sulya

ಸುಳ್ಯ : ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಮೃತ್ಯು

(ನ್ಯೂಸ್‌ ಕಡಬ) newskadaba.com,  ನ.29: ಮಹಡಿ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಘಟನೆ ಸುಳ್ಯದ ಸಂಪಾಜೆಯ ಚೌಕಿ ಬಳಿ ಗುರುವಾರ ಸಂಭವಿಸಿದೆ. ಮೂಲತಃ ಚೆಂಬು ಗ್ರಾಮದ ಉಂಬಳೆ ನಿವಾಸಿ ಆಗಿರುವ ಪ್ರಸ್ತುತ ಸಂಪಾಜೆಯ ಚೌಕಿ ಬಳಿಯ ಕಮಲ (85) ತನ್ನ ಮನೆಯ ಮಹಡಿಯಿಂದ ಇಳಿದುಕೊಂಡು ಬರುತ್ತಿರುವಾಗ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಂಬುಲೆನ್ಸ್ ಮೂಲಕ ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು […]

ಸುಳ್ಯ : ಮಹಡಿ ಮೇಲಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ-ಕಾಡಾನೆಗಳ ಹಿಂಡು ಲಗ್ಗೆ- ವಾಹನ ಸಂಚಾರಕ್ಕೆ ತಡೆ, ಕೃಷಿ ನಾಶ

(ನ್ಯೂಸ್‌ ಕಡಬ) newskadaba.com,  ಸೆ.06 ಸುಳ್ಯ:ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಪಾಲಡ್ಕ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸ್ಥಳೀಯರ ತೋಟಗಳಿಗೆ ನುಗ್ಗಿದ ಕಾಡಾನೆಗಳು ,ಅಡಿಕೆ,ತೆಂಗು,ಬಾಳೆ ಇತರ ಕೃಷಿಗಳನ್ನು ನಾಶ ಮಾಡಿದ ಪರಿಣಾಮ ರೈತರಿಗೆ ಅಪಾರ ಬೆಳೆ ನಷ್ಟವಾದ ಘಟನೆ ಉಂಟಾಗಿದೆ. ಬಳಿಕ ಸ್ಥಳೀಯರೆಲ್ಲ ಸೇರಿ ಆನೆಗಳನ್ನು ಕಾಡಿಗೆ ಅಟ್ಟಿದ್ದರು. ಪೂಮಲೆ ಕಾಡಿನಲ್ಲಿ ಕಾಡಾನೆಗಳು ಹಗಲು ಹೊತ್ತಿನಲ್ಲಿ ಬೀಡುಬಿಡುತ್ತಿದ್ದು, ಮತ್ತೆ ರಾತ್ರಿ ಸಮಯ ಕಾಡಾನೆಗಳು ರಾಷ್ಟ್ರೀಯ ಹೆದ್ದಾರಿ ಅಂಚಿನಲ್ಲಿರುವ ತೋಟಗಳಿಗೆ ನುಗ್ಗಿ ಬೆಳೆ ನಾಶ ಪಡಿಸುತ್ತಿವೆ. ಬೆಳೆ

ಸುಳ್ಯ-ಕಾಡಾನೆಗಳ ಹಿಂಡು ಲಗ್ಗೆ- ವಾಹನ ಸಂಚಾರಕ್ಕೆ ತಡೆ, ಕೃಷಿ ನಾಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ಸೇವೆ ಮಾಡಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್

(ನ್ಯೂಸ್ ಕಡಬ) newskadaba.com ಮಾ. 12: ಸರ್ಪ ಸಂಸ್ಕಾರ ಸೇವೆಯನ್ನು ಮಾಡಲು ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಗಮಿಸಿದ್ದಾರೆ. ಮಾರ್ಚ್ 11 ರಂದು, ಕತ್ರಿನಾ ಅತಿಥಿ ಗೃಹದಿಂದ ಕಾರಿನಲ್ಲಿ ದೇವಸ್ಥಾನಕ್ಕೆ ಆಗಮಿಸಿದರು, ತಲೆಗೆ ದುಪಟ್ಟಾ ಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಆದಿ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರದ ಜೊತೆಗೆ, ಅವರು ನಾಗಪ್ರತಿಷ್ಠೆ, ಸಂಕಲ್ಪ, ಮತ್ತು ಆಶ್ಲೇಷ ಬಲಿ ಸೇರಿದಂತೆ ಹಲವಾರು ಸೇವೆಯಲ್ಲಿ ಭಾಗವಹಿಸಲಿದ್ದಾರೆ. ಕೆಲ ತಿಂಗಳ ಹಿಂದೆ ಕತ್ರೀನಾ ಕುತ್ಯಾರಿನಲ್ಲಿರುವ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಇದೀಗ ಕುಕ್ಕೆ ಸುಬ್ರಹ್ಮಣ್ಯ

ಸುಳ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ಸೇವೆ ಮಾಡಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್ Read More »

ಕರಾವಳಿ

ಸುಳ್ಯ : ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣಹೋಮ

(ನ್ಯೂಸ್ ಕಡಬ) newskadaba.com, ಫೆ.11.  : ಪಯಸ್ವಿನಿ ನದಿಯಲ್ಲಿ ಸೋಮವಾರ ಮತ್ತಷ್ಟು ಮೀನುಗಳು ಸಾವನ್ನಪ್ಪಿದ್ದು, ನೀರು ಮಲಿನಗೊಂಡಿರುವುದೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ರವಿವಾರ ನಾಗಪಟ್ಟಣ ವೆಂಟೆಡ್‌ ಡ್ಯಾಂ ಕೆಳಭಾಗ ದಲ್ಲಿ ಮೀನುಗಳು ಸತ್ತು ಬಿದ್ದಿದ್ದವು. ಇದೀಗ ಸೋಮವಾರ ಪಯಸ್ವಿನಿ ನದಿಯ ನಾಗಪಟ್ಟಣ, ಭಸ್ಮಡ್ಕ, ಕಾಂತ ಮಂಗಲ ವ್ಯಾಪ್ತಿಯಲ್ಲೂ ಮೀನುಗಳು ಸತ್ತಿರುವುದು ಹಾಗೂ ಅಸ್ವಸ್ಥಗೊಂಡಿರುವುದು ಕಂಡುಬಂತು. ನದಿಯ ನೀರು ಕಲುಷಿತಗೊಂಡಿರುವುದರಿಂದಲೇ ಮೀನುಗಳು ಸಾಯುತ್ತಿವೆ ಎನ್ನಲಾಗಿದೆ. ಇಲ್ಲಿನ ನೀರು ಕೂಡ ಕಪ್ಪು ಬಣ್ಣಕ್ಕೆ ತಿರುಗಿದ್ದು, ವಾಸನೆಯೂ ಬರುತ್ತಿದೆ. ಕಾಂತಮಂಗಲ

ಸುಳ್ಯ : ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣಹೋಮ Read More »

ಕರಾವಳಿ

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 21ನೇ ಆರೋಪಿಯನ್ನು ಬಂಧಿಸಿದ ಎನ್ ಐಎ

(ನ್ಯೂಸ್ ಕಡಬ) newskadaba.com ಜ.22 ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಬಂಧಿತ ವ್ಯಕ್ತಿ ಅತೀಕ್ ಅಹ್ಮದ್ ನನ್ನು ಜನವರಿ 20 ರಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯ ಎಂದು ಗುರುತಿಸಲಾದ ಅಹ್ಮದ್, ಜುಲೈ 2022 ರಲ್ಲಿ

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 21ನೇ ಆರೋಪಿಯನ್ನು ಬಂಧಿಸಿದ ಎನ್ ಐಎ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 11.  ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಅಜ್ಜಾವರ ಕರ್ಲಪ್ಪಾಡಿ ನಿವಾಸಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ನಿವಾಸಿ ಕಾರು ಚಾಲಕ ಮಹಮ್ಮದ್ ಕುಂಞಿ (65) ಎಂದು ಗುರುತಿಸಲಾಗಿದೆ. ಅವರು ತನ್ನ ಮಗನನ್ನು ಕಾಸರಗೋಡಿಗೆ ಬಿಟ್ಟು ಬರುತ್ತಿದ್ದಾಗ ಕುಂಟಾರು ಕಳೆದು- ಮೂರೂರು ಸಮೀಪ ತಲುಪುತ್ತಿದ್ದಂತೆ ಕುಂಟಾರಿನ ಲಾರಿಯೊಂದು ಢಿಕ್ಕಿ ಹೊಡೆದಿದೆ. ಅಪಘಾತದ

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಿಲ್ಲಿಸಿದ್ದ ಲಾರಿಯ ಟಯರ್ ಕಳವು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 07.ರಸ್ತೆಬದಿ ನಿಲ್ಲಿಸಲಾಗಿದ್ದ ಲಾರಿಯ ಟಯರ್ ಕದ್ದುಕೊಂಡು ಹೋದ ಘಟನೆ ಸುಳ್ಯದ ಪೆರಾಜೆಯಲ್ಲಿ ಶುಕ್ರವಾರ ನಡೆದಿದೆ. ಈ ಲಾರಿಯಲ್ಲಿ ರಬ್ಬರ್ ಮರಗಳನ್ನು ಸಾಗಾಟ ಮಾಡಲಾಗುತ್ತಿತ್ತು. ನಾಲ್ಕು ದಿನಗಳ ಹಿಂದೆ ಲಾರಿಯನ್ನು ಪೆರಾಜೆಯ ರಸ್ತೆ ಬದಿಯಲ್ಲಿ ನಿಲ್ಲಿಸಿ ಮರ ಸಾಗಾಟಗಾರರು ತಮ್ಮ ಊರಾದ ಕೇರಳಕ್ಕೆ ತೆರಳಿದ್ದರು. ಆದರೆ ಇಂದು ಬಂದು ನೋಡುವಾಗ ಲಾರಿಯ ಒಂದು ಟಯರ್ ಕಳವಾಗಿರುವುದು ಬೆಳಕಿಗೆ ಬಂದಿದೆ.  

ನಿಲ್ಲಿಸಿದ್ದ ಲಾರಿಯ ಟಯರ್ ಕಳವು Read More »

ಕರಾವಳಿ

ಪಿಕಪ್‌: ಕಾರು ಡಿಕ್ಕಿ: ವಾಹನ ಜಖಂ, ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ನ. 26. ಅರಂಬೂರು ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತರಕಾರಿ ತುಂಬಿಕೊಂಡು ಬರುತ್ತಿರುವ ಪಿಕಪ್ ವಾಹನಕ್ಕೆ ಸುಳ್ಯ ಕಡೆಯಿಂದ ಪೆರಾಜೆ ಕಡೆಗೆ ಹೊಗುತ್ತಿದ್ದ ಅಲ್ಟೊಕಾರು ಡಿಕ್ಕಿಯಾಗಿ ಕಾರು ಮತ್ತು ಪಿಕಪ್ ಸ್ವಲ್ಪ ಜಖಂಗೊಂಡ ಘಟನೆ ನ 24 ರಂದು ರಾತ್ರಿ ಸಂಭವಿಸಿದೆ. ಕಾರಿನ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ಕುರಿತು ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.  

ಪಿಕಪ್‌: ಕಾರು ಡಿಕ್ಕಿ: ವಾಹನ ಜಖಂ, ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯದಲ್ಲಿ ತಡ ರಾತ್ರಿ ಹೋಗುತ್ತಿದ್ದ ವಾಹನಕ್ಕೆ ಎದುರುಗೊಂಡ ಎರಡು ಕಾಡಾನೆಗಳು: ಚಾಲಕ ಮಾಡಿದ್ದೇನು?

(ನ್ಯೂಸ್ ಕಡಬ) newskadaba.com ಸುಳ್ಯ, ನ. 20. ಸುಳ್ಯ- ಸುಬ್ರಹ್ಮಣ್ಯದ ಕಾಡಂಚಿನ ಪ್ರದೇಶಗಳಲ್ಲಿ ರಾತ್ರಿ ಸಾಮಾನ್ಯವಾಗಿ ಕಾಡಾನೆಗಳು ಓಡಾಟ ಮಾಡುವುದು ಸಾಮಾನ್ಯವಾಗಿದೆ. ಇದೀಗ ಸುಳ್ಯದ ಮರ್ಕಂಜದಲ್ಲಿ ತಡ ರಾತ್ರಿ ಮುಖ್ಯ ರಸ್ತೆಯಲ್ಲಿಯೇ ಕಾಡಾನೆ ಸಂಚರಿಸಿದೆ. ಮೈಸೂರಿನಂತ ಬಾಡಿಗೆಗೆ ತೆರಳಿ ವಾಪಾಸು ಬರುತ್ತಿದ್ದ ವಾಹನವೊಂದಕ್ಕೆ ಹೈದಂಗೂರು ರಸ್ತೆಯ ಮಧ್ಯೆ 2 ಕಾಡಾನೆಗಳು ಎದುರಾದ ಘಟನೆ ನ. 17ರಂದು ನಡೆದಿದ್ದು ಚಾಲಕ ಜಾಣತನದಿಂದ ಆನೆಗಳು ಹೋದ ಬಳಿಕ ವಾಹನವನ್ನು ಚಲಾಯಿಸಿಕೊಂಡು ಮುಂದೆ ಸಾಗಿದ್ದಾರೆ. ಯಶಸ್ವಿ ಹೆಸರಿನ ವ್ಯಾನ್ ಪ್ರಯಾಣಿಕರನ್ನು ಬಿಟ್ಟು

ಸುಳ್ಯದಲ್ಲಿ ತಡ ರಾತ್ರಿ ಹೋಗುತ್ತಿದ್ದ ವಾಹನಕ್ಕೆ ಎದುರುಗೊಂಡ ಎರಡು ಕಾಡಾನೆಗಳು: ಚಾಲಕ ಮಾಡಿದ್ದೇನು? Read More »

ಕರಾವಳಿ
crime, arrest, suspected

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ನ. 07. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.   ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26) ಎಂದು ಗುರುತಿಸಲಾಗಿದ್ದು, ನ.3ರಂದು ರಾತ್ರಿ ದೇವಸ್ಥಾನದಲ್ಲಿ ಪೂಜಾ ಪರಿಕರಗಳು ಹಾಗೂ ಸಿಸಿಟಿವಿ ಕ್ಯಾಮರಾ ಕದ್ದೊಯ್ದಿದ್ದಾರೆ. ಕುಕ್ಕೆ ದೇವಸ್ಥಾನದ ಸಿಇಒ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಯು ಗೋಣಿ ಚೀಲದಲ್ಲಿ ಕದ್ದ

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top