suicide

ಪುತ್ತಿಗೆ: ಬಾವಿಯಲ್ಲಿ‌ ನವಜಾತ ಶಿಶುವಿನ ಶವ ಪತ್ತೆ ► ಭಾನುವಾರದಂದು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಅವಿವಾಹಿತ ಯುವತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.01. ನವಜಾತ ಶಿಶುವಿನ ಮೃತದೇಹ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಇಲ್ಲಿನ ಪುತ್ತಿಗೆ ಗ್ರಾಮದ ನೆಲ್ಲಿಗುಡ್ಡೆ ನೀರಪಲ್ಕೆ ಎಂಬಲ್ಲಿ ಮಂಗಳವಾರದಂದು ಬೆಳಿಗ್ಗೆ ನಡೆದಿದೆ. ಪುತ್ತಿಗೆ ಗ್ರಾಮದ ಅವಿವಾಹಿತ ಯುವತಿಯೊಬ್ಬಳು ಭಾನುವಾರದಂದು ಇದೇ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಾವಿಗೆ ಹಾರಿರುವುದನ್ನು ತಿಳಿದ ಸ್ಥಳೀಯರು ಆಕೆಯನ್ನು ರಕ್ಷಣೆ ಮಾಡಿ‌ ಮಂಗಳೂರಿನ ಅಸ್ಪತ್ರೆಗೆ ದಾಖಲಿಸಿದ್ದರು. ಅಕೆ ಗರ್ಭಿಣಿಯಾಗಿದ್ದು ಇದೇ ಕಾರಣಕ್ಕಾಗಿ ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿರಬಹುದೆಂದು‌ ಅಂದಾಜಿಸಲಾಗಿದೆ. ಬಾವಿಗೆ ಹಾರಿದ ಸಂದರ್ಭದಲ್ಲಿ ಗರ್ಭಪಾತವಾಗಿರಬಹುದೆಂದು ಅಂದಾಜಿಸಲಾಗಿದೆ.

ಪುತ್ತಿಗೆ: ಬಾವಿಯಲ್ಲಿ‌ ನವಜಾತ ಶಿಶುವಿನ ಶವ ಪತ್ತೆ ► ಭಾನುವಾರದಂದು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಅವಿವಾಹಿತ ಯುವತಿ Read More »

ಕರಾವಳಿ

ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆಯ ಸುತ್ತ ಸಂಶಯದ ಹುತ್ತ ► ಕಾವ್ಯಳನ್ನು ಕೊಲೆ ಮಾಡಲಾಗಿದೆಯೆಂದು ಆರೋಪಿಸಿದ ಪೋಷಕರು

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಜು.27. ನ್ಯಾಶನಲ್ ಲೆವಲ್ ಬ್ಯಾಡ್ಮಿಂಟನ್ ಚಾಂಪಿಯನ್ ವಿದ್ಯಾರ್ಥಿನಿಯೊಬ್ಬಳು ವಾರದ ಹಿಂದೆ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಹೊಸ ತಿರುವನ್ನು ಪಡೆದುಕೊಂಡಿದೆ. ಇದು ಆತ್ಮಹತ್ಯೆಯಲ್ಲ ಇದು ಒಂದು ಕೊಲೆ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ. ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯಾಗಿದ್ದ ಕಾವ್ಯ(15) ಜುಲೈ 20ರಂದು ಹಾಸ್ಟೆಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಳೆ ಎಂದು ಶಾಲೆಯಿಂದ ಮನೆಯವರಿಗೆ ತಿಳಿಸಲಾಗಿತ್ತು. ಆದರೆ ಹೆತ್ತವರು ಅಲ್ಲಿಗೆ ತೆರಳುವಷ್ಟರಲ್ಲಿ ವಿದ್ಯಾರ್ಥಿನಿಯ ಶವವನ್ನು ಆಳ್ವಾಸ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಇದೀಗ ಹೆತ್ತವರು ಕಾವ್ಯ

ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಆತ್ಮಹತ್ಯೆಯ ಸುತ್ತ ಸಂಶಯದ ಹುತ್ತ ► ಕಾವ್ಯಳನ್ನು ಕೊಲೆ ಮಾಡಲಾಗಿದೆಯೆಂದು ಆರೋಪಿಸಿದ ಪೋಷಕರು Read More »

ಕರಾವಳಿ

ಕಡಬ: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಜು.24. ಠಾಣಾ ವ್ಯಾಪ್ತಿಯ ಕುಟ್ರುಪ್ಪಾಡಿ ನಿವಾಸಿ ರೈತನೋರ್ವ ಸಾಲ ಬಾಧೆಯಿಂದಾಗಿ ಬೇಸತ್ತು ಶನಿವಾರದಂದು ವಿಷ ಸೇವಿಸಿದ್ದು, ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತಪಟ್ಟ ರೈತನನ್ನು ಕುಟ್ರುಪ್ಪಾಡಿ ಕಾಂಞರವಿಳ ನಿವಾಸಿ ರಾಜು(54) ಎಂದು ಗುರುತಿಸಲಾಗಿದೆ‌. ಅಪಾರ ಸಾಲದಿಂದಿದ್ದು, ಕೃಷಿಯಲ್ಲಿನ ಬೆಲೆಯೇರಿಕೆಯಿಂದಾಗಿ ಬೇಸತ್ತು ಶನಿವಾರ ಸಂಜೆ ವಿಷ ಸೇವಿಸಿದ ರಾಜುರವರು ಪುತ್ತೂರಿನ ಪ್ರಗತಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದರು. ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆನ್ನಲಾಗಿದೆ‌.

ಕಡಬ: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ Read More »

ಕರಾವಳಿ

ಸುಬ್ರಹ್ಮಣ್ಯ: ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ► ಶವದ ಮಾಂಸ ಕೊಳೆತು ಎಲುಬುಗಳು ಮಾತ್ರ ಬಾಕಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು.14. ಅಪರಿಚಿತ ಮಹಿಳೆಯೋರ್ವರ ಶವವೊಂದು ಕುಕ್ಕೇ ಸುಬ್ರಹ್ಮಣ್ಯದ ಕುಮಾರಧಾರಾ ಸೇತುವೆಯ ಸಮೀಪದ ಕಾಡಿನಲ್ಲಿ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿದೆ. ಸುಮಾರು 40 ರಿಂದ 50 ವರ್ಷ ಪ್ರಾಯದ ಮಹಿಳೆಯ ಶವವು ಇದಾಗಿರಬಹುದೆಂದು ಅಂದಾಜಿಸಲಾಗಿತ್ತು, ಶವದ ಪಕ್ಕದಲ್ಲೇ ವಿಷದ ಬಾಟಲಿಯೊಂದು ಪತ್ತೆಯಾಗಿರುವುದರಿಂದ ಮಹಿಳೆ ಆತ್ಮಹತ್ಯೆಗೈದಿರಬಹುದೆಂದು ಅಂದಾಜಿಸಲಾಗಿದೆ. ಆತ್ಮಹತ್ಯೆಗೈದು ಎರಡರಿಂದ ಮೂರು ತಿಂಗಳುಗಳಾಗಿರಬಹುದೆಂದು ಅಂದಾಜಿಸಲಾಗಿದ್ದು, ಶವವು ಸಂಪೂರ್ಣ ಕೊಳೆತು ಎಲುಬುಗಳು ಮಾತ್ರ ಕಂಡುಬಂದಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಸುಬ್ರಹ್ಮಣ್ಯ: ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ► ಶವದ ಮಾಂಸ ಕೊಳೆತು ಎಲುಬುಗಳು ಮಾತ್ರ ಬಾಕಿ Read More »

ಕರಾವಳಿ

ಬಾವಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.14.  ಇಲ್ಲಿಗೆ ಸಮೀಪದ ಕೋಣಾಲು ಗ್ರಾಮದ ಮುಡಿಪಿನಡ್ಕ ಎಂಬಲ್ಲಿ ವೃದ್ದರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೈದ ಘಟನೆ ಬುಧವಾರದಂದು ನಡೆದಿದೆ. ಮುಡಿಪಿನಡ್ಕ ನಿವಾಸಿ ಕರಿಯಪ್ಪ ಗೌಡ (80) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವೃದ್ಧ. ಇಂದು ಬೆಳಗ್ಗೆ ಮನೆಯಿಂದ ನಾಪತ್ತೆಯಾಗಿದ್ದ ಇವರನ್ನು ಹುಡುಕಿದಾಗ ಮನೆ ಸಮೀಪದ ಬಾವಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಮದ್ಯವ್ಯಸನಿಯಾಗಿದ್ದ ಇವರು ಅದೇ ಕಾರಣಕ್ಕೆ ಕರುಳ ಬೇನೆಗೆ ಸಿಲುಕಿದ್ದರು. ಇದರಿಂದಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು

ಬಾವಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ
Scroll to Top