soudi arabia

ಯಾರೋ ಮಾಡಿದ ತಪ್ಪಿಗೆ ವಿದೇಶದ ಜೈಲಿನಲ್ಲಿದ್ದ ಕಡಬದ ಯುವಕ – ಗೆಳೆಯರ ಸಹಾಯದಿಂದ ಇಂದು ತಾಯ್ನಾಡಿಗೆ ಆಗಮನ

(ನ್ಯೂಸ್ ಕಡಬ) newskadaba.com ಕಡಬ, ನ. 20. ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಕಳೆದ 11 ತಿಂಗಳಿನಿಂದ ಬಂಧಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ನಿವಾಸಿ ಚಂದ್ರಶೇಖರ್‌ ಕೊನೆಗೂ ಬಂಧನ ಮುಕ್ತರಾಗಿ ಇಂದು ಊರಿಗೆ ಆಗಮಿಸಲಿದ್ದಾರೆ. ಸೌದಿಯ ರಿಯಾದ್‌ನಿಂದ ಅಲ್ಲಿನ ಪೊಲೀಸರು ಚಂದ್ರಶೇಖರ್‌ ಅವರನ್ನು ಇಂದು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಬಹುತೇಕ ಸಂಜೆ ಸುಮಾರು ಏಳು ಗಂಟೆ […]

ಯಾರೋ ಮಾಡಿದ ತಪ್ಪಿಗೆ ವಿದೇಶದ ಜೈಲಿನಲ್ಲಿದ್ದ ಕಡಬದ ಯುವಕ – ಗೆಳೆಯರ ಸಹಾಯದಿಂದ ಇಂದು ತಾಯ್ನಾಡಿಗೆ ಆಗಮನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹೃದಯಾಘಾತ- ಬಂಟ್ವಾಳ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 09. ಸೌದಿ ಅರೇಬಿಯಾದಲ್ಲಿ ವೃತ್ತಿಯಲ್ಲಿದ್ದ ಮಾಣಿ ಸಮೀಪದ ಸೂರಿಕುಮೇರು ನಿವಾಸಿ ದಿವಂಗತ ಅಬೂಬಕರ್ ರವರ ಪುತ್ರ ಅಬ್ದುಲ್ ರಝಾಕ್ ಎಂಬವರು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಕಳೆದ 15 ವರ್ಷಗಳಿಂದ ಸೌದಿ ಅರೇಬಿಯಾದ ಅಲ್ ಕೋಬರ್ ನಲ್ಲಿ ವೃತ್ತಿಯಲ್ಲಿದ್ದ ಅವರು ರಜೆಯಲ್ಲಿ ಮನೆಗೆ ಬಂದು 3 ತಿಂಗಳ ಹಿಂದೆಯಷ್ಟೇ ಮರಳಿ ವಿದೇಶಕ್ಕೆ ತರಳಿದ್ದರು ಎಂದು ಹೇಳಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧುಗಳನ್ನು ಅಗಲಿದ್ದಾರೆ.

ಹೃದಯಾಘಾತ- ಬಂಟ್ವಾಳ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top