೇಳೆ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ. ಕಾಪುವಿನ ಸಮಾಜ ಸೇವಕ ಸೂರಿ ಶೆಟ್ಟಿ ಹಾಗೂ ಅಶೋಕ್ ಶೆಟ್ಟಿ ಮೃತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಉಡುಪಿಯ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಶಿರ್ವ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.    

ಮದ್ಯಪಾನದ ನಶೆಯಲ್ಲಿ ಬಾವಿಗೆ ಹಾರಿ ಯುವಕನೋರ್ವ ಮೃತ್ಯು Read More »

ಕರಾವಳಿ

ಶಿರ್ವ: ಗಾಂಜಾ ಮಾರಾಟ ➤ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಶಿರ್ವ, ಜ. 07. ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನೋರ್ವನನ್ನು ಬಂಧಿಸಿದ ಘಟನೆ ಶಿರ್ವದಲ್ಲಿ ನಡೆದಿದೆ. ಆರೋಪಿಯನ್ನು ಒರಿಸ್ಸಾ ಮೂಲದ ಬಡಾನಿಡಿಯೂರಿನ ಸಾಗರ್ (22) ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 32,000 ಸಾವಿರ ರೂ. ಮೌಲ್ಯದ ಒಂದು ಕೆ.ಜಿ 100 ಗ್ರಾಂ. ಗಾಂಜಾ, 7 ಪ್ಲಾಸ್ಟಿಕ್ ತೊಟ್ಟೆಗಳು, 1200 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ ಬೈಕ್ ಮತ್ತು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಾಗಿದೆ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರ್ವ: ಗಾಂಜಾ ಮಾರಾಟ ➤ ಯುವಕನ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top