sulya

ಬಸ್ಸುಗಳಿಲ್ಲದೆ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ: ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com ಸುಳ್ಯ, ನ. 06. ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಸುಮಾರು ಒಂದು ಗಂಟೆಯ ತನಕ ಬಸ್ಸುಗಳಿಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಸ್ಸಿಗಾಗಿ ಕಾದು ಸಾರ್ವಜನಿಕರು ಆಕ್ರೋಶಗೊಂಡಿದ್ದರು. ಪುತ್ತೂರು ಮಂಗಳೂರು ಮತ್ತು ಮೈಸೂರು ಕಡೆ ಹೋಗುವ ಬಸ್ಸುಗಳು ಅದೇ ರೀತಿ ಗ್ರಾಮೀಣ ಭಾಗಗಳಿಗೆ ಹೋಗುವಂತಹ ಬಸ್ಸುಗಳು ಕೂಡ ಇಲ್ಲದೆ ಪ್ರಯಾಣಿಕರು ಬಸ್ಸು ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುವ ದೃಶ್ಯಗಳು ಕಂಡುಬಂದಿದ್ದು ಪ್ರಯಾಣಿಕರ ಪಾಡು ಹೇಳತೀರದ್ದಾಗಿದೆ. ದೀಪಾವಳಿ ಹಬ್ಬ ಕಳೆದ ಬಳಿಕ ತಮ್ಮ ತಮ್ಮ ಊರುಗಳಿಗೆ ಮತ್ತು […]

ಬಸ್ಸುಗಳಿಲ್ಲದೆ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ: ಸಾರ್ವಜನಿಕರ ಆಕ್ರೋಶ Read More »

ಕರಾವಳಿ
crime, arrest, suspected

ಆಸ್ಪತ್ರೆಯಿಂದ ಪರಾರಿಯಾದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಸುಳ್ಯ, ಅ.28. ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಘವನ್ ಕೆದೀಶ್ವರನ್ ಆಲಿಯಾಸ್ ಕೋಳಿ ಕರಣ್ ಎಂದು ಗುರುತಿಸಲಾಗಿದೆ. ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ, ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದ ಆರೋಪಿ ರಾಘವನ್ ಕೆದೀಶ್ವರನ್ ನನ್ನು ಕೆಲವು ದಿನಗಳ ಹಿಂದೆ ಪೊಲೀಸರು ಬಂಧಿಸಿ ಕರೆ ತಂದ ಸಂದರ್ಭದಲ್ಲಿ ಆತ ಸುಳ್ಯದ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಪೊಲೀಸರು ಆರೋಪಿಯನ್ನು ತಮಿಳುನಾಡಿನ ಸತ್ಯಮಂಗಲ ಎಂಬಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ.    

ಆಸ್ಪತ್ರೆಯಿಂದ ಪರಾರಿಯಾದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ತುಳಸಿ ಗಿಡದಲ್ಲಿ ಅರಳುತ್ತಿವೆ ದಾಸವಾಳ ಹೂವುಗಳು..!

(ನ್ಯೂಸ್ ಕಡಬ) newskadaba.com ಸುಳ್ಯ, ಅ. 16. ತುಳಸಿ ಗಿಡದಲ್ಲಿ ದಾಸವಾಳ ಹೂವು ಅರಳುತ್ತಿವೆ ಎಂದರೆ ಅಚ್ಚರಿಯಾಗೋದು ಸಹಜ‌. ಆದರೆ ಇದು ನಿಜ ಎಂದು ಎಂದು ಅಜ್ಜಾವರದ ಶಾಂತಿಮಜಲಿನ ಈ ಮನೆಯವರು ಹೇಳುತ್ತಾರೆ‌. ಅಜ್ಜಾವರ ಗ್ರಾಮದ ಶಾಂತಿಮಜಲಿನ ಭವಾನಿ ಅವರ ಮನೆಯಂಗಳದ ತುಳಸಿ ಗಿಡದಲ್ಲಿ ಅರಳುತ್ತಿರುವುದು ದಾಸವಾಳ ಹೂವು. ಒಂದು ವಾರದಲ್ಲಿ 3ನೇ ಬಾರಿಗೆ ಈ ರೀತಿ ಹೂವು ಅರಳಿ ನಿಂತಿದೆ. ತುಳಸಿ ಗಿಡದಲ್ಲಿ ಇನ್ನೂ ಕೂಡ ಹೂವಿನ ಮೊಗ್ಗು ಇದ್ದು ಇನ್ನಷ್ಟು ದಾಸವಾಳ ಗಿಡಗಳು ಅರಳುವ

ತುಳಸಿ ಗಿಡದಲ್ಲಿ ಅರಳುತ್ತಿವೆ ದಾಸವಾಳ ಹೂವುಗಳು..! Read More »

ಕರಾವಳಿ

ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ(ಸೆ.25) : ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಸುಳ್ಯ ಪೊಲೀಸರ ವಿರುದ್ಧ ಹಾಗೂ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಅನ್ಯಧರ್ಮದ ಯುವಕನ ನಡೆ ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ವತಿಯಿಂದ ಬೃಹತ್‌ ಪ್ರತಿಭಟನೆ ಸುಳ್ಯ ಠಾಣಾ ಬಳಿಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ನಡೆಯಿತು. ಪ್ರತಿಭಟನೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ತಪ್ಪು ಮಾಡಿದವರ ಮೇಲೆ ಕ್ರಮ ಕೈ ಗೊಳ್ಳಲಿ. ಪೊಲೀಸರು ಎಲ್ಲರಿಗೂ ನ್ಯಾಯ ನೀಡುವ ಕೆಲಸ ಮಾಡಬೇಕು. ತಪ್ಪು

ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ’ವನಜ ರಂಗಮನೆ ಪ್ರಶಸ್ತಿ- 2024’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 11.  ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷದಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ರವರನ್ನು ಆಯ್ಕೆ ಮಾಡಲಾಗಿದೆ. ರಾವಣ, ಕುಂಭಕರ್ಣ, ಮಹಿರಾವಣ, ಮಹಿಷಾಸುರ, ಕಾಕಾಸುರ, ವರಾಹ, ಸಿಂಹ, ಗಜೇಂದ್ರ ಮುಂತಾದ ಬಣ್ಣದ ವೇಷಗಳು ಅಲ್ಲದೆ ಅಜಮುಖಿ, ಶೂರ್ಪನಖಿ, ಪೂತನಿ,

ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ’ವನಜ ರಂಗಮನೆ ಪ್ರಶಸ್ತಿ- 2024’ಗೆ ಆಯ್ಕೆ Read More »

ಕರಾವಳಿ

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 03.  ಇಲ್ಲಿನ ಕಾಂತಮಂಗಲ ಬಳಿ ಪಯಸ್ವಿನಿ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಅಜ್ಜಾವರ ಗ್ರಾಮದ ಮಾವಿನಪಳ್ಳ ನಿವಾಸಿ‌ ಮಹಮ್ಮದ್ ಎಂಬವರ ಪುತ್ರ ಸಿನಾನ್ (30) ಎಂದು ಗುರುತಿಸಲಾಗಿದೆ. ಸಿನಾನ್ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗುತ್ತಿದ್ದು, ಈ ಹಿಂದೆಯೂ ಆತ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಸೋಮವಾರ ಸುಳ್ಯಕ್ಕೆ ತೆರಳಿದ್ದ ಈತ ಮನೆಗೆಮರುಳುವ ಸಂದರ್ಭದಲ್ಲಿ ಕಾಂತಮಂಗಲ ಸೇತುವೆಯಿಂದ ನದಿಗೆ ಧುಮುಕಿದ್ದಾನೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 27. ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಡಿಕಾನ ಗ್ರಾಮದ ಹರ್ಲಡ್ಕ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹರ್ಲಡ್ಕ ನಿವಾಸಿ ವೆಂಕಪ್ಪ ನಾಯ್ಕ್ ಎಂಬವರ ಪುತ್ರ ರುಕ್ಮಯ್ಯ(45) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ತಂದೆ, ತಾಯಿ, ಹಾಗೂ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಸುಳ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಸೇತುವೆಯಿಂದ ಬಿದ್ದ ಆಟೋ ರಿಕ್ಷಾ ಚಾಲಕ ಅಪಾಯದಿಂದ ಪಾರು      

(ನ್ಯೂಸ್ ಕಡಬ) newskadaba.c0m ಸುಳ್ಯ, ಆ. 26.   ಆಲೆಟ್ಟಿ ಗ್ರಾಮದ ಕುಕ್ಕುಂಬಳ ಸೇತುವೆಯಿಂದ ಆಟೋ ರಿಕ್ಷಾ ಬಿದ್ದಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ನಡೆದಿದೆ. ಚಾಲಕ ವೇಣುಗೋಪಾಲ ದೇವಮೂಲೆ ಗಂಭೀರ ಗಾಯದಿಂದ ಪಾರಾಗಿದ್ದು, ದೇವಮೂಲೆಯಲ್ಲಿ ಪ್ರಯಾಣಿಕರೊಬ್ಬರನ್ನು ಇಳಿಸಿ ಪೆರಾಜೆ ಕಡೆಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದಾಗಿ ಆಟೋ ರಿಕ್ಷಾ ಜಖಂಗೊಂಡಿದೆ. ಸೇತುವೆಯ ಕೆಳಗಿನಿಂದ ಆಟೋವನ್ನು ಮೇಲಕ್ಕೆತ್ತಲು ಪ್ರಯತ್ನಿಸಲಾಗುತ್ತಿದ್ದು, ಅದೃಷ್ಟವಶಾತ್ ನೀರಿನ ಮಟ್ಟ ಕಡಿಮೆ ಇದ್ದ ಕಾರಣ ಸಂಭವನೀಯ ಭಾರೀ ದುರಂತ ತಪ್ಪಿದೆ ಎಂದು

ಸುಳ್ಯ: ಸೇತುವೆಯಿಂದ ಬಿದ್ದ ಆಟೋ ರಿಕ್ಷಾ ಚಾಲಕ ಅಪಾಯದಿಂದ ಪಾರು       Read More »

ಕರಾವಳಿ

ಸುಳ್ಯ: ಸ್ಕೂಟರ್ ಢಿಕ್ಕಿ ➤ ಅಪರಿಚಿತ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 27. ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಲ್ಲುಗುಂಡಿಯ ಗೂನಡ್ಕ ಕಡೆಪಾಲ ಬಳಿ ವರದಿಯಾಗಿದೆ. ಕಳೆದ 4 ದಿನಗಳಿಂದ ಕಲ್ಲುಗುಂಡಿ ಆರಂತೋಡು ಪರಿಸರದಲ್ಲಿ ತಿರುಗಾಡುತ್ತಿದ್ದ ಅಪರಿಚಿತ ವ್ಯಕ್ತಿ ಸ್ಕೂಟಿಗೆ ಬಲಿಯಾಗಿದ್ದಾರೆ. ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಕಲ್ಲುಗುಂಡಿ ಪೋಲಿಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಸುಳ್ಯ: ಸ್ಕೂಟರ್ ಢಿಕ್ಕಿ ➤ ಅಪರಿಚಿತ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ತೆಂಗಿನ ಮರ ಬಿದ್ದು ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com  ಸುಳ್ಳ, ಡಿ. 07.  ಮಹಿಳೆಯ ಮೇಲೆ   ತೆಂಗಿನ ಮರ ಬಿದ್ದ   ಪರಿಣಾಮ ಮಹಿಳೆಯೋರ್ವರು  ಗಾಯಗೊಂಡ  ಘಟನೆ  ಬುಧವಾರದಂದು ಸುಳ್ಳದ  ಅರಂತೋಡಿನಲ್ಲಿ ಸಂಭವಿಸಿದೆ.   ಗಾಯಗೊಂಡವರನ್ನು  ಬಾಲಣ್ಣರವರ ಪತ್ನಿ ಕಮಲ  ಎಂದು ಗುರುತಿಸಲಾಗಿದೆ. ಇವರು  ಮೇದಪ್ಪಗೌಡ  ಎಂಬವರ  ತೋಟದಲ್ಲಿ  ಅಡಿಕೆ ಹೆಕ್ಕುತ್ತಿದ್ದ ವೇಳೆ  ಈ ದುರ್ಘಟನೆ  ನಡೆದಿದ್ದು. ತೀವ್ರ ಗಾಯಗೊಂಡ  ಇವರನ್ನು ಸುಳ್ಳದ  ಖಾಸಗಿ  ಅಸ್ಪತ್ರೆಗೆ  ದಾಖಲಿಸಲಾಗಿದೆ.    

ತೆಂಗಿನ ಮರ ಬಿದ್ದು ಮಹಿಳೆ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top