sullia

ಸುಳ್ಯ ಆಲ್ ಇಂಡಿಯಾ KMCC ಸಭೆ – ಸೆಪ್ಟೆಂಬರ್ 5 ರಿಂದ 30ರ ವರೆಗೆ ಸದಸ್ಯತ್ವ ಅಭಿಯಾನ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 29. ಆಲ್ ಇಂಡಿಯಾ KMCC ಸುಳ್ಯ ವಲಯದ ವಿಶೇಷ ಸಭೆಯು ಆರಂತೋಡು ತೆಕ್ಕಿಲ್ ಸಭಾಂಗಣದಲ್ಲಿ ಬುಧವಾರದಂದು ಖಲಂದರ್ ಎಲಿಮಲೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೆಪ್ಟೆಂಬರ್ 5 ರಿಂದ 30ರ ವರೆಗೆ ಸದಸ್ಯತ್ವ ಅಭಿಯಾನ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಖಲಂದರ್ ಎಲಿಮಲೆಯವರು ಸದಸ್ಯತ್ವ ಅಭಿಯಾನ, ಅಂಬುಲನ್ಸ್ ಸೇವೆ, ಸಾಮೂಹಿಕ ವಿವಾಹ ಪಾಲಿಯೇಟಿವ್ ಕೇರ್ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಆಲ್ ಇಂಡಿಯಾ KMCC ವತಿಯಿಂದ ರಾಜ್ಯದ ಬೆಂಗಳೂರು, […]

ಸುಳ್ಯ ಆಲ್ ಇಂಡಿಯಾ KMCC ಸಭೆ – ಸೆಪ್ಟೆಂಬರ್ 5 ರಿಂದ 30ರ ವರೆಗೆ ಸದಸ್ಯತ್ವ ಅಭಿಯಾನ Read More »

ಕರಾವಳಿ, ಕರ್ನಾಟಕ

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ,ಆ. 24. ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘವು ಸುಳ್ಯ ಉಡುಪಿ ಗಾರ್ಡನ್ ನಲ್ಲಿ ಇಂದು ಶಿವ ಪ್ರಸಾದ್ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಯಿತು. ಶರತ್ ತೊಡಿಕಾನ ಪ್ರಾಸ್ತಾವಿಕ ಮಾತನಾಡಿದರು.‌ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಕೆಜಿ, ಅಧ್ಯಕ್ಷರಾಗಿ ಶರತ್ ಎ.ತೊಡಿಕಾನ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಗೂನಡ್ಕ, ಕೋಶಾಧಿಕಾರಿ ರಫೀಕ್ ಬಿ.ಎಂ.ಎ ಸುಳ್ಯ, ಉಪಾಧ್ಯಕ್ಷರಾಗಿ ಉನೈಸ್ ಪೆರಾಜೆ, ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಸುಬ್ರಹ್ಮಣ್ಯ, ಮೀಡಿಯಾ ಕಾರ್ಯದರ್ಶಿ ರಫಿಕ್ ಬಾಳೆಮಕ್ಕಿ, ಸದಸ್ಯರುಗಳಾಗಿ ಕೇಶವ ಬೆಳ್ಳಾರೆ, ಹಮೀದ್

ಸುಳ್ಯ ತಾಲೂಕು ಆಂಬುಲೆನ್ಸ್ ವಾಹನ ಚಾಲಕ ಮಾಲಕರ ಸಂಘ ಅಸ್ತಿತ್ವಕ್ಕೆ Read More »

ಕರಾವಳಿ

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಮಣ್ಣು ತೆರವು ಕಾರ್ಯ ಪೂರ್ಣ ರೈಲು ಸಂಚಾರ ಪುನರಾರಂಭ

(ನ್ಯೂಸ್ ಕಡಬ) newskadaba.c0m ಸುಳ್ಯ, ಆ. 20.  ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತದಿಂದ ಬಿದ್ದಿರುವ ಮಣ್ಣು ತೆರವು ಕಾರ್ಯ ಸಂಪೂರ್ಣಗೊಂಡಿದ್ದು, ರೈಲು ಸಂಚಾರ ಮತ್ತೆ ಆರಂಭಗೊಂಡಿದೆ. ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಪೂರ್ಣಗೊಂಡಿದೆ. ರೈಲು ಮಾರ್ಗವನ್ನು ರೈಲುಗಳ ಸಂಚಾರಕ್ಕೆ ಮುಕ್ತವಾಗುವಂತೆ ಮತ್ತೆ ಮರು ಹೊಂದಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ.    

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಮಣ್ಣು ತೆರವು ಕಾರ್ಯ ಪೂರ್ಣ ರೈಲು ಸಂಚಾರ ಪುನರಾರಂಭ Read More »

ಕರಾವಳಿ

*ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತ*               ಮಣ್ಣು ತೆರವು ಕಾರ್ಯ ಸಿದ್ಧತೆ          

(ನ್ಯೂಸ್ ಕಡಬ) newskadaba.c0m ಸುಳ್ಯ, ಆ. 19.  ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತಗೊಂಡಿದ್ದು, ಬಿದ್ದಿರುವ ಮಣ್ಣು ತೆರವು ಕಾರ್ಯ ಭರದಿಂದ ಸಾಗಿದೆ. ಗುಡ್ಡ ಕುಸಿದಿದ್ದ ಜಾಗದಲ್ಲಿ ಮತ್ತೆ ಮಣ್ಣು ಕುಸಿದಿದ್ದು. ಇದೇ ಕಾರಣಕ್ಕೆ ರೈಲು ಸಂಚಾರವನ್ನು ಮತ್ತೊಮ್ಮೆ ಸ್ಥಗಿತಗೊಳಿಸಲಾಗಿತ್ತು. ಮೂರು ದಿನಗಳಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದೆ. ನಾಲ್ಕು ಐದು ಹಿಟಾಚಿ ಯಂತ್ರಗಳನ್ನು ಕಾಮಗಾರಿಗೆ ಬಳಸಲಾಗಿದೆ. ಮತ್ತಷ್ಟು ಮಣ್ಣು ಕುಸಿಯದಂತೆ ತಡೆಯಲು ಬೆಟ್ಟದ ಮೇಲಿನಿಂದ ಕೂಡ ಮಣ್ಣು ತೆರವುಗೊಳಿಸಲಾಗುತ್ತಿದೆ.  

*ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತ*               ಮಣ್ಣು ತೆರವು ಕಾರ್ಯ ಸಿದ್ಧತೆ           Read More »

ಕರಾವಳಿ

ಅರಂತೋಡು ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 12. ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡಿನಲ್ಲಿ ಸರ್ಕಾರದ ಆದೇಶ ಪ್ರಕಾರ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು ಮತ್ತು ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಎಂ.ಕೆ. ಉಪಸ್ಥಿತರಿದ್ದರು. ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿಗಳು ಸೇರಿದಂತೆ 700 ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ

ಅರಂತೋಡು ಕಾಲೇಜಿನಲ್ಲಿ ನಶಾಮುಕ್ತ ಭಾರತ ಅಭಿಯಾನ ಪ್ರತಿಜ್ಞೆ Read More »

ಕರಾವಳಿ, ಕರ್ನಾಟಕ

ಸುಳ್ಯ: ರಬ್ಬರ್ ಸ್ಮೋಕ್ ಹೌಸಿಗೆ ತಗುಲಿದ ಬೆಂಕಿ ಅಪಾರ ನಷ್ಟ

(ನ್ಯೂಸ್ ಕಡಬ)newskadaba.com ಸುಳ್ಯ, ಆ.07. ರಬ್ಬರ್ ಸ್ಮೋಕ್ ಹೌಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ರಬ್ಬರ್ ಸ್ಕ್ರಾಪ್, ಶೀಟು ಸೇರಿದಂತೆ ಸ್ಮೋಕ್ ಹೌಸ್ ಪೆಟ್ಟಿಗೆಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದ ಘಟನೆ ಸಂಪಾಜೆಯಲ್ಲಿ ನಡೆದಿದೆ. ಕೊಡಗು ಸಂಪಾಜೆ ಗ್ರಾಮ ಪಂಚಾಯತಿ ಅಧ್ಯಕ್ಷೆ ರಮಾದೇವಿ ಬಾಲಚಂದ್ರ ಕಳಗಿ ಅವರ ಮನೆಯ ಸಮೀಪದಲ್ಲಿರುವ ರಬ್ಬರ್ ಸ್ಮೋಕ್ ಹೌಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ರಬ್ಬರ್ ಸ್ಕ್ರಾಪ್ ಹಾಗೂ ಶೀಟುಗಳಿಗೆ ತಗುಲಿದ್ದು, ಸ್ಮೋಕ್ ಹೌಸ್ ಪೆಟ್ಟಿಗೆಗೆ ಹಾನಿಯಾಗಿದೆ. ಕೂಡಲೇ ರಮಾದೇವಿ ಕಳಗಿ ಅವರು ಸ್ಥಳೀಯರಿಗೆ

ಸುಳ್ಯ: ರಬ್ಬರ್ ಸ್ಮೋಕ್ ಹೌಸಿಗೆ ತಗುಲಿದ ಬೆಂಕಿ ಅಪಾರ ನಷ್ಟ Read More »

ಕರಾವಳಿ

ಸುಳ್ಯ: ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತ ವಾಹನ ಸಂಚಾರ ಅಸ್ತವ್ಯಸ್ತ       

(ನ್ಯೂಸ್ ಕಡಬ)newskadaba.comಸುಳ್ಯ, ಆ.07. ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತಗೊಂಡು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿರುವ ಘಟನೆ ಕಂಡುಬಂದಿದೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ರಸ್ತೆಯಲ್ಲಿ ಕುಸಿತ ಉಂಟಾಗಿ ಡಾಮರು ಕಿತ್ತು ಹೋಗಿದ್ದು, ಇದರಿಂದಾಗಿ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿರುವುದಾಗಿ ಕಂಡುಬಂದಿದೆ. ಕೂಡಲೇ ಹದಗೆಟ್ಟ ರಸ್ತೆ ದುರಸ್ತಿಗೊಳಿಸಬೇಕು ಎಂದು ಸ್ಥಳೀಯ ನಾಗರಿಕರು ಹಾಗೂ ವಾಹನ ಸವಾರರು ಆಗ್ರಹಿಸಿದ್ದಾರೆ.

ಸುಳ್ಯ: ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತ ವಾಹನ ಸಂಚಾರ ಅಸ್ತವ್ಯಸ್ತ        Read More »

ಕರಾವಳಿ

ಸುಳ್ಯ: ಮೋರಿಗೆ ಢಿಕ್ಕಿ ಹೊಡೆದ ಬೈಕ್…!                       ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು      

(ನ್ಯೂಸ್ ಕಡಬ) newskadaba.com ಸುಳ್ಯ, ಆ.05. ಬೈಕ್ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.ಮೃತಪಟ್ಟವರನ್ನು ಮೈಸೂರು ಮೂಲದ ಪವನ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐ ಬಿ ಬಳಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಇಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಸುಳ್ಯ: ಮೋರಿಗೆ ಢಿಕ್ಕಿ ಹೊಡೆದ ಬೈಕ್…!                       ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು       Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ)newskadaba.com ಸುಳ್ಯ, ಜು.31. ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗಬೇಕಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಸಂಶಯ ವ್ಯಕ್ತಪಡಿಸಲಾಗಿದೆ.

ಸುಳ್ಯ: ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಭಾರಿ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಸುಳ್ಯ, ಜು.26. ಭಾರೀ ಗಾಳಿ ಮಳೆಗೆ ಮನೆಯೊಂದರ ಮೇಲೆ ತೆಂಗಿನ ಮರವೊಂದು ಬುಡ ಸಹಿತ ಬಿದ್ದಿರುವ ಘಟನೆ ಸುಳ್ಯದ ಮಂಡೆಕೋಲು ಗ್ರಾಮದ ಶಾಲಾ ಬಳಿ ನಡೆದಿದೆ.   ಇಲ್ಲಿನ ಭವಾನಿಶಂಕರ ಆಚಾರ್ಯ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು, ಘಟನೆಯಲ್ಲಿ ಮನೆಯ ಮೇಲ್ಛಾವಣಿಗೆ ಅಪಾರ ಹಾನಿಯಾಗಿದೆ. ಮನೆಯೊಳಗೆ ಭವಾನಿಶಂಕರ ಅವರ ತಾಯಿ ಹಾಗೂ ಪತ್ನಿ ಇದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.    

ಸುಳ್ಯ: ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ ಅಪಾಯದಿಂದ ಪಾರು Read More »

ಕರಾವಳಿ
Scroll to Top