subrahmanya

ಜ.4: ಬಿಳಿನೆಲೆಯಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ

(ನ್ಯೂಸ್ ಕಡಬ) newskadaba.com, ಸುಬ್ರಹ್ಮಣ್ಯ, ಜ.3   ಪುತ್ತೂರು ಶ್ರೀ.ಕ್ರೇ.ಧ.ಗ್ರಾ.ಯೋ.ಬಿ.ಸಿ.ಟ್ರಸ್ಟ್, ಬಿಳಿನೆಲೆ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ಬಿಳಿನೆಲೆ ವಲಯ ಜನಜಾಗೃತಿ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಕಲ್ಫೋಕ್ತ ಪೂಜಾ ಕಾರ್ಯಕ್ರಮ ನಾಳೆ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಲಿದೆ. ಸಂಜೆ ಗಂಟೆ 4ರಿಂದ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, ಗಂಟೆ 5ರಿಂದ ಶನೈಶ್ಚರ ಪೂಜೆ ಪ್ರಾರಂಭಗೊಳ್ಳಲಿದೆ. ಬಿಳಿನೆಲೆ ಶ್ರೀ […]

ಜ.4: ಬಿಳಿನೆಲೆಯಲ್ಲಿ ಸಾಮೂಹಿಕ ಶ್ರೀ ಶನೈಶ್ಚರ ಪೂಜೆ Read More »

ಕರಾವಳಿ

ಸುಬ್ರಹ್ಮಣ್ಯ: ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ಕಾಡಾನೆ ➤ 22 ದಿನಗಳಿಂದ ಕಾಲು ಮುರಿದು ನರಕ ಯಾತನೆ ಅನುಭವಿಸುತ್ತಿದ್ದ ಆನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.29. ಸುಬ್ರಹ್ಮಣ್ಯ ಮೀಸಲು ಅರಣ್ಯದಲ್ಲಿ ಕಾಲು ಮುರಿದು ಕಳೆದ ಮೂರು ವಾರಗಳಿಂದ ನರಕಯಾತನೆ ಅನುಭವಿಸುತ್ತಿದ್ದ ಕಾಡಾನೆಯು ಬುಧವಾರದಂದು ಕೊನೆಯುಸಿರೆಳೆದಿದೆ. ಸುಬ್ರಹ್ಮಣ್ಯ ಮೀಸಲು ಅರಣ್ಯದ ಬಾಳುಗೋಡು ಗ್ರಾಮದ ಪದಕ ಎಂಬಲ್ಲಿ ಕಾಡಾನೆಯೊಂದು ಕಳೆದ ಸುಮಾರು 22 ದಿನಗಳಿಂದ ಮುಂಭಾಗದ ಎಡ ಕಾಲು ಮುರಿದು ನರಕಯಾತನೆ ಅನುಭವಿಸುತ್ತಿತ್ತು. ಸಾರ್ವಜನಿಕರ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯಾಧಿಕಾರಿಗಳು, ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಿದ್ದರು‌. ಚಿಕಿತ್ಸೆ ನೀಡಿಯೂ ಕಾಡಾನೆ ಚೇತರಿಸದೆ ಇದ್ದುದರಿಂದ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ

ಸುಬ್ರಹ್ಮಣ್ಯ: ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ಕಾಡಾನೆ ➤ 22 ದಿನಗಳಿಂದ ಕಾಲು ಮುರಿದು ನರಕ ಯಾತನೆ ಅನುಭವಿಸುತ್ತಿದ್ದ ಆನೆ Read More »

ಕರ್ನಾಟಕ

ಚಿಗುರು ಮೀಸೆಯ ಯುವಕನ ದುರಾಸೆಗೆ ಬಲಿಯಾಯಿತು ಬಡಜೀವ ► ಬಯಲಾಯಿತು ಪಂಬೆತ್ತಾಡಿ ಕೃಷಿಕನ ಕೊಲೆ‌ ಆರೋಪಿ ಬಿಚ್ಚಿಟ್ಟ ರಹಸ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.11. ನಾಲ್ಕು ದಿನಗಳ ಹಿಂದೆ ತನ್ನ ಮನೆಯಲ್ಲೇ ಕೊಲೆಗೈಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಪಂಬೆತ್ತಾಡಿ ಗ್ರಾಮದ ಕಲ್ಚಾರು ಸುಬ್ರಹ್ಮಣ್ಯ ಭಟ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣಕ್ಕೆ ತೆರೆ ಎಳೆದಿದ್ದಾರೆ. ಸೆಪ್ಟೆಂಬರ್ 08 ರಂದು ಸುಬ್ರಹ್ಮಣ್ಯ ಭಟ್ ರವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಅವರ ಮನೆಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಪ್ರಕರಣದ ಆರೋಪಿ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಪಡ ನಿವಾಸಿ ಶೀನಪ್ಪ ಗೌಡ ಎಂಬವರ

ಚಿಗುರು ಮೀಸೆಯ ಯುವಕನ ದುರಾಸೆಗೆ ಬಲಿಯಾಯಿತು ಬಡಜೀವ ► ಬಯಲಾಯಿತು ಪಂಬೆತ್ತಾಡಿ ಕೃಷಿಕನ ಕೊಲೆ‌ ಆರೋಪಿ ಬಿಚ್ಚಿಟ್ಟ ರಹಸ್ಯ Read More »

ಕರಾವಳಿ

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.22. ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಕುಟುಂಬ ಸಮೇತರಾಗಿ ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯಕ್ಕೆ ಗುರುವಾರದಂದು ಭೇಟಿ ನೀಡಿದರು. ರಾಹುಲ್ ಅವರನ್ನು ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಪ್ರಸಾದದೊಂದಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಶ್ರೀ ದೇವಳದ ಶಿಷ್ಠಾಚಾರ ಅಧಿಕಾರಿ ಕೆ.ಎಂ.ಗೋಪಿನಾಥನ್ ನಂಬೀಶ, ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್, ಹರೀಶ್, ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ಸ್ಥಳೀಯರಾದ

ಟೀಂ ಇಂಡಿಯಾದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಕುಕ್ಕೇ ಸುಬ್ರಹ್ಮಣ್ಯಕ್ಕೆ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಉಬರಡ್ಕ: ರಸ್ತೆ ಬಿಟ್ಟು ಮನೆಯ ಛಾವಣಿಗೆ ಹತ್ತಿದ ಕಾರು ► ಸುಬ್ರಹ್ಮಣ್ಯ ಎಸ್ಐ ಗೋಪಾಲ್ ರವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.07. ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ಸುಬ್ರಹ್ಮಣ್ಯ ಠಾಣೆಯ ಉಪ ನಿರೀಕ್ಷಕರಾದ ಗೋಪಾಲ್ ರವರು ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ಗುರುವಾರದಂದು ಬೆಳಿಗ್ಗೆ ನಡೆದಿದೆ. ಸುಬ್ರಹ್ಮಣ್ಯ ಠಾಣಾ ಸಬ್ ಇನ್ಸ್‌ಪೆಕ್ಟರ್ ಗೋಪಾಲ್ ರವರು ಕೊಂಬೋಟು ಕುಟುಂಬದ ಕಾರ್ಯಕ್ರಮವನ್ನು ಮುಗಿಸಿ ಗುರುವಾರದಂದು ಬೆಳಿಗ್ಗೆ ಹಿಂತಿರುಗುತ್ತಿದ್ದಾಗ ಉಬರಡ್ಕದ ಮಿತ್ತೂರು ಎಂಬಲ್ಲಿ ಗೋಪಾಲ್ ರವರು ಚಲಾಯಿಸುತ್ತಿದ್ದ ಮಾರುತಿ ಆಲ್ಟೋ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಮನೆಯೊಂದರ ಛಾವಣಿಗೆ ಹತ್ತಿ ನಿಂತಿದೆ. ಇದರಿಂದಾಗಿ ಗೋಪಾಲ್

ಉಬರಡ್ಕ: ರಸ್ತೆ ಬಿಟ್ಟು ಮನೆಯ ಛಾವಣಿಗೆ ಹತ್ತಿದ ಕಾರು ► ಸುಬ್ರಹ್ಮಣ್ಯ ಎಸ್ಐ ಗೋಪಾಲ್ ರವರಿಗೆ ಗಾಯ Read More »

ಕರಾವಳಿ

ವಿಜೃಂಭಣೆಯಿಂದ ನಡೆದ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.24. ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಬ್ರಹ್ಮ ರಥೋತ್ಸವ ನಡೆಯಿತು. ದೇಶದ ವಿವಿಧ ರಾಜ್ಯಗಳಿಂದ ಸಹಸ್ರಾರು ಭಕ್ತರು ಚಂಪಾ ಷಷ್ಠಿ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು. ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಕಳೆದ ಮೂರು ದಿನಗಳಿಂದ ಮಡೆಸ್ನಾನದ ಬದಲಿಯಾಗಿ ಎಡೆ ಸ್ನಾನ ನಡೆಯುತ್ತಿದ್ದು ಇಂದು ಕೊನೆಯ ದಿನವಾಗಿದೆ. ಚಂಪಾಷಷ್ಟಿಯ ಮೂರು ದಿನಗಳಲ್ಲೂ ಈ ಸೇವೆಯನ್ನು ನಡೆಸಲಾಗುತ್ತಿದೆ. ಧಾರ್ಮಿಕಧತ್ತಿ ಇಲಾಖೆಯ ನೇತೃತ್ವದಲ್ಲಿ ಈ ಸೇವೆಯನ್ನು

ವಿಜೃಂಭಣೆಯಿಂದ ನಡೆದ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವ Read More »

ಕರಾವಳಿ

ಸುಬ್ರಹ್ಮಣ್ಯ: ಟೆಂಪೊ ಟ್ರಾವೆಲ್ಲರ್ – ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ ► ಮೂವರಿಗೆ ಗಾಯ, ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.22. ಟೆಂಪೊ ಟ್ರಾವೆಲ್ಲರ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಮೂವರು ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಬೆಂಗಳೂರಿನ ಯಲಹಂಕದ ಸೌಮ್ಯ(36), ಗಂಗಮ್ಮ(84) ಗಂಭೀರ ಗಾಯಗೊಂಡಿದ್ದು, ಪೂರ್ಣಿಮಾ(34) ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಸುಬ್ರಹ್ಮಣ್ಯ: ಟೆಂಪೊ ಟ್ರಾವೆಲ್ಲರ್ – ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿ ಢಿಕ್ಕಿ ► ಮೂವರಿಗೆ ಗಾಯ, ಇಬ್ಬರು ಗಂಭೀರ Read More »

ಕರಾವಳಿ

ನಾಳೆ (ಸೆ.17) ಸುಬ್ರಹ್ಮಣ್ಯದಲ್ಲಿ ಟಿವಿಎಸ್ ಔಟ್ ಲೆಟ್ ಶುಭಾರಂಭ ► ಟಿವಿಎಸ್ ಅಧಿಕೃತ ಡೀಲರ್ ಅಡಿಗ ಮೋಟಾರ್ಸ್ ನ ಅಂಗಸಂಸ್ಥೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.16. ಕುಕ್ಕೇಶ್ರೀ ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಟಿವಿಎಸ್ ದ್ವಿಚಕ್ರ ವಾಹನಗಳಿಗೆ ಉತ್ತಮ ರೀತಿಯಲ್ಲಿ ಸರ್ವೀಸ್ ನೀಡುವ ಸಲುವಾಗಿ ಕಂಪನಿಯ ಅಧಿಕೃತ ಮಾರಾಟಗಾರರಾದ ಕಡಬದ ಅಡಿಗ ಮೋಟಾರ್ಸ್ ನ ಅಂಗ ಸಂಸ್ಥೆಯು ಸೆಪ್ಟೆಂಬರ್ 17ನೇ ಭಾನುವಾರದಂದು ಸುಬ್ರಹ್ಮಣ್ಯದಲ್ಲಿ ಶುಭಾರಂಭಗೊಳ್ಳಲಿದೆ. ಕುಕ್ಕೇ ಸುಬ್ರಹ್ಮಣ್ಯದ ಕುಲ್ಕುಂದ ಭಾರತ್ ಪೆಟ್ರೋಲ್ ಪಂಪ್ ಮುಂಭಾಗದ ಕಟ್ಟಡದಲ್ಲಿ ಆರಂಭಗೊಳ್ಳಲಿರುವ ಔಟ್ ಲೆಟ್ ನಲ್ಲಿ ಜುಪಿಟರ್, ಅಪಾಚಿ, ವಿಕ್ಟರ್, ವೇಗೋ, ಸ್ಕೂಟಿ ಸೇರಿದಂತೆ ವಿವಿಧ ಮಾದರಿಯ ಟಿವಿಎಸ್ ಕಂಪೆನಿಯ ದ್ವಿಚಕ್ರ ವಾಹನಗಳ ಮಾರಾಟ

ನಾಳೆ (ಸೆ.17) ಸುಬ್ರಹ್ಮಣ್ಯದಲ್ಲಿ ಟಿವಿಎಸ್ ಔಟ್ ಲೆಟ್ ಶುಭಾರಂಭ ► ಟಿವಿಎಸ್ ಅಧಿಕೃತ ಡೀಲರ್ ಅಡಿಗ ಮೋಟಾರ್ಸ್ ನ ಅಂಗಸಂಸ್ಥೆ Read More »

ಕರಾವಳಿ

ಸುಬ್ರಹ್ಮಣ್ಯ: ಜೀಪು – ಬಸ್ ಢಿಕ್ಕಿ ► ಓರ್ವ ಮೃತ್ಯು – ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.14. ಸಮೀಪದ ಗುತ್ತಿಗಾರು ತಾಳೂರು ಎಂಬಲ್ಲಿ ಜೀಪ್ ಹಾಗೂ ಬಸ್ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ. ಕೆಎಸ್ಸಾರ್ಟಿಸಿ ಬಸ್ ಹಾಗೂ ಖಾಸಗಿ ಜೀಪ್‌ನಡುವೆ ಸಂಭವಿಸಿದ ಅಪಘಾತದಲ್ಲಿ ಜೀಪಿನಲ್ಲಿದ್ದ ಸುಳ್ಯ ತಾಲೂಕಿನ ಹಳೇಮಜಲು ನಿವಾಸಿ ಶಶಿ ಎಂಬವರು ಹೊರಕ್ಕೆಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಬ್ರಹ್ಮಣ್ಯ: ಜೀಪು – ಬಸ್ ಢಿಕ್ಕಿ ► ಓರ್ವ ಮೃತ್ಯು – ಮೂವರು ಗಂಭೀರ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿವಿರುದ್ದ ದಿಕ್ಕಿಗೆ ಚಲಿಸಿದ ಲಾರಿ ► ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಆ.29. ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಿರುವಿನಲ್ಲಿ ಲಾರಿಯೊಂದು ಚರಂಡಿಗೆ ಇಳಿದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ತಮಿಳುನಾಡು ನೋಂದಣಿಯ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನ ಚರಂಡಿಗೆ ಇಳಿದಿದ್ದು, ಬಲಭಾಗ ಜಖಂಗೊಂಡಿದೆ. ಲಾರಿಯಲ್ಲಿ ಚಾಲಕ ಹಾಗೂ ಕ್ಲೀನರ್ ಇದ್ದು, ಅಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿವಿರುದ್ದ ದಿಕ್ಕಿಗೆ ಚಲಿಸಿದ ಲಾರಿ ► ಅಪಾಯದಿಂದ ಪಾರು Read More »

ಕರಾವಳಿ
Scroll to Top