thamilnadu

 ಸೀರೆಗಾಗಿ ಪ್ರಾಣ ಕಳೆದುಕೊಂಡ ನಾಲ್ವರು ಮಹಿಳೆಯರು!

(ನ್ಯೂಸ್ ಕಡಬ)newskadaba.com ತಮಿಳುನಾಡು, ಫೆ.06. ಖಾಸಗಿ ಸಂಸ್ಥೆಯೊಂದು ಹಬ್ಬದ ಆಚರಣೆಯ ಅಂಗವಾಗಿ ಉಚಿತ ಸೀರೆಗಳನ್ನು ವಿತರಿಸುತ್ತಿದ್ದ ವೇಳೆ ಕಾಲ್ತುಳಿತದಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 1,000 ಮಹಿಳೆಯರು ಸೀರೆಗಳನ್ನು ವಿತರಿಸುವ ಸ್ಥಳಕ್ಕೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಾಲ್ತುಳಿತ ಸಂಭವಿಸಿ ಅನೇಕ ಮಹಿಳೆಯರು ಗಾಯಗೊಂಡಿದ್ದಾರೆ. ವಾಣಿಯಂಬಾಡಿ ತಾಲೂಕಿನ ಆಸ್ಪತ್ರೆಗೆ ಹಲವು ಮಹಿಳೆಯರನ್ನು ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.    

 ಸೀರೆಗಾಗಿ ಪ್ರಾಣ ಕಳೆದುಕೊಂಡ ನಾಲ್ವರು ಮಹಿಳೆಯರು! Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ !  ➤ ಖದೀಮರು ಅರೆಸ್ಟ್

(ನ್ಯೂಸ್ ಕಡಬ) newskadaba.com ತಮಿಳುನಾಡು, ಜ. 18. ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್​ ಆಗಿರುವ ಅಚ್ಚರಿಯ ಘಟನೆ ತಮಿಳುನಾಡಿನ ಗಡಿ ಹೊಸೂರಿನಲ್ಲಿ ನಡೆದಿದೆ.     ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಶಿವಕುಮಾರ್, ಕರ್ನಾಟಕ-ತಮಿಳುನಾಡಿನ ಗಡಿ ಹೊಸೂರಿನಲ್ಲಿ ವಾಸವಾಗಿದ್ದು, ಸಂಕ್ರಾಂತಿ ಹಬ್ಬದ ಹಿನ್ನೆಲೆ ಕುಟುಂಬದವರು ಮನೆಗೆ ಬೀಗ ಹಾಕಿ ಊರಿಗೆ ಹೋಗಿದ್ದ ಸಂದರದಭ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ಸ್ಥಳೀಯರು ಮನೆ ಕಡೆ ಬಂದು ನೋಡಿದಾಗ ಕಳ್ಳರು ಮನೆಯೊಳಗೆ

ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ !  ➤ ಖದೀಮರು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಣ್ಣಾಮಲೈ ಅವರಿಗೆ ‘ಝೆಡ್’ ಶ್ರೇಣಿ ಭದ್ರತೆ

(ನ್ಯೂಸ್ ಕಡಬ) newskadaba.com ತಮಿಳುನಾಡು, ಜ. 13. ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಗೃಹ ಸಚಿವಾಲಯ ಅಣ್ಣಾಮಲೈ ಅವರಿಗೆ ಝಡ್ ಶ್ರೇಣಿಯ ಭದ್ರತೆಯನ್ನು ನೀಡಿದೆ. ಅಣ್ಣಾಮಲೈ ಅವರಿಗೆ ಈ ಹಿಂದೆ ವೈ ಕೆಟಗರಿ ಭದ್ರತೆ ನೀಡಲಾತ್ತು. ಅವರಿಗೆ ಅಪಾಯ ಹೆಚ್ಚಾಗುವ ಆತಂಕದ ಹಿನ್ನೆಲೆ ಅವರಿಗೆ ಸಿಆರ್​ಎಫ್‌ನ ಒಟ್ಟು 33 ಕಮಾಂಡೋಗಳು ಈ ಭದ್ರತೆಯನ್ನು ನೀಡಲಿದ್ದಾರೆ ಎನ್ನಲಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಮತ್ತು ಪ್ರಸ್ತುತ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರವರಿಗೆ ಮಾವೋವಾದಿಗಳು ಮತ್ತು ಧಾರ್ಮಿಕ

ಅಣ್ಣಾಮಲೈ ಅವರಿಗೆ ‘ಝೆಡ್’ ಶ್ರೇಣಿ ಭದ್ರತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಕೊಲೇಟ್ ಪೌಡರ್ ನಲ್ಲಿಟ್ಟು ಲಕ್ಷಾಂತರ ಮೌಲ್ಯದ ಚಿನ್ನ ಸಾಗಾಟ   ➤ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ)newskadaba.com ತಮಿಳುನಾಡು, ಜ.10. ಚಾಕೊಲೇಟ್ ಪೌಡರ್​ನಲ್ಲಿಟ್ಟು 200 ಗ್ರಾಂ ಚಿನ್ನದ ಸರವನ್ನು ದುಬೈಯಿಂದ ತಿರುಚಿನಾಪಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗಿಸುತ್ತಿದ್ದ ಪ್ರಯಾಣಿಕನಿಗೆ ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ. 21 ಲಕ್ಷ ರೂ. ಮೌಲ್ಯದ ಚಿನ್ನವನ್ನು ಚಾಕೊಲೇಟ್ ಪೌಡರ್​ನಲ್ಲಿ‌‌ ಇಟ್ಟಿದ್ದ ಎನ್ನಲಾಗಿದೆ. ಏರ್ ಇಂಡಿಯಾ ವಿಮಾನದ ಮೂಲಕ ದುಬೈನಿಂದ ಆಗಮಸಿದ ಪ್ರಯಾಣಿಕರ ಬ್ಯಾಗ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದರು.ಈ ವೇಳೆ ಚಾಕೊಲೇಟ್ ಪೌಡರ್ ನಲ್ಲಿ ಚಿನ್ನ ಪತ್ತೆಯಾಗಿದೆ ಎನ್ನಲಾಗಿದೆ. ಇದೀಗ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದಾರೆ.

ಚಾಕೊಲೇಟ್ ಪೌಡರ್ ನಲ್ಲಿಟ್ಟು ಲಕ್ಷಾಂತರ ಮೌಲ್ಯದ ಚಿನ್ನ ಸಾಗಾಟ   ➤ ಆರೋಪಿ ವಶಕ್ಕೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನನ್ನ ಮತ್ತು ನನ್ನ ಕುಟುಂಬದವರನ್ನು ಬ್ಲೂ ವೇಲ್’ನವರು ಸಾಯಿಸ್ತಾರಂತೆ ಪ್ಲೀಸ್ ಕಾಪಾಡಿ! ► ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ 12ರ ಬಾಲಕ..!!!

(ನ್ಯೂಸ್ ಕಡಬ) newskadaba.com ಚೆನ್ನೈ,ಸೆ.03, ಇತ್ತೀಚೆಗೆ ಬೆಳಕಿಗೆ ಬಂದ ಕೆಲ ಬ್ಲೂವೇಲ್ ಗೇಮ್ ಪ್ರಕರಣಗಳ ಪೈಕಿ ಕೆಲ ಪೋಷಕರು ಹಾಗೂ ಶಾಲಾ ಶಿಕ್ಷಕರು ಬಹಿರಂಗಪಡಿಸಿದ್ದರು. ಬಹಳಷ್ಟು ವಿದ್ಯಾರ್ಥಿಗಳು ತಾವು ಆಟ ಆಡುತ್ತಿರುವ ವಿಷಯನ್ನು ಬಹಿರಂಗಪಡಿಸದೇ ಗೋಂದಲಕ್ಕೀಡಾದಿದ್ದಾರೆ. ಇದಕ್ಕೂ ಕಾರಣವೂ ಇದೆ ತಾವು ಆಡುತ್ತಿರುವ ಆಟವನ್ನು ಬಹಿರಂಗ ಪಡಿಸಿದರೆ ತಮ್ಮ ಇಡೀ ಕುಟುಂಬ ಸರ್ವನಾಶ ಆಗುತ್ತದೆ ಎನ್ನುವ ಭೀತಿಯಿಂದಾಗಿ ಇದನ್ನು ಮುಚ್ಚಿಡುತ್ತಿದ್ದಾರೆ. ರಾಜ್ಯದಲ್ಲಿ ಮಕ್ಕಳ ನೆರವಿಗೆಂದೇ ಇರುವ 104 ಸಂಖ್ಯೆಗೆ ಇತ್ತೀಚೆಗೆ ಕರೆ ಮಾಡಿದ್ದ ತಮಿಳುನಾಡಿನ ತಿರುಪೂರ್‌ನ 12 ವರ್ಷದ

ನನ್ನ ಮತ್ತು ನನ್ನ ಕುಟುಂಬದವರನ್ನು ಬ್ಲೂ ವೇಲ್’ನವರು ಸಾಯಿಸ್ತಾರಂತೆ ಪ್ಲೀಸ್ ಕಾಪಾಡಿ! ► ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ 12ರ ಬಾಲಕ..!!! Read More »

ಕರಾವಳಿ
Scroll to Top