sullia

ಸುಳ್ಯ: ನಾಪತ್ತೆಯಾಗಿದ್ದ ಯುವಕ ಕಾಸರಗೋಡಿನಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಸುಳ್ಯ, ಜ.16. ಸುಳ್ಯದಿಂದ ನಾಪತ್ತೆಯಾಗಿದ್ದ ಯುವಕನನ್ನು ಸುಳ್ಯ ಪೊಲೀಸರು ಕಾಸರಗೋಡಿನಲ್ಲಿ ಪತ್ತೆ ಹಚ್ಚಿ ಠಾಣೆಗೆ ಹಾಜರು ಪಡಿಸಿ ಬಳಿಕ ಮನೆಯವರೊಂದಿಗೆ ಕಳುಹಿಸಿದ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಸುಳ್ಯ ಕೆವಿಜಿ ಬಳಿ ಫುಡ್ ಪಾಯಿಂಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಬಂಟ್ವಾಳ ತಾಲೂಕಿನ ವಾಮಪದವು ನಿವಾಸಿ ನಾಗೇಶ್ (33) ಕ್ಯಾಂಟೀನ್ ನಲ್ಲಿ ಊಟ ಮುಗಿಸಿ ರೂಮಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ಮತ್ತೆ ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕಳೆದ ಒಂದು ತಿಂಗಳ ಹಿಂದೆ ಆತನ ಪತ್ನಿ ಗೀತಾ […]

ಸುಳ್ಯ: ನಾಪತ್ತೆಯಾಗಿದ್ದ ಯುವಕ ಕಾಸರಗೋಡಿನಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ : ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com  ಸುಳ್ಯ, ಜ.03. ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಸಂಭವಿಸಿದೆ. ಮೃತರನ್ನು ಬಾಬು ಡಿಸೋಜಾ ಅವರ ಪುತ್ರ ಡೆನಿಸ್ (51) ಎಂದು ಗುರುತಿಸಲಾಗಿದೆ.      ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ಹೇಳಲಾಗುತ್ತಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ. ಕಲ್ಲುಗುಂಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.    

ಸುಳ್ಯ : ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ. ನಿಯೋಜನೆ   

(ನ್ಯೂಸ್ ಕಡಬ) newskadaba.com, ಸುಳ್ಯ, ಜ. 02. ತಾಲೂಕು ಶಿಕ್ಷಣಾಧಿಕಾರಿಯಾಗಿದ್ದ ಎಸ್.ಪಿ. ಮಹಾದೇವ್ ಅವರು ವರ್ಗಾವಣೆಗೊಂಡ ಹಿನ್ನೆಲೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ ಅವರನ್ನು ನಿಯೋಜನೆ ಮಾಡಲಾಗಿದೆ. ಮರ್ಕಂಜ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿರುವ ವೀಣಾ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಬೆಳ್ಳಾರೆ ಸರಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು ಎನ್ನಲಾಗಿದೆ.  

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ. ನಿಯೋಜನೆ    Read More »

ಕರಾವಳಿ, ಕರ್ನಾಟಕ

ಗಣರಾಜ್ಯೋತ್ಸವ ಪರೇಡ್ ಗೆ ಸುಳ್ಯ ತಾಲೂಕಿನ ಅನನ್ಯ ಕೆ.ಪಿ. ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 31. ನವದೆಹಲಿಯಲ್ಲಿ ನಡೆ ಯಲಿರುವ ಗಣ ರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲು ತಾಲೂಕಿನ ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿಯ ಎನ್ ಸಿಸಿ ವಿದ್ಯಾರ್ಥಿನಿ ಅನನ್ಯ ಕೆ.ಪಿ ಆಯ್ಕೆಯಾಗಿದ್ದಾರೆ. ಉಜಿರೆ ಎಸ್ ಡಿಎಂ ಕಾಲೇಜಿನ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿರುವ ಅನನ್ಯ ಕೆ.ಪಿ ಪಡ್ಪಿನಂಗಡಿ ಗ್ರಾಮದ ಕೃಷ್ಣಪ್ಪ ಪಾಲರ್ ಮತ್ತು ಶ್ರೀಮತಿ ಸತ್ಯಲತಾ ದಂಪತಿಗಳ ಪುತ್ರಿ.

ಗಣರಾಜ್ಯೋತ್ಸವ ಪರೇಡ್ ಗೆ ಸುಳ್ಯ ತಾಲೂಕಿನ ಅನನ್ಯ ಕೆ.ಪಿ. ಆಯ್ಕೆ Read More »

ಕರ್ನಾಟಕ

ಸುಳ್ಯ: ಪಾದಚಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 31. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳೂರು- ಮೈಸೂರು ರಾ. ಹೆದ್ದಾರಿಯ ಪೆರಾಜೆ ಎಂಬಲ್ಲಿ ನಡೆದಿದೆ. ವ್ಯಕ್ತಿಯೋರ್ವರು ಅಡಿಕೆ ಕೊಯ್ಯುವ ಕೆಲಸ ಮುಗಿಸಿ, ವಾಪಾಸ್ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅತಿವೇಗದಲ್ಲಿ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದಿದ್ದು, ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಹದರಿದ ಗಾಯಾಳು ಊರಿನ ಹೆಸರು ಮಾತ್ರ ಹೇಳುತ್ತಿದ್ದು,

ಸುಳ್ಯ: ಪಾದಚಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 26. ಬೆಂಗಳೂರು ಮೂಲದ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ಸೋಮವಾರದಂದು ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ರಾಮನಾಥಪುರದ ಕಾರಮಂಗಲ ತಾಲೂಕಿನ ಮಾರ್ಲಮಂಗಲ ಪುರುಷೋತ್ತಮ ಎಂಬವರ ಪುತ್ರಿ ಸೋನಿಯಾ (18) ಎಂದು ಗುರುತಿಸಲಾಗಿದೆ. ಈಕೆ ಸುಳ್ಯದ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕುರುಂಜಿಭಾಗ್ ಸಮೀಪದ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಸೋನಿಯಾ ಕಾಲೇಜಿಗೆ ಹೋಗದೆ ರೂಂನಲ್ಲಿಯೇ ಉಳಿದುಕೊಂಡಿದ್ದು, ಮಧ್ಯಾಹ್ನ ಊಟಕ್ಕೆ ತಟ್ಟೆ ತರಲೆಂದು ರೂಂ ಬಳಿ ಬಂದಿದ್ದ

ಸುಳ್ಯ: ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಎಚ್ಚೆತ್ತ ಕಂದಾಯ ಇಲಾಖೆ ➤ ಅಕ್ರಮ ಮರಳು ಸಾಗಾಟದ 3 ಲಾರಿ ವಶಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 22. ಇತ್ತೀಚೆಗೆ ಅಕ್ರಮ ಗಣಿಗಾರಿಕೆ ಮತ್ತು ಮರಳು ಸಾಗಾಟದ ಮೇಲೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಮೂರು ಲಾರಿಗಳನ್ನು ವಶಪಡಿಸಿಕೊಂಡಿರುವ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಕಂದಾಯ ನಿರೀಕ್ಷಕರ ತಂಡದ ನೇತೃತ್ವದಲ್ಲಿ ಮರಳು ಸಾಗಾಟ ಮತ್ತು ಕೆಂಪು ಕಲ್ಲಿನ ಸಾಗಾಟದ ಲಾರಿಗಳ ಮೇಲೆ ದಿಢೀರ್ ದಾಳಿ ನಡೆದು ಮೂರು ಲಾರಿಗಳನ್ನು ವಶ ಪಡೆದುಕೊಳ್ಳಲಾಗಿದೆ. ಇದೀಗ ಸದ್ಯ ಮೂರು ವಾಹನಗಳನ್ನು ಕಂದಾಯ ನಿರೀಕ್ಷಕರ ಕಚೇರಿ ಬಳಿ ಇರಿಸಲಾಗಿದ್ದು ಮೇಲಿನ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.  

ಸುಳ್ಯ: ಎಚ್ಚೆತ್ತ ಕಂದಾಯ ಇಲಾಖೆ ➤ ಅಕ್ರಮ ಮರಳು ಸಾಗಾಟದ 3 ಲಾರಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ವ್ಯಾನ್ ಮತ್ತು ಕಾರಿನ ನಡುವೆ ಭೀಕರ ಅಪಘಾತ !!!      

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 16. ಸುಳ್ಯದಿಂದ ಗುತ್ತಿಗಾರಿಗೆ ಬರುತ್ತಿದ್ದ ವ್ಯಾನ್ ಮತ್ತು ಸುಳ್ಯದ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಸಂಭವಿಸಿದ ಘಟನೆ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ವಾಹನ ಜಖಂಗೊಂಡಿದ್ದು, ಕಾರು ಚಾಲಕ ಬೆಟ್ಟ ಮರಿಯಪ್ಪ ಎಂಬವರ ಕೈಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ.    

ಸುಳ್ಯ: ವ್ಯಾನ್ ಮತ್ತು ಕಾರಿನ ನಡುವೆ ಭೀಕರ ಅಪಘಾತ !!!       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಸ್ಸಾಂ ರೈಫಲ್ಸ್ ಗೆ ಸುಳ್ಯದ ರಕ್ಷಿತಾ ಎಂ.ಬಿ. ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 15. ತಾಲೂಕಿನಿಂದ ಕಳೆದ ಕೆಲವು ವರ್ಷಗಳಲ್ಲಿ ಹಲವು ಯುವತಿಯರು ದೇಶ ಸೇವೆಯ ಕಾಯಕಕ್ಕೆ ಸೇರಿಕೊಂಡಿದ್ದು, ಇದೀಗ ಐವರ್ನಾಡು ಗ್ರಾಮದ ರಕ್ಷಿತಾ ಎಂ.ಬಿ. ರವರು, ಮಿಲಿಟರಿ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆಗಳಲ್ಲಿ ಪಾಸಾಗಿ ಅಸ್ಸಾಂ ರೈಫಲ್ಸ್‌ ಗೆ ಆಯ್ಕೆಯಾಗಿದ್ದಾರೆ. ಮೂಲತಃ ಧರ್ಮಸ್ಥಳ ಮೂಲದವರಾದ ರಕ್ಷಿತಾ ಎಂ.ಬಿ, ಭಾಸ್ಕರ ಗೌಡ ಮಡ್ತಿಲ ಹಾಗೂ ಮಮತಾ ದಂಪತಿಯ ಪುತ್ರಿ. ರಕ್ಷಿತಾ ಎಂ.ಬಿ 5ನೇ ತರಗತಿವರೆಗೆ ಐವರ್ನಾಡಿನ ಸರಕಾರಿ ಹಿರಿಯ ಪ್ರಾಥಮಿಕ

ಅಸ್ಸಾಂ ರೈಫಲ್ಸ್ ಗೆ ಸುಳ್ಯದ ರಕ್ಷಿತಾ ಎಂ.ಬಿ. ಆಯ್ಕೆ Read More »

ಕರಾವಳಿ, ಕರ್ನಾಟಕ

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಗೀತಾಜಯಂತಿ ಕಾರ್ಯಕ್ರಮ ➤ ಪ್ರತಿಭೆ ಯಾವುದೇ ಧರ್ಮ ಜಾತಿಯ ಸೊತ್ತಲ್ಲ- ಡಾ. ಪ್ರಭಾಕರ್

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 05. ಪ್ರತಿಭೆ ಎನ್ನುವುದು ಯಾವುದೇ ಜಾತಿ ಧರ್ಮ ಬಣ್ಣದ ಸೊತ್ತಲ್ಲ ಎಂದು ಸುಳ್ಯದ ವಿಶ್ರಾಂತ ಪ್ರಾಂಶುಪಾಲ ಹಾಗೂ ಖ್ಯಾತ ಲೇಖಕ ಡಾ.ಪ್ರಭಾಕರ ಶಿಶಿಲ ಹೇಳಿದರು. ಅವರು ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಗೀತಾಜಯಂತಿ ಕಾರ್ಯಕ್ರಮ ಹಾಗೂ ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 187 ನೇ ಕೃತಿ ಧ್ಯಾನದಿಂದ ಆತ್ಮದರ್ಶನ’ವನ್ನು ಬಿಡುಗಡೆಗೊಳಿಸಿ ಮಾತನಾಡಿದರು.     ಭಗವದ್ಗೀತೆ ಜಗತ್ತಿಗೆ ಶ್ರೇಷ್ಠ ಸಂದೇಶ ನೀಡಿದೆ. ಇದು ನನ್ನ ವೈಯಕ್ತಿಕ ಜೀವನದಲ್ಲೂ ಪ್ರಯೋಜನವಾಗಿದೆ. ಮೇಲು

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಗೀತಾಜಯಂತಿ ಕಾರ್ಯಕ್ರಮ ➤ ಪ್ರತಿಭೆ ಯಾವುದೇ ಧರ್ಮ ಜಾತಿಯ ಸೊತ್ತಲ್ಲ- ಡಾ. ಪ್ರಭಾಕರ್ Read More »

ಕರಾವಳಿ, ಕರ್ನಾಟಕ
Scroll to Top