spot death

ಡ್ರಿಂಕ್ & ಡ್ರೈವ್- ಬೈಕ್ ಢಿಕ್ಕಿ; ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.  22. ಕಂಬವೊಂದಕ್ಕೆ ಬಿಎಂಡಬ್ಲ್ಯು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ಯಶವಂತಪುರದ ಆರ್‌ಎಂಸಿ ಯಾರ್ಡ್‌ ಬಳಿ ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಸಂಭವಿಸಿದೆ. ಮೃತ ಯುವಕರನ್ನು ಮನಮೋಹನ್‌ ಹಾಗೂ ನಿಖಿಲ್‌ ಎಂದು ಗುರುತಿಸಲಾಗಿದೆ. ಇವರಿಬ್ಬರು ಮದ್ಯ ಸೇವಿಸಿದ್ದರು ಹಾಗೂ ಅತಿವೇಗದಿಂದ ಬೈಕ್ ಚಾಲನೆ ಮಾಡಿದ್ದ ಇವರು ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮನೆಗೆ ವಾಪಸಾಗುತ್ತಿದ್ದರು ಎನ್ನಲಾಗಿದೆ. ಯಶವಂತಪುರ ಸಂಚಾರಿ ಪೊಲೀಸರು […]

ಡ್ರಿಂಕ್ & ಡ್ರೈವ್- ಬೈಕ್ ಢಿಕ್ಕಿ; ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು,ಮಾ. 18. ನಿಂತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಂತೂರ್ ಸರ್ಕಲ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ತಂದೆ ಮಗಳಿಬ್ಬರು ದ್ವಿಚಕ್ರ ವಾಹನದಲ್ಲಿ ಕುಳಿತು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಲಾರಿಯು ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ಪರಿಣಾಮ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ – ಮಗಳು ಎನ್ನಲಾಗಿದ್ದು ಮೃತರ ವಾಹನದಲ್ಲಿ ದೊರಕಿದ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್

ಸಿಗ್ನಲ್ ನಲ್ಲಿ ನಿಂತಿದ್ದ ಸ್ಕೂಟರ್ ಗೆ ಲಾರಿ ಢಿಕ್ಕಿ ➤ ತಂದೆ – ಮಗಳು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 17. ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಅರ್ಜುನ್ (28) ಎಂದು ಗುರುತಿಸಲಾಗಿದೆ. ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ರೈಲ್ವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬಂಟ್ವಾಳ: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 28. ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಹಾವೇರಿಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಕಾಸರಗೋಡು ತಳಂಗರೆಯ ನಿವಾಸಿಗಳಾದ ಮುಹಮ್ಮದ್ ಹಾಗೂ ಪತ್ನಿ ಆಯಿಷಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತರ ಪುತ್ರ ಝಿಯಾದ್, ಸೊಸೆ ಹಾಗೂ ಮೊಮ್ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿ‌ನ ಮಾಹಿತಿ ನಿರೀಕ್ಷಿಸಲಾಗಿದೆ.

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ದಂಪತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಕಟ್ಟಡದಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಅ.01. ಇಲ್ಲಿನ ಮುಖ್ಯರಸ್ತೆಯ ಗಾಂಧಿನಗರದಲ್ಲಿರುವ ಜೆ.ಜೆ. ಕಾಂಪ್ಲೆಕ್ಸ್‌ನ ಮಹಡಿಯಿಂದ ಯುವಕನೊಬ್ಬ ಕೆಳಕ್ಕೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರದಂದು ನಡೆದಿದೆ. ಮೃತ ಯುವಕನನ್ನು ಕೋಲ್ಚಾರಿನ ಯತೀಶ್ ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಈತ ಈ ಕಟ್ಟಡದಲ್ಲಿ ಬಾಡಿಗೆ ಕೊಟ್ಟಡಿಯಲ್ಲಿದ್ದು, ಘಟನೆಯ ಸಂದರ್ಭದಲ್ಲಿ ಪಾನಮತ್ತನಾಗಿದ್ದ ಎನ್ನಲಾಗಿದೆ. ಇದರಿಂದಾಗಿ ಆಯತಪ್ಪಿ ಕೆಳಕ್ಕೆ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುಳ್ಯ: ಕಟ್ಟಡದಿಂದ ಬಿದ್ದು ಯುವಕ ಮೃತ್ಯು Read More »

ಕರಾವಳಿ
Scroll to Top