suicide

ತಂದೆಯ ಸಾವಿನ ಸುದ್ದಿ ತಿಳಿದ ಬಳಿಕ ಬಾವಿಗೆ ಹಾರಿದ 11 ವರ್ಷದ ಬಾಲಕಿ

(ನ್ಯೂಸ್ ಕಡಬ)newskadaba.com  ಮಧ್ಯಪ್ರದೇಶ, ಜ.21. ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯಲ್ಲಿ ತಂದೆಯ ಸಾವಿನ ಸುದ್ದಿ ತಿಳಿದ 11 ವರ್ಷದ ಬಾಲಕಿ ಬಾವಿಗೆ ಹಾರಿ ಮೃತಪಟ್ಟಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಬರ್ಖೇಡಾ ಜಾಗೀರ್ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ದೇಹತ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಪಹಲ್ವಾನ್ ಚೌಹಾನ್ ಹೇಳಿದ್ದಾರೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯ ತಂದೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆಗೆ ಬರುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಸಾವಿನ ಸುದ್ದಿಯನ್ನು ಅವರ […]

ತಂದೆಯ ಸಾವಿನ ಸುದ್ದಿ ತಿಳಿದ ಬಳಿಕ ಬಾವಿಗೆ ಹಾರಿದ 11 ವರ್ಷದ ಬಾಲಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಟೋ ಹತ್ತಿದ ಮಗಳನ್ನೇ ಪಟಾಯಿಸಿದ ➤ ಸೂಸೈಡ್​ ನಾಟಕ ಮಾಡಿದ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ಆಟೋ ಡ್ರೈವರ್ ಜೊತೆಗೆ ಪ್ರೀತಿಗೆ ಬಿದ್ದಿದ್ದ ಮಗಳಿಗೆ ಪೋಷಕರು ಬುದ್ಧಿಮಾತು ಹೇಳಲು ಮುಂದಾಗಿದ್ದರು. ಆದರೆ ಈ ವೇಳೆ ಆತ್ಮಹತ್ಯೆ ಮಾಡಿಕೊಳ್ಳುವ ನಾಟಕ ಮಾಡಿದ್ದ ಯುವತಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಹೆಚ್​​ಎಎಲ್​​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಲಾವಣ್ಯ ಎಂದು ಗುರುತಿಸಲಾಗಿದ್ದು, ತನ್ನ ಪ್ರೀತಿಯನ್ನು ಸಾಬೀತು ಪಡಿಸಲು ಮುಂದಾಗಿ ವಿಷ ಸೇವನೆ ಮಾಡಿದ್ದ ಯುವತಿ ಸಾವು ಬದುಕಿನ ನಡುವಿನ ಹೋರಾಟದಲ್ಲಿ ಕೊನೆಯುಸಿರೆಳೆದಿದ್ದಾಳೆ.  

ಆಟೋ ಹತ್ತಿದ ಮಗಳನ್ನೇ ಪಟಾಯಿಸಿದ ➤ ಸೂಸೈಡ್​ ನಾಟಕ ಮಾಡಿದ ಯುವತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಕಳ: ಮಾನಸಿಕವಾಗಿ ನೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಜ.21. ನೇಣುಬಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡ್ಲಿಯಲ್ಲಿ ನಡೆದಿದೆ.ಮಜಯ ಪೂಜಾರಿ (48) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಅಂಗಡಿಗೆ ಹೋಗಿ ವಿಳ್ಯದೆಲೆ ಖರೀದಿಸಿಕೊಂಡು ಬರುತ್ತೇನೆಂದು ಹೇಳಿ ಮನೆಯಿಂದ ಹೋದವರು ವಾಪಾಸ್ ಬರದೇ ಇದ್ದುದರಿಂದ ಮನೆಯವರು ಹುಡುಕಾಡಿದಾಗ ಬೆಳ್ಸಾರ್‌ ಬೆಟ್ಟು ನರ್ಸರಿ ಎಂಬಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಪರೀತ ಮದ್ಯ ಸೇವನೆಯ ಚಟವೊಂದಿದ್ದ ಅವರು ಕಳೆದು ಏಳು ತಿಂಗಳಿಂದ ಕುಡಿತದ ಚಟದಿಂದ ಮುಕ್ತರಾಗಿದ್ದರು. ಯಾವುದೋ ಘಟನೆಯಿಂದಾಗಿ ಮಾನಸಿಕವಾಗಿ

ಕಾರ್ಕಳ: ಮಾನಸಿಕವಾಗಿ ನೊಂದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ ➤ಮೂವರ ಮೃತದೇಹ ನದಿಯಲ್ಲಿ ಪತ್ತೆ..!

(ನ್ಯೂಸ್ ಕಡಬ)newskadab.com ಬಾಗಲಕೋಟೆ, ಜ.18. ವಯಸ್ಸಿಗೆ ಬಂದ ಹೆಣ್ಣುಮಕ್ಕಳಿಬ್ಬರ ಸಹಿತ ತಾಯಿಯೊಬ್ಬರು ನದಿಗೆ ಹಾರಿದ ಪ್ರಕರಣವೊಂದು ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಲಪ್ರಭಾ ಸೇತುವೆ ಬಳಿ ಈ ಪ್ರಕರಣ ನಡೆದಿದ್ದು, ಡೆತ್​ನೋಟ್ ಕೂಡ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಉಮಾ ಸುರೇಶ ಮಾಸರೆಡ್ಡಿ (42) ಎಂಬಾಕೆ ತನ್ನ ಮಕ್ಕಳಾದ ಐಶ್ವರ್ಯ (23) ಹಾಗೂ ಸೌಂದರ್ಯ (19) ಅವರೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮತಗಿ ಪಟ್ಟಣದ ಮಲಪ್ರಭಾ ಸೇತುವೆ ಬಳಿ ಇವರ ಶವ ಪತ್ತೆಯಾಗಿದೆ. ಪುತ್ರಿಯರಲ್ಲಿ ಐಶ್ವರ್ಯ ಬೆಂಗಳೂರಿನಲ್ಲಿ

ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ ➤ಮೂವರ ಮೃತದೇಹ ನದಿಯಲ್ಲಿ ಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯೂಟ್ಯೂಬ್ ವಿಡಿಯೋ ಪ್ರಯೋಗ ಮಾಡಲು ಹೋಗಿ ಬಾಲಕಿ ಆತ್ಮಹತ್ಯೆ..??

(ನ್ಯೂಸ್ ಕಡಬ) newskadaba.com ಉಡುಪಿ, ಜ. 16. ವಿದ್ಯಾರ್ಥಿನಿಯೋರ್ವಳು ಯೂಟ್ಯೂಬ್ ನೋಡಿ ಪ್ರಯೋಗ ಮಾಡುತ್ತಿದ್ದ ವೇಳೆ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಉಡುಪಿಯ ಬ್ರಹ್ಮಗಿರಿಯ ಪ್ರವೀಣ್ ಶೆಟ್ಟಿ ಎಂಬವರ ಪುತ್ರಿ ಮಂಗಳಾದೇವಿ(11) ಎಂದು ಗುರುತಿಸಲಾಗಿದೆ. 6ನೇ ತರಗತಿಯಲ್ಲಿ ಓದುತ್ತಿದ್ದ ಈಕೆ ಯೂಟ್ಯೂಬ್ ನಲ್ಲಿ ಬರುವ ವಿಡಿಯೋಗಳನ್ನು ನೋಡಿ ಅದನ್ನು ಪ್ರಯೋಗ ಮಾಡುವ ಅಭ್ಯಾಸ ಬೆಳೆಸಿಕೊಂಡಿದ್ದಳು. ಅದರಂತೆ ಬಾತ್ರೂಮ್ ನಲ್ಲಿ ಬಟ್ಟೆ ಕಟ್ಟಿ ಯಾವುದೋ ಪ್ರಯೋಗ ಮಾಡುವ ವೇಳೆ ಕುತ್ತಿಗೆಗೆ ಬಟ್ಟೆ ಬಿಗಿದುಕೊಂಡು ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಯೂಟ್ಯೂಬ್ ವಿಡಿಯೋ ಪ್ರಯೋಗ ಮಾಡಲು ಹೋಗಿ ಬಾಲಕಿ ಆತ್ಮಹತ್ಯೆ..?? Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯಲ್ಲಿ ಪ್ರೀತಿಗೆ ವಿರೋಧ ಹಿನ್ನೆಲೆ ➤ ಪ್ರೇಮಿಗಳಿಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com   ಕೊಪ್ಪಳ, ಜ.14. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ  ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಪ್ರೇಮಿಗಳಿಬ್ಬರು ಚಾಕುವಿನಿಂದ  ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಯುಸಿ ಓದುತ್ತಿರುವ 17ರ ಹರೆಯದ ಸುಮಾ ಮತ್ತು ಪಿಯುಸಿ ಮುಗಿಸಿ ಐಟಿಐ ಓದುತ್ತಿದ್ದ  ಪ್ರಕಾಶ್ (20) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.  ಕಳೆದ ಹಲವು ದಿನಗಳಿಂದ ಪ್ರೇಮಿಗಳು ಪ್ರೀತಿಸುತ್ತಿದ್ದರು.  ಇವರಿಬ್ಬರ ಪ್ರೀತಿಗೆ ಹುಡುಗಿ ಮನೆಯಲ್ಲಿ ವಿರೋಧ ಇತ್ತು. ಈ ಹಿನ್ನಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಪ್ರೀತಿಗೆ ವಿರೋಧ ಹಿನ್ನೆಲೆ ➤ ಪ್ರೇಮಿಗಳಿಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ಆತ್ಮಹತ್ಯೆ   ➤ ನೊಂದ ಮಗ ನೇಣಿಗೆ ಶರಣು..!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.14. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ- ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಲೇಔಟ್‌ನಲ್ಲಿ ನಡೆದಿದೆ. ಕುಮಾರಸ್ವಾಮಿ ಲೇಔಟ್‌ನ ವಿಜಯಲಕ್ಷ್ಮಿ (50) ಹಾಗೂ ಅವರ ಪುತ್ರ ಹರ್ಷ (25) ಎಂದು ಗುರುತಿಸಲಾಗಿದೆ. ತಾಯಿ ವಿಜಯಲಕ್ಷ್ಮಿ ಜೊತೆ ಊಟದ ವಿಚಾರಕ್ಕೆ ಮಗ ಹರ್ಷ ರಾತ್ರಿ ಜಗಳವಾಡಿದ್ದ. ಮಗನ ಮಾತಿನಿಂದ ಮನನೊಂದ ವಿಜಯಲಕ್ಷ್ಮಿ ಮನೆಯ ಬಳಿ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ವಿಜಯಲಕ್ಷ್ಮಿ ಅವರನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆ ತಾಯಿ ಆತ್ಮಹತ್ಯೆ   ➤ ನೊಂದ ಮಗ ನೇಣಿಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ ! ➤  ಅನುಮಾನ ವ್ಯಕ್ತಪಡಿಸಿದ ಪೋಷಕರು     

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ಪ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ವರದಿಯಾಗಿದೆ. ನಗರದ ದೀಪಾಂಜಲಿ ನಗರದಲ್ಲಿ 22 ವರ್ಷದ ಝೈದಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಸೈಫ್ ಅಲಿಯೊಂದಿಗೆ ಮೃತ ಝೈದಾಗೆ ಪೋಷಕರು ವಿವಾಹ ಮಾಡಿಸಿದ್ದರು. ಆ ಬಳಿಕ ಪತಿ ಝೈದಾಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪವನ್ನು ಕುಟುಂಬ ಮಾಡಿದೆ. ಈ ಕುರಿತು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎನ್ನಲಾಗಿದೆ.

ಪ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ ! ➤  ಅನುಮಾನ ವ್ಯಕ್ತಪಡಿಸಿದ ಪೋಷಕರು      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12.  ಪ್ರತ್ಯೇಕ ಘಟನೆಗಳಿಂದಾಗಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಕಾನೂನು ವಿದ್ಯಾರ್ಥಿ ರಿಜ್ವಾನ್ (25) ಮತ್ತು ಡಿಫಾರ್ಮಸಿ ವಿದ್ಯಾರ್ಥಿ ಶ್ರೀನಾಥ್ (25) ಎಂದು ಗುರುತಿಸಲಾಗಿದೆ. ರಿಜ್ವಾನ್ ಕೆ.ಜಿ.ಹಳ್ಳಿಯ ಪಿ ಮತ್ತು ಟಿ ಕಾಲೋನಿ ನಿವಾಸಿಯಾಗಿದ್ದರೆ, ಶ್ರೀನಾಥ್ ಕೋಲಾರದ ಶ್ರೀನಿವಾಸಪುರದವರಾಗಿದ್ದು, ಕೆಆರ್ ಪುರಂನ ಫಾರ್ಮಸಿ ಕಾಲೇಜಿನಲ್ಲಿ ಓದುತ್ತಿದ್ದರೆಂದು ತಿಳಿದುಬಂದಿದೆ. ಕೆಲ ತಿಂಗಳ ಹಿಂದೆ ರಿಜ್ವಾನ್ ಮದುವೆಯಾಗಿತ್ತು ಎನ್ನಲಾಗಿದೆ. ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ

ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಗು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಕೊಡಗು, ಜ.11. ಪಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣದ ನೇತಾಜಿ ಬಡಾವಣೆಯಲ್ಲಿ ವರದಿಯಾಗಿದೆ. ಬಡಾವಣೆ ನಿವಾಸಿ ಸಂತೋಷ್ ಎಂಬುವವರ ಪುತ್ರಿ ಜಸ್ಮಿತಾ(19) ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ. ಈಕೆ ಮಡಿಕೇರಿ ವೈದ್ಯಕೀಯ ಕಾಲೇಜಿನಲ್ಲಿ ಪಾರಾ ಮೆಡಿಕಲ್ ಕೋರ್ಸ್ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಕುಶಾಲನಗರ ಟೌನ್‌ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.  

ಕೊಡಗು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top