ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವೆ: ಸ್ನೇಹಮಯಿ ಕೃಷ್ಣ
(ನ್ಯೂಸ್ ಕಡಬ) newskadaba.com , ಫೆ.07. ಮೈಸೂರು: ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಶುಕ್ರವಾರ ಸುಪ್ರೀಂ ಕೋರ್ಟ್ನಲ್ಲಿ ಈ ತೀರ್ಪನ್ನು ಪ್ರಶ್ನಿಸುವುದಾಗಿ ತಿಳಿಸಿದ್ದಾರೆ. ಮೈಸೂರಿನ ಕೆಸರೆ ಗ್ರಾಮದಲ್ಲಿ ಸ್ವಾಧೀನಪಡಿಸಿಕೊಂಡ ಪಾರ್ವತಿ ಅವರ ಮೂರು ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿ ಮೈಸೂರಿನಲ್ಲಿ 14 ನಿವೇಶನಗಳನ್ನು ಪಡೆದ ಆರೋಪವಿದೆ. ಲೋಕಾಯುಕ್ತ […]

