sullia

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಡಾ. ಉಮ್ಮರ್ ಬೀಜದಕಟ್ಟೆ ಅವರಿಂದ ಶಿಕ್ಷಕರಿಗೆ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಅರಂತೋಡು, ಆ. 19. ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಗಸ್ಟ್ 19ರಂದು “ನಮ್ಮ ಜೀವನದಲ್ಲಿ ಶಿಕ್ಷಕರ ಮಹತ್ವ” ಎಂಬ ವಿಷಯದ ಕುರಿತಾಗಿ ಶಿಕ್ಷಕರಿಗೆ ಕಾರ್ಯಾಗಾರ ಆಯೋಜಿಸಲಾಯಿತು. ಸಜ್ಜನ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಬೆಂಗಳೂರಿನ ಪ್ರತಿಷ್ಠಿತ ಕಂಪನಿ ಫಾರ್ಮೆಡ್ ಲಿಮಿಟೆಡ್ ನ ಮಾನವ ಸಂಪನ್ಮೂಲ ಹಿರಿಯ ಕಾರ್ಯ ನಿರ್ವಾಹಕ ಉಪಾಧ್ಯಕ್ಷರಾಗಿರುವ ಡಾ. ಉಮ್ಮರ್ ಬೀಜದಕಟ್ಟೆಯವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕವಾದಂತಹ ಜ್ಞಾನವನ್ನು ವೃಧ್ಧಿಸುವುದರ ಜೊತೆಗೆ ಶಿಕ್ಷಕರಾದವರು ಪ್ರತಿನಿತ್ಯ ಚಟುವಟಿಕೆಗಳ ಮೂಲಕ ಯೋಜನಾತ್ಮಕವಾಗಿ […]

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಡಾ. ಉಮ್ಮರ್ ಬೀಜದಕಟ್ಟೆ ಅವರಿಂದ ಶಿಕ್ಷಕರಿಗೆ ಕಾರ್ಯಾಗಾರ Read More »

ಕರಾವಳಿ, ಕರ್ನಾಟಕ

ಸುಳ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 19. ಜಮೀನಿಗೆ ಸಂಬಂಧಿಸಿದಂತೆ ಕಡತ ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಸಂಪಾಜೆ- ಅರಂತೋಡು ಗ್ರಾಮ ಲೆಕ್ಕಾಧಿಕಾರಿ ಮಿಯಾಸಾಬ್ ಮುಲ್ಲಾ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ಅರಂತೋಡಿನ ವ್ಯಕ್ತಿಯೊಬ್ಬರು ಆಸ್ತಿ ಹಕ್ಕಿಗೆ ಸಂಬಂಧಿಸಿದ ಕಡತ ವಿಲೇವಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಸಂದರ್ಭ ಲೆಕ್ಕಾಧಿಕಾರಿ ಮಿಯಾಸಾಬ್‌ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆ ವ್ಯಕ್ತಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಶನಿವಾರದಂದು ಬೆಳಗ್ಗೆ ದಾಳಿ ನಡೆಸಿದ ಲೋಕಾಯುಕ್ತ

ಸುಳ್ಯ: ಲಂಚ ಪಡೆಯುತ್ತಿದ್ದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಅನೈತಿಕ ಪೊಲೀಸ್ ಗಿರಿ – ಓರ್ವ ಆರೋಪಿ ವಶಕ್ಕೆ

(ನ್ಯೂಸ್ ಕಡಬ)newskadaba. com ಸುಳ್ಯ, ಆ.13. ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ವರದಿಯಗಿದ್ದು, ಮಹಿಳೆಯೊಬ್ಬರಿಗೆ ಸುಳ್ಯದಲ್ಲಿ ತಂಗಲು ರೂಂ ಕೊಡಿಸಲು ಜೊತೆಗೆ ತೆರಳಿದ್ದ ಯುವಕನಿಗೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಬಗ್ಗೆ ತಿಳಿದುಬಂದಿದೆ. ಸುಳ್ಯ ಠಾಣಾ ವ್ಯಾಪ್ತಿಯ ಅರಂತೋಡು ಸಮೀಪ ಮಣಪ್ಪುರಂ ನಿವಾಸಿ ಅರಂತೋಡಿನಲ್ಲಿ ಲೀಸ್‌ ಗೆ ತೋಟ ನಡೆಸುತ್ತಿರುವ ಜಲೀಲ್ ಮೇಲೆ ಹಲ್ಲೆ ನಡೆದಿದ್ದು, ಜಲೀಲ್‌ಗೆ ಕೇರಳದಲ್ಲಿ ಪರಿಚಯವಿದ್ದ ಮಹಿಳೆಯೊಬ್ಬರು ಮಡಿಕೇರಿಗೆ ಬಂದಿದ್ದು,ಅಲ್ಲಿಂದ ಊರಿಗೆ ಹಿಂದಿರುಗುವ ವೇಳೆ ಸುಳ್ಯದಲ್ಲಿ ಫ್ರೆಶ್ ಅಪ್ ಆಗಲು ರೂಮ್

ಸುಳ್ಯ: ಅನೈತಿಕ ಪೊಲೀಸ್ ಗಿರಿ – ಓರ್ವ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ

ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಸುಳ್ಯ, ಆ.02. ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ. ಬಾಲಕನನ್ನು ಬಿಳಿಯಾರಿನ ದಿ. ಮೂಸಾ ಎನ್ನುವವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಬಾಲಕ ಮನೆಯಲ್ಲಿ ಒಬ್ಬನೆ ಇದ್ದು ರಾತ್ರಿ ವೇಳೆ ತನ್ನ ಅಜ್ಜಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದು, ಬಾಲಕನ ಮಾವ ನಸುಕಿನ ಜಾವ ಬಾಲಕನ ಮನೆಗೆ ಬಂದಾಗ ಹನ್ಸಿಪ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ. ಇನ್ನು ಬಾಲಕ ಎಸ್.ಎಸ್.ಎಲ್.ಸಿ ಪೂರ್ಣಗೊಳಿಸಿ

ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ ಕೆಪಿಸಿಸಿ ಉಸ್ತುವಾರಿಯಾಗಿ ಮಮತಾ ಗಟ್ಟಿ ನೇಮಕ

(ನ್ಯೂಸ್ ಕಡಬ)newskadaba.com ಸುಳ್ಯ, ಜು.26. ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಸಂಘಟನೆಯ ಕೆಪಿಸಿಸಿ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತ ಗಟ್ಟಿ ನೇಮಕಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸುಳ್ಯ ಹಾಗೂ ಕಡಬ ಬ್ಲಾಕ್ ಒಳಗೊಂಡ ಸುಳ್ಯ ವಿಧಾನಸಭಾ ಕ್ಷೇತ್ತದ ಕೆಪಿಸಿಸಿ ಉಸ್ತುವಾರಿಯಾಗಿ ಮಮತ ಗಟ್ಟಿ ಅವರನ್ನುನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ನೀಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಕೆಪಿಸಿಸಿ ವತಿಯಿಂದ ನೀಡುವ ಕಾರ್ಯಕ್ರಮಗಳ ಅನುಷ್ಠಾನದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯನ್ನು ಅವರಿಗೆ

ಸುಳ್ಯ ಕೆಪಿಸಿಸಿ ಉಸ್ತುವಾರಿಯಾಗಿ ಮಮತಾ ಗಟ್ಟಿ ನೇಮಕ Read More »

ಕರಾವಳಿ

ಜು.27ರಿಂದ ಸುಳ್ಯ-ಪಾಣತ್ತೂರು ಅಂತಾರಾಜ್ಯ ಮಾರ್ಗದಲ್ಲಿ ಮತ್ತೊಂದು ಬಸ್ ಸರ್ವೀಸ್ ಆರಂಭ

(ನ್ಯೂಸ್ ಕಡಬ)newskadaba.com ಸುಳ್ಯ, ಜು.26. ಅಂತಾರಾಜ್ಯ ರಸ್ತೆಯಲ್ಲಿ ಕಾಂಞಂಗಾಡ್-ಪಾಣತ್ತೂರು- ಕಲ್ಲಪಳ್ಳಿ-ಸುಳ್ಯ ಮಾರ್ಗದಲ್ಲಿ ಜು.27ರಿಂದ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಇನ್ನೊಂದು ಬಸ್ ಸಂಚಾರ ಪ್ರಾರಂಭಿಸಲಿದೆ ಎಂದು ವರದಿಯಾಗಿದೆ. ಪಾಣತ್ತೂರಿನಿಂದ ಬೆಳಿಗ್ಗೆ 5:50 ಹೊರಟು ಸುಳ್ಯ6:40ಕ್ಕೆ ತಲುಪಲಿದೆ. ಸುಳ್ಯದಿಂದ ಬೆಳಿಗ್ಗೆ 6:50ಕ್ಕೆ ಹೊರಟು ಪಾಣತ್ತೂರಿಗೆ 7:40ಕ್ಕೆ ತಲುಪಲಿದೆ. ಬೆಳಿಗ್ಗೆ ಪಾಣತ್ತೂರಿನಿಂದ 7:50ಕ್ಕೆ ಹೊರಟು 9.20ಕ್ಕೆ ಕಾಂಞಂಗಾಡು 9: 30ತಲುಪಲಿದೆ ಎಂದು ಪ್ರಕಟಣೆ ತಿಳಿಸಿದೆ. ಸುಳ್ಯ-ಪಾಣತ್ತೂರು- ಕಾಞಂಗಾಡ್ ರಸ್ತೆಯಲ್ಲಿ ಈಗಾಗಲೇ ಒಂದು ಬಸ್ ಓಡಾಟ ನಡೆಸುತಿದೆ ಎಂದು ತಿಳಿದುಬಂದಿದೆ.

ಜು.27ರಿಂದ ಸುಳ್ಯ-ಪಾಣತ್ತೂರು ಅಂತಾರಾಜ್ಯ ಮಾರ್ಗದಲ್ಲಿ ಮತ್ತೊಂದು ಬಸ್ ಸರ್ವೀಸ್ ಆರಂಭ Read More »

ಕರಾವಳಿ

ಗುಡ್ಡ ಜರಿತ – ಸುಳ್ಯ-ಪಾಣತ್ತೂರು ಅಂತರಾಜ್ಯ ರಸ್ತೆ ಬಂದ್

(ನ್ಯೂಸ್ ಕಡಬ)newskadaba.com ಸುಳ್ಯ, ಜು.19. ಭಾರಿ ಪ್ರಮಾಣದಲ್ಲಿ ಮಣ್ಣು ಹಾಗೂ ಮರ ಸಮೇತ ಗುಡ್ಡ ಜರಿದು ರಸ್ತೆ ಬಂದ್ ಆಗಿರುವ ಘಟನೆ ಸುಳ್ಯ-ಕಲ್ಲಪ್ಪಳ್ಳಿ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಬಾಟೋಳಿ ಎಂಬಲ್ಲಿ ನಡೆದಿದೆ. ವಾಹನ ಸಂಚಾರಕ್ಕೆ ತಡೆ ಉಂಟಾಗಿದ್ದು ಮತ್ತು ನಡೆದು ಹೋಗಲು ಸಾಧ್ಯವಿಲ್ಲದ‌ ರೀತಿಯಲ್ಲಿ ರಸ್ತೆ ಬಂದ್ ಆಗಿದೆ ಎನ್ನಲಾಗಿದೆ. ರಸ್ತೆಯಲ್ಲಿ ತಾತ್ಕಾಲಿಕವಾಗಿ ಬಡ್ಡಡ್ಕ-ರಂಗತ್ತಮಲೆ-ಕಲ್ಲಪಳ್ಳಿ ವಾಹನ ಪ್ರಯಾಣಿಸಬಹುದು ಎಂದು ವರದಿ ತಿಳಿಸಿದೆ.

ಗುಡ್ಡ ಜರಿತ – ಸುಳ್ಯ-ಪಾಣತ್ತೂರು ಅಂತರಾಜ್ಯ ರಸ್ತೆ ಬಂದ್ Read More »

ಕರಾವಳಿ

ಸುಳ್ಯ: ಅಣ್ಣನ ಹತ್ಯೆ ಪ್ರಕರಣ..!   ➤ ಬಂಧಿತ ಸಹೋದರರನ್ನು ಕರೆತಂದು ಮಹಜರು

(ನ್ಯೂಸ್ ಕಡಬ)newskadaba.com  ಸುಳ್ಯ, ಜು.18. ಚೆಂಬು ಗ್ರಾಮದ ಕುದ್ರೆಪಾಯ ಎಂಬಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿಂತೆ ಸಹೋದರರಿಂದ ಕೊಲೆಯಾದ ಉಸ್ಮಾನ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಆರೋಪಿ ಸಹೋದರರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು ಅವರನ್ನು ಘಟನಾ ಸ್ಥಳಕ್ಕೆ ಕೊಂಡೊಯ್ದು ಮಹಜರು ನಡೆಸಲಾಗಿದೆ ಎನ್ನಲಾಗಿದೆ. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ ಉಸ್ಮಾನ್ ರನ್ನ ಚೂರಿಯಿಂದ ಇರಿದು ಜುಲೈ 14ರಂದು ಕೊಲೆ ಮಾಡಿ ಬಳಿಕ ಅವರು ರಿಕ್ಷಾದಲ್ಲಿ ಅರಂತೋಡುವರೆಗೆ ಬಂದು ಮತ್ತೊಂದು ರಿಕ್ಷಾದಲ್ಲಿ ಸುಳ್ಯಕ್ಕೆ ಬಂದು ಕೇರಳ ಕಡೆಗೆ ಪರಾರಿಯಾಗಿದ್ದರು. ಆರೋಪಿಗಳನ್ನು ಕೊಡಗು

ಸುಳ್ಯ: ಅಣ್ಣನ ಹತ್ಯೆ ಪ್ರಕರಣ..!   ➤ ಬಂಧಿತ ಸಹೋದರರನ್ನು ಕರೆತಂದು ಮಹಜರು Read More »

ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆಗೆ ಒಂದು ವರುಷ- ಕೊಲೆ ಹಂತಕರಿಗೆ 2ನೇ ಬಾರಿಗೆ ಶರಣಾಗುವಂತೆ ಎನ್ಐಎ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 15. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಶರಣಾಗಬೇಕು ಎಂಬ ಎಚ್ಚರಿಕೆಯ ಸಂದೇಶವನ್ನು ಸುಳ್ಯದಲ್ಲಿ ಎರಡನೇ ಬಾರಿಗೆ ಎನ್‌ಐಎ ಹೊರಡಿಸಿದೆ.   ಇದು ತಲೆಮರೆಸಿಕೊಂಡಿರುವ ಕೊಲೆಗಟುಕರಿಗೆ ಎರಡನೇ ಎಚ್ಚರಿಕೆಯ ಸಂದೇಶವಾಗಿದ್ದು, ಈ ಎಚ್ಚರಿಕೆಗೂ ಬಗ್ಗದಿದ್ದಲ್ಲಿ ಮೂರನೇಯ ಎಚ್ಚರಿಕೆಯ ಸಂದೇಶವನ್ನು ಹೊರಡಿಸಲಾಗುತ್ತದೆ. ಅದರಲ್ಲೂ ಶರಣಾಗದೇ ಹೋದರೆ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಪಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳಲಿದೆ ಎಂಬ ಸುಳಿವು ಲಭ್ಯವಾಗಿದೆ. ಅಲ್ಲದೇ ಆಗಸ್ಟ್ 18ರೊಳಗೆ ಶರಣಾಗಲೇಬೇಕು. ಈ ಹಿಂದೆ ಜೂ.30ರೊಳಗೆ

ಪ್ರವೀಣ್ ನೆಟ್ಟಾರು ಹತ್ಯೆಗೆ ಒಂದು ವರುಷ- ಕೊಲೆ ಹಂತಕರಿಗೆ 2ನೇ ಬಾರಿಗೆ ಶರಣಾಗುವಂತೆ ಎನ್ಐಎ ಎಚ್ಚರಿಕೆ Read More »

ಕರಾವಳಿ

ಸುಳ್ಯ ಆರ್ ಐ ಆಗಿ ಅವಿನ್ ರಂಗತ್ತಮಲೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 12. ಸುಳ್ಯ ಹೋಬಳಿಯ ಕಂದಾಯ ನಿರೀಕ್ಷಕರಾಗಿದ್ದ ಅವಿನ್ ರಂಗತ್ತಮಲೆ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸುಳ್ಯ ಆರ್‌ಐ ಆಗಿದ್ದ ಕೊರಗಪ್ಪ ಹೆಗ್ಡೆ ಅವರನ್ನು ಬೆಳ್ತಂಗಡಿಗೆ ವರ್ಗಾವಣೆ ಮಾಡಲಾಗಿದೆ. ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖೆಯಲ್ಲಿ ಕರ್ತವ್ಯದಲ್ಲಿದ್ದ ಅವಿನ್ ಅವರನ್ನು ಸುಳ್ಯ ಹೋಬಳಿಯ ಕಂದಾಯ ನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ. ಅವಿನ್ ರಂಗತ್ತಮಲೆ ಅವರು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ದ್ವಿತೀಯ ದರ್ಜೆ‌ ಸಹಾಯಕರಾಗಿ ಸರಕಾರಿ ಸೇವೆ ಆರಂಭಿಸಿ ಬಳಿಕ ಗ್ರಾಮ

ಸುಳ್ಯ ಆರ್ ಐ ಆಗಿ ಅವಿನ್ ರಂಗತ್ತಮಲೆ ವರ್ಗಾವಣೆ Read More »

ಕರಾವಳಿ
Scroll to Top