sullia

ಸುಳ್ಯ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಯುವಕ ಅರೆಸ್ಟ್, ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 10. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೋಕ್ಸೋ ಪ್ರಕರಣವನ್ನು ದಾಖಲಿಸಿ, ಆತನನ್ನು ಬಂಧಿಸಲಾಗಿದೆ. ಬಂಧಿತನನ್ನು ಕಲ್ಮಡ್ಕ ಗ್ರಾಮದ ಕಾರ್ತಿಕ್‌ ಎಂದು ಗುರುತಿಸಲಾಗಿದೆ. ಈತ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ವಿಷಯ ತಿಳಿದ ಬಳಿಕ ಬಾಲಕಿಯ ತಾಯಿಯು ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜು. 7ರಂದು ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ […]

ಸುಳ್ಯ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಯುವಕ ಅರೆಸ್ಟ್, ಪೋಕ್ಸೋ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಸುಳ್ಯ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು- ನಗದು ಕಳವು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 03. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಸಾವಿರಾರು ರೂ. ನಗದು ಕದ್ದೊಯ್ದ ಘಟನೆ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರು ಎಂಬಲ್ಲಿಂದ ವರದಿಯಾಗಿದೆ. ಅಡ್ಕಾರು ನಿವಾಸಿ ಮುಹಮ್ಮದ್ ನಜೀಬ್ ಅವರು ಜು. 01ರಂದು ಸಂಜೆ ತಮ್ಮ ಹೆಂಡತಿಯ ತವರು ಮನೆಗೆ ಬೀಗ ಹಾಕಿ ಕುಟುಂಬ ಸಮೇತ ತೆರಳಿದ್ದರೆನ್ನಲಾಗಿದೆ. ಮರುದಿನ ಜು. 02ರಂದು ಬೆಳಿಗ್ಗೆ ಪುತ್ತೂರಿನಿಂದ ಮರಳಿ ಮನೆಗೆ ಬಂದಾಗ ಮನೆಯ ಬಾಗಿಲಿನ ಲಾಕ್ ಮುರಿದಿದ್ದು,

ಸುಳ್ಯ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು- ನಗದು ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ವಿದ್ಯಾರ್ಥಿಯ ಮೇಲೆ ಸುಳ್ಳಾರೋಪ

➤ ಉಪನ್ಯಾಸಕಿಯ ವಿರುದ್ದ ಪ್ರತಿಭಟನೆ (ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 03. ಶಿಕ್ಷಕಿಯೋರ್ವರು ವಿದ್ಯಾರ್ಥಿಯೋರ್ವನ ಮೇಲೆ ಸುಳ್ಳು ಆರೋಪ ಹೊರಿಸಿ ಪೋಲೀಸರಿಗೆ ದೂರು ನೀಡಿದ್ದಾರೆಂದು ಪೆರುವಾಜೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಉಪನ್ಯಾಸಕಿಯ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಇಂದು ನಡೆದಿದೆ. ದೀಕ್ಷಿತ್ ಎಂಬ ವಿದ್ಯಾರ್ಥಿ ತನಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುನಿತಾ ನಾಯಕ್ ಅವರು ದೂರು ನೀಡಿದ್ದು, ಇದು ಸುಳ್ಳು ಎಂದು ಖಂಡಿಸಿರುವ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ

ಬೆಳ್ಳಾರೆ: ವಿದ್ಯಾರ್ಥಿಯ ಮೇಲೆ ಸುಳ್ಳಾರೋಪ Read More »

ಕರಾವಳಿ

ಬೆಳ್ಳಾರೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 23. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನನ್ನು ಬಂಧಿಸಿ ಪೋಕ್ಸೋ ಪ್ರಕರಣದಡಿ ದೂರು ದಾಖಲಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ. ಬಂಧಿತನನ್ನು ಕಲ್ಮಡ್ಕದ ಕಾಪಡ್ಕ ಚಿದಾನಂದ ಎಂದು ಗುರುತಿಸಲಾಗಿದೆ. ಈತ ಕೊಡಿಯಾಲದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿ, ಅತ್ಯಾಚಾರ ಎಸಗಿರುವುದಾಗಿ ಬಾಲಕಿಯ ಮನೆಯವರು ನೀಡಿದ ದೂರಿನಂತೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳಾರೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಕಂಟೇನರ್ ಲಾರಿ ಹಾಗೂ ಕಾರು ಢಿಕ್ಕಿ ➤ ಕಾರು ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 22. ಕಾರು ಹಾಗೂ ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಸಂಪಾಜೆ ಸಮೀಪ ದೇವರಕೊಲ್ಲಿಯಲ್ಲಿ ಬುಧವಾರದಂದು ರಾತ್ರಿ ಸಂಭವಿಸಿದೆ.   ಮೃತ ಕಾರು ಚಾಲಕನನ್ನು ಬೆಂಗಳೂರಿನ ರವಿ ಎಂದು ಗುರುತಿಸಲಾಗಿದೆ. ಗಾಯಗೊಂಡ ಲಾರಿ ಚಾಲಕ ಮಂಗಳೂರಿನ ಕುಳಾಯಿ ನಿವಾಸಿ ಈಶ್ವರ (42), ಕಾರಿನಲ್ಲಿದ್ದ ಚಂದ್ರಶೇಖರ, ನಿತಿನ್‌, ಜಗದೀಶ್‌ ಹಾಗೂ ಹರ್ಷ ಎಂಬವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಮೂಲಕ

ಸುಳ್ಯ: ಕಂಟೇನರ್ ಲಾರಿ ಹಾಗೂ ಕಾರು ಢಿಕ್ಕಿ ➤ ಕಾರು ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ ಠಾಣಾ ನೂತನ ಎಸ್ಐ ಆಗಿ ಈರಯ್ಯ ದೂಂತುರು ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 19. ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ನೇಮಕಗೊಂಡ ಈರಯ್ಯ ದೂಂತೂರು ಅವರು ಅಧಿಕಾರ ಸ್ವೀಕರಿಸಿದರು. ಇವರಿಗೆ ವರ್ಗಾವಣೆಗೊಂಡ ಎಸ್‌ಐ ದಿಲೀಪ್ ಜಿ.ಆರ್ ಅವರು ಅಧಿಕಾರ ಹಸ್ತಾಂತರಿಸಿದರು. ಈರಯ್ಯ ದೂಂತೂರು ಅವರನ್ನು ಸುಳ್ಯ ಎಸ್‌ಐ ಆಗಿ ನೇಮಕ‌ ಮಾಡಿ ಸರಕಾರ ಆದೇಶ ಹೊರಡಿಸಿತ್ತು. 2014ನೇ ಬ್ಯಾಚ್‌ನ ಅಧಿಕಾರಿಯಾದ ಈರಯ್ಯ ದೂಂತುರು ಅವರು ಬಂಟ್ವಾಳ ಹಾಗೂ ವಿಟ್ಲದಲ್ಲಿ ಪ್ರೊಬೇಷನರಿ ಎಸ್‌ಐ ಆಗಿ ಬಳಿಕ ಬೆಳ್ಳಾರೆ ಠಾಣೆಯಲ್ಲಿ ಉಪನಿರೀಕ್ಷಕರಾಗಿದ್ದರು. ಬಳಿಕ ಉಪ್ಪಿನಂಗಡಿ, ಶಿರಸಿ, ಕುಂದಾಪುರದಲ್ಲಿ

ಸುಳ್ಯ ಠಾಣಾ ನೂತನ ಎಸ್ಐ ಆಗಿ ಈರಯ್ಯ ದೂಂತುರು ಅಧಿಕಾರ ಸ್ವೀಕಾರ Read More »

ಕರಾವಳಿ

ಸುಳ್ಯ: ಮಾವಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 12. ಮಾವಿನ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪೆರಾಜೆ ಗ್ರಾಮದ ಕೊಳಂಗಾಯ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಕೇಶವ ಕೆ.ಕೆ. ಎಂದು ಗುರುತಿಸಲಾಗಿದೆ. ಇವರು ಮನೆ ಸಮೀಪದಲ್ಲಿರುವ ಮಾವಿನ ಮರದಿಂದ ಮಾವಿನಕಾಯಿ ಕೊಯ್ಯುತ್ತಿದ್ದ ಸಂದರ್ಭ ಆಯತಪ್ಪಿ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸುಳ್ಯ: ಮಾವಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: KSRTC ಬಸ್‌ ಗೆ ಢಿಕ್ಕಿಯಾದ ಆಲ್ಟೋ ಕಾರು ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ)newskadaba.com ಸುಳ್ಯ, ಮೇ.29. ಗೂನಡ್ಕದ ಸಮೀಪ ಸರ್ಕಾರಿ ಬಸ್‌ಗೆ ಹಿಂದಿನಿಂದ ಬಂದು ಆಲ್ಟೋ ಕಾರು ಗುದ್ದಿದ ಘಟನೆ ಸಂಭವಿಸಿದೆ. ಘಟನೆಯ ರಭಸಕ್ಕೆ ಅಲ್ಟೋ ಕಾರು ಬಸ್ಸಿನೊಳಗೆ ನುಗ್ಗಿದ್ದು, ಕಾರಿನ ಮುಂಭಾಗ ಜಖಂಗೊಂಡಿದೆ ಎನ್ನಲಾಗಿದೆ. ಇನ್ನು ಘಟನೆಯಿಂದ ಯಾವುದೇ ಪ್ರಾಣ ಹಾನಿ, ಗಾಯ ಸಂಭವಿಸಿಲ್ಲ. ಬಸ್‌ ಸುಳ್ಯದಿಂದ ಕೊಯನಾಡಿಗೆ ಸಂಚರಿಸುತ್ತಿತ್ತು. ಅದೇ ಮಾರ್ಗವಾಗಿ ಹಿಂದಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಹಿಂಬದಿಯಿಂದ ಢಿಕ್ಕಿಯಾಗಿದೆ.

ಸುಳ್ಯ: KSRTC ಬಸ್‌ ಗೆ ಢಿಕ್ಕಿಯಾದ ಆಲ್ಟೋ ಕಾರು ➤ ತಪ್ಪಿದ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ ➤ ಮೂವರು ಗಂಭೀರ

(ನ್ಯೂಸ್ ಕಡಬ)newskadaba.com  ಸುಳ್ಯ, ಮೇ.29. ಬೈಕ್ ವೊಂದು ಪಾದಚಾರಿಗೆ ಢಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡೀಲ್ ಎಂಬಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮಂಡೆಕೋಲು ಗ್ರಾಮದ ಭವಾನಿಶಂಕರ್, ಪತ್ನಿ ಲೀಲಾವತಿ ಹಾಗೂ ಇಬ್ಬರು ಮಕ್ಕಳು ಸುಳ್ಯದಿಂದ ಮಂಡೆಕೋಲು ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪಡೀಲ್ ಎಂಬಲ್ಲಿ ಸವಾರನ ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಗುದ್ದಿದ್ದು, ಬೈಕ್ ನಲ್ಲಿದ್ದ ನಾಲ್ವರೂ ಕೂಡಾ ರಸ್ತೆಗೆಸೆಯಲ್ಪಟ್ಟಿದ್ದಾರೆ ಎನ್ನಲಾಗಿದೆ.  

ಸುಳ್ಯ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ ➤ ಮೂವರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಇಂದು ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 18. ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆ ಮಜಲು ಶ್ರೀ ವೆಂಕಟೇಶ್ವರ ಸಭಾ ಭವನದಲ್ಲಿ ಜಿಲ್ಲಾಧಿಕಾರಿಯವರು ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಳ್ಯ: ಇಂದು ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ Read More »

ಕರಾವಳಿ
Scroll to Top