suicide

ಯುವಕ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 01. ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೂಸಾ ಎಂಬವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಹನ್ಸೀಫ್ ಅವರ ತಾಯಿ ಎರ್ನಾಕುಲಂ ಗೆ ಹೋಗಿದ್ದ ವೇಳೆ ಮನೆಯಲ್ಲಿ ಈತ ಒಬ್ಬನೇ ಇದ್ದು, ಸಂಜೆ ವೇಳೆ ಅರಂತೋಡಿನ ತನ್ನ ಅಜ್ಜಿ ಮನೆಗೆ ಹೋಗಿ ಮಾತನಾಡಿ ಪುನಃ ಮನೆಗೆ ಮರಳಿದ್ದ ಎನ್ನಲಾಗಿದೆ. ರಾತ್ರಿ ತಾಯಿ ಫೋನ್ ಮಾಡಿ ಮಾತನಾಡಿದ್ದು, ಬಳಿಕ […]

ಯುವಕ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ವಿವಾಹಿತ ಮಹಿಳೆಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಐಶ್ವರ್ಯ ಎಂದು ಗುರುತಿಸಲಾಗಿದೆ. ಕಬ್ಬನ್ ಪೇಟೆಯ 2ನೇ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯೂಟ್ಯೂಬ್ ವಿಡಿಯೋ ನೋಡುವ ಮುನ್ನ ಎಚ್ಚರ – ವಿಡಿಯೋ ಅನುಕರಣೆ ಮಾಡಲು ಹೋಗಿ ಪ್ರಾಣತೆತ್ತ ಬಾಲಕ

(ನ್ಯೂಸ್ ಕಡಬ) newskadaba.com ತೆಲಂಗಾಣ, ಜು. 24. ಬಾಲಕನೋರ್ವ ಯೂಟ್ಯೂಬ್ ವಿಡಿಯೋವೊಂದನ್ನು ಅನುಕರಣೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ಸಿರಿಸಿಲ್ಲಾ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು 11ರ ಬಾಲಕ ರನೇ ತರಗತಿ ವಿದ್ಯಾರ್ಥಿ ಉದಯ್ ಎಂದು ಗುರುತಿಸಲಾಗಿದೆ. ಈತ ರಾತ್ರಿ ವೇಳೆ ಊಟ ಮುಗಿಸಿ ಕೋಣೆಗೆ ಹೋದವ ಬಾಗಿಲು ಚಿಲಕ ಹಾಕಿಕೊಂಡು ಮೊಬೈಲ್​ ನೋಡಲು ಪ್ರಾರಂಭಿಸಿದ್ದಾನೆ. ಉದಯ್ ನ ಪೋಷಕರು ಎಷ್ಟೇ ಕರೆದರೂ ಉತ್ತರ ನೀಡದೇ ಇದ್ದು, ಕರೆ ಮಾಡಿದಾಗಲೂ ಪ್ರತಿಕ್ರಿಯಿಸಿರಲಿಲ್ಲ. ನಂತರ ಅವರು

ಯೂಟ್ಯೂಬ್ ವಿಡಿಯೋ ನೋಡುವ ಮುನ್ನ ಎಚ್ಚರ – ವಿಡಿಯೋ ಅನುಕರಣೆ ಮಾಡಲು ಹೋಗಿ ಪ್ರಾಣತೆತ್ತ ಬಾಲಕ Read More »

ರಾಷ್ಟ್ರೀಯ ನ್ಯೂಸ್

ಜ್ಯುವೆಲ್ಲರ್ಸ್ ಮಾಲೀಕ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ಚಿನ್ನಾಭರಣ ಅಂಗಡಿ ಮಾಲೀಕರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಿನ್ನಿಗೋಳಿ ರಾಮನಗರ ನಿವಾಸಿ ಶ್ರೀಧರ ಆಚಾರ್ಯ ಜ್ಯುವೆಲರ್ಸ್ ಮಾಲೀಕ ಉಮೇಶ್ ಆಚಾರ್ಯ (62) ಎಂದು ಗುರುತಿಸಲಾಗಿದೆ. ಮಾನಸಿಕವಾಗಿ ನೊಂದಿದ್ದ ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ರೋಟರಿ ಕ್ಲಬ್‌ನ ಮಾಜಿ ಅಧ್ಯಕ್ಷರು ಹಾಗೂ ವಿಶ್ವಬ್ರಾಹ್ಮಣ ಸೇವಾ ಸಂಘದ ಗೌರವಾಧ್ಯಕ್ಷರೂ ಆಗಿದ್ದ  ಅವರು ಪತ್ನಿಯನ್ನು ಅಗಲಿದ್ದಾರೆ.

ಜ್ಯುವೆಲ್ಲರ್ಸ್ ಮಾಲೀಕ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರ್ಕಳ, ಜು. 19. ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ವರದಿಯಾಗಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಕೌಶಿಕ್(17) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕೌಶಿಕ್ ಬಜಗೋಳಿಯಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಪಿಯುಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು. 19. ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಬೇಳದಲ್ಲಿ ಸಂಭವಿಸಿದೆ. ಮೃತರನ್ನು ದಾಮೋದರ ಪುತ್ರಿ ಅಶ್ವತಿ(25) ಎಂದು ಗುರುತಿಸಲಾಗಿದೆ. ಅಶ್ವಥಿಯವರ ಮೃತದೇಹ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಈ ಕೃತ್ಯ ನಡೆದಿದೆ. ತಾಯಿ ಸುಜಾತರವರು ಮನೆ ಸಮೀಪದ ಬೀಡಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅವರು ಮಧ್ಯಾಹ್ನ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಬಾಗಿಲು ಬಡಿದರೂ ತೆರೆಯದಿದ್ದುದರಿಂದ

ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗನ ಕಾಲೇಜು ಶುಲ್ಕದ ಆಸೆಗಾಗಿ ಪ್ರಾಣಬಿಟ್ಟ ತಾಯಿ !

(ನ್ಯೂಸ್ ಕಡಬ)newskadaba.com ಚೆನ್ನೈ, ಜು.18. ತಾನು ಸತ್ತರೆ ಮಗನ ಕಾಲೇಜು ಶುಲ್ಕವನ್ನು ಸರ್ಕಾರ ಭರಿಸುತ್ತದೆ ಎಂದು ಮಹಿಳೆಯೊಬ್ಬರು ಚಲಿಸುತ್ತಿರುವ ಬಸ್ಸಿನ ಮುಂದೆ ಹಾರಿ ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪಾಪತಿ(45) ಎಂದು ಗುರುತಿಸಲಾಗಿದೆ. ಮಹಿಳೆಯು ಕಳೆದ 15 ವರ್ಷದಿಂದ ಗಂಡನಿಂದ ದೂರವಾಗಿ ಕಷ್ಟಪಟ್ಟು ಮಗನನ್ನು ಸಾಕಿ ಬೆಳೆಸಿದ್ದು, ಸೇಲಂನ ಕಲೆಕ್ಟರ್ ಕಛೇರಿಯಲ್ಲಿ ಕಳೆದ ಕೆಲ ಸಮಯದಿಂದ ಸ್ವಚ್ಛತೆಯ ಕೆಲಸವನ್ನು ಮಾಡುತ್ತಿದ್ದರು. ಮಗನ ಕಾಲೇಜು ಶುಲ್ಕವನ್ನು ಪಾವತಿಸಲು ಸಾಧ್ಯವಾಗದ ಕಾರಣ ಪಾಪತಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಮಗನ ಕಾಲೇಜು ಶುಲ್ಕದ ಆಸೆಗಾಗಿ ಪ್ರಾಣಬಿಟ್ಟ ತಾಯಿ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪರೀಕ್ಷೆ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ಪರೀಕ್ಷೆ ವೇಳೆ ಮೊಬೈಲ್ ಫೋನ್ ಬಳಸಿ ಸಿಕ್ಕಿ ಬಿದ್ದ 19 ವರ್ಷದ ವಿದ್ಯಾರ್ಥಿ ಕಾಲೇಜು ಕಟ್ಟಡದಿಂದ ಹಾರಿ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಕ್ಷಿಣ ಬೆಂಗಳೂರಿನ ಗಿರಿನಗರ ಸಮೀಪದ ಪಿಇಎಸ್ ಕಾಲೇಜಿನಲ್ಲಿ ಬಿಟೆಕ್ ವಿದ್ಯಾರ್ಥಿಯಾಗಿರುವ ಆದಿತ್ಯ ಪ್ರಭು ಎಂಬಾತ ಸೋಮವಾರ ಮಧ್ಯಾಹ್ನ 1.20 ರ ಸುಮಾರಿಗೆ ಎರಡನೇ ಸೆಮಿಸ್ಟರ್ ಪರೀಕ್ಷೆಯ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಇನ್ವಿಜಿಲೇಟರ್ ಆತನನ್ನು ಪರೀಕ್ಷಾ ನಿಯಂತ್ರಕರಿಗೆ ಹಸ್ತಾಂತರಿಸಿದ್ದಾರೆ. ವಿದ್ಯಾರ್ಥಿಯ ಪೋಷಕರನ್ನು ಬರುವಂತೆ

ಪರೀಕ್ಷೆ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಕುಂಬಳೆ, ಜು. 13. ಸಾಯುವುದಾಗಿ ಗೆಳೆಯರಿಗೆ ಹೇಳಿ ಬಳಿಕ ಮೊಬೈಲ್ ಸ್ವಿಚ್ಢ್ ಆಫ್ ಮಾಡಿದ್ದ ಬಂಬ್ರಾಣ ನಿವಾಸಿ ಯುವಕ‌ನ ಮೃತದೇಹ ಮಂಗಳೂರಿನ‌ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಬಂಬ್ರಾಣ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಜೇಶ್‌ ಕುಮಾರ್‌(28) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಗೆ ಸಾಗಿಸಲಾಗಿದೆ. ಮನೆಯವರು ಆಸ್ಪತ್ರೆಗೆ ತೆರಳಿ ಗುರುತು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ. ಅತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ‌. ಮೃತರು ತಂದೆ, ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.

ನಾಪತ್ತೆಯಾಗಿದ್ದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ನಂಜನಗೂಡು ದೇವನೂರು ಮಠದ ಸ್ವಾಮೀಜಿ ನದಿಗೆ ಹಾರಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮೈಸೂರು, ಜು. 10. ಇಲ್ಲಿನ ನಂಜನಗೂಡು ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದ ಶಿವಪ್ಪ ದೇವರು (60) ಟಿ.ನರಸೀಪುರ ತಾಲೂಕಿನ ಮೂಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ‌. ಮಠ ಹಾಗೂ ಮಠದ ಭಕ್ತರಲ್ಲಿ ಉತ್ತಮ ಹೆಸರು ಹೊಂದಿದ್ದ ಸ್ವಾಮೀಜಿ ಅವರು ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಲಿವೂರು ಗ್ರಾಮದವರು. ಕಳೆದ 45 ವರ್ಷಗಳಿಂದ ದೇವನೂರು

ನಂಜನಗೂಡು ದೇವನೂರು ಮಠದ ಸ್ವಾಮೀಜಿ ನದಿಗೆ ಹಾರಿ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top