surathkal

Death, deadbody, Waterfall

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..!

(ನ್ಯೂಸ್ ಕಡಬ) newskadaba.com ಅ.23. ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಸುರತ್ಕಲ್  ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ನೀರುಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ನಿನ್ನೆ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು […]

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಲೈಟ್ ಆಫ್ ವಿಚಾರದಲ್ಲಿ ಗಲಾಟೆ   ➤ಕಾರ್ಯದರ್ಶಿಗೆ ಚೂರಿ ಇರಿತ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ . 16 . ಲೈಟ್ ಆಫ್ ವಿಚಾರದಲ್ಲಿ ಗಲಾಟೆ ನಡೆದು ಮಸೀದಿ ಕಾರ್ಯದರ್ಶಿಗೆ ಯುವಕನೊಬ್ಬ ಚೂರಿ ಇರಿದಿರುವ ಘಟನೆ ಸುರತ್ಕಲ್ ಕಾನ ಜನತಾ  ಕಾಲೋನಿ ಮಸೀದಿ ಬಳಿ ನಡೆದಿದೆ. ಆರೋಪಿ ಸ್ಥಳೀಯ ನಿವಾಸಿ ತ್ವಾಹಿರ್ (24)) ಎಂಬಾತ ಮಸೀದಿ ಕಾರ್ಯದರ್ಶಿ ಮಹಮ್ಮದ್ ಶಾಫಿ (38) ಎಂಬವರಿಗೆ ಚೂರಿ ಇರಿದಿದ್ದು, ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಲೈಟ್ ಆಫ್ ವಿಚಾರದಲ್ಲಿ ಗಲಾಟೆ   ➤ಕಾರ್ಯದರ್ಶಿಗೆ ಚೂರಿ ಇರಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಏಳನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ!!

(ನ್ಯೂಸ್ ಕಡಬ)newskadaba.com ಸುರತ್ಕಲ್, ಫೆ.14. ಕೃಷ್ಣಾಪುರದ ಖಾಸಗಿ ಶಾಲಾ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಸುರತ್ಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ. ಏಳನೇ ತರಗತಿ ಓದುತ್ತಿದ್ದ ಕಾಟಿಪಳ್ಳದ ಹರ್ಷಿತ್‌ (13) ಮೃತ ವಿದ್ಯಾರ್ಥಿ ಎಂದು ಗುರುತಿಸಾಗಿದ್ದು,  ಪ್ರತೀ ವಾರದ ಕೊನೆಯಲ್ಲಿ ಸೂರಿಂಜೆಯಲ್ಲಿರುವ ತನ್ನ ಅಜ್ಜನ ಮನೆಗೆ ಹೋಗುವುದು ವಾಡಿಕೆ. ಈ ಬಾರಿಯೂ ಶಾಲೆ ಮುಗಿಸಿ ತೆರಳಿದ್ದ ಹರ್ಷಿತ್‌ ರವಿವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈತನ ತಂದೆ ಸುಧಾಕರ ದೇವಾಡಿಗ ಸುರತ್ಕಲ್‌

ಸುರತ್ಕಲ್: ಏಳನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ!! Read More »

ಕರಾವಳಿ, ಕ್ರೈಮ್ ನ್ಯೂಸ್

ಸುರತ್ಕಲ್: ಕಾರ್ಮಿಕರ ನಡುವೆ ಹೊಡೆದಾಟ     ➤  ಓರ್ವ ಮೃತ್ಯು.!

(ನ್ಯೂಸ್ ಕಡಬ)newskadaba.com ಸುರತ್ಕಲ್, ಫೆ.13. ಕ್ಷುಲಕ ಕಾರಣಕ್ಕೆ ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಕುಳಾಯಿ ಬಳಿ ಸಂಭವಿಸಿದೆ. ಮೃತ ಯುವಕನ್ನು ಬಿಹಾರ ಮೂಲದ ಚೋಟು ಕುಮಾರ್ (21) ಎಂದು ಗುರುತಿಸಲಾಗಿದೆ. ಮೃತ ಯುವಕ ಮತ್ತು ಆರೋಪಿಗಳು ಕುಳಾಯಿಯ ಮಾರ್ಬಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಊಟಕ್ಕೆ ಸಂಬಂಧಿಸಿಂತೆ ಮೂವರ ಮಧ್ಯೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.  

ಸುರತ್ಕಲ್: ಕಾರ್ಮಿಕರ ನಡುವೆ ಹೊಡೆದಾಟ     ➤  ಓರ್ವ ಮೃತ್ಯು.! Read More »

ಕರಾವಳಿ, ಕ್ರೈಮ್ ನ್ಯೂಸ್

ಸುರತ್ಕಲ್: ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ!!!  

(ನ್ಯೂಸ್ ಕಡಬ)newskadaba.com ಸುರತ್ಕಲ್, ಜ.23. ವಿವಾಹಿತ ಯುವತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದಲ್ಲಿ ನಡೆದಿದೆ. ಒಟ್ಟೆಕಾಯರ್ ಮನೆ ನಿವಾಸಿ ಹರೀಶ್ ಎಂಬವರ ಪತ್ನಿ ದಿವ್ಯಾ(26) ಮೃತರು. ದಿವ್ಯಾ ಒಂದೂವರೆ ವರ್ಷದ ಹಿಂದೆ ಹರೀಶ್ ರನ್ನು ಪ್ರೀತಿಸಿ ವಿವಾಹವಾಗಿದ್ದರು. ದಿವ್ಯಾ ಮನೆಯಲ್ಲಿ ಒಬ್ಬರೇ ಇರುವಾಗ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರು ನೀಡಲಾಗಿದೆ. ಈ ಕುರಿತು ಸುರತ್ಕಲ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.  

ಸುರತ್ಕಲ್: ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ!!!   Read More »

ಕರಾವಳಿ, ಕ್ರೈಮ್ ನ್ಯೂಸ್

ಸುರತ್ಕಲ್ : ರೈಲ್ವೇ ಹಳಿ  ಮೇಲೆ ಯುವಕನೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ಅಪರಿಚಿತ ಯುವಕನೊಬ್ಬನ ಮೃತದೇಹವು ರೈಲ್ವೇ ಹಳಿಗಳ ಮೇಲೆ ಪತ್ತೆಯಾಗಿರುವ ಘಟನೆ ಕುಳಾಯಿಗುಡ್ಡೆ ರೈಲ್ವೆ ಸೇತುವೆ ಬಳಿ ನಡೆದಿದೆ ಎಂದು ವರದಿ ತಿಳಿಸಿದೆ. 30 ವರ್ಷದ ಯುವಕನ ಛಿದ್ರವಾದ ಮೃತದೇಹ ಪತ್ತೆಯಾಗಿದ್ದು, ಈತ ರೈಲಿಗೆ ಸಿಲುಕಿ ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯು ಕಪ್ಪು ನೈಟ್ ಪ್ಯಾಂಟ್, ಹಳದಿ ಬಣ್ಣದ ಪೂರ್ಣ ತೋಳಿನ ಶರ್ಟ್ ಮತ್ತು ಕಪ್ಪು ಜರ್ಕಿನ್ ಧರಿಸಿರುತ್ತಾರೆ. ಇವರ ಬಗ್ಗೆ ಮಾಹಿತಿ ಇದ್ದರೆ ಸುರತ್ಕಲ್ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.  

ಸುರತ್ಕಲ್ : ರೈಲ್ವೇ ಹಳಿ  ಮೇಲೆ ಯುವಕನೋರ್ವನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುರತ್ಕಲ್: ಕರ್ತವ್ಯದ ವೇಳೆ ಪೊಲೀಸ್ ಕಾನ್ ಸ್ಟೇಬಲ್ ಮೃತ್ಯು ➤  ಮೃತರ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ..!

(ನ್ಯೂಸ್ ಕಡಬ)newskadaba.com  ಸುರತ್ಕಲ್, ಜ. 20. ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ

ಸುರತ್ಕಲ್: ಕರ್ತವ್ಯದ ವೇಳೆ ಪೊಲೀಸ್ ಕಾನ್ ಸ್ಟೇಬಲ್ ಮೃತ್ಯು ➤  ಮೃತರ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಗುಡ್ಡ ಕುಸಿತ…!!   ➤  ಓರ್ವ ಮೃತ್ಯು, ಇನ್ನೋರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಸುರತ್ಕಲ್, ಜ.14. ಕೆಲಸ ಮಾಡುವಾಗ ಗುಡ್ಡ ಕುಸಿತ ಉಂಟಾಗಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತರನ್ನು ಓಬಲೇಶ್ವರ ಎಂದು ಗುರುತಿಸಲಾಗಿದೆ.  ಈತ ರೈಲ್ವೇ ಸೇತುವೆಯ ಬಳಿ ಕೆಲಸ ಮಾಡುತ್ತಿದ್ದಾಗ ಗುಡ್ಡ ಕುಸಿದು ಮಣ್ಣು ಮೈಮೇಲೆ ಬಿದ್ದಿದೆ. ಘಟನೆಯಲ್ಲಿ ಗೋವಿಂದಪ್ಪ, ತಿಮ್ಮಪ್ಪ, ಈರಣ್ಣ, ಸಂಜೀವ ಹಾಗೂ ಆತನ ಪತ್ನಿ ತೃಪ್ತಿ ಅವರ ಮೇಲೂ ಮಣ್ಣು ಬಿದ್ದು ಗಾಯಗಳಾಗಿವೆ ಎನ್ನಲಾಗಿದೆ. ಗೋವಿಂದಪ್ಪ ಅವರಿಗೆ ಗಂಭೀರ ಗಾಯಗಳಾಗಿದೆ ಎಂದು ವರದಿ

ಸುರತ್ಕಲ್: ಗುಡ್ಡ ಕುಸಿತ…!!   ➤  ಓರ್ವ ಮೃತ್ಯು, ಇನ್ನೋರ್ವನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ…!                     

(ನ್ಯೂಸ್ ಕಡಬ) newskadaba.com ಸುರತ್ಕಲ್, ಜ. 02. ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್ ನಲ್ಲಿ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ಮೃತ ಯುವಕನನ್ನು ಕಾನ ನಿವಾಸಿ ಸುರೇಶ್ ಪ್ರಸಾದ್ ಯಾದವ್ ಎಂಬವರ ಪುತ್ರ ಸತ್ಯಂ (18) ಎಂದು ಗುರುತಿಸಲಾಗಿದೆ. ಲೈಟ್ ಹೌಸ್ ಬೀಚ್ ನಿಂದ 1.5 ಕಿ.ಮೀ ದೂರದಲ್ಲಿರುವ ರೇಡ್ ರಾಕ್ ಬೀಚ್ ನಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಸತ್ಯಂ ಮತ್ತು ಆತನ ಸ್ನೇಹಿತ ಸಮುದ್ರದಲ್ಲಿ ಈಜಲು

ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ…!                      Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಇಂದು ನಡೆಯಲಿರುವ ಬೃಹತ್ ಹಕ್ಕೊತ್ತಾಯ ಸಭೆಗೆ SDPI ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 27. ಸುರತ್ಕಲ್ ಜಲೀಲ್ ಹತ್ಯೆ ಖಂಡಿಸಿ ಹಾಗೂ ಸರ್ಕಾರ ನಡೆದುಕೊಂಡ ತಾರತಮ್ಯ ನೀತಿಯನ್ನು ವಿರೋಧಿಸಿ ಎಸ್ಎಸ್ಎಫ್ ಹಾಗೂ ಎಸ್ ವೈಎಸ್ ಸಂಘಟನೆ ವತಿಯಿಂದ ಇಂದು ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಎಸ್ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿ. 27 ಮಂಗಳವಾರದಂದು ಸಂಜೆ 3 ಗಂಟೆಗೆ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ಪ್ರಜಾಸತ್ತಾತ್ಮಕವಾಗಿ

ಮಂಗಳೂರು: ಇಂದು ನಡೆಯಲಿರುವ ಬೃಹತ್ ಹಕ್ಕೊತ್ತಾಯ ಸಭೆಗೆ SDPI ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ Read More »

ಕರಾವಳಿ
Scroll to Top